ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ದಿನೇಶ್ ಗುಂಡೂರವ್ Archives » Dynamic Leader
October 20, 2024
Home Posts tagged ದಿನೇಶ್ ಗುಂಡೂರವ್
ಬೆಂಗಳೂರು

ಬೆಂಗಳೂರು: ಗಾಂಧಿನಗರ ಕ್ಷೇತ್ರದ ಕಾಟನ್‌ಪೇಟೆಯಲ್ಲಿ ಅನೇಕ ಬೀದಿಗಳಲ್ಲಿ ಹೊಗೆಯಾಡಿಸುವ ಅಭಿಯಾನದ ನೇತೃತ್ವ ವಹಿಸಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಲು ತಿಳಿವಳಿಕೆ ಕರಪತ್ರಗಳನ್ನು ವಿತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್.

“ಈ ರೋಗವನ್ನು ಎದುರಿಸಲು ನಾವು ನಮ್ಮ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿರುವಾಗ, ಡೆಂಗ್ಯೂ ಬಗ್ಗೆ ತಿಳುವಳಿಕೆಯನ್ನು ಉಳಿಸಿಕೊಳ್ಳುವ ಮೂಲಕ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಸಾರ್ವಜನಿಕರು ತಮ್ಮ ಕೈಲಾದಷ್ಟು ಮಾಡುವಂತೆ ನಾನು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಗುರುತರವಾದ ಈ ಕರಪತ್ರ ಅಭಿಯಾನವನ್ನು ಬೆಂಗಳೂರಿನ ಪ್ರತಿಯೊಂದು ವಾರ್ಡ್‌ಗಳಿಗೂ ವಿಸ್ತರಿಸುವುದರ ಜೊತೆಯಲ್ಲೇ ಚರಂಡಿ, ಒಳಚರಂಡಿಗಳನ್ನು ಸ್ವಚ್ಚಗೊಳಿಸಿ, ಬೀದಿಯಲ್ಲಿ ಅಡ್ಡದಿಡ್ಡಿಯಾಗಿ ಬಿದ್ದಿರುವ ಕಸದ ರಾಶಿಗಳನ್ನು ವಿಲೇ ಮಾಡಿ, ದಿನನಿತ್ಯ ಬೀದಿಗಳಲ್ಲಿ ಹೊಗೆಯಾಡಿಸುವ ಕೆಲಸವೂ ಅತ್ಯಂತ ಜರೂರಾಗಿ ನಡೆಸಲು ಆರೋಗ್ಯ ಸಚಿವರು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲು ಮುಂದಾಗಬೇಕೆಂಬುದು ಎಲ್ಲರ ಆಗ್ರಹವಾಗಿದೆ.

ರಾಜಕೀಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ. ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ‌.‌ ಆದರೂ ನಿಮಗೆ ಬುದ್ದಿ ಬಂದಿಲ್ಲ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ. ಇದು ತಪ್ಪೆ” ಎಂದು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‌ ಅವರನ್ನು ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ನಿಮ್ಮ BJP ಸರ್ಕಾರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಒಂದೇ ಎರಡೇ? GST ಬಾಕಿಯಲ್ಲಿ ಮೋಸ, GST ಪರಿಹಾರದಲ್ಲಿ ಮೋಸ, ನೆರೆ ಪರಿಹಾರದಲ್ಲಿ ಮೋಸ, ಬರ ಪರಿಹಾರದಲ್ಲೂ ಮೋಸ, ಯೋಜನೆ ಅನುಷ್ಠಾನದಲ್ಲೂ ಮೋಸ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು.

ನೀವು ಈ ರಾಜ್ಯದ ಮನೆ ಮಗನಾಗಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಹೆಗಲು ಕೊಡಬೇಕು. ರಾಜ್ಯದ ಬಡವರಿಗೆ ಅಕ್ಕಿ ಕೊಡದೇ ದ್ವೇಷದ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಹೇಳಬೇಕು. ಅದು ಬಿಟ್ಟು ಮೋದಿಯವರ ದ್ವೇಷದ ಬೆಂಕಿಗೆ ನೀವೆ ತುಪ್ಪ ಸುರಿದರೆ ಬಡವರ ಶಾಪ ನಿಮಗೆ ತಟ್ಟದಿರುತ್ತದೆಯೇ” ಎಂದು ಹೇಳಿದ್ದಾರೆ.

ರಾಜಕೀಯ

ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ.

ಬೆಂಗಳೂರು: ಬೆಳಗಾವಿಯಲ್ಲಿ ಸೋಮವಾರ ಬಿಜೆಪಿ ಮುಖಂಡರ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಕಾಂಗ್ರೆಸ್ಸಿಗೆ ಎರಡೇ ದಿನದಲ್ಲಿ ಅಧಿಕಾರದ ಅಮಲು ಹೆಚ್ಚಾಗಿದೆ. ಜನರ ವಾಕ್ ಸ್ವಾತಂತ್ರ್ಯ ಕಿತ್ತುಕೊಂಡ ರೀತಿಯಲ್ಲಿ ಮಂತ್ರಿಗಳು ಮಾತನಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ತಲೆದೋರಬಹುದು’ ಎಂದರು.  

ಇದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ‘ಬೊಮ್ಮಾಯಿಯವರೇ, ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ? ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ತನಿಖಾ ಏಜೇನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?

ಅಧಿಕಾರ ಕಳೆದುಕೊಂಡಿರುವ BJPಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌. ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಬ್ಧಾರಿಯುತ ಸರ್ಕಾರದ ಕರ್ತವ್ಯ. ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೆ.

ಬೊಮ್ಮಾಯಿಯವರೇ ಒಂದು ಜವಾಬ್ಧಾರಿಯುತ ಸರ್ಕಾರವಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ. ನೀವು ಕಾನೂನು ಉಲ್ಲಂಘಿಸುವವರ ಪರವೇ? ಎಂದು ವಾಗ್ದಾಳಿ ನಡೆಸಿದ್ದಾರೆ.