ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಧಾರ್ಮಿಕ ಸಂಘರ್ಷ Archives » Dynamic Leader
October 23, 2024
Home Posts tagged ಧಾರ್ಮಿಕ ಸಂಘರ್ಷ
ದೇಶ

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ?

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಮೇಲೆ ಪ್ರತಿದಿನ ದಾಳಿಗಳು ನಡೆಯುತ್ತಿವೆ. ಸಿಎಎ (CAA) ಹಾಗೆ ಕಠಿಣ ಕಾನೂನುಗಳನ್ನು ತರುವ ಮೂಲಕ ಅಲ್ಪಸಂಖ್ಯಾತರನ್ನು ಭಾರತದಿಂದ ಪ್ರತ್ಯೇಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಒಂದೆಡೆಯಾದರೆ ಮತ್ತೊಂದು ಕಡೆ ಹಿಂದೂ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಹಿಂಸಾಚಾರವನ್ನು ಅನಾವರಣಗೊಳಿಸುತ್ತಿವೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಹೆಚ್ಚು ಧಾರ್ಮಿಕ ಸಂಘರ್ಷಗಳಿವೆ. ಆದರೆ ಈಗ ಬಿಜೆಪಿಯೇತರ ರಾಜ್ಯಗಳಲ್ಲಿ ಕೂಡ ಧಾರ್ಮಿಕ ಸಂಘರ್ಷಗಳು ನಡೆಯುತ್ತಿವೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಸುದೀರ್ಘ ಕಾಲ ಆಡಳಿತ ನಡೆಸುತ್ತಿರುವ ಹಾಗೂ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ, ಕಳೆದ ವರ್ಷ ನಡೆದ ಕ್ರೂರ ಘಟನೆಗೆ ಸಂಬಂಧಿಸಿದಂತೆ ತೀರ್ಪೊಂದು ಇದೀಗ ಹೊರಬಿದ್ದಿದೆ.

ಅಕ್ಟೋಬರ್ 2022ರಲ್ಲಿ, ಗುಜರಾತ್‌ನ ಖೇಡಾ ಜಿಲ್ಲೆಯ ಉಂಡೆಲಾ ಗ್ರಾಮದಲ್ಲಿ ಮೂವರು ಯುವಕರು ಪೊಲೀಸರಿಗೆ ಸಿಕ್ಕಿಬಿದ್ದರು. ಕಾರ್ಯಕ್ರಮವೊಂದರಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾದಾಗ ಹಲವರು ಘಟನೆಯನ್ನು ಖಂಡಿಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಪ್ರಕರಣದಲ್ಲಿ, ‘ಲಾಠಿಯಿಂದ ಹೊಡೆಯುವುದು ಹಿಂಸೆಯಾಗುವುದಿಲ್ಲ; ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ’ ಎಂದು ಘಟನೆಯಲ್ಲಿ ಭಾಗಿಯಾದ ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದು ವಿವಾದಕ್ಕೀಡಾಗಿತ್ತು.

ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಪೊಲೀಸರ ಅಪರಾಧ ಸಾಬೀತಾಗಿದ್ದು, ಕಳೆದ ವರ್ಷ (2023) ಅಕ್ಟೋಬರ್‌ನಲ್ಲಿ ತಪ್ಪಿತಸ್ಥರಾದ 4 ಪೊಲೀಸರಿಗೆ ಶಿಕ್ಷೆ ಪ್ರಕಟಿಸಲಾಗಿತ್ತು. ಅದರಂತೆ ಗುಜರಾತ್ ಹೈಕೋರ್ಟ್ ಅವರಿಗೆ 14 ದಿನಗಳ ಜೈಲು ಶಿಕ್ಷೆ ಮತ್ತು ರೂ.2,000 ದಂಡ ವಿಧಿಸಿ ತೀರ್ಪು ನೀಡಿತು.

ಆದರೆ ಗುಜರಾತ್ ನ್ಯಾಯಾಲಯದ ತೀರ್ಪಿನ ವಿರುದ್ಧ 4 ಮಂದಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ನಿನ್ನೆ ಸುಪ್ರೀಂ ಕೋರ್ಟ್ ಮತ್ತೊಮ್ಮೆ ಗುಜರಾತ್ ಪೊಲೀಸರನ್ನು ಪ್ರಶ್ನಿಸಿದೆ.

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೂ “ಜನರನ್ನು ಕಂಬಗಳಿಗೆ ಕಟ್ಟಿಹಾಕಿ, ಸಾರ್ವಜನಿಕವಾಗಿ ಹೊಡೆದು, ವಿಡಿಯೋ ತೆಗೆಯುವುದೆಲ್ಲ ಯಾವ ರೀತಿಯ ಹಿಂಸೆ? ಹಾಗಾಗಿ ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕಾಗಿದೆ” ಎಂದು ಹೇಳಿ, ಸದರಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.