ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಗೋಹತ್ಯೆ Archives » Dynamic Leader
October 16, 2024
Home Posts tagged ಗೋಹತ್ಯೆ
ಕ್ರೀಡೆ

ಭಾರತದಲ್ಲಿ 50 ಓವರ್ ಪುರುಷರ ವಿಶ್ವಕಪ್ ಪಂದ್ಯಗಳು ಪ್ರಾರಂಭವಾಗಲು ಇನ್ನು 5 ದಿನ ಮಾತ್ರ ಬಾಕಿ ಇದೆ. ಇದಕ್ಕಾಗಿ ಸಮಾರಂಭಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸದ್ಯ ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಅಭ್ಯಾಸ ಪಂದ್ಯಗಳನ್ನು ಆಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ವಿಶ್ವಕಪ್ ಸರಣಿಯಲ್ಲಿ ಭಾಗವಹಿಸಲು ಬಂದಿರುವ ಪ್ರತಿ ತಂಡದ ಆಟಗಾರರ ಮೆನು ಪಟ್ಟಿ ಬಿಡುಗಡೆಯಾಗಿದೆ. ಅದರಲ್ಲಿ ಯಾವುದೇ ತಂಡಕ್ಕೆ ಗೋಮಾಂಸ ನೀಡುವುದಿಲ್ಲ ಎಂದು ತಿಳಿಸಲಾಗಿದೆ. ಆದರೂ ದನದ ಮಾಂಸ ಇಲ್ಲದ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಿಗೂ ವಿಭಿನ್ನ ಮೆನು ಸಿದ್ಧಪಡಿಸಲಾಗಿದೆ. ಆದರೂ ಮೆನುವಿನಲ್ಲಿ ಗೋಮಾಂಸ ಇಲ್ಲದಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ವರ್ಷ ಭಾರತದಲ್ಲಿ ವಿಶ್ವಕಪ್ ಸರಣಿ ನಡೆಯಲಿದೆ. ಇದರ ಬೆನ್ನಲ್ಲೇ ಭಾರತಕ್ಕೆ ಬರುವ ವಿದೇಶಿ ಆಟಗಾರರಿಗೆ ನೀಡುವ ಆಹಾರದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅದರಂತೆ ಗೋಮಾಂಸವನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದಕ್ಕೆ ಪರ್ಯಾಯವಾಗಿ ಮಟನ್, ಚಿಕನ್, ಮೀನಿನಂಥ ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಆಟಗಾರರಿಗೆ ನೀಡಲಾಗುವುದು ಎಂದು ತಿಳಿದುಬಂದಿದೆ.

ವಿಶೇಷವೆಂದರೆ, ಏಳು ವರ್ಷಗಳ ನಂತರ ವಿಶ್ವಕಪ್ ಸರಣಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಆಟಗಾರರು ಮೊದಲ ಬಾರಿಗೆ ಭಾರತಕ್ಕೆ ಬಂದಿದ್ದಾರೆ. ಅವರಿಗೆ ಬಡಿಸುವ ಆಹಾರದ ಪ್ರಕಾರಗಳಲ್ಲಿ ಮಟನ್ ಚಾಪ್ಸ್, ಮಟನ್ ಗ್ರೇವಿ, ಬಟ್ಟರ್ ಚಿಕ್ಕನ್, ಹುರಿದ ಮೀನು ಮತ್ತು ಬಾಸ್ಮತಿ ಅಕ್ಕಿ, ಸ್ಪಾಗೆಟ್ಟಿ ಮತ್ತು ಬೊಲೊಗ್ನೀಸ್ ಸಾಸ್, ವೆಜ್ ಪುಲಾವ್ ಮತ್ತು ಹೈದರಾಬಾದ್ ಬಿರಿಯಾನಿ ಮುಂತಾದವುಗಳು ಒದಗಿಸಲಾಗುತ್ತದೆ. ಅದರಲ್ಲಿ ದನದ ಮಾಂಸ ಇರುವುದಿಲ್ಲ ಎಂಬುದು ವಿವಾದಕ್ಕೆ ಕಾರಣವಾಗಿದೆ.

ಭಾರತದಲ್ಲಿ ಕೆಲವರು ಹಸುವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಹಾಗಾಗಿ ದೇಶದ ಹಲವು ಭಾಗಗಳಲ್ಲಿ ಗೋಹತ್ಯೆ ನಿಷೇಧಿಸಲಾಗಿದೆ. ಗೋಮಾಂಸ ಸಾಗಣೆದಾರರು ಮತ್ತು ಮಾರಾಟಗಾರರನ್ನು ಗೋರಕ್ಷಕರು ಹತ್ಯೆಗೈದ ಮತ್ತು ಹಲ್ಲೆ ಮಾಡಿದ ಘಟನೆಗಳೂ ನಡೆದಿವೆ. ಈ ಕಾರಣಕ್ಕಾಗಿ ಭಾರತ ಸರ್ಕಾರ ವಿಶ್ವಕಪ್ ಆಟಗಾರರಿಗೆ ಗೋಮಾಂಸವನ್ನು ನಿಷೇಧಿಸಿರಬಹುದು ಎಂದು ಹೇಳಲಾಗಿದೆ. ಆದರೂ ಇದನ್ನು ಕೆಲವು ಪ್ರದೇಶಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಹೀಗಾಗಿ ಅನೇಕ ನೆಟ್ಟಿಗರು ಇದನ್ನು ಟೀಕಿಸುತ್ತಿದ್ದಾರೆ.

ರಾಜಕೀಯ

ಮೈಸೂರು: “ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ” ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

“ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ” ಎಂದು ಸಚಿವರು ಭರವಸೆ ನೀಡಿದ್ದಾರೆ.