ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ದೆಹಲಿ ಚಲೋ Archives » Dynamic Leader
October 23, 2024
Home Posts tagged ದೆಹಲಿ ಚಲೋ
ದೇಶ

ಅಂಬಲಾ ಬಳಿಯ ಶಂಭು ಗಡಿಯಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿದೆ.

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ರಾಜ್ಯಗಳ ರೈತ ಸಂಘಟನೆಗಳು, 2021ರಲ್ಲಿ ದಿಲ್ಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯನ್ನು ಅಂತ್ಯಗೊಳಿಸಲು ರೈತರ ಬೇಡಿಕೆಯನ್ನು ಈಡೇರಿಸಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಸಮ್ಮತಿಸಿತು.

ಆದರೆ ಎರಡು ವರ್ಷ ಕಳೆದರೂ ಬೇಡಿಕೆ ಈಡೇರದ ಕಾರಣ, ಹರಿಯಾಣ ಮತ್ತು ದೆಹಲಿಯ ಗಡಿಯಲ್ಲಿ ನಿನ್ನೆಯಿಂದ ರೈತರು ಪ್ರತಿಭಟನೆಯನ್ನು ಮುನ್ನಡೆಸುತ್ತಿದ್ದಾರೆ. ಶಂಭು ಗಡಿಯಲ್ಲಿ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದಿದೆ. ಅಂಬಲಾ ಬಳಿಯ ಶಂಭು ಗಡಿಯಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿದೆ.

ಈ ಹಿನ್ನಲೆಯಲ್ಲಿ, ರೈತರು ಅಶ್ರುವಾಯು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಶ್ರುವಾಯು ಪ್ರಭಾವವನ್ನು ಕಡಿಮೆ ಮಾಡಲು ಅವರು ನೀರಿನ ಬಾಟಲಿಗಳು, ಒದ್ದೆಯಾದ ಬಟ್ಟೆಗಳು ಮತ್ತು ರಕ್ಷಣಾ ಸಾಧನಗಳೊಂದಿಗೆ ತಮ್ಮನ್ನು ತಾವು ಸಿದ್ಧಪಡಿಸಿಕೊಂಡಿದ್ದಾರೆ. ಅಲ್ಲದೆ, ಅಶ್ರುವಾಯು ಸಾಗಿಸುವ ಡ್ರೋನ್‌ಗಳನ್ನು ನಿಷ್ಕ್ರಿಯಗೊಳಿಸಲು ಗಾಳಿಪಟಗಳನ್ನು ಹಾರಿಸುತ್ತಿದ್ದಾರೆ.

ಈ ಕುರಿತು ಮಾತನಾಡುವ ರೈತರು, ‘ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನೈತಿಕವಾಗಿ ಹೋರಾಟ ಮಾಡುತ್ತಿದ್ದೇವೆ. ನಾವು ಯಾವುದೋ ಭಯೋತ್ಪಾದಕರನ್ನು ಎದುರಿಸುತ್ತಿದ್ದೇವೆ ಎಂಬಂತೆ ಸರಕಾರಿ ಯಂತ್ರಗಳು ನಮ್ಮನ್ನು ನಡೆಸಿಕೊಳ್ಳುತ್ತಿದೆ. ಡ್ರೋನ್‌ಗಳ ಮೂಲಕ ಅಶ್ರುವಾಯು ಪ್ರಯೋಗಿಸಿ ನಮ್ಮನ್ನು ಚದುರಿಸಲು ಪ್ರಯತ್ನಿಸುತ್ತಿದ್ದಾರೆ. ಅದನ್ನು ಎದುರಿಸಲು ನಾವು ಈ ರೀತಿ ಗಾಳಿಪಟವನ್ನು ಹಾರಿಸುತ್ತಿದ್ದೇವೆ’ ಎಂದು ಹೇಳಿದರು.

ದೇಶ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಹರಿಯಾಣ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಗೆ ತೆರಳಿದ್ದಾರೆ. ಇದರಿಂದ ಸಾರಿಗೆ ದಟ್ಟಣೆ ಸಂಭವಿಸಿದೆ. ಪ್ರತಿಭಟನೆಯನ್ನು ತಡೆಯಲು ಭದ್ರತೆಯನ್ನು ಹೆಚ್ಚಿಸಲಾಗಿದೆ.

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್‌ ರಾಜ್ಯಗಳ ರೈತ ಸಂಘಟನೆಗಳು, ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ (MSP) ಎಂದು ಕರೆಯಲ್ಪಡುವ ಕನಿಷ್ಠ ಬೆಂಬಲ ಬೆಲೆಗೆ ಖಾತ್ರಿ ನೀಡುವ ಕಾನೂನು, ಪಿಂಚಣಿ, ಭೂಕಬಳಿಕೆಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಇಂದು ರಾಜಧಾನಿ ದೆಹಲಿಯತ್ತ ಬೃಹತ್ ಮೆರವಣಿಗೆಗೆ ಕರೆ ನೀಡಿತ್ತು.

ಈ ಹಿನ್ನಲೆಯಲ್ಲಿ, ರಾಜ್ಯಗಳ ರೈತರು ಕೇಂದ್ರ ಸರ್ಕಾರದ ವಿರುದ್ಧ ಮುತ್ತಿಗೆ ಹೋರಾಟ ನಡೆಸಲು ದೆಹಲಿಗೆ ತೆರಳಿದ್ದಾರೆ. ಇದರಿಂದಾಗಿ ದೆಹಲಿಯ ಪ್ರಮುಖ ಗಡಿ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ಪ್ರಮುಖ ರಸ್ತೆಗಳ ಮಾರ್ಗವನ್ನು ಬದಲಿಸಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಮಾರ್ಚ್ 12ರವರೆಗೆ ದೆಹಲಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರತಿಭಟನಾಕಾರರು ಯಾವುದೇ ಅಹಿತಕರ ಘಟನೆಗೆ ಒಳಗಾಗದಂತೆ ತಡೆಯಲು ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಅರೆಸೇನಾ ಪಡೆಗಳೂ ಭದ್ರತೆಯಲ್ಲಿ ತೊಡಗಿವೆ.