ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ತೇಜಸ್ವಿ ಯಾದವ್ Archives » Dynamic Leader
October 18, 2024
Home Posts tagged ತೇಜಸ್ವಿ ಯಾದವ್
ರಾಜಕೀಯ

ಮೊದಲ ಹಂತದ ಮತದಾನದಲ್ಲೇ ಬಿಜೆಪಿಯ ಚಿತ್ರ ವಿಫಲವಾಗಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.

18ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಿನ್ನೆ 21 ರಾಜ್ಯಗಳಲ್ಲಿ 102 ಕ್ಷೇತ್ರಗಳಲ್ಲಿ ನಡೆದಿದೆ. ತಮಿಳುನಾಡು (39), ಪುದುಚೇರಿ (1), ಅರುಣಾಚಲ ಪ್ರದೇಶ (2), ಅಸ್ಸಾಂ (5), ಬಿಹಾರ (4), ಛತ್ತೀಸ್‌ಗಢ (1), ಮಧ್ಯಪ್ರದೇಶ (6), ಮಹಾರಾಷ್ಟ್ರ (5), ಮಣಿಪುರ (2), ಮೇಘಾಲಯ (2), ಮಿಜೋರಾಂ (1), ನಾಗಾಲ್ಯಾಂಡ್ (1), ರಾಜಸ್ಥಾನ (12), ಸಿಕ್ಕಿಂ (1), ತ್ರಿಪುರ (1), ಉತ್ತರ ಪ್ರದೇಶ (8), ಉತ್ತರಾಖಂಡ್ (5) , ಪಶ್ಚಿಮ ಬಂಗಾಳ (3), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (1), ಜಮ್ಮು ಮತ್ತು ಕಾಶ್ಮೀರ (1) ಮತ್ತು ಲಕ್ಷದ್ವೀಪ (1) ಮುಂತಾದ ರಾಜ್ಯಗಳಲ್ಲಿ ನಿನ್ನೆ ಮೊದಲ ಹಂತದ ಮತದಾನ ನಡೆದಿತ್ತು. ಒಟ್ಟು ಶೇ.64ರಷ್ಟು ಮತಗಳು ದಾಖಲಾಗಿವೆ.

ತಮಿಳುನಾಡಿನಲ್ಲಿ ನಿನ್ನೆ ಬೆಳಗ್ಗೆ 7 ಗಂಟೆಯಿಂದ ಬಿರುಸಿನಿಂದ ಮತದಾನ ನಡೆದಿದೆ. ಬೆಳಗ್ಗೆಯಿಂದಲೇ ಜನರು ಉತ್ಸಾಹದಿಂದ ಮತದಾನ ಮಾಡಿದರು. ತಮಿಳುನಾಡಿನಲ್ಲಿ ಶೇ.69ರಷ್ಟು ಮತದಾನವಾಗಿದೆ. ಅದೇ ರೀತಿ ಬಿಹಾರದ 4 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.47.49ರಷ್ಟು ಮತದಾನವಾಗಿದೆ.

ಈ ಹಿನ್ನಲೆಯಲ್ಲಿ, ಬಿಹಾರದ ಮಾಜಿ ಮುಖ್ಯಮಂತ್ರಿ ತೇಜಸ್ವಿ ಅವರು ಮೊದಲ ಹಂತದ ಮತದಾನದಲ್ಲಿಯೇ ಬಿಜೆಪಿಯ ಚಿತ್ರ ಸೋತಿದೆ ಎಂದು ಹೇಳಿದ್ದಾರೆ. ತೇಜಸ್ವಿ ಯಾದವ್ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ, “400 ಸ್ಥಾನಗಳು ಎಂದ ಬಿಜೆಪಿಯ ಚಿತ್ರ ಮೊದಲ ಹಂತದ ಮತದಾನದಲ್ಲೇ ವಿಫಲವಾಗಿದೆ. ಅವರ ಸುಳ್ಳಿನ ಪರ್ವತಗಳು ಮತ್ತು ವರದಿಗಳೆಲ್ಲವೂ ಕುಸಿದೋಗಿವೆ. ಬಿಜೆಪಿಯ ದಿನಗಳು ಈಗ ಮುಗಿದಿವೆ” ಎಂದು ಹೇಳಿದ್ದಾರೆ.

ಅಂತೆಯೇ, ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ “ಭಾರತಕ್ಕೆ ಜಯವೇ” ಎಂದು ಹೇಳಿರುವುದು ಗಮನಾರ್ಹ.

ರಾಜಕೀಯ

ಡಿ.ಸಿ.ಪ್ರಕಾಶ್, ಸಂಪಾದಕರು

ಪ್ರಧಾನಿ ಮೋದಿಯವರು, ‘ಈ ಬಾರಿ 370 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲಲಿದೆ’ ಎಂದು ಹೇಳಿದ ಮೇಲೆ ಬಿಜೆಪಿ ಸದಸ್ಯರು ಉತ್ಸಾಹದಿಂದ ‘ಮತ್ತೊಮ್ಮೆ ಮೋದಿ… ಮತ್ತೊಮ್ಮೆ ಮೋದಿ ‘ ಎಂಬ ಘೋಷಣೆಯನ್ನು ಎತ್ತುತ್ತಿದ್ದಾರೆ. ಆದಾಗ್ಯೂ, ಭಾರತದಾದ್ಯಂತ ನೆಲದ ವಾಸ್ತವತೆ (Ground Reality) ಹೇಗಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಮೂರನೇ ಬಾರಿ ಗೆದ್ದು ಆಡಳಿತ ಮುಂದುವರಿಸುವ ಹಠಕ್ಕೆ ಬಿದ್ದಿರುವ ಬಿಜೆಪಿ, ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಕ್ಷೇತ್ರದಲ್ಲಿ ಗಂಭೀರತೆ ತೋರಿಸುತ್ತಿದೆ. ಒಟ್ಟು 370 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅದನ್ನು ಹೇಗಾದರೂ ಮಾಡಿ ಈಡೇರಿಸಬೇಕು ಎಂದು ಪಕ್ಷದ ಕಾರ್ಯಕರ್ತರು ಗಂಭೀರತೆ ತೋರಿಸುತ್ತಿದ್ದಾರೆ.

ಪ್ರಧಾನಿ ಮೋದಿಯವರು 370, 400 ಎಂಬ ಸಂಖ್ಯೆಗಳನ್ನು ಹೇಳಿದ ಮೇಲೆ ಬಿಜೆಪಿಯವರು ‘ಮತ್ತೊಮ್ಮೆ ಮೋದಿ… ಮತ್ತೊಮ್ಮೆ ಮೋದಿ ‘ ಎಂಬ ಘೋಷಣೆಯನ್ನು ಎಲ್ಲಡೆಯೂ ಎತ್ತುತ್ತಿದ್ದಾರೆ. ಆದಾಗ್ಯೂ, ಭಾರತದಾದ್ಯಂತ ಗ್ರೌಂಡ್ ರಿಯಾಲಿಟಿ ಹೇಗಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸುತ್ತದೆಯೇ? ಮೋದಿ ಪ್ರಧಾನಿ ಕುರ್ಚಿ ಉಳಿಸಿಕೊಳ್ಳುತ್ತಾರೆಯೇ? ಎಂಬ ಪ್ರಶ್ನೆಗಳು ಒಂದೆಡೆಯಾದರೇ ಬಿಜೆಪಿಗೆ ಎಷ್ಟು ಸ್ಥಾನ ಸಿಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಿಂತ 2024ರ ಚುನಾವಣೆ ಅಖಾಡ ಭಿನ್ನವಾಗಿದೆ. 2014ರಲ್ಲಿ ಮೋದಿ ಅಲೆ ಭಾರತವನ್ನು ಆವರಿಸಿದ್ದು ಸ್ಪಷ್ಟವಾಗಿತ್ತು. ಆದರೆ, 2019ರಲ್ಲಿ ಮೋದಿ ಪರ ಅಲೆ ಎದ್ದಂತೆ ಕಾಣಲಿಲ್ಲ. ನೋಟು ಅಮಾನ್ಯೀಕರಣ, ಜಿಎಸ್‌ಟಿ, ಎರಡು ಕೋಟಿ ಜನರಿಗೆ ಉದ್ಯೋಗದ ಭರವಸೆಗಳನ್ನು ಈಡೇರಿಸದಿರುವುದು ಮತ್ತು ರೈತರ ಆಕ್ರೋಶದ ಹಿನ್ನೆಲೆಯಲ್ಲಿ 2019ರ ಚುನಾವಣೆ ನಡೆಯಿತು. ಅದರಲ್ಲಿ ಬಿಜೆಪಿ 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಯಶಸ್ಸಿಗೆ ಕಾರಣ ಮೋದಿ ಅಲೆಯಲ್ಲ ಎಂಬುದು ಎಲ್ಲರ ಅಭಿಪ್ರಾಯ.

ಪುಲ್ವಾಮಾ ದಾಳಿಯಲ್ಲಿ ಅರೆಸೇನಾ ಪಡೆ ಯೋಧರ ಹತ್ಯೆಯ ಘಟನೆಯನ್ನು ಬಿಜೆಪಿ ತನ್ನ ಚುನಾವಣಾ ಗೆಲುವಿಗೆ ಬಳಸಿಕೊಂಡಿತು ಎಂದು ವಿರೋಧ ಪಕ್ಷಗಳು ಇನ್ನೂ ಟೀಕಿಸುತ್ತಿವೆ. ಆ ವಿಷಯದಲ್ಲಿ ಪುಲ್ವಾಮಾ ದಾಳಿಯ ವೇಳೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ಸತ್ಯಪಾಲ್ ಮಲಿಕ್ ಮಾಡಿರುವ ಆರೋಪಗಳು ಕೂಡ ಆರೋಪಕ್ಕೆ ಪುಷ್ಟಿ ನೀಡಿವೆ.

ಹತ್ತು ವರ್ಷಗಳ ಕಾಲ ನಿರಂತರವಾಗಿ ಸರ್ಕಾರ ಅಧಿಕಾರದಲ್ಲಿದ್ದರೆ ನಾನಾ ಕಾರಣಗಳಿಂದ ಜನರಲ್ಲಿ ಆಡಳಿತ ವಿರೋಧಿ ಭಾವನೆ ಮೂಡುವುದು ಸಹಜ. ಅಲ್ಲದೆ ಕರ್ನಾಟಕ ಹೊರತುಪಡಿಸಿ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇಲ್ಲ ಎಂದು ವಿವಿಧ ಸಮೀಕ್ಷೆಗಳು ಹೇಳುತ್ತಿವೆ.

ಈ ಹಿನ್ನಲೆಯಲ್ಲಿ, ಉತ್ತರ ಭಾರತದಲ್ಲಿ ಬಿಜೆಪಿಯ ಗೆಲುವಿನ ಮೇಲೆ ಈ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರ್ಧಾರವಾಗಲಿದೆ. ಬಿಜೆಪಿ ಹೇಳುವಂತೆ ಉತ್ತರ ಭಾರತದಲ್ಲಿ ಮೋದಿ ಅಲೆ ಬೀಸಿದರೆ ಬಿಜೆಪಿ ಗಮನಾರ್ಹ ಸ್ಥಾನಗಳನ್ನು ಗೆಲ್ಲಲಿದೆ. ಆದರೆ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ಸದ್ಯದ ಗ್ರೌಂಡ್ ರಿಯಾಲಿಟಿ ನೋಡಿದರೆ ಬಿಜೆಪಿ ಹೇಳುವಷ್ಟು ಸೀಟು ಪಡೆಯಲು ತೀವ್ರ ಪೈಪೋಟಿ ಇರಲಿದೆ ಎಂದೇ ತೋರುತ್ತದೆ.

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್‌ನಲ್ಲೇ ಪರಿಸ್ಥಿತಿಯು ಪ್ರಸ್ತುತ ಸವಾಲುಗಳನ್ನು ಎದುರಿಸುವಂತಾಗಿದೆ. ಗುಜರಾತ್‌ನಲ್ಲಿ 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಅಲ್ಲಿನ ಎಲ್ಲಾ 26 ಕ್ಷೇತ್ರಗಳನ್ನೂ ಬಿಜೆಪಿ ಗೆದ್ದುಕೊಂಡಿತು. ಆದರೆ, ಈ ಬಾರಿ ಬಿಜೆಪಿಯ ಆಂತರಿಕ ಸಂಘರ್ಷ ಗಂಭೀರವಾಗಿ ನಡೆಯುತ್ತಿವೆ. ಹಲವು ಕ್ಷೇತ್ರಗಳಲ್ಲಿ ವರಿಷ್ಠರು ಘೋಷಿಸಿದ ಅಭ್ಯರ್ಥಿಗಳಿಗೆ ಸ್ವ ಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಭ್ಯರ್ಥಿಗಳನ್ನು ಬದಲಾಯಿಸಬೇಕಾಯಿತು.

ಗುಜರಾತ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಸಚಿವ ಪರಶೋತ್ತಮ್ ರೂಪಲಾ, ರಜಪೂತ ಮಹಿಳೆಯರನ್ನು ಅವಮಾನಿಸಿ ಮಾತನಾಡಿದ್ದರು ಎಂಬ ಕಾರಣಕ್ಕೆ ಇಡೀ ರಜಪೂತ ಸಮುದಾಯವು ಬಿಜೆಪಿ ವಿರುದ್ಧ ಒಗ್ಗೂಡಿ ನಿಂತಿದೆ. ಬಿಜೆಪಿ ಕಚೇರಿ ಎದುರು ರಜಪೂತ ಸಮುದಾಯದ ಮಹಿಳೆಯರು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ಸಂಚಲನ ಮೂಡಿಸಿದೆ.

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೇ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ. ಆಗಾಗ ಮೈತ್ರಿ ಬದಲಾವಣೆಯಿಂದ ನಿತೀಶ್ ಕುಮಾರ್ ಅವರನ್ನು ಎಲ್ಲರೂ ‘ಪಲ್ಟುಕುಮಾರ್’ ಎಂದು ಮೂದಲಿಸುತ್ತಿರುವ ಹಿನ್ನಲೆಯಲ್ಲಿ, ಆ ಮೈತ್ರಿಗೆ ಹೆಚ್ಚಿನ ಯಶಸ್ಸು ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ತೇಜಸ್ವಿ ಯಾದವ್‌ಗೆ ಬೆಂಬಲ ಹೆಚ್ಚಾಗುತ್ತಿದ್ದಂತೆ, ಬಿಹಾರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಮಹತ್ವದ ಸ್ಥಾನಗಳನ್ನು ವಶಪಡಿಸಿಕೊಳ್ಳಲಿದೆ ಎಂಬ ವರದಿಗಳಿವೆ. ಉತ್ತರ ಪ್ರದೇಶದಲ್ಲೂ ಇದೇ ಪರಿಸ್ಥಿತಿ ಇದೆ.

ಉತ್ತರಪ್ರದೇಶದಲ್ಲಿ ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟ ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎನ್ನುತ್ತಾರೆ ರಾಷ್ಟ್ರ ರಾಜಕಾರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ರಾಜಕೀಯ ವೀಕ್ಷಕರು. ಯುಪಿಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಸ್ವಲ್ಪ ಹೆಚ್ಚು ಸ್ಥಾನಗಳನ್ನು ಗೆದ್ದರೂ ಅದು ಬಿಜೆಪಿಗೆ ಹಿನ್ನಡೆಯಾಗಲಿದೆ.

ಪ್ರಧಾನಿ ಮೋದಿ ತಮ್ಮ ಚುನಾವಣಾ ಪ್ರಚಾರದಲ್ಲಿ ಅವರ ಸಾಧನೆಗಳನ್ನು ಪ್ರಸ್ತಾಪಿಸಿ ಮತ ಕೇಳದೇ ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್ ಜೊತೆ ಹೋಲಿಕೆ ಮಾಡುತ್ತಿದ್ದು, ಉತ್ತರಾಧಿಕಾರ ರಾಜಕಾರಣದ ಬಗ್ಗೆ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಇದು ಕೂಡ ಅವರಿಗೆ ಹಿನ್ನಡೆಯಾಗಿದೆ. ಸದ್ಯ ಬಿಜೆಪಿ ಹೇಳಿಕೊಳ್ಳುವಂತಹ ಸಂಖ್ಯಾಬಲ ಗೆಲ್ಲಲು ಬಿಜೆಪಿ ತೀವ್ರ ಪೈಪೋಟಿ ಎದುರಿಸಬೇಕಾಗಿದೆ.

ದೇಶ

ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ವೇಳೆ ರಾಹುಲ್ ಪ್ರಯಾಣಿಸುತ್ತಿದ್ದ ಜೀಪನ್ನು ರಾಷ್ಟ್ರೀಯ ಜನತಾ ದಳದ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಚಲಾಯಿಸಿದ್ದು ಎಲ್ಲರ ಗಮನ ಸೆಳೆಯಿತು.

ಮಣಿಪುರದಿಂದ ಮುಂಬೈ ವರೆಗೆ ಕಾಂಗ್ರೆಸ್ ಸಂಸದ ರಾಹುಲ್  ಗಾಂಧಿ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆಯನ್ನು ಕೈಗೊಂಡಿದ್ದಾರೆ. ಇದರ ಅಂಗವಾಗಿ ಯಾತ್ರೆ ಬಿಹಾರದ ಸಸಾರಂ ಪ್ರದೇಶವನ್ನು ಪ್ರವೇಶಿಸಿತು. ಆ ವೇಳೆ ರಾಹುಲ್ ಬಂದಿದ್ದ ಜೀಪನ್ನು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಚಲಾಯಿಸಿಕೊಂಡು ಹೋದರು.

ಇದರ ಬೆನ್ನಲ್ಲೇ ಇಂದು ಸಂಜೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ತೇಜಸ್ವಿ ಯಾದವ್ ವೇದಿಕೆ ಏರಲಿದ್ದಾರೆ. ಇದರ ನಂತರ, ಯಾತ್ರೆಯು ಉತ್ತರಪ್ರದೇಶವನ್ನು ಪ್ರವೇಶಿಸಲಿದೆ. ತೇಜಸ್ವಿ ಯಾದವ್ ಅವರು ರಾಹುಲ್ ಪ್ರಯಾಣಿಸುತ್ತಿದ್ದ ಜೀಪ್ ಅನ್ನು ಚಾಲನೆ ಮಾಡುತ್ತಿರುವ ಚಿತ್ರಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ.

ದೇಶ ರಾಜಕೀಯ

ಪಾಟ್ನಾ: 1871ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತದಲ್ಲಿ ಜನಗಣತಿ ನಡೆಸಲಾಯಿತು. ತರುವಾಯ, 1881ರಲ್ಲಿ, ಭಾರತದಲ್ಲಿ ಮೊದಲ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಅದರ ನಂತರ ಅಂತಿಮವಾಗಿ 1931ರಲ್ಲಿ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಸ್ವಾತಂತ್ರ್ಯದ ನಂತರ 1951 ರಲ್ಲಿ ದೇಶವು ತನ್ನ ಮೊದಲ ಜನಗಣತಿಯನ್ನು ನಡೆಸಿತು. ಆದರೆ, ಅದರಲ್ಲಿ ಜಾತಿವಾರು ವಿವರಗಳನ್ನು ತೆಗೆದುಕೊಂಡಿಲ್ಲ.

1931ರ ಜಾತಿವಾರು ಜನಗಣತಿಯ ಪ್ರಕಾರ ಜಾತಿವಾರು ಮೀಸಲಾತಿಯನ್ನು ವರ್ಗೀಕರಿಸಲಾಯಿತು. ಅದು ಇದುವರೆಗೂ ಆಚರಣೆಯಲ್ಲಿದೆ. ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ 2011ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಷ್ಟ್ರವ್ಯಾಪಿ ಜನಗಣತಿ ನಡೆಸಿ ಪೂರ್ಣಗೊಳಿಸಲಾಯಿತು.

ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಅದನ್ನು ಪ್ರಕಟಿಸಲಿಲ್ಲ. ಈ ಹಿನ್ನಲೆಯಲ್ಲಿ, ಜಾತಿವಾರು ಜನಗಣತಿ ನಡೆಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ಬಿಜೆಪಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದೆ.

ಏತನ್ಮಧ್ಯೆ, ಜೆಡಿಯು-ಕಾಂಗ್ರೆಸ್-ಆರ್.ಜೆ.ಡಿ ಮೈತ್ರಿ ಸರ್ಕಾರ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಕಳೆದ ತಿಂಗಳು ಜಾತಿವಾರು ಜನಗಣತಿ ಬಿಡುಗಡೆ ಮಾಡಲಾಯಿತು. ಇದರ ಬೆನ್ನಲ್ಲೇ ವಿವಿಧ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸುವುದಾಗಿ ಘೋಷಿಸಲಾಗಿದೆ. ಈ ಸಮೀಕ್ಷೆಯಿಂದ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮಾತನಾಡುವ ವೇಳೆ, “ಜಾತಿವಾರು ಗಣತಿಯನ್ನು ಬಿಜೆಪಿ ಎಂದಿಗೂ ವಿರೋಧಿಸಿಲ್ಲ “ಎಂದರು. “ಬಿಹಾರದಲ್ಲಿ ನಡೆದ ಜಾತಿವಾರು ಜನಗಣತಿಯಲ್ಲಿ ಯಾದವ ಮತ್ತು ಮುಸ್ಲಿಂ ಸಮುದಾಯದವರ ಸಂಖ್ಯೆ ಹೆಚ್ಚಾಗಿದ್ದು, ಇತರೆ ಸಮುದಾಯಗಳ ಸಂಖ್ಯೆ ಕಡಿಮೆಯಾಗಿದೆ” ಎಂದೂ ಆರೋಪಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಅಮಿತ್ ಶಾ ಅವರ ಆರೋಪವನ್ನು ಖಂಡಿಸಿದ್ದಾರೆ. ಮತ್ತು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್ ನಲ್ಲಿ “ಸುಳ್ಳು ಮತ್ತು ಗೊಂದಲವನ್ನು ಹರಡುವ ಬದಲು, ದಯವಿಟ್ಟು ಇದಕ್ಕೆ ಉತ್ತರಿಸಿ ಅಮಿತ್ ಶಾ ಜೀ” ಎಂದು ಹೇಳಿ 5 ಪ್ರಶ್ನೆಗಳು ಕೇಳಿದ್ದಾರೆ.

1. ಬಿಹಾರದ ಜಾತಿವಾರು ಜನಗಣತಿ ದತ್ತಾಂಶ ತಪ್ಪಾಗಿದ್ದರೆ, ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸಿ ಅದರ ಅಂಕಿ ಸಂಖ್ಯೆ ಮಾಹಿತಿಯನ್ನು ಏಕೆ ಪ್ರಕಟಿಸಲಿಲ್ಲ?

2. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಿಜೆಪಿ ಜಾತಿವಾರು ಜನಗಣತಿಯನ್ನು ಏಕೆ ನಡೆಸಲಿಲ್ಲ?

3. ಕೇಂದ್ರ ಸರ್ಕಾರದಲ್ಲಿ ಎಷ್ಟು ಕ್ಯಾಬಿನೆಟ್ ಮಂತ್ರಿಗಳು 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದ್ದಾರೆ ಮತ್ತು ಎಷ್ಟು ಮಂದಿ 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದವರಲ್ಲ; ಪಟ್ಟಿಯನ್ನು ಪ್ರಕಟಿಸಿ. ಹೀಗಿದ್ದರೂ ಅವರಿಗೆ ಏಕೆ ಅಮುಖ್ಯ ಇಲಾಖೆಗಳನ್ನು ನೀಡಲಾಗಿದೆ.

4. 𝐎𝐁𝐂 / 𝐒𝐂 / 𝐒𝐓 ಬಣದಿಂದ ಎಷ್ಟು ಬಿಜೆಪಿ ಮುಖ್ಯಮಂತ್ರಿಗಳಿದ್ದಾರೆ? ಹಿಂದುಳಿದ ಮತ್ತು ಹಿಂದುಳಿದವರಲ್ಲದ ಮುಖ್ಯಮಂತ್ರಿಗಳ ಹೋಲಿಕೆ ಮಾಡಿ ಶೇಕಡಾವಾರು ಪ್ರಮಾಣವನ್ನು ತಿಳಿಸಿ.

5. ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಲ್ಲಿ ಬಿಹಾರದಿಂದ ಎಷ್ಟು ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಮಂತ್ರಿಗಳು ಇದ್ದಾರೆ? ಶೂನ್ಯವೇ 𝟎 ?

ಈ ಪ್ರಶ್ನೆಗಳಿಗೆ ಉತ್ತರಿಸುವುದರಿಂದ ನಿಮ್ಮನ್ನೂ ಸೇರಿಸಿ 8𝟓% ಹಿಂದುಳಿದ ಮತ್ತು ದಲಿತ ಹಿಂದೂಗಳ ಕಣ್ಣು ತೆರೆಯುತ್ತದೆ.” ಎಂದು ಉಲ್ಲೇಖಿಸಿದ್ದಾರೆ.