ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಎನ್ ಡಿಎ ಸರ್ಕಾರ Archives » Dynamic Leader
October 23, 2024
Home Posts tagged ಎನ್ ಡಿಎ ಸರ್ಕಾರ
ದೇಶ

ನವಾಡ: ಬಿಹಾರದ ನವಾಡ ಜಿಲ್ಲೆಯಲ್ಲಿ ಪರಿಶಿಷ್ಟರ ವಸತಿ ಪ್ರದೇಶದಲ್ಲಿ 21 ಗುಡಿಸಲುಗಳು ಬೆಂಕಿಗೆ ಆಹುತಿಯಾದ ಘಟನೆಗೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ರೂರ ಘಟನೆಯು ಬಿಹಾರದಲ್ಲಿ ನಡೆಯುತ್ತಿರುವ ‘ಜಂಗಲ್ ರಾಜ್‌’ಗೆ ಮತ್ತೊಂದು ಪುರಾವೆಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.

ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದಲಿತ್ ತೋಲಾ ಪ್ರದೇಶದಲ್ಲಿ ಬುಧವಾರ ರಾತ್ರಿ ನಡೆದ ಅಗ್ನಿಸ್ಪರ್ಶ ಘಟನೆಯು ಜಮೀನು ವಿವಾದದಿಂದಾಗಿ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ನಾವಡ ಜಿಲ್ಲಾಧಿಕಾರಿ ಅಶುತೋಷ್ ಕುಮಾರ್ ವರ್ಮಾ, “ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆ 15 ಮಂದಿಯನ್ನು ಬಂಧಿಸಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಮಹಾದಲಿತ್ ತೋಲಾ ಪ್ರದೇಶದಲ್ಲಿ ಗುಂಪೊಂದು 21 ಮನೆಗಳಿಗೆ ಬೆಂಕಿ ಹಚ್ಚಿದೆ. ಕೆಲವು ಮನೆಗಳು ಅರ್ಧ ಸುಟ್ಟಿವೆ. ಎಷ್ಟು ಮನೆಗಳಿಗೆ ಹಾನಿಯಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿಗಾಗಿ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ನಿರಾಶ್ರಿತರಿಗೆ ಆಹಾರ, ನೀರು ಸೇರಿದಂತೆ ಪರಿಹಾರ ಸಾಮಗ್ರಿಗಳನ್ನು ಒದಗಿಸಲಾಗಿದೆ. ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲಾಗಿದೆ. ಜಾನುವಾರುಗಳನ್ನು ಸುಟ್ಟು ಹಾಕಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

ಈ ಅಗ್ನಿಸ್ಪರ್ಶ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ನವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧಿಮಾನ್ “ಸಂಜೆ 7 ಗಂಟೆಗೆ, ಮಹಾದಲಿತ್ ತೋಲಾದಲ್ಲಿ ಬೆಂಕಿ ಅಪಘಾತ ನಡೆದಿದೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಪೊಲೀಸರು ಅಗ್ನಿಶಾಮಕ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಜಮೀನು ವಿವಾದದಿಂದ ಬೆಂಕಿ ಹಚ್ಚಿರುವ ಘಟನೆ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ” ಎಂದರು. ಬೆಂಕಿ ಅನಾಹುತ ನಡೆದಾಗ ಗುಂಡೇಟಿನ ಸದ್ದು ಕೇಳಿತ್ತು ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಜಂಗಲ್ ರಾಜ್ – ಪ್ರತಿಪಕ್ಷಗಳ ಆರೋಪ:
ನವಾಡ ಬೆಂಕಿ ಅವಘಡದ ಘಟನೆಗೆ ಸಂಬಂಧಿಸಿದಂತೆ ಬಿಹಾರದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಪರಿಶಿಷ್ಟರ ಮೇಲಿನ ಅನ್ಯಾಯ ಮುಂದುವರಿದಿದೆ ಎಂಬುದಕ್ಕೆ ಇದು ‘ಜಂಗಲ್ ರಾಜ್’ ದರ್ಬಾರ್‌ಗೆ ಮತ್ತೊಂದು ಪುರಾವೆಯಾಗಿದೆ ಎಂದು ಆರೋಪಿಸಿದೆ.

ದೇಶ

ಡಿ.ಸಿ.ಪ್ರಕಾಶ್

ಬಿಜೆಪಿ ಆಡಳಿತದಲ್ಲಿ ನಿರ್ಮಾಣ ದೋಷಗಳಿಗೆ ಕೊರತೆ ಇಲ್ಲ ಎಂಬುದು ದಿನದಿಂದ ದಿನಕ್ಕೆ ಸಾಬೀತಾಗುತ್ತಿದೆ. ಅದರಲ್ಲೂ ವಿಶೇಷಚಾಗಿ ನಿರ್ಮಾಣ ಪೂರ್ಣಗೊಂಡು ವರ್ಷ ಕಳೆಯುವುದರೊಳಗೆ ಕಟ್ಟಡಗಳು ಕುಸಿದು ಬೀಳುವುದು, ನಿರ್ಮಾಣದಲ್ಲಿ ಲೋಪಗಳು ಕಂಡುಬರುವುದೆಲ್ಲ ತೀರಾ ಸಾಮಾನ್ಯ ಸುದ್ದಿಗಳಾಗಿವೆ.

ಭಾರತದ ನೂತನ ಸಂಸತ್ತಿನ ಮೇಲ್ಛಾವಣಿಯಲ್ಲಿ ನೀರಿನ ಸೋರಿಕೆ, ಉತ್ತರ ಪ್ರದೇಶದ ರಾಮಮಂದಿರದ ಮೇಲ್ಛಾವಣಿಯಲ್ಲಿ ನೀರು ಸೋರಿಕೆ, ದೆಹಲಿಯ ಸುರಂಗದಲ್ಲಿ ನೀರಿನ ಸೋರಿಕೆ, ಮಹಾರಾಷ್ಟ್ರ ಮೇಲ್ಸೇತುವೆಯಲ್ಲಿ ಬಿರುಕುಗಳು, ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ ಮುಂತಾದ ಘಟನೆಗಳು ಇದಕ್ಕೆ ಉದಾಹರಣೆಗಳಾಗಿ ಹೇಳಬಹುದು.

ಮೇಲಿನ ಪ್ರತಿ ನಿರ್ಮಾಣಕ್ಕೂ ನೂರಾರು ಕೋಟಿ ಖರ್ಚು ಮಾಡಲಾಗಿದೆ. ಇದುವೇ ಬಿಜೆಪಿ ಪ್ರಸ್ತಾಪಿಸುತ್ತಿರುವ ನಿರ್ಮಾಣ ಅಭಿವೃದ್ಧಿ ಆಗಿದೆ. ಈ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ನಿರ್ಮಾಣ ದೋಷವೆಂದರೆ ಅದು ಮಳೆ, ಗಾಳಿಯನ್ನೂ ಸಹ ತಡೆದುಕೊಳ್ಳಲು ಸಾಧ್ಯವಿಲ್ಲದ ಮಹಾರಾಷ್ಟ್ರದಲ್ಲಿ ನಿರ್ಮಾನಗೊಂಡಿರುವ ಛತ್ರಪತಿ ಶಿವಾಜಿಯ ಪ್ರತಿಮೆಯಾಗಿದೆ.

35 ಅಡಿ ಎತ್ತರದ ಪ್ರತಿಮೆಗೆ ಸರ್ಕಾರ ಸುಮಾರು 3,600 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಸರ್ಕಾರ ಖರ್ಚು ಮಾಡಿದೆ ಎಂದರೆ ಜನ ತೆರಿಗೆಯಾಗಿ ಕೊಟ್ಟ ಹಣವನ್ನು ಖರ್ಚು ಮಾಡಿದೆ ಎಂದರ್ಥ. ಈ ಮೂಲಕ 8 ತಿಂಗಳ ಹಿಂದೆ 3,600 ಕೋಟಿ ರೂ.ಗಳ ಜನರ ಹಣದಲ್ಲಿ ನಿರ್ಮಿಸಲಾದ ಈ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಎನ್‌ಡಿಎ ಮೈತ್ರಿಕೂಟದಲ್ಲಿರುವ ಶಿವಸೇನೆ (ಶಿಂಧೆ) ಪಕ್ಷದ ನಾಯಕ ಏಕನಾಥ್ ಶಿಂಧೆ ಅವರ ಒತ್ತಾಯದ ಮೇರೆಗೆ ಪ್ರತಿಮೆ ನಿರ್ಮಾಣದ ಟೆಂಡರ್ ಕಾರ್ಯವನ್ನು ಜೈದೀಪ್ ಆಪ್ತೆ (Jaideep Apte) ಅವರಿಗೆ ನೀಡಲಾಯಿತು.

ಕೇವಲ 24 ವರ್ಷ ವಯಸ್ಸಿನ ಜೈದೀಪ್ ಆಪ್ತೆ, ಏಕನಾಥ್ ಶಿಂಧೆ ಅವರ ಆಪ್ತ ಗೆಳೆಯನ ಅರ್ಹತೆ ಹೊಂದಿರುವುದನ್ನು ಬಿಟ್ಟರೆ ಅವರಿಗೆ ಮೂರ್ತಿ ತಯಾರಿಕೆಯಲ್ಲಿ ಪೂರ್ವಾನುಭವವಿಲ್ಲ ಎಂಬ ಆರೋಪ ಬಲವಾಗಿ ಕೇಳ ತೊಡಗಿದೆ.

ಹೀಗೆ ಸ್ನೇಹಿತರು, ಪರಿಚಿತರು, ದಾನಿಗಳು ಎಂಬ ಕಾರಣಕ್ಕೆಲ್ಲ ಟೆಂಡರ್ ನೀಡಿ, ಪೂರ್ವಾನುಭವವಿಲ್ಲದ ವ್ಯಕ್ತಿಗಳು ನಿರ್ಮಿಸುವ ನಿರ್ಮಾಣಗಳು ವರ್ಷ ಕಳೆಯುವುದರೊಳಗೆ ಕುಸಿದು ಬೀಳುತ್ತಿರುವುದು ಕೇಂದ್ರ ಬಿಜೆಪಿ ಸರ್ಕಾರದ ನಿರ್ಮಾಣ ವೈಫಲ್ಯವನ್ನು ತೋರಿಸುತ್ತಿದೆ.

ಹಾಗಾಗಿ ಸುಮಾರು 3,600 ಕೋಟಿ ರೂ.ಗಳನ್ನು ವ್ಯರ್ಥಮಾಡಿ, ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಿಸಿದ NDA ಸರ್ಕಾರವೇ ಪ್ರತಿಮೆಯ ಧ್ವಂಸಕ್ಕೆ ಹೊಣೆಯಾಗಬೇಕು.

ರಾಜಕೀಯ

ಪಾಟ್ನಾ: ಕೇಂದ್ರ ಸರ್ಕಾರ ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂದು ಸಂಯುಕ್ತ ಜನತಾ ದಳ (ಜೆಡಿಯು) ನಿರ್ಣಯ ಅಂಗೀಕರಿಸಿದೆ.

ಹೊಸದಾಗಿ ಆಯ್ಕೆಯಾದ ಲೋಕಸಭೆಯಲ್ಲಿ ಸಂಯುಕ್ತ ಜನತಾದಳದಿಂದ 12 ಸಂಸದರಿದ್ದಾರೆ. ಅವರು ಬಿಜೆಪಿ ನೇತೃತ್ವದ  ಎನ್ ಡಿಎ ಸರ್ಕಾರದ ಭಾಗವಾಗಿದ್ದಾರೆ. ಇಂದು (ಜೂನ್ 29) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಯುಕ್ತ ಜನತಾದಳದ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕೇಂದ್ರ ಸಚಿವರು, ಸಂಯುಕ್ತ ಜನತಾದಳ ಮುಖಂಡರು ಸೇರಿದಂತೆ ಪಕ್ಷದ ಎಲ್ಲ ಸಂಸದರು ಉಪಸ್ಥಿತರಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರ ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂಬ ನಿರ್ಣಯವನ್ನು ಅಂಗೀಕರಿಸಲಾಯಿತು. ಆಡಳಿತಾರೂಢ ಎನ್ ಡಿಎ ಸರ್ಕಾರಕ್ಕೆ ಸಂಯುಕ್ತ ಜನತಾದಳ ಬೆಂಬಲ ನೀಡುತ್ತಿರುವುದರಿಂದ ಕೇಂದ್ರ ಸರ್ಕಾರ ಬೇಡಿಕೆ ಈಡೇರಿಸುವುದೇ? ಎಂಬುದನ್ನು ಕಾದುನೋಡಬೇಕಾಗಿದೆ.

ದೇಶ

ನವದೆಹಲಿ: ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಲಾಗಿದೆ.

ಈ ಕುರಿತು ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು “ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು” ಎಂದು ಹೇಳಿದ್ದಾರೆ.

I am deeply grateful to the Hon’ble Prime Minister, Shri.Narendramodi for appointing me as the Minister of Steel and Heavy Industries in the National Democratic Alliance (NDA) government, in its third consecutive term.

ರಾಜಕೀಯ

ಡಿ.ಸಿ.ಪ್ರಕಾಶ್

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಸಂಸತ್ತಿನ ಚುನಾವಣೆಗಳು ನಡೆದವು. ಈ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಪರಸ್ಪರ ಪೈಪೋಟಿ ನಡೆಸಿದ್ದವು.

ಕಳೆದ 4ರಂದು ಮತ ಎಣಿಕೆ ಕಾರ್ಯ ನಡೆಯಿತು. ಇದರಲ್ಲಿ ಬಿ.ಜೆ.ಪಿ 240 ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಸಾದಿಸಿತು. ಸರ್ಕಾರ ರಚಿಸಲು ಅಗತ್ಯವಿರುವ 272 ಕ್ಕಿಂತ 32 ಸ್ಥಾನಗಳ ಕೊರತೆಯಿದ್ದರೂ ಎನ್ ಡಿಎ 292 ಸ್ಥಾನಗಳನ್ನು ಗೆದ್ದುಕೊಂಡಿತು.

ಇದರ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ ಡಿಎ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವ ಪ್ರಕ್ರಿಯೆಗೆ ಮುಂದಾಯಿತು. ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. 17ನೇ ಲೋಕಸಭೆ ವಿಸರ್ಜನೆಯಾಗಿದೆ.

ಬಿಜೆಪಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಬ್ಬರೂ ಕೇಂದ್ರದಲ್ಲಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ, ಎನ್ ಡಿಎಗೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಪಕ್ಷಗಳ ಬೆಂಬಲ ಅಗತ್ಯವಿದೆ. ಅದೇ ಸಂದರ್ಭದಲ್ಲಿ, ಅವರು ಕೂಡ ಮೈತ್ರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದರೂ ಕೆಲವು ಷರತ್ತುಗಳನ್ನು ವಿಧಿಸಿವೆ. ಇದರ ಪ್ರಕಾರ ಸಾರಿಗೆ, ಐಟಿ, ಕೃಷಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಜಲಸಂಪನ್ಮೂಲ ಒದಗಿಸುವಂತೆ ಚಂದ್ರಬಾಬು ನಾಯ್ಡು ಕೋರಿದ್ದಾರೆ ಎನ್ನಲಾಗಿದೆ.

ಅದೇ ರೀತಿ, ಬಿಹಾರ ಮುಖ್ಯಮಂತ್ರಿ ಮತ್ತು ಸಂಯುಕ್ತ ಜನತಾದಳದ ನಾಯಕ ನಿತೀಶ್ ಕುಮಾರ್ ಅವರು ಬಿಹಾರಕ್ಕೆ ವಿಶೇಷ ಸ್ಥಾನಮಾನ ಮತ್ತು ಕನಿಷ್ಠ ಸಾಮಾನ್ಯ ಕ್ರಿಯಾ ಯೋಜನೆ ರೂಪಿಸಲು ಷರತ್ತು ವಿಧಿಸುವ ಜೊತೆಗೆ, 3 ಕ್ಯಾಬಿನೆಟ್ ಸಚಿವರು, 2 ರಾಜ್ಯ ಸಚಿವರು ಒಟ್ಟು 5 ಕೇಂದ್ರ ಸಚಿವ ಸ್ಥಾನಗಳು ಬೇಕೆಂದು ನಿತೀಶ್ ಕುಮಾರ್ ಬಯಸಿದ್ದಾರೆ.

ಅದೇ ರೀತಿ 2 ಸಂಸದರನ್ನು ಹೊಂದಿರುವ ಜಾತ್ಯತೀತ ಜನತಾದಳ ಕೂಡ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಬಿಜೆಪಿಗೆ ಒತ್ತಡ ಹೇರುತ್ತಿದೆ. ಜೆಡಿಎಸ್ ಪಕ್ಷವು ಕೃಷಿ ಇಲಾಖೆಯನ್ನು ಕೇಳುತ್ತಿದೆ.

ಮೈತ್ರಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಕೂಡ ಷರತ್ತು ವಿಧಿಸಿದೆ ಎನ್ನಲಾಗಿದೆ. ಆ ಪಕ್ಷ ಬಿಹಾರದಲ್ಲಿ 5 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ.

ಹೀಗಾಗಿ ಬಿಜೆಪಿ ಕೇಂದ್ರದಲ್ಲಿ ಸರ್ಕಾರ ರಚಿಸುವ ಮುನ್ನವೇ ಸಮ್ಮಿಶ್ರ ಪಕ್ಷಗಳ ಬೆಂಬಲ ಪಡೆಯಲು ಇಂತಹ ಹಲವು ಸವಾಲುಗಳನ್ನು ಎದುರಿಸಬೇಕಾದ ಸ್ಥಿತಿಯಲ್ಲಿದೆ.