ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಇಸ್ಲಾಂ Archives » Dynamic Leader
October 23, 2024
Home Posts tagged ಇಸ್ಲಾಂ
ರಾಜಕೀಯ

ಡಿ.ಸಿ.ಪ್ರಕಾಶ್

ಇಸ್ಲಾಂ ವಿರೋಧದ ನಂತರ ಬಿಜೆಪಿ ವರ್ಣ ಆಧಾರಿತ ರಾಜಕಾರಣವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿದೆ!

ಮುಸ್ಲಿಮರು ಮತ್ತು ಅಲ್ಪಸಂಖ್ಯಾತರನ್ನು ದಮನ ಮಾಡಿ, ವಿಭಜನೆಯನ್ನು ಸೃಷ್ಟಿಸಿ ಆ ಮೂಲಕ ಬಹುಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯುವುದು ಆರ್.ಎಸ್.ಎಸ್ ಸಿದ್ಧಾಂತದ ಬಿಜೆಪಿಯ ಉದ್ದೇಶವಾಗಿದೆ. ಹೀಗಾಗಿ ಜಾತಿ ತಾರತಮ್ಯ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯದ ಬಗ್ಗೆ ಮಾತನಾಡುವುದು ಬಿಜೆಪಿಯ ಮೂಲ ರಚನೆಯಾಗಿದೆ.

ಆದರೂ ಇಂತಹ ಚಟುವಟಿಕೆಗಳು ಇಲ್ಲಿಯವರೆಗೆ ಗುಟ್ಟಾಗಿ ನಡೆಯುತ್ತಿದ್ದವು. ಆದರೆ ತನ್ನ 10 ವರ್ಷಗಳ ಆಡಳಿತದಲ್ಲಿ ಹಲವು ವೈಫಲ್ಯಗಳನ್ನು ಕಂಡ ಮೋದಿ ಸರಕಾರ, ಈ ಬಾರಿ ಖಂಡಿತವಾಗಿಯೂ ಸೋಲಲಿದೆ ಎಂದು ಅರಿವಾಗಿ, ನಿರಂತರ ದ್ವೇಷ ಅಭಿಯಾನಗಳನ್ನು ಮುನ್ನಡೆಸುತ್ತಿದೆ. ಈ ನಿಟ್ಟಿನಲ್ಲಿ, ಮೋದಿ ಈಗ ಮುಸ್ಲಿಮರನ್ನು ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಹಿರಂಗವಾಗಿ ಟೀಕಿಸುತ್ತಿದ್ದಾರೆ.

ಬಿಜೆಪಿ ನಾಯಕರು, ಮುಸ್ಲಿಮರು ಎಂದರೇ ಶತ್ರುಗಳು ಎಂಬಂತಹ ವರ್ತನೆಯನ್ನು ಬಿತ್ತುತ್ತಿದ್ದಾರೆ. ಇದರಿಂದಾಗಿ ಮುಸ್ಲಿಮರ ಅಸ್ತಿತ್ವವೇ ಪ್ರಶ್ನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು, ಮುಸ್ಲಿಮರ ಮೇಲೆ ದ್ವೇಷ ಸಾಧಿಸಿದರೆ ಸಾಕಾಗದು, ಜನಾಂಗೀಯ ದ್ವೇಷವನ್ನು ಬಿತ್ತಿದರೆ ಮಾತ್ರ ಮತಗಳು ಹೆಚ್ಚಾಗುತ್ತವೆ ಎಂದು ಭಾವಿಸಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮೋದಿ ಅವರು, ‘ಕಾಂಗ್ರೆಸ್ ಪಕ್ಷವು, ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬಣ್ಣದ ಕಾರಣಕ್ಕಾಗಿಯೇ ಮತ ಹಾಕಲಿಲ್ಲ’ ಎಂಬ ಹೊಸ ಸುಳ್ಳನ್ನು ಉಗುಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ‘ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಸೂಚಿಸಿದಂತೆಯೇ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೂಡ ಮತ್ತೊಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬೆಂಬಲಿಸಿದವು, ಅದಕ್ಕೂ ಬಣ್ಣಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಏಕೆ ಆಹ್ವಾನಿಸಲಿಲ್ಲ? ಅವರ ಬಣ್ಣದ ಕಾರಣದಿಂದಲೇ ಎಂಬ ಪ್ರಶ್ನೆಗಳು ಮೋದಿಯತ್ತ ಹರಿದಾಡುತ್ತಿವೆ. ಇಂತಹ ಪ್ರಕ್ರಿಯೆಗಳು ನಡೆಯುತ್ತಿದ್ದರೂ ಚುನಾವಣಾ ಆಯೋಗ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಿರುವುದು ಟೀಕೆಗೆ ಗುರಿಯಾಗಿದೆ.