ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಉದ್ಧವ್ ಠಾಕ್ರೆ Archives » Dynamic Leader
October 17, 2024
Home Posts tagged ಉದ್ಧವ್ ಠಾಕ್ರೆ
ರಾಜಕೀಯ

ಬಿಜೆಪಿಗೆ ಏಕ ಬಹುಮತ ಇಲ್ಲದ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಇಂಡಿಯಾ ಮೈತ್ರಿಕೂಟಾ ಪ್ರಯತ್ನಿಸುತ್ತಿದೆ!

ನವದೆಹಲಿ: ದೇಶಾದ್ಯಂತ ಒಟ್ಟು 543 ಸಂಸದೀಯ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆದಿದೆ. ನಿನ್ನೆ ನಡೆದ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಎಣಿಕೆ ನಡೆದಿದೆ. ಇದರಲ್ಲಿ ಬಿ.ಜೆ.ಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಬಿಜೆಪಿ ಜೊತೆಗಿನ ಮೈತ್ರಿ ಪಕ್ಷಗಳು ಒಟ್ಟು 52 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ಮೂಲಕ ಬಿ.ಜೆ.ಪಿ ಮೈತ್ರಿಕೂಟ 292 ಸ್ಥಾನಗಳನ್ನು ಗೆದ್ದಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ 272 ಕ್ಷೇತ್ರಗಳ ಪೈಕಿ ಬಿಜೆಪಿ ಮೈತ್ರಿಕೂಟ 292 ಸ್ಥಾನಗಳನ್ನು ಗೆದ್ದುಕೊಂಡಿದೆ.

ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟ 234 ಕ್ಷೇತ್ರಗಳನ್ನು ಗೆದ್ದಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ 99 ಸ್ಥಾನಗಳನ್ನು ಗೆದ್ದಿದೆ. ಯಾವುದೇ ಮೈತ್ರಿಗೆ ಸೇರದ ಪಕ್ಷಗಳು 17 ಸ್ಥಾನಗಳನ್ನು ಹೊಂದಿವೆ. ಬಿಜೆಪಿಗೆ ಏಕ ಬಹುಮತ ಇಲ್ಲದ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಇಂಡಿಯಾ ಮೈತ್ರಿಕೂಟ ಕೂಡ ಪ್ರಯತ್ನಿಸುತ್ತಿದೆ.

ಇಂಡಿಯಾ ಮೈತ್ರಿಕೂಟವು ಬಿಜೆಪಿ ಮಿತ್ರಪಕ್ಷವಾದ ತೆಲುಗು ದೇಶಂ ಮತ್ತು ಸಂಯುಕ್ತ ಜನತಾದಳದೊಂದಿಗೆ ಮಾತುಕತೆ ನಡೆಸುತ್ತಿದೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಉದ್ಧವ್ ಠಾಕ್ರೆ ಅವರ ಶಿವಸೇನೆ, ರಾಹುಲ್ ಗಾಂಧಿ ಪ್ರಧಾನಿಯಾಗಲು ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಇಂದು (ಬುಧವಾರ) ಸಂಜೆ ಇಂಡಿಯಾ ಮೈತ್ರಿ ಪಕ್ಷದ ನಾಯಕರ ಸಭೆ ನಡೆಯಲಿದೆ. ಇದಕ್ಕಾಗಿ ಮೈತ್ರಿ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಅಖಿಲೇಶ್ ಯಾದವ್ ಸೇರಿದಂತೆ ನಾಯಕರು ಭಾಗವಹಿಸಲಿದ್ದಾರೆ.

ರಾಜಕೀಯ

ಜೂನ್ 4 ರಂದು ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೀವ್ರವಾಗಿ ಟೀಕಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಇಬ್ಭಾಗವಾದ ನಂತರ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ತಮ್ಮ ಪ್ರಭಾವವನ್ನು ಸಾಬೀತುಪಡಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಇದಕ್ಕಾಗಿ ಶರದ್ ಪವಾರ್ ಅವರ ರಾಷ್ಟ್ರವಾದಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಧುಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉದ್ಧವ್ ಠಾಕ್ರೆ, “ಕಳೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ನನ್ನ ಜೊತೆಗಿದ್ದರು. ಅವರು ಕಳೆದ 10 ವರ್ಷಗಳಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಪ್ರತಿ ಕ್ಷೇತ್ರವೂ ಗಮನಿಸುತ್ತಿದೆ. ಎರಡು ಬಾರಿ ಗೆದ್ದ ನಂತರ ಧುಲೆ ಕ್ಷೇತ್ರವನ್ನು ತಮ್ಮ ವೈಯಕ್ತಿಕ ಆಸ್ತಿ ಎಂದು ಭಾವಿಸಿಕೊಂಡಿದ್ದಾರೆ.

ಕಳೆದ ಬಾರಿ ಮಹಾರಾಷ್ಟ್ರ ನಿಮಗೆ (ಮೋದಿ) 40 ಸೀಟು ಕೊಟ್ಟು ದೆಹಲಿಗೆ ಕಳುಹಿಸಿತ್ತು. ಆದರೆ ಈ ಬಾರಿ ನೀವು ದೆಹಲಿಗೆ ಹೋಗಲು ಮಹಾರಾಷ್ಟ್ರ ನಿಮಗೆ ಸಹಾಯ ಮಾಡುವುದಿಲ್ಲ. ಜೂನ್ 4ರಂದು ಬಿಜೆಪಿಗೆ ಜನ ಕಸದ ತೊಟ್ಟಿ ತೋರಿಸಲಿದ್ದಾರೆ. ಜೂನ್ 5 ರಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಓಡಿ ಹೋದ ರೇವಣ್ಣ ಪರ ಮೋದಿ ಮತ ಯಾಚಿಸುತ್ತಾರೆ. ನಾವು ಅಧಿಕಾರಕ್ಕೆ ಬಂದ ಮೇಲೆ ಅವರನ್ನು ಬಂಧಿಸುತ್ತೇವೆ. ಮೋದಿ ಸರ್ಕಾರ ಮಹಾರಾಷ್ಟ್ರದಿಂದ ಕಿತ್ತುಕೊಂಡಿರುವ ಆಸ್ತಿಗಳನ್ನು ಮಹಾರಾಷ್ಟ್ರಕ್ಕೆ ವಾಪಸ್ ತರುತ್ತೇವೆ” ಎಂದರು.

ರಾಜಕೀಯ

ಮುಂಬೈ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ “ಇಂಡಿಯಾ” ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದೆ. ದೇಶದ 18ನೇ ಸಂಸದೀಯ ಲೋಕಸಭೆ ಚುನಾವಣೆಯ ದಿನಾಂಕಗಳು ಪ್ರಕಟಗೊಂಡಿದ್ದು, ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯುತ್ತದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳಾದ “ಇಂಡಿಯಾ” ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಹಿನ್ನಲೆಯಲ್ಲಿ, ಮಹಾರಾಷ್ಟ್ರದಲ್ಲಿ “ಇಂಡಿಯಾ” ಮೈತ್ರಿ ಪಕ್ಷಗಳ ನಡೆವೆ ಸೀಟು ಹಂಚಿಕೆ ಅಂತಿಮಗೊಂಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲ್ ಜಂಟಿಯಾಗಿ ಸೀಟು ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು 17 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಪ್ರಕಟಣೆ ಹೊರಡಿಸಿದೆ.

“ಇಂಡಿಯಾ” ಮೈತ್ರಿಕೂಟದ ಒಪ್ಪಂದದ ನಂತರ ಶರದ್ ಪವಾರ್ ಅವರ ಎನ್‌ಸಿಪಿ ಮಹಾರಾಷ್ಟ್ರದ 10 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ರಾಜ್ಯದ 21 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಏತನ್ಮಧ್ಯೆ, ದೆಹಲಿ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ “ಇಂಡಿಯಾ” ಮೈತ್ರಿಕೂಟದ ನಡುವೆ ಸೀಟು ಹಂಚಿಕೆ ಈಗಾಗಲೇ ಪೂರ್ಣಗೊಂಡಿದೆ ಎಂಬುದು ಗಮನಾರ್ಹ.

ರಾಜಕೀಯ

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗೂಡಿದ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಎರಡನೇ ದಿನವಾದ ಇಂದೂ (ಸೆಪ್ಟೆಂಬರ್ 1) ಮುಂಬೈನಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆ ಆರಂಭವಾದಾಗ ಪಕ್ಷದ ಮುಖಂಡರು ಗುಂಪು ಫೋಟೊ ತೆಗೆಸಿಕೊಂಡರು. ಈ ಸಭೆಯಲ್ಲಿ ಸಮನ್ವಯ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಸಂಯೋಜಕರು ಯಾರು ಎಂಬುದನ್ನೂ ತಿಳಿಸಲಾಗಿದೆ.

ಸಮನ್ವಯ ಸಮಿತಿ ಸದಸ್ಯರು:
1. ಕೆ.ಸಿ.ವೇಣುಗೋಪಾಲ್ (ಕಾಂಗ್ರೆಸ್), 2. ಶರದ್ ಪವಾರ್ (ಎನ್‌ಸಿಪಿ), 3. ಸ್ಟಾಲಿನ್ (ಡಿಎಂಕೆ), 4. ಸಂಜಯ್ ರಾವತ್ (ಉದ್ದವ್ ಶಿವಸೇನೆ), 5. ತೇಜಸ್ವಿ ಯಾದವ್ (ರಾಷ್ಟ್ರೀಯ ಜನತಾದಳ), 6. ಅಭಿಷೇಕ್ ಬ್ಯಾನರ್ಜಿ (ತೃಣಮೂಲ ಕಾಂಗ್ರೆಸ್), ರಾಘವ್ ಚಡ್ಡಾ (ಆಮ್ ಆದ್ಮಿ,) 8. ಜಾವಿದ್ ಅಲಿ ಖಾನ್ (ಸಮಾಜವಾದಿ), 9. ಲಾಲನ್ ಸಿಂಗ್ (ಸಂಯುಕ್ತ ಜನತಾ ದಳ), 10. ಹೇಮಂತ್ ಸೊರನ್ (ಜಾರ್ಖಂಡ್ ಮುಕ್ತಿ ಮೋರ್ಚಾ), 11. ಡಿ ರಾಜಾ (ಸಿಪಿಐ), 12. ಉಮರ್ ಅಬ್ದುಲ್ಲಾ (ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ), 13. ಮೆಹಬೂಬಾ ಮುಫ್ತಿ (ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ), 14. ಸಿಪಿಎಂ ಪಕ್ಷದ ಪ್ರತಿನಿಧಿ.

ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!

ಅಕ್ಟೋಬರ್ 2ಕ್ಕೆ ಚುನಾವಣೆ ಪ್ರಣಾಳಿಕೆ?
ಸಭೆಯಲ್ಲಿ, ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷಗಳಿಗೆ ಎಷ್ಟು ‘ಸೀಟು’ ಹಂಚಿಕೆ ಮಾಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಇದೇ ತಿಂಗಳ 3ನೇ ವಾರದಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಅಕ್ಟೋಬರ್ 2 ರೊಳಗೆ ‘ಇಂಡಿಯಾ’ ಒಕ್ಕೂಟವು ಚುನಾವಣಾ ಪ್ರಣಾಳಿಕೆಯನ್ನು ಪ್ರಕಟಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಮೈತ್ರಿ ಘೋಷಣೆ:
ಜುಡೇಗಾ ಭಾರತ್, ಜೀತೇಗ ಇಂಡಿಯಾ, (ಭಾರತ ಒಗ್ಗೂಡುತ್ತದೆ, ಇಂಡಿಯಾ ಗೆಲ್ಲುತ್ತದೆ) ಈ ಘೋಷಣೆಯನ್ನು ಇಂಡಿಯಾ ಒಕ್ಕೂಟದ ಘೋಷಣೆಯಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಬಂಧನ!

ನಿರ್ಣಯಗಳು:
ಈ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ಅಂಗೀಕರಿಸಲಾಗಿದೆ ಎಂದು ವರದಿಯಾಗಿದೆ. ಅದರಂತೆ ಮುಂಬರುವ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುವುದು, ಕ್ಷೇತ್ರ ಹಂಚಿಕೆ ಸಮಾಲೋಚನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಿ, ಶೀಘ್ರವಾಗಿ ಮುಗಿಸುವುದು, ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ಪ್ರಮುಖ ಸಮಸ್ಯೆಗಳನ್ನು ಒತ್ತಿ ಹೇಳುವುದು. ಸಂವಹನ ಮತ್ತು ಮಾಧ್ಯಮ ತಂತ್ರಗಳ ಮೂಲಕ ಪ್ರಚಾರಗಳನ್ನು ಸಂಘಟಿಸಲು ನಿರ್ಧಾರಗಳನ್ನು ಮಾಡಲಾಗಿದೆ.

ರಾಜಕೀಯ

ಮುಂಬೈ: ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಅವರು ಇಂದು ಜಂಟಿಯಾಗಿ ಸುದ್ದಿಗಾರರಿಗೆ ಸಂದರ್ಶನ ನೀಡಿ, “ಭಾರತವನ್ನು ರಕ್ಷಿಸಲಿಕ್ಕಾಗಿ ವಿರೋಧ ಪಕ್ಷಗಳು ಒಟ್ಟಾಗಿವೆ; ಹೊಸದಾಗಿ ಎರಡು ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬರಲಿವೆ” ಎಂದು ಹೇಳಿದರು.

ನಾಳೆಯಿಂದ (ಆಗಸ್ಟ್ 31) 2 ದಿನಗಳ ಕಾಲ ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ 3ನೇ ಸಮಾಲೋಚನಾ ಸಭೆ ನಡೆಯಲಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಜಂಟಿಯಾಗಿ ಸುದ್ದಿಗಾರರನ್ನು ಭೇಟಿಯಾಗಿ ಸಭೆಯ ಸಿದ್ಧತೆಗಳ ಕುರಿತು ಸಂದರ್ಶನ ನೀಡಿದರು.

ಇದನ್ನೂ ಓದಿ: ಅಡುಗೆ ಸಿಲಿಂಡರ್ ಬೆಲೆ: ಸಂಕಷ್ಟದಲ್ಲಿರುವ ನಾಡಿನ ಜನರ ಕೋಪವನ್ನು ರೂ.200 ಸಬ್ಸಿಡಿಯಿಂದ ಕಡಿಮೆ ಮಾಡಲು ಸಾಧ್ಯವಿಲ್ಲ; ಇದು ಚುನಾವಣೆ ಲಾಲಿಪಾಪ್!

ಸಂದರ್ಶನದ ಸಮಯದಲ್ಲಿ ಮಾತನಾಡಿದ ಅವರು, “ಇಂಡಿಯಾ ಮೈತ್ರಿಕೂಟದ ಬೆಳವಣಿಗೆಗೆ ಹೆದರಿ ಬಿಜೆಪಿ ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿಯೂ ಕೊಡುತ್ತದೆ. ಇಂಡಿಯಾ ಮೈತ್ರಿಯ ಉದ್ದೇಶವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸುವುದಾಗಿದೆ. ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ಪಕ್ಷಗಳ 63 ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಭಾರತವನ್ನು ರಕ್ಷಿಸಲಿಕ್ಕಾಗಿಯೇ ಪ್ರತಿಪಕ್ಷಗಳು ಒಂದಾಗಿವೆ. ಮತ್ತು ಹೊಸದಾಗಿ ಎರಡು ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬರಲಿವೆ. ನಮ್ಮ ಸಿದ್ಧಾಂತಗಳು ವಿಭಿನ್ನವಾಗಿರಬಹುದು ಆದರೆ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಗುರಿಯಾಗಿದೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಆಧುನಿಕ ಗೂಢಚಾರಿಕೆ ಉಪಕರಣಗಳ ಮೂಲಕ ಭಾರತದ 140 ಕೋಟಿ ಜನರನ್ನೂ ಮೋದಿ ಸರ್ಕಾರ ನಿಗಾ ಇಡುತ್ತಿದೆ.!?

ಎನ್‌ಸಿಪಿ ತೊರೆದವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ನಮ್ಮಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಹಲವು ಆಯ್ಕೆಗಳಿವೆ. ಆದರೆ ಬಿಜೆಪಿಗೆ ಒಂದನ್ನು ಬಿಟ್ಟರೆ ಬೇರೆ ಯಾವ ಆಯ್ಕೆ ಇದೆ? ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲ್ಲಬಹುದು” ಎಂದು ಹೇಳಿದರು.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮೋದಿ ಆಡಳಿತವನ್ನು ಕಿತ್ತೊಗೆಯಲು ನಿರ್ಧರಿಸಿರುವ ಪಕ್ಷಗಳ ನಾಯಕರು ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪೂರ್ವ ಪ್ರಯತ್ನದಲ್ಲಿ ನಡೆಯಲಿರುವ ಸಭೆಯಾಗಿರುವುದರಿಂದ ಇದು ರಾಷ್ಟ್ರ ರಾಜಕಾರಣದಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸಿದೆ.

ನಿತೀಶ್ ಕುಮಾರ್ ಅವರೇ ಪಾಟ್ನಾ ಸಭೆಯ ಹೀರೋ. ಏಕೆಂದರೆ ಒಂದಾಗಲು ಸಾದ್ಯವೇ ಇಲ್ಲವೆಂದ ಪಕ್ಷಗಳನ್ನೆಲ್ಲ ಒಟ್ಟುಗೂಡಿಸಿ, ಒಂದೇ ವೇದಿಕೆಗೆ ಕರೆತರುವುದರಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮುಂತಾದವುಗಳನ್ನು ಹೇಳಬಹುದು. ಕಳೆದ ತಿಂಗಳವರೆಗೆ ಕಾಂಗ್ರೆಸ್ ಜೊತೆ ಕೈಜೋಡಿಸುವ ಅವಕಾಶವೇ ಇಲ್ಲವೆಂದು ಹೇಳಿಕೊಂಡಿದ್ದ ಆ ಪರಿಸ್ಥಿತಿ ಈಗ ಸಂಪೂರ್ಣವಾಗಿ ಬದಲಾಗಿದೆ. ಅದಕ್ಕೆ ನಿತೀಶ್‌ಕುಮಾರ್ ಅವರ ಪ್ರಯತ್ನವೇ ಕಾರಣವಾಗಿದೆ.

ಸತತ ಎರಡು ಅವಧಿಗೆ ಅಧಿಕಾರದ ಗದ್ದುಗೆಯಲ್ಲಿ ಕುಳಿತಿರುವ ಬಿಜೆಪಿಯ್ ವಿರುದ್ಧ, ಬಹುತೇಕ ಪಕ್ಷಗಳು ಒಗ್ಗೂಡಿರುವುದು ರಾಷ್ಟ್ರ ರಾಜಕಾರಣದ ಪ್ರಮುಖ ಘಟನೆಯಾಗಿದೆ. ಅದೇ ಸಮಯದಲ್ಲಿ, ಈ ಕಾರ್ಯಕ್ರಮ ದೊಡ್ಡ ಪರಿಣಾಮ ಬೀರಬೇಕಾದರೆ, ಭಾಗವಹಿಸುವ ಪಕ್ಷಗಳ ಪ್ರಮುಖ ನಾಯಕರು ಮಾತ್ರ ಸಭೆಯಲ್ಲಿ ಭಾಗವಹಿಸಬೇಕೆಂಬುದು ಷರತ್ತಾಗಿದೆ. ಆದರೆ ಬಿಜೆಪಿಗೆ ಪರ್ಯಾಯವಾಗಿರುವ ಕಾಂಗ್ರೆಸ್ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈ ಸಭೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿದರು. ಆದರೆ ಸಭೆಯಲ್ಲಿ ಪಕ್ಷಗಳ ನಾಯಕರು ಮಾತ್ರ ಭಾಗವಹಿಸಬೇಂಬ ನಿತೀಶ್ ಕುಮಾರ್ ಅವರ ಷರತ್ತನ್ನು ಒಪ್ಪಿಕೊಳ್ಳುವ ಮೂಲಕ ಖರ್ಗೆಯವರ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ.

ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಟಿ.ರಾಜಾ, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಉದ್ಧವ್) ಅಧ್ಯಕ್ಷ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಕ್ತಿ ಮೋಚಾ ಅಧ್ಯಕ್ಷರೂ ಆಗಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರನ್ ಸೇರಿದಂತೆ 16 ರಿಂದ 20 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಕೆಲವು ನಾಯಕರನ್ನು ಹೊರತುಪಡಿಸಿ ಉಳಿದೆಲ್ಲ ವಿರೋಧ ಪಕ್ಷಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನಾಯಕರಾಗಲೀ ಅಥವಾ ಬೇರೆ ಪಕ್ಷಗಳ ಮುಖಂಡರೇ ಆಗಲಿ ಇಂತಹ ಪ್ರಯತ್ನ ನಡೆಸಿದ್ದರೆ, ಇಷ್ಟು ಪಕ್ಷಗಳ ಒಪ್ಪಿಗೆ ಸಿಗುತ್ತಿತ್ತೇನೋ ಎಂಬ ಅನುಮಾನ ಮೂಡುತ್ತಿದೆ. ಹಿರಿಯ ರಾಜಕಾರಣಿ ನಿತೀಶ್ ಕುಮಾರ್ ಅವರು ಎಲ್ಲಾ ಪಕ್ಷಗಳ ನಾಯಕರೊಂದಿಗೆ ನಿಕಟ ಸ್ನೇಹವನ್ನು ಹೊಂದಿರುವುದರಿಂದ ಇದು ಸಾಧ್ಯವಾಗಿದೆ.

ಸಭೆಯ ದಿನಾಂಕವನ್ನು ಮೊದಲು ಜೂನ್ 12 ಎಂದು ಘೋಷಿಸಲಾಗಿತ್ತು. ಆದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸಭೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡುವಂತೆ ಮನವಿ ಮಾಡಿದರು. ಜೂನ್ 23 ರಂದು ಸಭೆ ನಡೆಯಲಿದೆ ಎಂದು ನಿತೀಶ್ ಕುಮಾರ್ ಘೋಷಿಸಿದ್ದಾರೆ. ಸಭೆ ನಡೆಯುವ ಸ್ಥಳದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ನಂತರ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದ ಶಿಮ್ಲಾವನ್ನು ಆಯ್ಕೆ ಮಾಡಬಹುದು ಎಂಬ ವರದಿಯೂ ಪ್ರಕಟವಾಗಿತು.

ಈ ಹಿನ್ನಲೆಯಲ್ಲಿ, ಪಾಟ್ನಾದಲ್ಲಿ ಸಭೆ ನಡೆಯಲಿದೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಖಚಿತಪಡಿಸಿದ್ದಾರೆ. ವಿರೋಧ ಪಕ್ಷಗಳ ಸಭೆಗೆ ಹಲವು ನಾಯಕರ ಹಾಜರಾತಿಯನ್ನು ಖಚಿತಪಡಿಸಿರುವುದಕ್ಕೆ ನಿತೀಶ್ ಕುಮಾರ್ ಅವರ ಪ್ರಯತ್ನಕ್ಕೆ ಇದು ಮೊದಲ ಯಶಸ್ಸು ಎಂದು ಪರಿಗಣಿಸಲಾಗಿದೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಭಾರತದ ಉದ್ಯಮಿ ಅದಾನಿಯು ವಂಚನೆ ಮತ್ತು ಅವ್ಯವಹಾರದ ಆರೋಪಕ್ಕೆ ಒಳಗಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಏಕೆ ಭೇಟಿಯಾದರು?

‘ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಎರಡು ಬಾಂಬ್‌ಗಳು ಸ್ಫೋಟಗೊಳ್ಳಲಿದೆ’ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಉದ್ಯಮಿ ಅಧಾನಿ, ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಗೌತಮ್ ಅದಾನಿಯು ಮುಂಬೈನಲ್ಲಿರುವ ಶರದ್ ಪವಾರ್ ಅವರ ‘ಸಿಲ್ವರ್ ಓಕ್’ ನಿವಾಸಕ್ಕೆ ಏಪ್ರಿಲ್ 20 ರಂದು ಭೇಟಿ ನೀಡಿದರು. ಅಲ್ಲಿ ಶರದ್ ಪವಾರ್ ಮತ್ತು ಅದಾನಿ ಭೇಟಿ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು ಎಂದು ವರದಿಗಳು ಹೇಳುತ್ತವೆ.

ಸುಪ್ರಿಯಾ ಸುಳೆ

ಶರದ್ ಪವಾರ್ ಅವರ ಸಂಬಂಧಿ ಅಜಿತ್ ಪವಾರ್, ಬಿಜೆಪಿಯೊಂದಿಗೆ ಕೈಜೋಡಿಸುತ್ತಾರೆ ಎಂಬ ಊಹಾಪೋಹದ ಸುದ್ಧಿಗಳು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಈ ವೇಳೆಯಲ್ಲಿ, ಇಂತಹ ಭೇಟಿ ನಡೆದಿರುವುದು ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಅಲ್ಲದೆ, ಈ ಭೇಟಿ ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.

ಶರದ್ ಪವಾರ್ ಮತ್ತು ಅದಾನಿ

ಅದಾನಿ ಸಮೂಹವು ವಿವಿಧ ಅಕ್ರಮಗಳಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿಯು ಪುರಾವೆಗಳೊಂದಿಗೆ ಆರೋಪಿಸಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಅದಾನಿಯನ್ನು ಕಟುವಾಗಿ ಟೀಕಿಸಿದವು. ಉದ್ಯಮಿ ಅದಾನಿ ಮತ್ತು ಪ್ರಧಾನಿ ಮೋದಿ ನಡುವಿನ ಸಂಪರ್ಕದ ಬಗ್ಗೆ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದರು. ಮೋದಿ ಮತ್ತು ಅದಾನಿ ಒಟ್ಟಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಫೋಟೋವನ್ನೂ ರಾಹುಲ್ ಗಾಂಧಿ ಸಂಸತ್ತಿನಲ್ಲಿ ತೋರಿಸಿದರು. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಅದಾನಿಯನ್ನು ತೀವ್ರವಾಗಿ ವಿರೋಧಿಸುತ್ತಿದ್ದರೂ ಶರದ್ ಪವಾರ್ ಅದಾನಿಯನ್ನು ಬೆಂಬಲಿಸಿಕೊಂಡು ಬಂದರು.

ರಾಹುಲ್ ಗಾಂಧಿ

ಅದಾನಿ ವಿಚಾರದಲ್ಲಿ ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂಬುದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖ ಬೇಡಿಕೆಯಾಗಿತ್ತು. ಆದರೆ ‘ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿರುವುದರಿಂದ ಸಂಸದೀಯ ಜಂಟಿ ಸಮಿತಿಯ ತನಿಖೆ ಅಗತ್ಯವಿಲ್ಲ’ ಎಂದು ಶರದ್ ಪವಾರ್ ಹೇಳಿದರು. ಮಹಾರಾಷ್ಟ್ರದಲ್ಲಿ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್ ಹಾಗೂ ಗೌತಮ್ ಅದಾನಿ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮಹುವಾ ಮೊಯಿತ್ರಾ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಅದಾನಿ ವಿಚಾರವನ್ನು ತೀವ್ರವಾಗಿ ಟೀಕಿಸಿಕೊಂಡು ಬರುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ನೀಡಿದ ಮಾಹಿತಿಯೊಂದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತು. ಅದೇನೆಂದರೆ, ‘ಗೌತಮ್ ಅಧಾನಿ ನನ್ನನ್ನು ಮತ್ತು ಇತರ ಕೆಲವರನ್ನು ಸ್ನೇಹಿತರ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ’ ಎಂದು ಮಹುವಾ ಮೊಯಿತ್ರಾ ಹೇಳಿದರು.

ಆ ಕೆಲವರಲ್ಲಿ ಶರದ್ ಪವಾರ್ ಕೂಡ ಒಬ್ಬರು ಎಂಬುದು ಈ ಭೇಟಿಯ ಮೂಲಕ ಬಹಿರಂಗವಾಗಿದೆ. ಅವರ ಭೇಟಿಯ ನಂತರ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ, ‘ಯಾವುದೇ ರಾಜಕಾರಣಿ ಉದ್ಯಮಿ ಅದಾನಿಯನ್ನು ಭೇಟಿ ಮಾಡಬಾರದು’ ಎಂದು ಹೇಳಿದರು. ‘ಅದಾನಿ ಜತೆ ಮುಖಾಮುಖಿಯಾಗಿ ಚರ್ಚಿಸಲು ಏನೂ ಇಲ್ಲ. ಹಿಂಡೆನ್‌ಬರ್ಗ್ ವರದಿಯ ಆರೋಪಗಳ ಆಧಾರದ ಮೇಲೆ ಸರ್ಕಾರ ಕ್ರಮ ಕೈಗೊಳ್ಳೂವ ತನಕ ಯಾವುದೇ ರಾಜಕಾರಣಿ ಅದಾನಿಯನ್ನು ಭೇಟಿ ಮಾಡಬಾರದು’ ಎಂದು ಮಹುವಾ ಮೊಯಿತ್ರಾ ಹೇಳುತ್ತಾರೆ. ಮತ್ತು ಶರದ್ ಪವಾರ್ ಅವರು ಅದಾನಿಯನ್ನು ಭೇಟಿಯಾಗಿರುವುದನ್ನೂ ಟೀಕಿಸಿದ್ದಾರೆ.

ಉದ್ಧವ್ ಠಾಕ್ರೆ

ನವೆಂಬರ್ 2019ರಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದರು. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಸೇರಿದಂತೆ ಪಕ್ಷಗಳನ್ನು ಒಳಗೊಂಡ ಮಹಾ ವಿಕಾಸ್ ಅಗಾಡಿ ಸಮ್ಮಿಶ್ರ ಸರ್ಕಾರ ಅಲ್ಲಿ ನಡೆಯಿತು. ಇದ್ದಕ್ಕಿದ್ದಂತೆ ಶಿವಸೇನೆಯಿಂದ ಬೇರ್ಪಟ್ಟ ಏಕನಾಥ್ ಶಿಂಧೆ ರಾಜ್ಯದ ಮುಖ್ಯಮಂತ್ರಿಯಾದರು. ಆಡಳಿತ ಬದಲಾವಣೆಗೂ ಮುನ್ನ ಅದಾನಿ ಮತ್ತು ಶರದ್ ಪವಾರ್ ಭೇಟಿ ನಡೆಯಿತು ಎಂಬುದು ಗಮನಾರ್ಹ.

ಅಜಿತ್ ಪವಾರ್

ಪ್ರಸ್ತುತ ಉದ್ಧವ್ ಠಾಕ್ರೆ ಹೂಡಿರುವ ಪ್ರಕರಣದಲ್ಲಿ ಏಕನಾಥ್ ಶಿಂಧೆ ಬೆಂಬಲಿಗ ಶಾಸಕರು ಅನರ್ಹಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಂದೆ ಯಾರು ಸರ್ಕಾರ ರಚಿಸುತ್ತಾರೆ ಎಂಬ ಪ್ರಶ್ನೆ ಎದ್ದಿದೆ. ಈ ಹಿನ್ನಲೆಯಲ್ಲೇ ಅಜಿತ್ ಪವಾರ್ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಲು ಮುಂದಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಅದಾನಿ ಹಾಗೂ ಶರದ್ ಪವಾರ್ ಭೇಟಿ ನಾನಾ ಊಹಾಪೋಹಗಳಿಗೆ ಕಾರಣವಾಗಿದೆ.

ಏಕನಾಥ್ ಶಿಂಧೆ

ಶರದ್ ಪವಾರ್ ಮತ್ತು ಅದಾನಿ ಭೇಟಿಗೂ ಮಹಾರಾಷ್ಟ್ರ ರಾಜಕಾರಣದ ಮುಂದಿನ ನಡೆಗಳಿಗೂ ಸಂಬಂಧ ಇರುವ ಸಾಧ್ಯತೆಗಳು ಇದೆ ಎಂದೂ ಹೇಳಲಾಗುತ್ತಿದೆ. ಮತ್ತು ಈ ಸಭೆಯಲ್ಲಿ ಹಿಂಡೆನ್‌ಬರ್ಗ್ ವರದಿಯಿಂದ ಉಂಟಾದ ಬಿಕ್ಕಟ್ಟು ಮತ್ತು ವಿರೋಧ ಪಕ್ಷಗಳ ಹೋರಾಟದಿಂದ ಅದಾನಿ ಸಮೂಹಕ್ಕೆ ಉದ್ಭವಿಸಿರುವ ಒತ್ತಡದ ಬಗ್ಗೆಯೂ ಅವರು ಖಂಡಿತವಾಗಿ ಚರ್ಚಿಸಿರುತ್ತಾರೆ ಎಂದು ಹೇಳಲಾಗುತ್ತಿದೆ.

ರಾಜಕೀಯ

ಮುಂಬೈ: ಸಿಬಿಐ ಸಂಸ್ಥೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರವರ ಪಂಜರದ ಗಿಣಿ ಎಂದು ಶಿವಸೇನೆ (ಯುಬಿಟಿ) ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಟೀಕಿಸಲಾಗಿದೆ.

ಪ್ರತಿಪಕ್ಷ ನಾಯಕರ ಮೇಲೆ ಸೇಡು ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಸಿಬಿಐ, ಜಾರಿ ನಿರ್ದೇಶನಾಲಯದಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ನಿರಂತರವಾಗಿ ಆರೋಪಿಸುತ್ತಿವೆ. ಕಳೆದ ತಿಂಗಳು ಸಿಬಿಐ, ಜಾರಿ ನಿರ್ದೇಶನಾಲಯದಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ 9 ಪ್ರತಿಪಕ್ಷಗಳ ನಾಯಕರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.

ಈ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಪ್ರಧಾನಿ ನರೆಂದ್ರ ಮೋದಿಯವರು ‘ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರು, ಅಧಿಕಾರಿಗಳು ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದರು. ‘ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಸಿಬಿಐ ವ್ಯವಸ್ಥೆಯಂತಹ ಸಂಸ್ಠೆಯ ಅಗತ್ಯವಿದೆ’ ಎಂದೂ ಹೇಳಿದ್ದರು.  

ಈ ಹಿನ್ನಲೆಯಲ್ಲಿ ಶಿವಸೇನೆ (ಯುಬಿಟಿ) ಪಕ್ಷದ ನಿಯತಕಾಲಿಕೆಯಾದ ಸಾಮ್ನಾದಲ್ಲಿ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಅವರು ‘ಸಿಬಿಐ ಸಂಸ್ಥೆಯು ಮೋದಿ ಮತ್ತು ಅಮಿತ್ ಶಾ ಅವರ ಪಂಜರದ ಗಿಣಿಯಾಗಿದೆ’ ಎಂದು ಟೀಕಿಸಿದ್ದಾರೆ. ‘ಅಧಿಕಾರಿಗಳು ಯಾರೇ ಭ್ರಷ್ಟಾಚಾರ ಮಾಡಿದರೂ ಕ್ರಮ ಕೈಗೊಳ್ಳಬೇಕು ಎಂದು ಮೋದಿ ಹೇಳಿದ್ದರೂ ಸಿಬಿಐ ಸಂಸ್ಥೆಯು ಮೋದಿ ಮತ್ತು ಅಮಿತ್ ಶಾ ರವರ ಪಂಜರದ ಗಿಣಿಯೇ ಎಂಬುದರಲ್ಲಿ ಯಾರಿಗೂ ಅನುಮಾನವಿಲ್ಲ’ ಎಂದು ಹೇಳಿದ್ದಾರೆ.

ದೇಶ

“ಚುನಾವಣಾ ಆಯೋಗವು ಒಂದು ಬೋಗಸ್ ಸಂಸ್ಥೆಯಾಗಿದೆ; ಜನರನ್ನು ಮೂರ್ಖರನ್ನಾಗಿಸುವ ಆಯೋಗವೆಂದು ಅದನ್ನು ಹೇಳಬೇಕು” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ನೆನ್ನೆ ಮುಂಬೈನಲ್ಲಿ ಮರಾಠಿ ಭಾಷಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದು ಸರಿಯಾಗಿದೆ. ಶಿವಸೇನೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವಾಗ ಚುನಾವಣಾ ಆಯೋಗ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಚುನಾವಣಾ ಆಯೋಗ ಬೋಗಸ್ ಸಂಸ್ಥೆ. ಜನರನ್ನು ಮೂರ್ಖರನ್ನಾಗಿಸುವ ಆಯೋಗ ಎಂದು ಅದನ್ನು ಕರೆಯಬೇಕು.

ಎಲ್ಲವೂ ಬಿಜೆಪಿ ಪರವಾಗಿಯೇ ನಡೆಯುತ್ತಿದೆ. ಮೊಗಾಂಬೋ ಮೂಲದ (ಅಮಿತ್ ಶಾ) ಎಷ್ಟು ಜನ ಬಂದರೂ ಶಿವಸೇನೆಯನ್ನು ನಾಶ ಮಾಡಲು ಸಾಧ್ಯವಿಲ್ಲ. ಪಾಲಕರು ಮಕ್ಕಳಿಗೆ ಕಾನೂನು ಪಾಲಿಸುವಂತೆ ಹೇಳದಿದ್ದರೆ ಒಬ್ಬರು ಮತ್ತೊಬ್ಬರ ವಸ್ತುಗಳನ್ನು ಕದಿಯುತ್ತಾರೆ. ಹಾಗಾಗಿ ನಾನು ಕಳ್ಳರ ಬಗ್ಗೆ ಹೆಚ್ಚು ಮಾತನಾಡಲು ಬಯಸುವುದಿಲ್ಲ. ಅವರಿಗೆ ಇದರಿಂದ ನಾಚಿಕೆಯಾಗುವುದಿಲ್ಲ. ಶಿವಸೇನೆ ಕೇವಲ ಹೆಸರು, ಚಿನ್ಹೆ ಮಾತ್ರವಲ್ಲ. ಶಿವಸೇನೆ ಕೇವಲ ಬಿಲ್ಲು ಬಾಣವಲ್ಲ. ಶಿವಸೇನೆ ನಮ್ಮದು. ಅದನ್ನು ಯಾರೂ ಕದಿಯಲು ಸಾಧ್ಯವಿಲ್ಲ. ಪಾಲ್ ಠಾಕ್ರೆ ಬಿತ್ತಿದ್ದನ್ನು ನೀವು ಹೇಗೆ ತೆಗೆದುಹಾಕಬಹುದು?

ಶಿವಸೇನೆಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಧೈರ್ಯವಿದ್ದರೆ ಕದ್ದ ಶಿವಸೇನೆ ಹೆಸರು, ಬಿಲ್ಲು ಬಾಣ ಹಿಡಿದು ಚುನಾವಣಾ ಕ್ಷೇತ್ರಕ್ಕೆ ಬನ್ನಿ. 2024ರ ಚುನಾವಣೆಯೇ ದೇಶದ ಕೊನೆಯ ಚುನಾವಣೆ ಎಂದು ಎಲ್ಲರೂ ಯೋಚಿಸಲು ಆರಂಭಿಸಿದ್ದಾರೆ. ಮರಾಠಿ ದಿನದಂದು ರಾಜ್ಯಪಾಲರು ವಿಧಾನಸಭೆಯ ಉಭಯ ಸದನಗಳಲ್ಲಿ ಹಿಂದಿಯಲ್ಲಿ ಭಾಷಣ ಮಾಡುತ್ತಾರೆ. ಇದು ದುರದೃಷ್ಟಕರ. ಎಂದು ಕಿಡಿಕಾರಿದರು.