ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಓಂ ಬಿರ್ಲಾ Archives » Dynamic Leader
October 16, 2024
Home Posts tagged ಓಂ ಬಿರ್ಲಾ
ದೇಶ

ಕೋಲ್ಕತ್ತಾ: ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಮೋದಿ ಮತ್ತು ಅದಾನಿ ವಿರುದ್ಧ ಪ್ರಬಲವಾಗಿ ವಾದ ಮಂಡಿಸುತ್ತಿರುವವರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಪ್ರಮುಖರು. ಇವರು, ಸಂಸತ್ತಿನಲ್ಲಿ ಅದಾನಿಯ ಕುರಿತು ಪ್ರಶ್ನಿಸಲು ಉದ್ಯಮಿ ಹಿರಾನಂದಾನಿಯಿಂದ ಹಣ ಮತ್ತು ಉಡುಗೊರೆಗಳನ್ನು ಲಂಚವಾಗಿ ಪಡೆದರು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ.

ಅಲ್ಲದೆ, ಹಿರಾನಂದಾನಿ ಮತ್ತು ಅವರ ರಿಯಲ್ ಎಸ್ಟೇಟ್ ಕಂಪನಿ ತಮ್ಮ ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳಲು ಲೋಕಸಭೆಯ ವೆಬ್‌ಸೈಟ್ ಮತ್ತು ತಮ್ಮ ಲಾಗಿನ್ ಐಡಿಯನ್ನು ಮಹುವಾ ಮೊಯಿತ್ರಾ ನೀಡಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಈ ಬಗ್ಗೆ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಪತ್ರ ಬರೆದ ನಂತರ, ಈ ವಿಚಾರದಲ್ಲಿ ಕ್ರಮ ಕೈಗೊಂಡಿರುವ ಸಂಸದೀಯ ನೈತಿಕ ಸಮಿತಿ, ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾ ಅವರಿಗೆ ಆದೇಶ ಮಾಡಿತು.

ಈ ಹಿನ್ನಲೆಯಲ್ಲಿ, ನನ್ನನ್ನು ಸಂಸತ್ತಿನಿಂದ ಹೊರಹಾಕಲು ಬಯಸುವವರು ನನ್ನ ತಲೆ ಕೂದಲನ್ನೂ ಮುಟ್ಟಲಾಗದು ಎಂದು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಹೇಳಿದ್ದಾರೆ. ಸಂಸತ್ತಿನಲ್ಲಿ ಅದಾನಿಯ ಕುರಿತು ಪ್ರಶ್ನಿಸಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚವಾಗಿ ಉಡುಗೊರೆ ಪಡೆದಿರುವ ಆರೋಪಕ್ಕೆ ಮೇಲಿನಂತೆ ಮಹುವಾ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ನವದೆಹಲಿ: ಸತತ ಮೂರು ದಿನಗಳ ಕಾಲ ಸಂಸತ್ತಿನ ಉಭಯ ಸದನಗಳನ್ನು ಅಮಾನತುಗೊಳಿಸಿದ ನಂತರ ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಮತ್ತೆ ಪ್ರಾರಂಭಗೊಂಡಿತು. ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಲಾಪ ಆರಂಭಿಸುತ್ತಿದ್ದಂತೆ ಪ್ರತಿಪಕ್ಷಗಳು ‘ಅದಾನಿ ಗ್ರೂಪ್’ ವಿಷಯವನ್ನು ಪ್ರಸ್ತಾಪಿಸಲು ಯತ್ನಿಸಿದವು.

ಇದಕ್ಕೆ ಪ್ರಶ್ನೋತ್ತರ ಸಮಯವನ್ನು ಬಳಸಿಕೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಸೂಚಿಸಿದರೂ ವಿರೋಧ ಪಕ್ಷಗಳು ತಮ್ಮ ಬೇಡಿಕೆಯನ್ನು ಮುಂದುವರೆಸಿದವು. ಹೀಗಾಗಿ ಕಲಾಪವನ್ನು ಮಧ್ಯಾಹ್ನ 12ಕ್ಕೆ ಮುಂದೂಡಲಾಯಿತು. ಒಂದು ಗಂಟೆ ಕಾಲ ಮುಂದೂಡಿದ ಕಲಾಪವು ಮತ್ತೆ ಪುನರಾರಂಭವಾದಾಗ, ಬಿಜೆಪಿ ಲೋಕಸಭಾ ಸದಸ್ಯ ಸಿ.ಪಿ.ಜೋಶಿ ರಾಷ್ಟ್ರಪತಿ ಭಾಷಣಕ್ಕೆ ಧನ್ಯವಾದ ಅರ್ಪಿಸುವ ನಿರ್ಣಯವನ್ನು ಮಂಡಿಸಿದರು. ಇದಕ್ಕೂ ಮುನ್ನ ಲೋಕಸಭೆ ಸದಸ್ಯರು ಟರ್ಕಿ-ಸಿರಿಯಾ ಭೂಕಂಪದ ಸಂತ್ರಸ್ತರಿಗೆ ಸಂತಾಪ ಸೂಚಿಸಿದರು.

ಲೋಕಸಭೆಯಲ್ಲಿ ಸಿ.ಪಿ.ಜೋಶಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದವನ್ನು ಓದುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಸಂಸತ್ತಿನ ಮಧ್ಯಭಾಗಕ್ಕೆ ಬಂದು ಘೋಷಣೆಗಳನ್ನು ಕೂಗಿದರು. ಸ್ಪೀಕರ್ ಓಂ ಬಿರ್ಲಾ ಅವರು ಮತ್ತೆ ಸದನವನ್ನು ಮಧ್ಯಾಹ್ನ 1.30ಕ್ಕೆ ಮುಂದೂಡಿದರು.

ಇದಾದ ಬಳಿಕ ಆರಂಭವಾದ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾತನಾಡಿ, ‘ಭಾರತೀಯ ಏಕತಾ ಯಾತ್ರೆಯ (ಭಾರತ್ ಜೋಡೋ ಯಾತ್ರೆ) ಸಮಯದಲ್ಲಿ ನಾವು ದೇಶಾದ್ಯಂತ ಜನರ ಧ್ವನಿಯನ್ನು ಕೇಳಿದ್ದೇವೆ. ಯಾತ್ರೆಯ ಆರಂಭದಲ್ಲಿ ಸ್ವಲ್ಪ ಕಷ್ಟವಾಗಿತ್ತು. ಯಾತ್ರೆಯ ವೇಳೆ ಮಕ್ಕಳು, ಮಹಿಳೆಯರು ಹಾಗೂ ವೃದ್ಧರ ಕುಂದುಕೊರತೆಗಳನ್ನು ಆಲಿಸಿದೆವು.

ಏಕತಾ ಯಾತ್ರೆಯ ಸಂದರ್ಭದಲ್ಲಿ ಸಾವಿರಾರು ರೈತರು ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಆದಿವಾಸಿಗಳು ಮಸೂದೆಯ ಬಗ್ಗೆ ಪ್ರಶ್ನೆ ಮಾಡಿದರು.

ಲೋಕಸಭೆ

ಸೇನೆಯ ಮೇಲೆ ಅಗ್ನಿವೀರ್ ಯೋಜನೆ ಹೇರಲಾಗುತ್ತಿದೆ ಹಾಗೂ ಅನೇಕರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದೂ ಹೇಳಿದರು. ಕೆಲಸ ಸಿಗದವರಿಗೆ ಅದಕ್ಕಾದ ಕಾರಣವನ್ನು ವಿವರಿಸಬೇಕಿತ್ತು. ಜನರಿಗೆ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಿ ನಂತರ ಸಮುದಾಯಕ್ಕೆ ಹಿಂತಿರುಗುವಂತೆ ಹೇಳಲಾಗುತ್ತಿದೆ ಇದು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ನಿವೃತ್ತ ಅಧಿಕಾರಿಗಳು ಹೇಳುತ್ತಾರೆ.

ಜನರು ಅಗ್ನಿವೀರ್ ಯೋಜನೆ ಬಗ್ಗೆಯೂ ಮಾತನಾಡಿದ್ದಾರೆ. ಭಾರತೀಯ ಯುವಕರು, 4 ವರ್ಷಗಳ ನಂತರ ತಮ್ಮನ್ನು ಹೊರಹೋಗುವಂತೆ ಕೇಳಿಕೊಂಡ ಬಗ್ಗೆ ನಮಗೆ ತಿಳಿಸಿದರು. ಅಗ್ನಿವೀರ್ ಯೋಜನೆ ಆರ್‌ಎಸ್‌ಎಸ್ ಹಾಗೂ ಗೃಹ ಸಚಿವಾಲಯದಿಂದ ಬಂದಿದೆಯೇ ಹೊರತು ಸೇನೆಯಿಂದಲ್ಲ. ಅದು ಎನ್ಎಸ್ಎ ಅಜಿತ್ ದೋವಲ್ ಮುಖಾಂತರ ಸೇನೆಯ ಮೇಲೆ ಬಲವಂತವಾಗಿ ಹೇರಿದ್ದಾರೆ ಎಂದು ನಿವೃತ್ತ ಅಧಿಕಾರಿಗಳು ಹೇಳುತ್ತಿದ್ದಾರೆ.

ಅಧ್ಯಕ್ಷರ ಭಾಷಣದಲ್ಲಿ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಉಲ್ಲೇಖಗಳಿಲ್ಲ.

ತಮಿಳುನಾಡು, ಕೇರಳದಿಂದ ಹಿಮಾಚಲ ಪ್ರದೇಶದವರೆಗೆ ಎಲ್ಲೆಲ್ಲೂ ‘ಅಧಾನಿ’ ಎಂಬ ಒಂದೇ ಹೆಸರನ್ನು ಪದೆ ಪದೇ ಕೇಳುತ್ತಿದ್ದೇವೆ. ಅದು ‘ಅದಾನಿ’, ‘ಅದಾನಿ’, ‘ಅದಾನಿ’ ಎಂಬುದಾಗಿದೆ. ‘ಅದಾನಿ ಮಾಡದ ವ್ಯವಹಾರಗಳು ಇಲ್ಲ; ಅದರಲ್ಲಿ ಅವರು ಎಂದಿಗೂ ವಿಫಲರಾಗಿಲ್ಲ’. ಇದು ಹೇಗೆ ಎಂದು ಜನ ನನ್ನನ್ನು ಕೇಳುತ್ತಿದ್ದಾರೆ. ಪ್ರಧಾನಿಗೂ ಅದಾನಿಗೂ ಏನು ಸಂಬಂಧ? ಪ್ರತಿ ವೃತ್ತಿಯಲ್ಲೂ ಅವರು ಹೇಗೆ ಯಶಸ್ವಿಯಾಗುತ್ತಾರೆ.

ಅದಾನಿ ಈಗ 8-10 ಕ್ಷೇತ್ರಗಳಲ್ಲಿದ್ದಾರೆ. ಅವರು 2014 ರಿಂದ 2022 ರವರೆಗೆ 8 ಬಿಲಿಯನ್ ಡಾಲರ್‌ಗಳಿಂದ 140 ಬಿಲಿಯನ್ ಡಾಲರ್‌ಗೆ ಹೋಗಿದ್ದು ಹೇಗೆ ಎಂದು ಯುವಕರು ನಮ್ಮನ್ನು ಪ್ರಶ್ನಿಸುತ್ತಾರೆ.

ಕಾಶ್ಮೀರ, ಹಿಮಾಚಲ ಪ್ರದೇಶದಿಂದ ಹಿಡಿದು ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ನಾವು ನಡೆಯುವ ರಸ್ತೆಗಳ ವರೆಗೆ ಎಲ್ಲದರಲ್ಲೂ ಅದಾನಿಯೇ ಇದ್ದಾರೆ’ ಎಂದು ಅವರು ಹೇಳಿದರು.