ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಎಸಿಪಿ ಭರತ್ ಎಸ್ ರೆಡ್ಡಿ Archives » Dynamic Leader
October 23, 2024
Home Posts tagged ಎಸಿಪಿ ಭರತ್ ಎಸ್ ರೆಡ್ಡಿ
ಕ್ರೈಂ ರಿಪೋರ್ಟ್ಸ್

ಗಮನವನ್ನು ಬೇರೆಡೆ ಸೆಳೆದು ವಾಹನದಲ್ಲಿರುವ ಹಣವನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಆರೋಪಿತರ ಬಂಧನ. 13,97,000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಿಟಿಗಾ ಕಾರು, ಅಪಾಚೆ ಹಾಗೂ ಹೋಂಡಾ ಹಾರ್ನಟ್ ಮೋಟಾರ್ ಸೈಕಲ್ ಗಳ ವಶ.

ಬೆಂಗಳೂರು: ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರುದಾರರಾದ ಚೇತನ್ ರವರು, ಜೂನ್ 6 ರಂದು ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಮ್ಮ ಟೊಯೋಟಾ ಇನ್ನೋವ ಕಾರಿನಲ್ಲಿ ಇಟ್ಟಿದ್ದ ಒಟ್ಟು 15,00,000/- ರೂ ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿದ ಮೆರೆಗೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.

ಜೂನ್ 6 ರಂದು ಸದರಿ ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಒಟ್ಟು 13,97,000/- ರೂ ನಗದು ಹಣ ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಿಟಿಗಾ ಕಾರು, ಒಂದು ಅಪಾಚೆ ಹಾಗೂ ಒಂದು ಹೋಂಡಾ ಹಾರ್ನಟ್ ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿರುತ್ತದೆ. ಸದರಿ ಆರೋಪಿತರು ಬೆಂಗಳೂರು ನಗರದ ರಾಜರಾಜೇಶ್ವರಿ ಪೊಲೀಸ್ ಠಾಣೆಯ ಈ ಹಿಂದೆಯೂ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಹಾಗೂ ಜೆ.ಪಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಸಹ ಇದೇ ರೀತಿ ಕಳವು ಮಾಡಿದ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ. ಪ್ರಕರಣದ ಉಳಿದ ಆರೋಪಿತರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿರುತ್ತದೆ.

ಸದರಿ ಕಾರ್ಯಚರಣೆಯನ್ನು ಬೆಂಗಳೂರು ನಗರದ ಡಿಸಿಪಿ (ಪಶ್ಚಿಮ) ಲಕ್ಷ್ಮಣ್ ಬಿ ನಿಂಬರಗಿ. ಕೆಂಗೇರಿ ಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಭರತ್ ಎಸ್ ರೆಡ್ಡಿ ರವರುಗಳ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಎಂ.ಶಿವಣ್ಣ ರವರ ನೇತೃತ್ವದಲ್ಲಿ ಹಾಗೂ ಅಪರಾಧ ಪತ್ತೆದಳದ ಸಿಬ್ಬಂಧಿಯವರೊಂದಿಗೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.