ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕರ್ನಾಟಕ ಮುಸ್ಲಿಂ Archives » Dynamic Leader
October 17, 2024
Home Posts tagged ಕರ್ನಾಟಕ ಮುಸ್ಲಿಂ
ರಾಜ್ಯ

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಸಾಮಾಜಿಕ-ಆರ್ಥಿಕ-ಉದ್ಯೋಗ ಕ್ಷೇತ್ರಗಳಲ್ಲಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ 2023-24ರ ಬಜೆಟ್ ನಲ್ಲಿ, ಸಾಮಾಜಿಕ ನ್ಯಾಯದ ಯೋಜನೆಗಳನ್ನು ಘೋಷಣೆ ಮಾಡಲು ಕರ್ನಾಟಕ ಮುಸ್ಲಿಮ್ ಯುನಿಟಿ ಮನವಿ ಮಾಡಿದೆ.

ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ರವರ ಮುಖಾಂತರ ಕರ್ನಾಟಕ ಮುಸ್ಲಿಮ್ ಯುನಿಟಿಯ ಮುಖಂಡರುಗಳು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, “ರಾಜ್ಯದಲ್ಲಿ ತಮ್ಮ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಪೂರ್ಣ ಬಹುಮತದ ಸರಕಾರಕ್ಕೆ ನಾಡಿನ ಸಮಸ್ತ ಮುಸ್ಲಿಮರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ಈ ಹಿಂದಿನ ಕೋಮುವಾದಿ ಭ್ರಷ್ಟ ಸರ್ಕಾರದ ದುರಾಡಳಿತಕ್ಕೆ ಬೇಸತ್ತ ಜನ ತಮಗೆ ನೀಡಿರುವ ಚಾರಿತ್ರಿಕ ಅವಕಾಶವಿದು ಎಂದು ನಾವು ಭಾವಿಸುತ್ತೇವೆ.

ತಮಗೆ ತಿಳಿದಿರುವಂತೆ ಈ ರಾಜ್ಯದ ಮುಸ್ಲಿಮ್ ಸಮುದಾಯ ಕಳೆದ ನಾಲ್ಕು ವರ್ಷಗಳಲ್ಲಿ ಹಿಂದೆಂದಿಗಿಂತಲೂ ಅತೀ ಹೆಚ್ಚು ನೋವನ್ನು ಅನುಭವಿಸಿದ್ದು, ದಿನನಿತ್ಯದ ಬದುಕಿನಲ್ಲಿ ಭದ್ರತೆಯ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ರಾಜ್ಯದಲ್ಲಿ ನಡೆದ 2023ರ ಚುನಾವಣೆಯಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು ಮತ ನೀಡಿದ್ದಾರೆ. ಇದರ ಮೂಲಕ ರಾಜ್ಯದ ಅಭಿವೃದ್ದಿಗೆ, ತಮ್ಮ ನೇತೃತ್ವದ ಸರಕಾರಕ್ಕೆ, ಮುಸ್ಲಿಮರು ಬೆಂಬಲ ನೀಡಿದ್ದಾರೆ ಎಂಬುದು ಸಾಬೀತಾಗಿದೆ.

ಇಂತಹ ಸಂದರ್ಭದಲ್ಲಿ ಕಳೆದ ನಾಲ್ಕು ವರ್ಷಗಳ ಆಡಳಿತದ ಸರ್ಕಾರದಲ್ಲಿ ನಿರ್ಲಕ್ಷ್ಯ / ಅವಕಾಶಗಳ ವಂಚನೆಗೆ ಒಳಗಾಗಿರುವ ನಾಡಿನ ಮುಸ್ಲಿಮ್ ಸಮುದಾಯಕ್ಕೆ ತಮ್ಮ ಘನ ಸರಕಾರ ಸೂಕ್ತ ಸಾಮಾಜಿಕ ನ್ಯಾಯ ನೀಡುತ್ತದೆ ಎನ್ನುವ ವಿಶ್ವಾಸದೊಂದಿಗೆ ಕರ್ನಾಟಕ ಮುಸ್ಲಿಮ್ ಯುನಿಟಿಯು, ರಾಜ್ಯದ ಸಮಸ್ತ ಮುಸ್ಲಿಮ್ ಸಮುದಾಯದ ಪರವಾಗಿ, ನಮ್ಮ ಆಶೋತ್ತರ ಬೇಡಿಕೆಗಳನ್ನು ತಮ್ಮ ಮುಂದೆ ಮಂಡಿಸುತ್ತಿದೆ” ಎಂದು ಸಚಿವರ ಬಳಿ, ಮುಖ್ಯಮಂತ್ರಿಗಳಿಗೆ ನೀಡಿರುವ ಮನವಿ ಪತ್ರದಲ್ಲಿ ಮನವರಿಕೆ ಮಾಡಲಾಗಿದೆ.

ತಮ್ಮ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ 10 ಸಾವಿರ ಕೋಟಿ ರೂಪಾಯಿಗಳನ್ನು ಅನುದಾನ ಒದಗಿಸಲಾಗುವದು ಎಂದು ಭರವಸೆ ನೀಡಿರುವುದು ಅಭಿನಂದನೀಯ. ಅದರಂತೆ, ಈ ವರ್ಷದ ಬಜೆಟ್‍ನಲ್ಲಿಯೇ ಸದರಿ ಅನುದಾನವನ್ನು ಘೋಷಿಸಬೇಕು ಎಂದು ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಸಮಿತಿ ಮುಖಂಡರ ತಂಡ ಸಚಿವರನ್ನು ಒತ್ತಾಸಿದೆ.

ಅಲ್ಲದೆ, ತಮ್ಮ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಜಾರಿಯಲ್ಲಿದ್ದ ಎಲ್ಲಾ ಯೋಜನೆಗಳನ್ನು ಹೆಚ್ಚಿನ ಭೌತಿಕ ಗುರಿಯೊಂದಿಗೆ 2023-24ನೇ ಸಾಲಿನಿಂದ ಮರು ಜಾರಿಗೊಳಿಸಬೇಕು. 2ಬಿ ಪ್ರವರ್ಗದಡಿಯಲ್ಲಿ ನೀಡುತ್ತಿದ್ದ 4% ಮೀಸಲಾತಿಯನ್ನು EWS ಪ್ರವರ್ಗಕ್ಕೆ ವರ್ಗಾಯಿಸಿರುವುದನ್ನು ರದ್ದು ಪಡಿಸಬೇಕು. ಮತ್ತೊಮ್ಮೆ ಅದೇ 2ಬಿ ಪ್ರವರ್ಗದಲ್ಲಿ ಮೀಸಲಾತಿಯನ್ನು ಮುಂದುವರಿಸಬೇಕು. ಅಲ್ಲದೆ ರಾಜ್ಯದಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯುಳ್ಳ ಮುಸ್ಲಿಮರ ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕು.

ನ್ಯಾ.ರಾಜೇಂದ್ರ ಸಾಚಾರ್ ಶಿಫಾರಸ್ಸಿನಂತೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಮುಸ್ಲಿಂ ಪೋಲಿಸ್ ಅಧಿಕಾರಿಯನ್ನು ನೇಮಿಸುವುದಲ್ಲದೇ ಹೆಚ್ಚಿನ ಪ್ರಮಾಣದಲ್ಲಿ ಮುಸ್ಲಿಂ ಸಿಬ್ಬಂದಿಗಳನ್ನು ನಿಯೋಜಿಸಬೇಕು.

ಅಕಾಡೆಮಿ, ಪ್ರಾಧಿಕಾರಗಳಲ್ಲಿ ಅವುಗಳ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಗಳಿಗೆ ಸೂಕ್ತ ಪ್ರಮಾಣದಲ್ಲಿ ಮುಸ್ಲಿಂ ಪ್ರಾತಿನಿಧ್ಯವನ್ನು ಒದಗಿಸಿಕೊಡಬೇಕು.

ರಾಜ್ಯದಲ್ಲಿ ನಿಗಮ / ಮಂಡಳಿಗಳ ಅಧ್ಯಕ್ಷರುಗಳ ನೇಮಕಾತಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ 25ರಷ್ಟು ಪ್ರಾತಿನಿಧ್ಯ ನೀಡಬೇಕು. ಸದಸ್ಯರು / ನಿರ್ದೇಶಕರ ನೇಮಕಾತಿಯಲ್ಲಿ ಕನಿಷ್ಠ ಒಬ್ಬರು ಅಲ್ಪಸಂಖ್ಯಾತರನ್ನು ನಾಮನಿರ್ದೇಶನ ಮಾಡುವುದರೊಂದಿಗೆ ಇದನ್ನು ಕಡ್ಡಾಯಗೊಳಿಸಲು ನಿಯಮಗಳನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಬೇಕು.

ಅಗತ್ಯ ಪ್ರದೇಶಗಳಲ್ಲಿ ಇದೇ ವರ್ಷದಲ್ಲಿ 100 ಅಲ್ಪಸಂಖ್ಯಾತ ವಸತಿ ನಿಲಯಗಳನ್ನು ಮಂಜೂರು ಮಾಡಬೇಕು ಮುಂತಾದ ಬೇಡಿಕೆ ಹಾಗೂ ಹಕ್ಕೋತ್ತಾಯದ ಮನವಿ ಪತ್ರವನ್ನು ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಮತ್ತು ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರಿಗೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಅಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ, ಗೌರವಾಧ್ಯಕ್ಷರಾದ ಜಿ.ಎ.ಬಾವ, ಎಂ.ಎಲ್.ಸರಕಾವಸ್, ಸಂಚಾಲಕರು, ಉತ್ತರ ಕರ್ನಾಟಕ ಹಾಗೂ ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಸಮಿತಿಯ ಮುಖಂಡರುಗಳು ಉಪಸ್ಥಿತರಿದ್ದರು.

ದೇಶ

ಭಾರತದ ಹಲವು ರಾಜ್ಯಗಳಲ್ಲಿ ಮುಸ್ಲಿಮರ ವಿರುದ್ಧ ದಬ್ಬಾಳಿಕೆ ನಡೆಯುತ್ತಿದೆ ಎಂದು ಅಮೆರಿಕ ವರದಿಯನ್ನು ಪ್ರಕಟಿಸಿದೆ.

ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಎಂಬ ಶೀರ್ಷಿಕೆಯಡಿ ಕಳೆದ ವರ್ಷದ ವಾರ್ಷಿಕ ವರದಿಯನ್ನು ನಿನ್ನೆ ಅಮೆರಿಕ ವಿದೇಶಾಂಗ ಸಚಿವಾಲಯವು ಈ ವರದಿಯನ್ನು ಬಿಡುಗಡೆ ಮಾಡಿತು. ವರದಿಯಲ್ಲಿ ಭಾರತದ ಕೆಲವು ರಾಜ್ಯಗಳಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ ಎಂದು ಉಲ್ಲೇಖಿಸಿದೆ.

ಅಮೆರಿಕದ ಈ ಹೇಳಿಕೆ ಸಾಕಷ್ಟು ಕೋಲಾಹಲಕ್ಕೆ ಕಾರಣವಾದ ಹಿನ್ನಲೆಯಲ್ಲಿ, ಭಾರತವು ಅದನ್ನು ಸಾರಾಸಗಟಾಗಿ ತಳ್ಳಿಹಾಕಿದೆ. ಇದಲ್ಲದೆ, ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಸಿ, ‘ಸರಿಯಾದ ಮಾಹಿತಿ ಮತ್ತು ತಿಳುವಳಿಕೆಯ ಕೊರತೆಯಿಂದಾಗಿ ಅಮೆರಿಕ ಈ ಹೇಳಿಕೆಯನ್ನು ನೀಡಿದೆ’ ಎಂದು ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 

“Religious freedom conditions in India are taking a drastic turn downward, with national and various state governments tolerating widespread harassment and violence against religious minorities. The BJP-led government enacted the Citizenship (Amendment) Act (CAA), which provides a fast track to Indian citizenship only for non-Muslim migrants from Afghanistan, Bangladesh, and Pakistan already residing in India. This potentially exposes millions of Muslims to detention, deportation and statelessness when the government completes its planned nationwide National Register of Citizens”. – USCIRF

ರಾಜಕೀಯ

ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಮತದಾರರ ಪಾತ್ರವನ್ನು ಗುರುತಿಸಿ ಸೂಕ್ತ ಸ್ಥಾನ – ಮಾನಗಳನ್ನು ನೀಡಲು ಕರ್ನಾಟಕ ಮುಸ್ಲಿಮ್ ಯುನಿಟಿ ಒತ್ತಾಯ.

ಈ ಭಾರಿ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಹಳ ಮುತುವರ್ಜಿಯಿಂದ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಕಾಂಗ್ರೆಸ್ಸಿನೊಂದಿಗೆ ಮುಸ್ಲಿಂ ಸಮುದಾಯಕ್ಕೆ ಬಹಳಷ್ಟು ನಿರೀಕ್ಷೆಗಳಿವೆ

2ಬಿ ಮೀಸಲಾತಿ ಪರಿಹಾರ ಮುಂತಾದ ಹಲವು ಬೇಡಿಕೆಗಳು ಇವೆ. ಇದೆಲ್ಲವನ್ನೂ ಪರಿಹರಿಸುವುದು ಕಾಂಗ್ರೆಸ್ಸಿನ ಜವಾಬ್ದಾರಿಯಾಗಿದೆ. ಕರ್ನಾಟಕದಲ್ಲಿ ದಲಿತರ ನಂತರ ಎರಡನೇ ಅತಿ ದೊಡ್ಡ ಮತದಾರರನ್ನು ಹೊಂದಿರುವ ಮುಸ್ಲಿಮ್ ಸಮುದಾಯಕ್ಕೆ ಒಂದು ಪಕ್ಷವನ್ನು ಜಯಿಸಲಿಕ್ಕೂ ಅಥವಾ ಸೋಲಿಸಲಿಕ್ಕೂ ಸಾಧ್ಯವೆಂಬ ಸತ್ಯ ಈ ಚುನಾವಣೆಯಲ್ಲಿ ಸಾಬೀತಾಗಿದೆ. ಕರ್ನಾಟಕದ ಮುಸ್ಲಿಮ್ ಸಮುದಾಯವು ಇದೀಗ ರಾಜಕೀಯವಾಗಿ ಅತ್ಯಂತ ಪ್ರಬುದ್ಧವಾಗಿದೆ. ಆದ್ದರಿಂದ ಈ ಸತ್ಯವನ್ನು ಅರಿತು ಕಾಂಗ್ರೆಸ್ ಪಕ್ಷ / ಸರ್ಕಾರ ಮುಸ್ಲಿಮ್ ಸಮುದಾಯದ ಸಾಮಾಜಿಕ ನ್ಯಾಯದ ಬೇಡಿಕೆಗಳನ್ನು ಈಡೇರಿಸುವ ಯೋಜನೆಗಳನ್ನು ಮಾಡಿದರೆ ಮಾತ್ರ ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಜಯಗಳಿಸಬಹುದು. ಕಾಂಗ್ರೆಸ್ಸಿನ ನೇತಾರರು ಇದರ ಬಗ್ಗೆ ವಿಶೇಷವಾಗಿ ಚಿಂತಿಸಬೇಕಾಗಿದೆ.

ಕರ್ನಾಟಕದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಕಳೆದ ನಾಲ್ಕು ವರ್ಷದಲ್ಲಿ  ಸಾಕಷ್ಟು ನೋವು, ಅನ್ಯಾಯ, ಹಿಂಸೆ ಅನುಭವಿಸಿರುತ್ತಾರೆ. ಮಹಿಳೆಯರ ಶಿಕ್ಷಣದ ವಿಚಾರ (ಹಿಜಾಬ್) ದಲ್ಲಿ ಗೊಂದಲವನ್ನು ಸೃಷ್ಠಿ ಮಾಡಲಾಗಿತ್ತು. ದೇವಸ್ಥಾನ ಪ್ರದೇಶದಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಸಂಘಿಗಳಿಂದ ತಾಕೀತು ಮಾಡಲಾಗಿತ್ತು. ಅನಗತ್ಯವಾಗಿ ಗೋವು ಸಂರಕ್ಷಕರ ಹೆಸರಿನಲ್ಲಿ ಅನೈತಿಕ ಪೋಲಿಸ್ ಗಿರಿ ಮಾಡಲಾಗಿತ್ತು. ಲವ್‌ ಜೀಹಾದ್‌ ಹೆಸರಲ್ಲಿ ಮುಸ್ಲಿಮ್ ಯುವಕ/ಯುವತಿಯರ ಮೇಲೆ ವಿನಾ ಕಾರಣ ದೌರ್ಜನ್ಯ ಮಾಡಲಾಗುತಿತ್ತು. 4% ಮೀಸಲಾತಿಯನ್ನು ರದ್ದುಗೊಳಿಸಿ, ಲಿಂಗಾಯತರಿಗೆ ಮತ್ತು ಒಕ್ಕಲಿಗರಿಗೆ ಮರುಹಂಚಿಕೆ ಮಾಡಿ, ಮುಸ್ಲಿಮರನ್ನು ಇ ಡಬ್ಲ್ಯೂಎಸ್ ಕೋಟಾಗೆ ವರ್ಗಾವಣೆಮಾಡಿ ಗೊಂದಲವನ್ನು ಸೃಷ್ಠಿಸಿತು. ಗಣನೀಯವಾಗಿ ಅಲ್ಪಸಂಖ್ಯಾತ ವಿಧ್ಯಾರ್ಥಿ ವೇತನವನ್ನು ಕಡಿತ ಗೋಳಿಸಿ ಸುಮಾರ 6 ಲಕ್ಷಕ್ಕೂ ಹೆಚ್ಚು ಮಕ್ಕಳ ವಿಧ್ಯಾರ್ಥಿ ವೇತನದಿಂದ ವಂಚನೆ ಮಾಡಿತು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಗೂ ನಿಗಮದಿಂದ ಜಾರಿಯಲ್ಲಿದ್ದ ಯೋಜನೆಗಳನ್ನು ದ್ವೇಶದಿಂದ ರದ್ದುಗೊಳಿಸಿತು.

ಅನುದಾನ ಕಡಿತಗೊಳಿಸಿ ಮುಸ್ಲಿಂ ಸಮುದಾಯವನ್ನು ಹೆದರಿಕೆಯಲ್ಲಿಡುವ ಪ್ರಯತ್ನವನ್ನು ಸರ್ಕಾರದಿಂದಲೇ ಮಾಡಲಾಗಿತ್ತು. ಸಿ.ಎ.ಎ. ಮತ್ತು ಎನ್.ಆರ್.ಸಿ ಹೋರಾಟದಲ್ಲಿ ಮಂಗಳೂರಿನಲ್ಲಿ ಗೋಲಿಬಾರ್ ನಡೆಸಿ ಮುಗ್ದ ಮುಸ್ಲಿಮರ ಸಾವಿಗೆ ಕಾರಣವಾಯಿತು. ಮಂಗಳೂರು ಹಾಗೂ ನರಗುಂದದಲ್ಲಿ ಕೋಮುದ್ವೇಶದ ಕಾರಣ ಕೊಲೆಗಳಾದರೂ ಕನಿಷ್ಠ ಮಾನವಿಯತೆ ತೋರದಿರುವದು ಮತ್ತು ಅವರಿಗೆ ಸೂಕ್ತ ಪರಿಹಾರ ನೀಡದೆ ತಾರತಮ್ಯ ಮಾಡಿರುವದು ಮುಸ್ಲಿಮ್ ಭೇಗುದಿಗೆ ಕಾರಣವಾಗಿತ್ತು. ಇದೆಲ್ಲವನ್ನು ಸೂಕ್ಷ್ಮವಾಗಿ ನೋಡುತ್ತಿದ್ದ ಮುಸ್ಲಿಮ್ ಸಮುದಾಯಕ್ಕೆ 2023ರ ಸಾರ್ವತ್ರಿಕ ಚುನಾವಣೆ ವರವಾಗಿ ಬಂದಿತು.

ಈ ಮೇಲಿನ ಎಲ್ಲ ಬೆಳವಣಿಗೆಗಳನ್ನ ಹತ್ತಿರದಲ್ಲಿ ಕಂಡಿದ್ದ ಮುಸ್ಲಿಮರಲ್ಲಿ ಸಾಕಷ್ಟು ಜಾಗೃತಿ ಉಂಟಾಗಿತ್ತು. ಹೀಗಾಗಿ ರಾಜ್ಯದ ಮುಸ್ಲಿಮ್ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಇಡಿಯಾಗಿ ಬೆಂಬಲಿಸಿ ಶೇ.95ರಷ್ಟು ಪೂಲಿಂಗ್ ಮಾಡಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲು ಮುಸ್ಲಿಮರು ಬಹುಮುಖ್ಯ ಪಾತ್ರವನ್ನುವಹಿಸಿದರು. ಇದಕ್ಕಾಗಿ ಕರ್ನಾಟಕ ಮುಸ್ಲಿಮ್ ಯೂನಿಟಿಯು, ಸಮುದಾಯದ ಎಲ್ಲಾ ಮುಖಂಡರುಗಳಿಗೆ, ಉಲೇಮಾಗಳಿಗೆ, ಚಿಂತಕರಿಗೆ ಹಾಗೂ ರಾಜ್ಯದ ಸಮಸ್ತ ಮುಸ್ಲಿಮ್ ಮತದಾರರಿಗೆ ಅಭಿನಂದಿಸುತ್ತದೆ.

ಕರ್ನಾಟಕದಲ್ಲಿ ಮುಸ್ಲಿಂ ಮತಗಳು ವಿಭಜನೆಯಾಗದೆ ಇಂದು ಬಹುಮತದ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದಲ್ಲಿ 9  ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಬಿಗಿದ್ದಾರೆ. ಇವರಲ್ಲಿ ಬಹುತೇಕರಿಗೆ ಸರ್ಕಾರದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂಬುದು ಕರ್ನಾಟಕ ಮುಸ್ಲಿಮ್ ಯೂನಿಟಿಯ ಹೊಕ್ಕೋತ್ತಾಯವಾಗಿದೆ. ಹಾಗೆಯೇ ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಗಳಲ್ಲಿ ಮುಸ್ಲಿಮರಿಗೆ ಸೂಕ್ತ ಆಧ್ಯತೆ, ಸರ್ಕಾರದ ಎಲ್ಲಾ ಪ್ರಮುಖ ನಿಗಮ / ಮಂಡಳಿಗಳಲ್ಲಿ ಸೂಕ್ತ ಆಧ್ಯತೆ ನೀಡಬೇಕು, ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ನಿಗಮ / ಮಂಡಳಿಗಳನ್ನು ಸಂಪೂರ್ಣ ಹಾಗು ಖಡ್ದಾಯವಾಗಿ ಭರ್ತಿಮಾಡ ಬೇಕು. ಅದರಲ್ಲೂ ವಿಶೇಷವಾಗಿ ರಾಜ್ಯಾದ್ಯಂತ ಚುನಾವಣಾ ಪ್ರವಾಸ ಕೈಕೊಂಡು, ಮುಸ್ಲಿಮರ ಮತಗಳನ್ನು ಕ್ರೋಢೀಕರಿಸಿದ, ಕರ್ನಾಟಕ ಮುಸ್ಲಿಮ್ ಜನನಾಯಕ, ಪ್ರಖರ ವಾಗ್ಮಿ, ಅರ್ಹ, ಅಹಿಂದ ಮುಖಂಡರೂ ಆಗಿರುವ ಶ್ರೀ.ಬಿ.ಜಡ್.ಜಮೀರ್ ಅಹ್ಮದ್ ಖಾನ್ ರವರಿಗೆ  ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ, ಕಾಂಗ್ರೆಸ್ ಪಕ್ಷದೊಂದಿಗೆ ನಿಂತಿರುವ ಸಮುದಾಯದ ಉಪಕಾರ ಸ್ಮರಿಸಬೇಕು ಎಂದು ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಮುಸ್ಲಿಮ್ ಯುನಿಟಿ ಸಂಘಟನೆ ಒತ್ತಾಯ ಮಾಡುತ್ತಿದೆ.

ಗೆಲುವಿನ ಸಂಭ್ರಮದಲ್ಲಿ ಶೇ.95ರಷ್ಟು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ಮುಸ್ಲಿಮ್ ಸಮಾಜವನ್ನು ಮರೆಯಬಾರದು. ಮುಸ್ಲಿಮ್ ಸಮುದಾಯಕ್ಕೆ ನೀಡಿರುವ 2ಬಿ ಮೀಸಲಾತಿಯ ಪ್ರಕರಣವನ್ನು ತಕ್ಷಣಕ್ಕೆ ಬಗೆಹರಿಸಬೇಕು. ದಲಿತರಿಗೆ ನೀಡಿರುವ ಭರವಸೆಯನ್ನೂ ಈಡೇರಿಸಬೇಕು ಎಂದು ಕರ್ನಾಟಕ ಮುಸ್ಲಿಂ ಯೂನಿಟಿ ಒತ್ತಾಯಿಸುತ್ತಿದೆ. ಅಲ್ಲದೆ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಸಮುದಾಯದ ಒಂಬತ್ತು ಅಭ್ಯರ್ಥಿಗಳಿಗೆ ಹಾಗೂ ರಾಜ್ಯದ ಧಿಮಂತ ನಾಯಕ ಶ್ರೀ.ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಶ್ರೀ. ಡಿ.ಕೆ. ಶಿವಕುಮಾರ್ ರವರನ್ನು ಈ ಮೂಲಕ ಕೆ.ಎಮ್.ಯು ಅಭಿನಂದಿಸುತ್ತಿದೆ.

ರಾಜಕೀಯ

ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಕ್ಕ ಉತ್ತರವನ್ನು ನೀಡಿದ್ದಾರೆ.

“ಗೃಹ ಸಚಿವ ಅಮಿತ್ ಶಾ ಅವರೇ, ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡಲು ಮುಸ್ಲಿಮರ ಮೀಸಲಾತಿಯನ್ನು ಇಲ್ಲವೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗ-ಲಿಂಗಾಯತರ ಮೀಸಲಾತಿ ಕಡಿತಗೊಳಿಸಬೇಕಾಗಿಲ್ಲ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಈ ವಿವಾದವನ್ನು ಸುಲಭದಲ್ಲಿ ಬಗೆಹರಿಸಬಹುದು. ಬಿಜೆಪಿಗೆ ಒಕ್ಕಲಿಗರು-ಲಿಂಗಾಯತರ ಮೀಸಲಾತಿ ಹೆಚ್ಚಿಸುವ ಸದುದ್ದೇಶ ಇರಲಿಲ್ಲ. ಮುಸ್ಲಿಮರ ಮೀಸಲಾತಿಯನ್ನು ರದ್ದು ಮಾಡುವ ದುರುದ್ದೇಶವಷ್ಟೇ ಇತ್ತು. ಇದನ್ನು ಅರ್ಥಮಾಡಿಕೊಂಡೇ ಸುಪ್ರೀಂ ಕೋರ್ಟ್ ಸರ್ಕಾರದ ಮೀಸಲಾತಿ ನೀತಿಗೆ ತಡೆಯಾಜ್ಞೆ ನೀಡಿರುವುದು.

ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಯಲ್ಲಿಯೇ ಜಾತಿ-ಜಾತಿ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಷ್ಟು ಕರ್ನಾಟಕದ ಜನತೆ ದಡ್ಡರಲ್ಲ. ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಮಹಾಜನತೆ ‘ಕಿತ್ತು ತಿನ್ನುವ ದುಷ್ಟರಲ್ಲ’, ‘ಹಂಚಿ ತಿನ್ನುವ ಔದಾರ್ಯ ಸಜ್ಜನರು’ ಎನ್ನುವುದನ್ನು ಅಮಿತ್ ಶಾ ಅವರಿಗೆ ವಿನಮ್ರವಾಗಿ ತಿಳಿಸಬಯಸುತ್ತೇನೆ.

ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ಬಿಜೆಪಿ ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ.

ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ ಗೆ ಸೇರಿಸಬೇಕು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ. ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡಾ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ” ಎಂದು ಗೃಹ ಸಚಿವ ಅಮಿತ್ ಶಾ ಅವರಿಗೆ ತಕ್ಕ ಉತ್ತರವನ್ನು ನೀಡಿದ್ದಾರೆ.

1994ರಲ್ಲಿ ಎಂ.ವೀರಪ್ಪ ಮೊಯಿಲಿ ಸರ್ಕಾರ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 73ಕ್ಕೆ ಹೆಚ್ಚಿಸಿ ಆದೇಶ ಮಾಡಿತ್ತು. ಅದಿನ್ನು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿಯೂ ರಾಜ್ಯ ಸರ್ಕಾರ ಜಾತಿಗಣತಿಯ ವರದಿಯನ್ನು ಮುಂದಿಟ್ಟು ಮೀಸಲಾತಿ ಹೆಚ್ಚಳಕ್ಕೆ ಅನುಮತಿ ಕೋರಿದರೆ ನ್ಯಾಯಾಲಯ ಖಂಡಿತ ಒಪ್ಪಿಗೆ ನೀಡಬಹುದು. ಸಾಮಾಜಿಕ ಅನ್ಯಾಯವನ್ನೇ ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡು ಬಂದ ಬಿಜೆಪಿ ಪಕ್ಷಕ್ಕಾಗಲಿ, ಅದರ ಅಧ್ಯಕ್ಷರಿಗಾಗಲಿ ಸಾಮಾಜಿಕ ನ್ಯಾಯ ಅರ್ಥವಾಗಲಾರದು. ನಮ್ಮದು ಕೋಮುವಾದವನ್ನು ಉಸಿರಾಡುವ ಗುಜರಾತ್ ಅಲ್ಲ, ಬಸವವಾದವನ್ನು ಮೈಗೂಡಿಸಿಕೊಂಡಿರುವ ಕರ್ನಾಟಕ ಎನ್ನುವುದನ್ನು ಅಮಿತ್ ಶಾ ಅವರಿಗೆ ನೆನಪಿಸಬಯಸುತ್ತೇನೆ.

ಸಾಧನೆಯ ಬಲದಿಂದಾಗಲಿ, ಸವಕಲುಗೊಂಡಿರುವ ಕೋಮುವಾದದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಈ ಅಡ್ಡಕಸುಬಿ ಮೀಸಲಾತಿ ನೀತಿಯನ್ನು ರಾಜ್ಯ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಮೀಸಲಾತಿಯನ್ನು ಒಕ್ಕಲಿಗ ಇಲ್ಲವೇ ಲಿಂಗಾಯತರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಮುಸ್ಲಿಮ್ ಮತ್ತು ಒಕ್ಕಲಿಗ-ಲಿಂಗಾಯತರ ನಡುವೆ ದ್ವೇಷ ಹುಟ್ಟಿಸುವುದೇ ಆಗಿದೆ.

ಗೃಹ ಸಚಿವ ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಬಿಜೆಪಿಯ ದುಷ್ಟ ಆಲೋಚನೆ ಸ್ಪಷ್ಟವಾಗಿದೆ. ಆದರೆ ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವ ಮುಸ್ಲಿಮರು ಮೀಸಲಾತಿ ರದ್ದತಿಯಿಂದ ಅಧೀರರಾಗಲಿಲ್ಲ, ಪ್ರಚೋದನೆಗೂ ಒಳಗಾಗಲಿಲ್ಲ. ಅದೇ ರೀತಿ ಇದು ಕನ್ನಡಿಯೊಳಗಿನ ಗಂಟು ಎನ್ನುವುದನ್ನು ಅರ್ಥಮಾಡಿಕೊಂಡಿರುವ ಜಾಗೃತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಕೂಡಾ ಹೊಸ ಮೀಸಲಾತಿ ಘೋಷಣೆಯಿಂದ ಸಂಭ್ರಮಗೊಳ್ಳಲಿಲ್ಲ. ಇದು ನಮ್ಮ ಕರ್ನಾಟಕ.

ಈಗ ನಿರೀಕ್ಷೆಯಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಹೊಸ ಮೀಸಲಾತಿಯನ್ನು ಜಾರಿಗೆ ತರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಕೇಂದ್ರ ಸರ್ಕಾರದ ಗೃಹಸಚಿವರು ಚುನಾವಣಾ ಭಾಷಣದಲ್ಲಿ ಅದರ ವಿರುದ್ದವಾಗಿ ಮಾತನಾಡುತ್ತಿದ್ದಾರೆ. ಗೃಹಸಚಿವ ಅಮಿತ್ ಶಹಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು. ಅಮಿತ್ ಶಾ ಅವರ ಪ್ರಶ್ನೆಗೆ ಉತ್ತರವನ್ನು ನೀಡಿದ್ದಾರೆ.

ರಾಜಕೀಯ

ನವದೆಹಲಿ: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.

ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ 4% ಮೀಸಲಾತಿಯನ್ನು ರದ್ದುಗೊಳಿಸಿದ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರದ ಆದೇಶಕ್ಕೆ ತಡೆ ನೀಡಿ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದೆ.

ಮುಸ್ಲಿಮರ 4% ಒಬಿಸಿ ಕೋಟಾವನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ 2% ಹೆಚ್ಚಿಸುವ ನಿರ್ಧಾರವು ಮೇಲ್ನೋಟಕ್ಕೆ ಅಸ್ಥಿರ ಹಾಗೂ ದೋಷಪೂರಿತ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ 4% ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ 2% ಮೀಸಲಾತಿ ಹಂಚಿಕೆ ಮಾಡಿತು.

ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ಅವರ ನೇತೃತ್ವದ ನ್ಯಾಯಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ 4% ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ಹೆಚ್ಚು ಚರ್ಚೆಗೀಡಾಗಿತ್ತು. ಇದೀಗ ಸುಪ್ರೀಂಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಸುಪ್ರೀಂಕೋರ್ಟ್‌ ಆದೇಶದಿಂದಾಗಿ ಈಗ ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳಲಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವಂತ ಸಮುದಾಯಗಳ ಮುಖಂಡರು ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಹಲವಾರು ಹೋರಟಗಳು ನಡೆದವು. ಚುನಾವಣೆಯ ಸಂದರ್ಭದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಒತ್ತಡಕ್ಕೆ ಮಣಿದ ಬಿಜೆಪಿ ಸರ್ಕಾರ, ಮಾಡುವುದರಿಯದೆ ಮುಸ್ಲಿಮರ 4% ಒಬಿಸಿ ಮೀಸಲಾತಿಯನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ 2% ಹೆಚ್ಚಿಸಿ ಆದೇಶ ಹೊರಡಿಸಿತು.

ಇದರಿಂದ ಸಮಾದಾನವಾಗದ ಒಕ್ಕಲಿಗರು ಮತ್ತು ಲಿಂಗಾಯತರು, “ಮುಸ್ಲಿಮರ ಮೀಸಲಾತಿಯನ್ನು ಕಿತ್ತು ನಮಗೆ ಕೋಡುವುದು ಸೂಕ್ತವಲ್ಲ; ನಮಗೆ ಈ 2% ಮೀಸಲಾತಿಯಿಂದ ಏನೂ ಪ್ರಯೋಜನವಿಲ್ಲ” ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿತು. ಮಸ್ಲಿಮರು, “ನಮ್ಮ ಮೀಸಲಾತಿಯನ್ನು ಕಿತ್ತು ಒಕ್ಕಲಿಗರು ಮತ್ತು ಲಿಂಗಾಯತರಿಗೆ ನೀಡಿ, ಅಣ್ಣ ತಮ್ಮಂದಿರಂತೆ ಇರುವ ನಮ್ಮೊಳಗೆ ಜಗಳ ತರಲು ಬಿಜೆಪಿ ಸರ್ಕಾರ ಕುತಂತ್ರ ಮಾಡುತ್ತಿದೆ. ನಾವು ಯಾರೊಂದಿಗೂ ಸಂಘರ್ಷಕ್ಕೆ ಇಳಿಯದೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಘೋಷಿಸಿ. ಕಾನೂನು ಹೋರಟವನ್ನು ಕೈಗೆತ್ತಿಕೊಂಡರು. ಅವರು ಹೇಳಿದಂತೆ ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಇಂದು ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಸೂಕ್ಷಮವಾಗಿ ಗಮನಿಸಿದರೆ, ಇದು ಮುಸ್ಲಿಮರಿಗೆ ಮಾತ್ರ ಸಿಕ್ಕಿದ ಜಯವಲ್ಲ. ಇದು ಒಕ್ಕಲಿಗರು ಮತ್ತು ಲಿಂಗಾಯತರಿಗೂ ಸಿಕ್ಕಿದ ಜಯವೇ. ನಮ್ಮನ್ನಾಳುವ ಬಿಜೆಪಿ ಸರ್ಕಾರ ವೂಟ್ ಬ್ಯಾಂಕ್ ರಾಜಕಾರಣ ಮಾಡಲಿಕ್ಕಾಗಿ ಮುಸ್ಲಿಮರು, ಲಿಂಗಾಯತರು ಹಾಗೂ ಒಕ್ಕಲಿಗರ ನಡುವೆ ಮೀಸಲಾತಿ ಗೇಮ್ ಫ್ಲೇ ಮಾಡಿ, ಇಂದು ತಲೆ ತಗ್ಗಿಸುವಂತೆ ಆಗಿದೆ. ಖಂಡಿತವಾಗಿಯೂ ಇದರ ಪರಿಣಾಮವನ್ನು ಬಿಜೆಪಿ ಪಕ್ಷವು ಚುನಾವಣೆಯಲ್ಲಿ ಎದುರಿಸಲಿದೆ. ಬಿಜೆಪಿ ಮುಸ್ಲಿಮರಿಗೆ ಮಾತ್ರವಲ್ಲ. ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯಕ್ಕೂ ವಿರೋಧಿ ಎಂಬುದು ಈಗ ಸಾಬೀತಾಗಿದೆ.

ಈ ನಡುವೇ ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದನ್ನು ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಶೇಕಡ 4ರಷ್ಟು ಮೀಸಲಾತಿ ಇತ್ತು. ಮತಬ್ಯಾಂಕ್ ರಾಜಕಾರಣಕ್ಕೆ ಮಣಿಯದೆ ಬಿಜೆಪಿ ಸರಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದೆ. ಎಂದು ಹೇಳಿದ್ದಾರೆ.

ರಾಜ್ಯ

ಡಿ.ಸಿ.ಪ್ರಕಾಶ್ ಸಂಪಾದಕರು

ಒಬಿಸಿ ಕೆಟಗರಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ, ಅವೈಜ್ಞಾನಿಕವಾಗಿ EWS ವರ್ಗದಲ್ಲಿ ಸೇರಿಸಿರುವುದು ಸಾಮಾಜಿಕ ದಬ್ಬಾಳಿಕೆ ಎಂದು ಒತ್ತಿ ಹೇಳಿದರೂ ಅದನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ವ್ಯಕ್ತಿಗಳು ಸಲ್ಲಿಸಿರುವ ಹಲವು ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠ, ಸರ್ಕಾರದ ನಡೆಯು ಅಸ್ಥಿರ ಹಾಗೂ ದೋಷಪೂರಿತವಾಗಿರುವಂತೆ ಕಾಣಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಒಬಿಸಿ ಕೆಟಗರಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಏಪ್ರಿಲ್ 18ರವರೆಗೂ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಗುರುವಾರ ಭರವಸೆ ನೀಡಿದೆ.

ನ್ಯಾಯಾಲಯದ ಎದುರು ಹಾಜರುಪಡಿಸಿರುವ ದಾಖಲೆಗಳನ್ನು ಗಮನಿಸಿದರೆ, ಮೇಲ್ನೋಟಕ್ಕೆ ಕರ್ನಾಟಕ ಸರ್ಕಾರದ ನಿರ್ಧಾರವು ‘ಸಂಪೂರ್ಣ ತರ್ಕರಹಿತ ಕಲ್ಪನೆ’ ಎಂಬಂತೆ ಕಾಣಿಸುತ್ತದೆ ಎಂಬುದಾಗಿ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಹಾಗೂ ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದ ಜನಸಂಖ್ಯೆಯಲ್ಲಿ ಶೇ.13ರಷ್ಟಿರುವ ಮುಸ್ಲಿಂ ಜನಸಂಖ್ಯೆ ವಿರುದ್ಧ ತಾರತಮ್ಯ ಮಾಡುವ ಮೂಲಕ ಸಮಾನತೆಯ ಸಾಂವಿಧಾನಿಕ ತತ್ವವನ್ನು ಹಾಗೂ ಜಾತ್ಯತೀತತೆಯನ್ನು ಕರ್ನಾಟಕ ಸರ್ಕಾರ ಉಲ್ಲಂಘನೆ ಮಾಡಿದೆ ಎಂದು ಅರ್ಜಿದಾರರು ವಾದಿಸಿದರು. ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಸರ್ಕಾರವು ಯಾವುದೇ ಅಧ್ಯಯನ ನಡೆಸಿಲ್ಲ ಅಥವಾ ಯಾವುದೇ ಪ್ರಾಯೋಗಿಕ ದತ್ತಾಂಶ ಸಂಗ್ರಹಿಸಿಲ್ಲ ಎಂದು ಪ್ರತಿಪಾದಿಸಿದರು.

ಈ ನಿರ್ಧಾರವನ್ನು ಸಮರ್ಥಿಸಿಕೊಂಡ ರಾಜ್ಯ ಸರ್ಕಾರ, ರಾಜ್ಯದಲ್ಲಿನ ವಿವಿಧ ಸಮುದಾಯಗಳ ಸಮಾಜೋ- ಆರ್ಥಿಕ ಸ್ಥಿತಿಗತಿಯನ್ನು ಪರಿಶೀಲಿಸಿ ಆಯೋಗ ಸಲ್ಲಿಸಿದ್ದ ಶಿಫಾರಸಿನ ಆಧಾರದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಹೇಳಿತು. ರಾಜ್ಯದ ಜನಸಂಖ್ಯೆಯಲ್ಲಿ ಒಟ್ಟು ಶೇ.40 ರಷ್ಟಿರುವ ಒಕ್ಕಲಿಗರು ಮತ್ತು ಲಿಂಗಾಯತರ ಪ್ರಮಾಣದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ಸಮುದಾಯಗಳು ಅಧಿಕ ಮೀಸಲಾತಿಗೆ ಅರ್ಹವಾಗಿವೆ ಎಂದು ಸರ್ಕಾರ ತಿಳಿಸಿದೆ.

ಆದರೆ ಆಯೋಗದ ವರದಿಯ ಸಿಂಧುತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೋರ್ಟ್, ತನ್ನ ನಿರ್ಧಾರಕ್ಕೆ ಪೂರಕವಾದ ಮತ್ತಷ್ಟು ಪುರಾವೆಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರವು 2013ರಲ್ಲಿ ಜಾರಿಗೊಳಿಸಿದ ಮೀಸಲಾತಿಯಲ್ಲಿ ಮುಸ್ಲಿಮರ ಶೇ.4ರಷ್ಟನ್ನು ಹೇಗೆ ಗುರುತಿಸಲಾಗಿದೆ ಎಂಬ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

1992ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ನಿರ್ಣಾಯಕ ತೀರ್ಪಿನಲ್ಲಿ ನಿಗದಿಪಡಿಸಲಾಗಿದ್ದ ಶೇ.50ರ ಮೀಸಲಾತಿಯ ಮಿತಿಯನ್ನು ಕರ್ನಾಟಕ ಸರ್ಕಾರದ ನಿರ್ಧಾರ ಮೀರಿದೆ ಎಂಬುದನ್ನು ಕೋರ್ಟ್ ಗಮನಿಸಿದೆ. ಈ ಮಿತಿಯನ್ನು ದಾಟಲು ಅಸಾಧಾರಣ ಸನ್ನಿವೇಶ ಹಾಗೂ ನಿರಾಕರಿಸಲಾಗದ ಕಾರಣಗಳು ಅತಿ ಅಗತ್ಯ ಎಂದು ಕೋರ್ಟ್ ತಿಳಿಸಿದೆ.

ಬಳಿಕ ಏಪ್ರಿಲ್ 18ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ, ಕರ್ನಾಟಕ ಸರ್ಕಾರ ಹಾಗೂ ಒಕ್ಕಲಿಗ ಮತ್ತು ಲಿಂಗಾಯತ ಪ್ರತಿನಿಧಿಗಳು ಅರ್ಜಿಗಳಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಹೇಳಿದೆ. ಮುಂದಿನ ಆದೇಶದವರೆಗೂ ಈ ನಿರ್ಧಾರದ ಆಧಾರದಲ್ಲಿ ಯಾವುದೇ ನೇಮಕಾತಿ ಅಥವಾ ಪ್ರವೇಶಾತಿ ನಡೆಸದಂತೆ ನಿರ್ದೇಶನ ನೀಡಿದೆ. ಒಟ್ಟಾರೆಯಾಗಿ ಇದು ಬಿಜೆಪಿ ಸರ್ಕಾರದಿಂದ ಮೀಸಲಾತಿ ವಂಚಿತರಾದ ಮುಸ್ಲಿಮರ ಕಾನೂನಾತ್ಮಕ ಹೋರಾಟಕ್ಕೆ ಸಿಕ್ಕಿದ ಮೊದಲ ಜಯವಾಗಿದೆ. Muslim OBC Reservation: Supreme Court Slams Karnataka Govt For Scrapping 4 percent Quota.

ರಾಜಕೀಯ

ಬೆಂಗಳೂರು: ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನ ಬದ್ಧವಾಗಿ ನೀಡಿರುವ ಶೇಕಡಾ 4ರ ಮೀಸಲಾತಿಯನ್ನು ಏಕಾ ಏಕಿ ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮುಸ್ಲಿಂ ದ್ವೇಷವನ್ನು ಬಹಿರಂಗಪಡಿಸಿದ್ದಾರೆ. ರಾಜ್ಯ ಸರಕಾರದ ಈ ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕ ಮುಸ್ಲಿಂ ಯುನಿಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ ಕಳೆದ 60 ವರ್ಷಗಳಲ್ಲಿ ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನ ಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ 4% ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ. ಇದನ್ನು ಏಕಾ ಏಕಿ ರದ್ದು ಪಡಿಸಿರುವುದು ಸಂವಿಧಾನ ವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ. ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಮುಸ್ಲಿಮರು ಮತ್ತು ಲಿಂಗಾಯತ / ಒಕ್ಕಲಿಗ ಸಮುದಾಯದ ಮಧ್ಯೆ ವೈಷಮ್ಯ ಹುಟ್ಟಿಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಈ ಮೂಲಕ ರಾಜಕೀಯ ದುರ್ಲಾಭ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಸಂಚು ಹೂಡಿದ್ದಾರೆ. ಈ ಸಂಚಿಗೆ ಮುಸ್ಲಿಮರು ಬಲಿಯಾಗಬಾರದು. ಸಂಯಮದಿಂದ ವರ್ತಿಸಬೇಕು. ಯಾವುದೇ ಬೀದಿ ಹೋರಾಟಕ್ಕೆ ಇಳಿಯದೆ, ಈ ಕ್ರಮದ ವಿರುದ್ಧ ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಬೇಕು. ಕರ್ನಾಟಕ ಮುಸ್ಲಿಂ ಯೂನಿಟಿ ಕಾನೂನು ತಜ್ಞರ ಜೊತೆಗೆ ಈಗಾಗಲೆ ಸಮಾಲೋಚನೆ ನಡೆಸುತ್ತಿದ್ದು ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಲಿದೆ.

ಜಯಪ್ರಕಾಶ್ ಹೆಗ್ಡೆ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಶಿಫಾರಸ್ಸಿನ ಅನ್ವಯ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಮುಂದುವರಿದ ವರ್ಗ ಎಂದು ಪರಿಗಣಿಸಿ, ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (EWS) ಸೇರಿಸಿ, ಮೀಸಲಾತಿ ಕೊಡಲಾಗುವುದು (EWS) ಎಂದು ಮುಖ್ಯ ಮಂತ್ರಿಯವರು ಹೇಳಿದ್ದಾರೆ. ಜಯಪ್ರಕಾಶ್ ಹೆಗ್ಡೆ ಆಯೋಗವು ಈ ಕುರಿತು ಯಾವ ಸಮೀಕ್ಷೆಯನ್ನೂ ಮಾಡದೆ ಹೇಗೆ ನಿರ್ಧಾರ ಕೈ ಗೊಂಡಿದೆ? ಜಯಪ್ರಕಾಶ್ ಹೆಗ್ಡೆ ಆಯೋಗವು ರಹಸ್ಯ ಸಮೀಕ್ಷೆ ಏನಾದರೂ ಮಾಡಿದೆಯೆ? ಹಾಗಿದ್ದರೆ ಆ ವರದಿಯನ್ನು ಸರ್ಕಾರ ಬಹಿರಂಗ ಪಡಿಸಬೇಕು ಎಂದು ಕರ್ನಾಟಕ ಮುಸ್ಲಿಂ ಯೂನಿಟಿಯು ಒತ್ತಾಯಿಸಿದೆ. ಮುಸ್ಲಿಮರ ಮೀಸಲಾತಿಯನ್ನು ಸಂವಿಧಾನ ಬದ್ಧವಾಗಿ ರಕ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗುವುದು. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಸಲಹೆಯನ್ನೂ ಪಡೆದು ಮುಂದು ವರಿಯಲಾಗುವುದು. ಸಮುದಾಯ ಯಾವುದೇ ಭಾವಾವೇಶಕ್ಕೆ ಒಳಗಾಗದೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಲು ಯತ್ನಿಸಬೇಕು ಎಂದು ಮುಸ್ಲಿಂ ಯೂನಿಟಿ ಮನವಿ ಮಾಡಿದೆ. karnataka Government scraps Reservation For muslim