ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನಟ ಪ್ರಕಾಶ್ ರಾಜ್ Archives » Dynamic Leader
October 17, 2024
Home Posts tagged ನಟ ಪ್ರಕಾಶ್ ರಾಜ್
ದೇಶ

ಚೆನ್ನೈ: ತೇನಾಂಪೇಟೆಯಲ್ಲಿ ವಿಡುದಲೈ ಚಿರುತ್ತೈಗಳ್ (ಬಿಡುಗಡೆ ಚಿರುತೆಗಳು) ಪಾರ್ಟಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಇದರಲ್ಲಿ ನಟ ಪ್ರಕಾಶ್ ರಾಜ್ ಅವರಿಗೆ ‘ಅಂಬೇಡ್ಕರ್ ಜ್ಯೋತಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಟ ಪ್ರಕಾಶ್ ರಾಜ್, “ಒಂದು ಕಲಾವಿದ ಹೇಡಿಯಾದರೆ ಸಮಾಜವೂ ಹೇಡಿಯಾಗುತ್ತದೆ. ಕಲಾವಿದ ಮತ್ತು ಪತ್ರಕರ್ತ ಯಾವಾಗಲೂ ವಿರೋಧ ಪಕ್ಷವಾಗಿರಬೇಕು. ಅಲ್ಲದೆ, ನಾನು ರಾಜಕೀಯಕ್ಕೆ ಬಂದರೆ ಜನ ಒಪ್ಪಿಕೊಳ್ಳುವುದಿಲ್ಲ.

ದೇಹಕ್ಕೆ ಗಾಯವಾದರೆ ಸುಮ್ಮನಿದ್ದರೂ ವಾಸಿಯಾಗುತ್ತದೆ. ಆದರೆ, ದೇಶಕ್ಕೆ ಗಾಯವಾದಗ ಮಾತನಾಡದೆ ಹೋದರೆ ಅಧಿಕವಾಗುತ್ತದೆ. ರಾಜನಾಗಿದ್ದ ಪ್ರಧಾನಿ ಮೋದಿ ಈಗ ದೇವರ ಮಗುವಾಗಿದ್ದಾರೆ” ಎಂದು ಟೀಕಿಸಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ವಿಡುದಲೈ ಚಿರುತ್ತೈಗಳ್ ನಾಯಕ ಸಂಸದ ತೊಲ್ ತಿರುಮಾವಳವನ್, ಸಂಸದ ರವಿಕುಮಾರ್, ಸಿಪಿಐ ಮುಖಂಡ ಮುತ್ತರಸನ್, ಬಿಷಪ್ ಎಸ್ರಾ ಸರ್ಗುಣಂ ಮುಂತಾದವರು ಭಾಗವಹಿಸಿದ್ದರು.

ದೇಶ

‘ಭಾರತೀಯರೆಲ್ಲರೂ ನನ್ನ ಕುಟುಂಬ’ ಎಂದು ಭಾ‍ಷಣ ಮಾಡಿದ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ ನಟ ಪ್ರಕಾಶ್ ರಾಜ್, ‘ಮಣಿಪುರದ ಜನರು ಕೂಡ ನಿಮ್ಮ ಕುಟುಂಬವೇ’ ಎಂದು ಕೇಳಿದ್ದಾರೆ.

ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಮಾರ್ಚ್ 3 ರಂದು ನಡೆದ “ಜನ್ ವಿಶ್ವಾಸ್” ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, “ಪ್ರಧಾನಿ ಮೋದಿಯವರು ರಾಷ್ಟ್ರೀಯ ಜನತಾ ದಳ ಸೇರಿದಂತೆ ವಿವಿಧ ಪಕ್ಷಗಳ ವಿರುದ್ಧ ಕುಟುಂಬ ರಾಜಕಾರಣದ ಆರೋಪಗಳನ್ನು ಎತ್ತುತ್ತಿದ್ದಾರೆ. ನರೇಂದ್ರ ಮೋದಿ ಕುಟುಂಬ ಆಡಳಿತದ ಮೇಲೆ ದಾಳಿ ನಡೆಸುತ್ತಿದ್ದಾರೆ.

ನಿಮಗೆ ಏಕೆ ಮಕ್ಕಳು ಅಥವಾ ಕುಟುಂಬವಿಲ್ಲ ಎಂಬುದನ್ನು ನೀವು (ಮೋದಿ) ಹೇಳಬೇಕು? ಹಲವು ಕುಟುಂಬಗಳು ರಾಜಕೀಯದಲ್ಲಿದ್ದರೆ ಅದು ಕುಟುಂಬ ಆಡಳಿತವೇ? ಇದು ಉತ್ತರಾಧಿಕಾರ ರಾಜಕಾರಣವೇ? ನಿಮಗೆ (ಮೋದಿ) ಕುಟುಂಬವಿಲ್ಲದಿದ್ದರೆ, ಯಾರು ಏನು ಮಾಡಲು ಸಾಧ್ಯ?” ಎಂದು ಕಟುವಾಗಿ ಟೀಕಿಸಿದ್ದರು.

ಈ ಹಿನ್ನೆಲೆಯಲ್ಲಿ, ನಿನ್ನೆ ತಮಿಳುನಾಡಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಚೆನ್ನೈನ ನಂದನಂನಲ್ಲಿ ಬಿಜೆಪಿ ವತಿಯಿಂದ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. “ನಾನು ಕುಟುಂಬ ಆಡಳಿತ ಎಂದು ಮಾತನಾಡುವುದರಿಂದ ಮೋದಿಗೆ ಕುಟುಂಬವೇ ಇಲ್ಲ ಎಂದು “ಇಂಡಿಯಾ” ಮೈತ್ರಿಕೂಟದ ನಾಯಕರು ಮಾತನಾಡುತ್ತಿದ್ದಾರೆ.

ನನ್ನ ಜೀವನ ಒಂದು ತೆರೆದ ಪುಸ್ತಕ. ದೇಶದ 140 ಕೋಟಿ ಜನರು ನನ್ನ ಕುಟುಂಬದವರೇ ಆಗಿದ್ದಾರೆ. ಕೋಟ್ಯಾಂತರ ಹೆಣ್ಣುಮಕ್ಕಳು, ತಾಯಂದಿರು ಮತ್ತು ಸಹೋದರಿಯರೆಲ್ಲರೂ ಮೋದಿಯ ಕುಟುಂಬಕ್ಕೆ ಸೇರಿದವರೇ” ಎಂದು ಹೇಳುವ ಮೂಲಕ ಲಾಲು ಪ್ರಸಾದ್ ಯಾದವ್ ಅವರ ಪ್ರಶ್ನೆಗೆ ತಕ್ಕ ಉತ್ತರ ನೀಡಿದರು.

ಈ ಹಿನ್ನೆಲೆಯಲ್ಲಿ, ದೇಶದ ಜನರೆಲ್ಲ ನನ್ನ ಕುಟುಂಬ ಎಂಬ ಪ್ರಧಾನಿ ಮೋದಿ ಹೇಳಿಕೆ ವಿರುದ್ಧ ನಟ ಪ್ರಕಾಶ್ ರಾಜ್ ಪ್ರಶ್ನೆ ಎತ್ತಿದ್ದಾರೆ. ಈ ಸಂಬಂಧ ಅವರು ತಮ್ಮ ‘ಎಕ್ಸ್’ ಸೈಟ್‌ನಲ್ಲಿ, “ಮಣಿಪುರದ ಜನರು, ದೇಶದ ರೈತರು, ನಿರುದ್ಯೋಗಿ ಯುವಕರು ನಿಮ್ಮ ಕುಟುಂಬವೇ?” ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಕೋಮುಗಲಭೆ ಇಂದಿಗೂ ಮುಂದುವರೆದಿದೆ. ಈ ವಿಚಾರದಲ್ಲಿ ಮೋದಿ ಇನ್ನೂ ಆ ರಾಜ್ಯಕ್ಕೆ ಭೇಟಿ ನೀಡಿ ಜನರನ್ನು ಭೇಟಿ ಮಾಡಿಲ್ಲ. ಇನ್ನೂ ಮಣಿಪುರದಲ್ಲಿ ಉದ್ವಿಗ್ನತೆ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಈ ಪ್ರಶ್ನೆ ಎತ್ತಿರುವುದು ಗಮ್ನಾರ್ಹ.

ರಾಜಕೀಯ

ಚೆನ್ನೈ: ಭಾರತವೇ ನಿಮ್ಮ ಮನೆ ಎಂದು ನಟ ಪ್ರಕಾಶ್ ರಾಜ್ ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬೆನ್ನಲ್ಲೇ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯ ದೆಹಲಿ 10, ತುಘಲಕ್  ಲೇನ್ ಸರ್ಕಾರಿ ಬಂಗಲೆಯನ್ನು ಏಪ್ರಿಲ್ 22 ರೊಳಗೆ ತೆರವು ಮಾಡುವಂತೆ ನಿನ್ನೆ ಲೋಕಸಭೆ ಸೆಕ್ರೆಟರಿಯೇಟ್ ಅವರಿಗೆ ನೋಟಿಸ್ ಜಾರಿಮಾಡಿತ್ತು. ‘ರಾಹುಲ್ ಅವರಿಗೆ ಕಾಲಾವಕಾಶ ಬೇಕಿದ್ದಲ್ಲಿ ಲೋಕಸಭೆಯ ವಸತಿ ಸಮಿತಿಗೆ ಪತ್ರ ಬರೆದು ಕೇಳಿಕೊಂಡರೆ ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಅದಕ್ಕೆ ಮರುದಿನ ಲೋಕಸಭೆ ಸೆಕ್ರೆಟರಿಯೇಟ್ ಅವರ ನೋಟಿಸ್ ಗೆ ಉತ್ತರವನ್ನು ಕಳುಹಿಸಿಕೊಟ್ಟ ರಾಹುಲ್, “ಜನಾದೇಶದಿಂದ 4 ಬಾರಿ ಲೋಕಸಭಾ ಸಂಸದನಾಗಿ ಆಯ್ಕೆಯಾದ ನಾನು ಈ ಬಂಗಲೆಯಲ್ಲಿ ವಾಸವಾಗಿದ್ದ ಸಂತೋಷದ ನೆನಪುಗಳಿಗೆ ಋಣಿಯಾಗಿದ್ದೇನೆ. ನಾನು ಯಾವುದೇ ಹಕ್ಕುಗಳನ್ನು ಪ್ರತಿಪಾದಿಸದೆ, ನಿಮ್ಮ ಪತ್ರದ ವಿಷಯಗಳಿಗೆ ನಾನು ಖಂಡಿತವಾಗಿಯೂ ಬದ್ಧನಾಗಿರುತ್ತೇನೆ” ಎಂದು ಹೇಳಿದರು. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿಗೆ ಹಲವರು ಬೆಂಬಲ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ನಟ, ರಾಜಕಾರಣಿ ಪ್ರಕಾಶ್ ರಾಜ್ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಪ್ರಕಾಶ್ ರಾಜ್ ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ, “ಆತ್ಮೀಯ ರಾಹುಲ್ ಗಾಂಧಿ… ಈ ದಬ್ಬಾಳಿಕೆಯಿಂದ ನಮ್ಮ ದೇಶವನ್ನು ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆಯಾಗಿದೆ. ಭಾರತವೇ ನಿಮ್ಮ ಮನೆ. ನಿಮಗೆ ಅತ್ಯಂತ ಸ್ವಾಗತ.. ನಿಮಗೆ ಹೆಚ್ಚಿನ ಶಕ್ತಿ” ಎಂದು ಉಲ್ಲೇಖಿಸಿದ್ದಾರೆ. ಇದು ಸದ್ಯ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.