ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನಿಖಿಲ್‌ ಕುಮಾರಸ್ವಾಮಿ Archives » Dynamic Leader
October 20, 2024
Home Posts tagged ನಿಖಿಲ್‌ ಕುಮಾರಸ್ವಾಮಿ
ರಾಜಕೀಯ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.  

ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ. ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಒದ್ದಾಡುತ್ತಿರುವ ಸರಕಾರವು, ತನ್ನ ಶಾಸಕರೊಬ್ಬರ ಮೂಲಕ ರದ್ದು ಮಾಡುತ್ತೇವೆ ಎಂದು ಹೇಳಿಸಿದೆ ಎಂದೇ ಭಾವಿಸಬೇಕಾಗುತ್ತದೆ. ಅದು ನಿಜವೂ ಹೌದು ಎನ್ನುವುದು ನನ್ನ ಭಾವನೆ ಎಂದು ಹೇಳಿದ್ದಾರೆ.

ಆ ಶಾಸಕರ ಹೇಳಿಕೆಯ ಧಾಟಿ ಹೇಗಿದೆ ಎಂದರೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ, ಇಲ್ಲವಾದರೆ ನಿಮಗೆ ಕೊಟ್ಟಿರುವ ಗ್ಯಾರಂಟಿಗಳನ್ನು ಮುಲಾಜಿಲ್ಲದೆ ರದ್ದು ಮಾಡುತ್ತೇವೆ ಎಂದು ಬ್ಲ್ಯಾಕ್ ಮೇಲ್ ಮಾಡುವ ಧಾಟಿಯಲ್ಲಿದೆ ಇದು ಪ್ರಜಾಪ್ರಭುತ್ವಕ್ಕೆ, ಜನರ ನಂಬಿಕೆಗೆ ಎಸಗಿದ ಅಪಚಾರವಾಗಿದೆ ಎಂದು ಕಿಡಿಕಾರಿದ್ದಾರೆ.

ಆ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಗೆಲ್ಲುವ ಏಕೈಕ ಉದ್ದೇಶದಿಂದ ನೀವು ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟಿದ್ದಿರಿ. ಆಮೇಲೆ ಅವುಗಳನ್ನು ಜಾರಿ ಮಾಡಿದ್ದೀರಿ. ‘ಗ್ಯಾರಂಟಿ ಕೊಡಿ, ನಿಮಗೆ ವೋಟು ಹಾಕುತ್ತೇವೆ’ ಎಂದು ಜನರೇನು ಕೇಳಿರಲಿಲ್ಲ. ವಾಸ್ತವ ಸ್ಥಿತಿ ಹೀಗಿದ್ದ ಮೇಲೆ ಈಗ ಗ್ಯಾರಂಟಿಗಳನ್ನು ಅದ್ಹೇಗೆ ವಾಪಸ್ ಪಡೆಯುತ್ತೀರಿ? ಕಾಂಗ್ರೆಸ್ ಸರಕಾರದ ವರ್ತನೆಗೆ ನನ್ನ ಹಾಗೂ ನಮ್ಮ ಪಕ್ಷದ ತೀವ್ರ ವಿರೋಧವಿದೆ ಎಂದು ಹೇಳಿದ್ದಾರೆ.  

ಸಿನಿಮಾ

ಭಾರತದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡೆಕ್ಷನ್ಸ್ ನಿರ್ಮಿಸುತ್ತಿರುವ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಾಯಕ ನಟನಾಗಿ ನಟಿಸುತ್ತಿರುವ ನೂತನ ಚಲನಚಿತ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿ ಚಿತ್ರತಂಡವನ್ನು ಹರಸಿದರು.

ಚಲನಚಿತ್ರ ನಿರ್ಮಾಣ ಕ್ಷೇತ್ರದಲ್ಲಿ ಅನೇಕ ಮೈಲುಗಲ್ಲುಗಳನ್ನು ಸ್ಥಾಪನೆ ಮಾಡಿರುವ ಲೈಕಾ ಸಂಸ್ಥೆಯ ಅಧ್ಯಕ್ಷ ಎ.ಸುಭಾಸ್ಕರನ್ ಸೇರಿದಂತೆ ಅವರ ಕುಟುಂಬ ಸದಸ್ಯರು, ಸಂಸ್ಥೆಯ ಅನೇಕ ಪ್ರಮುಖರು, ಚಿತ್ರತಂಡದವರು ಈ ಸಂತೋಷದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಬುಧವಾರ ಈ ಕಾರ್ಯಕ್ರಮ ನಡೆಯಿತು.

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಭರಾಟೆ ಜೋರಾಗಿದೆ. ಅದರಂತೆ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರಂ ಸ್ವೀಕರಿಸುವಾಗ ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಂದೆ ಹೆಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು.

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ನಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.