ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಡಿ.ಎಂ.ಕೆ Archives » Dynamic Leader
October 23, 2024
Home Posts tagged ಡಿ.ಎಂ.ಕೆ
ರಾಜಕೀಯ

ತಿರುಚಿರಾಪಳ್ಳಿ: ತಿರುಚ್ಚಿಯ ಸಿರುಗನೂರಿನಲ್ಲಿ ಸಂಸದ ತೊಲ್.ತಿರುಮಾವಳವನ್ ನೇತೃತ್ವದ ವಿಡುದಲೈ ಚಿರುತ್ತೈಗಳ್ (ಬಿಡುಗಡೆ ಚಿರುತೆಗಳು) ಪಾರ್ಟಿ ವತಿಯಿಂದ “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂಬ ಶೀರ್ಷಿಕೆಯಡಿ ನಡೆದ ಸಮಾವೇಶದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭಾಗವಹಿಸಿ ಮಾತನಾಡಿದರು.

ತಿರುಚ್ಚಿ ಸಿರುಗನೂರಿನಲ್ಲಿ ವಿಡುದಲೈ ಚಿರುತ್ತೈಗಳ್ ಪಾರ್ಟಿ ವತಿಯಿಂದ “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂಬ ಶೀರ್ಷಿಕೆಯಡಿ ಸಮಾವೇಶವನ್ನು ನಡೆಸಲಾಯಿತು. I.N.D.I.A ಮೈತ್ರಿ ಪಕ್ಷದ ನಾಯಕರು ಭಾಗವಹಿಸಿದ್ದ ಈ ಸಮಾವೇಶದಲ್ಲಿ ವಿಡುದಲೈ ಚಿರುತ್ತೈಗಳ್ ನಾಯಕ ತಿರುಮಾವಳವನ್ 33 ನಿರ್ಣಯಗಳನ್ನು ಪ್ರಸ್ತಾಪಿಸಿದರು.

ಈ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, “ಇಡೀ ಭಾರತಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮತಾವಾದ ಚಿಂತನೆಯನ್ನು ಸಾರುವ ಸರ್ಕಾರವನ್ನು ಸ್ಥಾಪಿಸಲಿಕ್ಕಾಗಿ ಸಹೋದರ ತಿರುಮಾವಳವನ್ “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂಬ ಸಮಾವೇಶವನ್ನು ಆಯೋಜಿಸಿದ್ದಾರೆ. “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂದು ಹೇಳಿದರೆ ಸಾಲದು. ಅದಕ್ಕೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು.

ತಮಿಳುನಾಡಿನಲ್ಲಿ ಬಿಜೆಪಿ ಎಂಬುದು ಶೂನ್ಯ. ತಮಿಳುನಾಡಿನಲ್ಲಿ ಬಿಜೆಪಿ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕೇವಲ ತಮಿಳುನಾಡಿನಲ್ಲಿ ಮಾತ್ರ ಬಿಜೆಪಿಯನ್ನು ಸೋಲಿಸಿದರೆ ಸಾಲದು. ಅದನ್ನು ಅಖಿಲ ಭಾರತ ಮಟ್ಟದಲ್ಲಿ ಸೋಲಿಸಬೇಕು. ಅದಕ್ಕೆ ಬುನಾದಿ I.N.D.I.A ಮೈತ್ರಿಕೂಟ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಇರುವುದಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಿಲ್ಲ, ಸಂಸದೀಯ ಪ್ರಕ್ರಿಯೆ ಇರುವುದಿಲ್ಲ, ಅಂತಿಮವಾಗಿ ರಾಜ್ಯಗಳೇ ಇರುವುದಿಲ್ಲ. ಇದನ್ನು ಎಲ್ಲರೂ ಅರಿತುಕೊಳ್ಳಬೇಕು. ಅವರು ರಾಜ್ಯಗಳನ್ನು ಪಾಲಿಕೆಗಳಾಗಿ (Corporation) ಮಾಡುತ್ತಾರೆ” ಎಂದು ಅವರು ಎಚ್ಚರಿಸಿದರು.

ಇದನ್ನು ಅನುಸರಿಸಿ ಮಾತನಾಡಿದ ತಿರುಮಾವಳವನ್, “ತಮಿಳುನಾಡು ಉತ್ತರ ಭಾರತದ ರಾಜ್ಯಗಳಂತೆ ಅಲ್ಲ. ಇದು ಚಿರತೆಗಳ ರಾಜ್ಯ. ತಮಿಳುನಾಡಿನ ಪ್ರತಿಯೊಂದು ಹಳ್ಳಿಯಲ್ಲೂ ಚಿರತೆಗಳಿವೆ. ಕುರಿಮರಿಗಳು ಇಲ್ಲಿ ಬಂದು ನೋಡಿದರೆ ಗೊತ್ತಾಗುತ್ತೆ. ಮೋದಿಯನ್ನು ಅಧಿಕಾರದಿಂದ ದೂರವಿಡಬೇಕು. ಇನ್ನು ವಿಳಂಬ ಮಾಡಲು, ಮೋಜು ಮಾಡಲು ಸಾಧ್ಯವಿಲ್ಲ.

ಇದು ಚುನಾವಣಾ ರಾಜಕೀಯ ಲೆಕ್ಕಾಚಾರವಲ್ಲ. ದೇಶವನ್ನು, ದೇಶದ ಜನರನ್ನು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ಈ ಸಮ್ಮೇಳನದ ಸಮಾರಂಭದ ನಾಯಕ ಸಂವಿಧಾನವೇ ಆಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸುವ ವಂಚಕರ ಕೈಗೆ ಈ ದೇಶ ಸಿಕ್ಕಿಬಿದ್ದಿದೆ. ಮೋದಿ ಜನರಿಗೆ ವಂಚಿಸುತ್ತಿದ್ದಾರೆ.

ಮೋದಿಯಿಂದ ನಾನು ಇದನ್ನು ಸಾಧಿಸಿದ್ದೇನೆ; ಅದನ್ನು ಸಾಧಿಸಿದ್ದೇನೆ, ಈ 10 ವರ್ಷಗಳಲ್ಲಿ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಲು ಸಾಧ್ಯವೇ? ಮೋದಿ ಮತ್ತು ಅಮಿತ್ ಶಾ ಅವರ ಸೇವೆ ಅಂಬಾನಿ ಮತ್ತು ಅಧಾನಿಗಾಗಿ ಕೆಲಸ ಮಾಡುವುದೊಂದೇ” ಎಂದು ಕಿಡಿಕಾರಿದರು.

“ಪ್ರಜಾಪ್ರಭುತ್ವ ಗೆಲ್ಲುತ್ತದೆ” ಸಮಾವೇಶಕ್ಕೆ ರಾಜ್ಯಾದ್ಯಂತ ಬಂದಿದ್ದ ಲಕ್ಷಾಂತರ ಕಾರ್ಯಕರ್ತರನ್ನು ನೋಡಿ ವಿರೋಧಿಗಳಿಗೆ ನಡುಕ ಉಂಟಾಗಿರುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಬಹುದು.   

ದೇಶ ರಾಜಕೀಯ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ‘ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್‌ಕಾಸ್ಟ್’ ಸರಣಿಯ 3ನೇ ಆಡಿಯೋ ಇಂದು ಬಿಡುಗಡೆಯಾಗಿದೆ. ಅದರಲ್ಲಿ ಮಾತನಾಡಿರುವ ಎಂ.ಕೆ.ಸ್ಟಾಲಿನ್, “ರಾಜಭವನಗಳ ಮೂಲಕ ರಾಜ್ಯ ಸ್ವಾಯತ್ತತೆಯನ್ನು ಬಿಜೆಪಿ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಭಾರತ ಒಂದು ಸಂಯುಕ್ತ ರಾಷ್ಟ್ರ. ವಿವಿಧ ಸುಂದರವಾದ ಹೂವುಗಳಿಂದ ತುಂಬಿದ ಅದ್ಭುತ ಉದ್ಯಾನ. ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ಹಕ್ಕುಗಳ ಬಗ್ಗೆ ಮಾತನಾಡಿದ ನರೇಂದ್ರ ಮೋದಿ, ಪ್ರಧಾನಿಯಾದ ಬಳಿಕ ರಾಜ್ಯದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ.

ಬಿಜೆಪಿ, ರಾಜ್ಯಗಳನ್ನು ರದ್ದುಪಡಿಸಬೇಕೆಂದು ಬಯಸುತ್ತಿದೆ. ಸಿಎಜಿ ಮೂಲಕ ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದ ಅಧಿಕಾರಿಗಳು ಎಲ್ಲರನ್ನೂ ಬಿಜೆಪಿ ಸರ್ಕಾರ ತ್ವರಿತವಾಗಿ ವರ್ಗಾವಣೆ ಮಾಡಿದೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ.

ರಾಜ್ಯಗಳನ್ನು ರಕ್ಷಿಸೋಣ, ಭಾರತವನ್ನು ರಕ್ಷಿಸೋಣ, ಇಂಡಿಯಾ ಮೈತ್ರಿಕೂಟವನ್ನು ಗೆಲ್ಲಿಸೋಣ. ಕೇಂದ್ರದಲ್ಲಿ ಒಕ್ಕೂಟ ಸರ್ಕಾರ; ರಾಜ್ಯಗಳಲ್ಲಿ ಸ್ವಾಯತ್ತತೆ ಸರ್ಕಾರ ಇದುವೇ ನಿಜವಾದ ಪ್ರಜಾಪ್ರಭುತ್ವ ಆಗಿರುತ್ತದೆ” ಎಂದು ಹೇಳಿದರು.