ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ದೇಣಿಗೆ Archives » Dynamic Leader
October 23, 2024
Home Posts tagged ದೇಣಿಗೆ
ರಾಜಕೀಯ

ನವದೆಹಲಿ: ಬಿಜೆಪಿಗೆ ದೇಣಿಗೆ ನೀಡಲು ನನಗೆ ಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಅವರು 2000 ರೂಪಾಯಿ ದೇಣಿಗೆ ನೀಡುವ ಚಿತ್ರವನ್ನು ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ರಾಜಕೀಯ ಪಕ್ಷಗಳು ಮೈತ್ರಿ ಮತ್ತು ಸೀಟು ಹಂಚಿಕೆ ಬಗ್ಗೆ ಸಕ್ರಿಯವಾಗಿ ಮಾತುಕತೆ ನಡೆಸುತ್ತಿವೆ. ಸದ್ಯದಲ್ಲೇ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಬಿಜೆಪಿ ಪಕ್ಷಕ್ಕೆ 2 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಅದರಲ್ಲಿ, “ಅಭಿವೃದ್ಧಿ ಹೊಂದಿದ ಭಾರತವನ್ನು ರಚಿಸುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲು ಬಿಜೆಪಿಗೆ ದೇಣಿಗೆ ನೀಡುವುದು ನನಗೆ ಸಂತೋಷವಾಗಿದೆ. ನಮೋ ಆಪ್ ಮೂಲಕ ರಾಷ್ಟ್ರ ನಿರ್ಮಾಣಕ್ಕಾಗಿ ದೇಣಿಗೆಯಲ್ಲಿ (Donation For National Building) ಎಲ್ಲರೂ ಭಾಗವಹಿಸುವಂತೆ ನಾನು ಕೋರುತ್ತೇನೆ” ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: ಖಾಸಗಿ ಕಂಪನಿಗಳ ಮೇಲೆ ದಾಳಿ ಮಾಡಿ, ಅವುಗಳ ಮೂಲಕ ಬಿಜೆಪಿಗೆ ದೇಣಿಗೆ ಸಂಗ್ರಹಿಸಲಿಕ್ಕಾಗಿ ಕೇಂದ್ರ ಗುಪ್ತಚರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಮ್ ರಮೇಶ್, ‘ಕಳೆದ ಹಣಕಾಸು ವರ್ಷಗಳ 2018-19 ಮತ್ತು 2022-23ರ ನಡುವೆ ಬಿಜೆಪಿಗೆ ಒಟ್ಟು 335 ಕೋಟಿ ರೂ ದೇಣಿಗೆ ನೀಡಿರುವ ಸುಮಾರು 30 ಕಂಪನಿಗಳು, ಅದೇ ಅವಧಿಯಲ್ಲಿ ಕೇಂದ್ರ ಗುಪ್ತಚರ ಸಂಸ್ಥೆಯಿಂದ ತನಿಖೆಗಳನ್ನು ಎದುರಿಸಿರುತ್ತದೆ.

ಈ ಸಮಸ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು. ಬಿಜೆಪಿ ಅವರ ಹಣಕಾಸಿನ ಮೂಲಗಳ ಬಗ್ಗೆ ಸ್ವೇತ ಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಈ ಅನುಮಾನಾಸ್ಪದ ದೇಣಿಗೆಗಳನ್ನು ತನಿಖೆ ಮಾಡಲು ಒಪ್ಪಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ, ‘ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಸಿಬಿಐ ಮುಂತಾದ ಕೇಂದ್ರೀಯ ಗುಪ್ತಚರ ಸಂಸ್ಥೆಗಳ ತನಿಖೆಯನ್ನು ಎದುರಿಸಿದ ನಂತರ, ಹಲವು ಖಾಸಗಿ ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿವೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ಇದು ಕೇಂದ್ರ ಗುಪ್ತಚರ ಸಂಸ್ಥೆಯ ಸ್ವಾತಂತ್ರ್ಯ, ಸ್ವಾಯತ್ತತೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ. ಈ 3 ತನಿಖಾ ಸಂಸ್ಥೆಗಳ ಪೈಕಿ 2 ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಒಳಪಡುತ್ತವೆ.

ಗುಪ್ತಚರ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ಹೇಗೆ ನಿಯಂತ್ರಿಸುತ್ತದೆ ಎಂಬುದು ಇಡೀ ದೇಶಕ್ಕೆ ತಿಳಿದಿದೆ. ರಾಜಕಾರಣಿಗಳ ಮೇಲಿನ ಜಾರಿ ನಿರ್ದೇಶನಾಲಯದ ಪ್ರಕರಣಗಳು 2014 ರಿಂದ ನಾಲ್ಕು ಪಟ್ಟು ಹೆಚ್ಚಾಗಿದೆ. ಇದರಲ್ಲಿ ಶೇಕಡಾ ಶೇ.95ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರ ವಿರುದ್ಧವೇ ಆಗಿವೆ.

ಬಿಜೆಪಿಗೆ ಒಟ್ಟು 187.58 ಕೋಟಿ ರೂ.ನೀಡಿದ 30 ಕಂಪನಿಗಳ ಪೈಕಿ, 23 ಕಂಪನಿಗಳು, 2014 ರಿಂದ ದಾಳಿ ನಡೆದ ವರ್ಷದವರೆಗೆ ಬಿಜೆಪಿಗೆ ಯಾವುದೇ ದೇಣಿಗೆ ನೀಡಿರುವುದಿಲ್ಲ. ಆದರೆ ಅದರ ನಂತರ ದೇಣಿಗೆಯನ್ನು ನೀಡಿದೆ. ಈಗಾಗಲೇ ದೇಣಿಗೆ ನೀಡುತ್ತಿದ್ದ ಸಂಸ್ಥೆಗಳು ದಾಳಿಯ ನಂತರ ಹೆಚ್ಚಿನ ದೇಣಿಗೆಗಳನ್ನು ನೀಡಿವೆ.

ತನಿಖಾ ಸಂಸ್ಥೆಗಳು ದಾಖಲಿಸಿರುವ ಪ್ರಕರಣಗಳು ಅಕ್ರಮ ಎಂದು ನಾವು ಹೇಳುತ್ತಿಲ್ಲ. ಆದರೆ ಈ ಕಂಪನಿಗಳು ತನಿಖೆ ಎದುರಿಸಿದ ನಂತರ ಬಿಜೆಪಿಗೆ ಏಕೆ ದೇಣಿಗೆ ನೀಡುತ್ತಿವೆ ಎಂಬುದು ತನಿಖೆಯಾಗಬೇಕಾದ ವಿಚಾರವಾಗಿದೆ’ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದ ಕ್ರಮದ ನಂತರ ಅವರು ಬಿಜೆಪಿಗೆ ದೇಣಿಗೆ ನೀಡುತ್ತಿರುವುದು ಕೇವಲ ಕಾಕತಾಳೀಯವೇ? ನಾವು ಈ ವಿಷಯವನ್ನು ನ್ಯಾಯಾಂಗ ಮತ್ತು ಜನರ ಬಳಿಗೆ ಕೊಂಡೊಯ್ಯುತ್ತೇವೆ. ಎರಡೂ ಕಡೆಯೂ ನಿಮ್ಮನ್ನು ಸೋಲಿಸುತ್ತೇವೆ’ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.