ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನೀರಮಾನ್ವಿ Archives » Dynamic Leader
October 16, 2024
Home Posts tagged ನೀರಮಾನ್ವಿ
ರಾಜಕೀಯ

ವರದಿ: ರಾಮು ನೀರಮಾನ್ವಿ

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹಂಪಯ್ಯ ನಾಯಕ, ಜೆಡಿಎಸ್‌ನಿಂದ ರಾಜಾ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಬಿ.ವಿ.ನಾಯಕ ಅಭ್ಯರ್ಥಿಗಳಾಗಿದ್ದಾರೆ. ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿಯ ಮತಯಾಚನೆ ನೆಡೆದಿದೆ. ಮತ ಬೇಟೆಯಲ್ಲಿ ಮೂರು ಪಕ್ಷಗಳು ಬಿಸಿಲಿನಲ್ಲಿ ಬೆವರು ಹರಿಸುತ್ತಿದ್ದಾರೆ. ಮಾನ್ವಿ ನಗರದಲ್ಲಿ ಜೆಡಿಎಸ್ ಪ್ರಚಾರದಲ್ಲಿ ಮುಂದೆ ಇರುವುದು ಕಂಡು ಬಂದಿದೆ. ಕಾಂಗ್ರೆಸ್ ಬಿಜೆಪಿಗಿಂತ ಮೊದಲಿಗೆ ಜೆಡಿಎಸ್ ಚುನಾವಣೆ ಪ್ರಚಾರವನ್ನು ಕೈಗೊಂಡ ಕಾರಣ ಮತದಾರರನ್ನು ತನ್ನತ್ತ ಸೆಳೆಯಲು ಯಾಶಸ್ವಿಯಾಗಿದೆ. ಕ್ಷೇತ್ರದ ಹಳ್ಳಿಗಳಲ್ಲಿ ಜೆಡಿಎಸ್ ಪಕ್ಷದ ಅಬ್ಬರದ ಪ್ರಚಾರ ಮತ್ತು ಪಕ್ಷದ ಸೇರ್ಪಡೆ ಕಾರ್ಯಕ್ರಮಗಳು ಬರದಿಂದ ಸಾಗಿದ್ದು ಪಕ್ಷಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ಬಿಜೆಪಿಯೂ ಹಿಂದೆ ಬಿದ್ದಿಲ್ಲ. ಅದೂ ತನ್ನ ಪ್ರಯತ್ನವನ್ನು ಮಾಡುತ್ತಿದೆ. ಆದರೆ ಬೇರೆ ತಾಲ್ಲೂಕಿನಿಂದ ವಲಸೆ ಬಂದ ಕಾರಣ ಮತದಾರರನ್ನು ಸೆಳೆಯುವಲ್ಲಿ ಸಪಲವಾಗಿಲ್ಲ. ಕೆಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದು ಆ ಪಕ್ಷಕ್ಕೆ ಸ್ವಪ್ಲ ಬಲ ಹೆಚ್ಚಾಗಿದೆ. ಪಕ್ಷ ಸೇರ್ಪಡೆ ಬರದಿಂದ ಮುಂದುವರಿಯುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದ ನೆಡೆಯು ಮೋಡಮುಸುಕಿದ ವಾತಾವರಣ ಇದೆ. ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್‌ಗೆ ಸೇರಿರುವುದರಿಂದ ಆ ಪಕ್ಷಕ್ಕೆ ಹಿನ್ನಡೆಯಾಗಿದ್ದರೂ ಎಂ.ಈರಣ್ಣ ಅವರ ಸೇರ್ಪಡೆಯಿಂದ ನಿಟ್ಟುಸಿರು ಬಿಡುವಂತೆ ಅಗಿದೆ. ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನ ದೊಡ್ಡ ದೊಡ್ಡ ಹಳ್ಳಿಗಳಲ್ಲಿ ಕೂಡಾ ಇದೇ ಪರಿಸ್ಥಿತಿ ಮುಂದುವರಿಯುತ್ತಿದೆ. ಕೆಲವು ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಬಗ್ಗೆ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಇದು ಹಗಲಿನಷ್ಟೆ ಸತ್ಯ.

ಜೆಡಿಎಸ್, ಬಿಜೆಪಿಯಲ್ಲಿ ಕಾರ್ಯಕರ್ತರು ಹೊಸ ಹುರುಪಿನಿಂದ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಆದರೇ ಈ ರೀತಿಯ ವಾತಾವರಣ ಕಾಂಗ್ರೆಸ್‌ನಲ್ಲಿ ಕಂಡು ಬರುತ್ತಿಲ್ಲ. ಇದು ಆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ. ಚುನಾವಣೆಗೆ ಇನ್ನೂ ಕೇವಲ ಐದು ದಿನ ಬಾಕಿಯಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಮುಖ ಜೋತಾಕಿಕೊಂಡು ತಿರುಗಾಡುತ್ತಿದ್ದಾರೆ. ಹೀಗಿರುವಾಗ ಕಾಂಗ್ರೆಸ್‌ಗೆ ಇದೊಂದು ದೊಡ್ಡ ಹೊಡೆತ ಅಂದರೆ ಅತಿಶಯೋಕ್ತಿಯಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪುಟಿದೇಳಬೇಕಾದ ಪರಸ್ಥಿತಿ ಎದುರಾಗಿದೆ. ಅದರ ನಾಯಕರು ಇತ್ತ ಕಡೆ ಗಮನ ಹರಿಸುವರೇ ಎಂಬುದನ್ನು ಕಾದು ನೋಡಬೇಕು. ಅಂತು ಮಾನ್ವಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಚಾರದಲ್ಲಿ ಜೆಡಿಎಸ್ ಎಲ್ಲರಿಗಿಂತಲು ಒಂದು ಹೆಜ್ಜೆ ಮುಂದಿದೆ. ನಂತರ ಬಿಜೆಪಿ, ಅನಂತರ ಕಾಂಗ್ರೆಸ್ ಇದೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದೇ ರೀತಿಯಲ್ಲಿ ಜೆಡಿಎಸ್ ಮುನ್ನೆಡೆದರೆ ಅದು ಗೆಲುವಿನ ದಡ ಸೇರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇನ್ನೂ ಐದು ದಿನಗಳು ಚುನಾವಣೆಗೆ ಬಾಕಿ ಉಳಿದಿರುವುದರಿಂದ ಪಕ್ಷಗಳು ಯಾವ ತಂತ್ರಗಳನ್ನು ಅನುಸರಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಕೀಯ

ವರದಿ: ರಾಮು ನೀರಮಾನ್ವಿ

ರಾಯಚೂರು: ರಾಯಚೂರು ಜಿಲ್ಲೆ, ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ಚಿತ್ರಣ ಬದಲಾಗುತ್ತಲೇ ಇದೆ. ಕೊನೆಗೆ ಪಕ್ಷೇತರ ಅಭ್ಯರ್ಥಿ ಡಾ.ತನುಶ್ರಿ ಕೂಡಾ ತಮ್ಮ ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್, ಬಿಜೆಪಿ ತನ್ನ ಪಕ್ಷದಿಂದ ಚುನಾವಣೆಗೆ ನಿಲ್ಲಿಸಲು ಅಭ್ಯರ್ಥಿಗಳನ್ನು ಅಯ್ಕೆ ಮಾಡಿಕೊಂಡ ರೀತಿಯ ಬಗ್ಗೆ ಅನುಮಾನಗಳಿವೆ. ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಯ್ಕೆ ಮಾಡುವಲ್ಲಿ ಗಜ ಪ್ರಸವದಂತಾಗಿದೆ. ಆದರೆ ಕೊನೆ ಗಳಿಗೆಯಲ್ಲಿ ಹಿರಿಯ ಮುಖಂಡ ಮಾಜಿ ಶಾಸಕ ಹಂಪಯ್ಯ ನಾಯಕ ಅವರಿಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟಿದೆ. ಇದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಕಾರಣ, ಶರಣಯ್ಯ ನಾಯಕರಿಗೆ ಟಿಕೆಟ್ ಕೊಡ್ತಿವಿ ಅಂತ ಹೇಳಿ, ಅವರನ್ನು ಬಿಜೆಪಿಗೆ ರಾಜಿನಾಮೆ ಕೊಡಿಸಿ, ಬಿಜೆಪಿಯಿಂದ ಕಾಂಗ್ರೆಸ್ ಗೆ ಕರೆತಂದರು. ನಂತರ ಹಂಪಯ್ಯ ನಾಯಕ ಅವರಿಗೆ ಟಿಕೆಟ್ ನೀಡಿ, ಶರಣಯ್ಯ ನಾಯಕ ಅವರನ್ನು ಅತಂತ್ರದಲ್ಲಿ ಬಿಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಹಂಪಯ್ಯ ನಾಯಕ

 ಇದು ಕಾಂಗ್ರೆಸ್‌ನ ಕಥೆಯಾದರೆ, ಬಿಜೆಪಿಯಲ್ಲಿ ಬೇರೆಯದೆ ಆಟ ಇದೆ. ಮೊದಲಿಗೆ ಮಾನಪ್ಪ ನಾಯಕ, ಗಂಗಾಧರ ನಾಯಕ, ಇನ್ನಿತರ ಅಭ್ಯರ್ಥಿಗಳೆಲ್ಲ ಟಿಕೆಟ್‌ಗಾಗಿ ಹರಸಾಹಸ ಮಾಡಿದರೂ ಇವರೆಲ್ಲರನ್ನು ಕಡೆಗಣಿಸಿ ಪಕ್ಕದ ದೇವದುರ್ಗ ತಾಲ್ಲೂಕಿನ ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಿ.ವಿ.ನಾಯಕರಿಗೆ ಟಿಕೆಟ್ ನೀಡಿದ್ದಾರೆ. ಇದರಿಂದ ಸ್ಥಳೀಯ ಬಿಜೆಪಿ ಮುಖಂಡರಿಗೆ ಇರುಸುಮುರುಸಾಗಿದೆ. ಪ್ರಬಲವಾದ ಗಂಗಾಧರ ನಾಯಕರಿಗೆ ಟಿಕೆಟ್ ಕೈ ತಪ್ಪಿರುವುದು ಅವರ ಅಭಿಮಾನಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ‘ಸ್ಥಳೀಯರನ್ನು ಬಿಟ್ಟು ವಲಸೆ ಬಂದವರಿಗೆ ಟಿಕೆಟ್ ಕೊಟ್ಟರೆ ನಾವೇನು ಕತ್ತೆ ಕಾಯುವುದೇ? ಬಿಜೆಪಿ ಪಕ್ಷ ಬೆಳೆಸಲು ನಾವು ಬೇಕು; ಟಿಕೆಟ್ ಇನ್ನೊಬ್ಬರಿಗೆ ಕೊಟ್ಟರೆ ನಾವೇನು ಮಾಡಬೇಕು; ಅಂತಿದ್ದಾರೆ ಬಿಜೆಪಿಯ ಕಾರ್ಯಕರ್ತರು.

ಪಕ್ಷೇತರ ಅಭ್ಯರ್ಥಿ ಡಾ.ತನುಶ್ರಿ

ಕಾಂಗ್ರೆಸ್‌ನಿಂದ ವಲಸೆ ಬಂದವರಿಗೆ ಟಿಕೆಟ್ ಕೊಟ್ಟರೆ ನಾವೇನು ಮಾಡಬೇಕು. ನಮಗೂ ಶಕ್ತಿ ಇದೆ. ಚುನಾವಣೆ ಎದುರಿಸಲು ನಮಗೆ ತಾಕತ್ತು ಇಲ್ಲವಾದಲ್ಲಿ ಬೇರೆಯವರಿಗೆ ಟಿಕೆಟ್ ಕೊಡಬೇಕಾಗಿತ್ತು. ಮಾತೆತ್ತಿದರೆ ‘ಬಿಜೆಪಿ ಪಕ್ಷವು ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತದೆ’ ಎಂದು ಹೇಳುವ ಇವರು, ಗಂಗಾಧರ ನಾಯಕರಿಗೆ ಏಕೆ ಟಿಕೆಟ್ ಕೊಡಲಿಲ್ಲ ಅಂತ ಬಿಜೆಪಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿ.ವಿ.ನಾಯಕರ ತಂದೆ ನಾಲ್ಕು ಬಾರಿ ರಾಯಚೂರು ಲೋಕಸಭಾ ಸದಸ್ಯರಾಗಿದ್ದವರು. ಒಂದು ಬಾರಿ ಶಾಸಕರಾಗಿದ್ದರು. ಬಿ.ವಿ.ನಾಯಕರು ಒಂದು ಬಾರಿ ಸಂಸದರಾಗಿ ಅಯ್ಕೆ ಆದವರು, ಇನ್ನೊಬ್ಬ ಮಗ RDCC Bank Member. ಇಷ್ಟೆಲ್ಲ ಸ್ಥಳೀಯ ಮಟ್ಟದಲ್ಲಿ ಅಧಿಕಾರ ಅನುಭವಿಸಿದವರು ಈಗ ತನಗೆ ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ರಾತ್ರೋರಾತ್ರಿ ಬಿಜೆಪಿಗೆ ವಲಸೆ ಹೋಗುವುದು ಸಮಂಜಸವಲ್ಲ.

ಮೇಲಾಗಿ ರಾಯಚೂರು ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಿ.ವಿ.ನಾಯಕರೇ ಅವರ ಪಕ್ಷದ ಅಭ್ಯರ್ಥಿಯಾದವರಿಗೆ ಟಿಕೆಟ್ (ಬಿ ಪಾರ್ಮ) ಕೊಡಬೇಕು ಅಂತದರಲ್ಲಿ, ‘ನನಗೆ ಟಿಕೆಟ್ ಸಿಗಲಿಲ್ಲ’ ಅಂತ ಬಿಜೆಪಿಗೆ ಹೋಗುವುದು ಯಾವ ನ್ಯಾಯ ಎಂದು ಅವರ ಕಾರ್ಯಕರ್ತರೆ ಕೇಳುತ್ತಿದ್ದಾರೆ. ಒಂದುಕಡೆ ದೇವದುರ್ಗದ ಶಿವನಗೌಡನ ರಾಜಕೀಯಕ್ಕೆ ಬಿ.ವಿ.ನಾಯಕ ತಲೆಬಾಗಿರುವ ಸುದ್ದಿಗಳು ಹೊರ ಬರುತ್ತಿದೆ. ಅಂದರೆ ಅಧಿಕಾರಕ್ಕಾಗಿ ನಾವು ಒಂದೇ ಪಕ್ಷದಲ್ಲಿ ಇದ್ದರೆ, ನಮಗೆ ಎದುರಾಳಿಗಳು ಯಾರು ಇರುವುದಿಲ್ಲ; ಎಲ್ಲರೂ ನಾವೆ, ನಮ್ಮ ಕುಟುಂಬದವರೇ ಅಧಿಕಾರದಲ್ಲಿ ಇರುತ್ತೇವೆ ಅನ್ನುವ ಮನೋಭಾವ ಹೊರಬಿದ್ದಿದೆ.

ಜೆಡಿಎಸ್ ಅಭ್ಯರ್ಥಿ ರಾಜ ವೆಂಕಟಪ್ಪ ನಾಯಕ

ಕಾಂಗ್ರೆಸ್‌ನಿಂದ ಕೆಲವು ಮರಿ ಪುಡಾರಿಗಳು, ಹತ್ತು ಓಟು ಹಾಕಿಸದವರು, ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿದ್ದಾರೆ ಎಂಬ ಸುದ್ದಿಕೂಡ ಹೊರಬಂದಿದೆ. ಇದರಿಂದ ಕಾಂಗ್ರೆಸ್‌ಗೆ ಏನು ದಕ್ಕೆಯಾಗುವುದಿಲ್ಲ ಅಂತಿದ್ದಾರೆ ಅವರ ಪಕ್ಷದ ಮುಖಂಡರುಗಳು. ಮಾನ್ವಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ರಾಜ ವೆಂಕಟಪ್ಪ ನಾಯಕ ತಾಲೂಕಿನ ತುಂಬಾ ಬಿರುಸಿನಿಂದ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಯೊಂದು ಹಳ್ಳಿಗೂ ಬೇಟಿ ನೀಡಿ ಮತ ಬೇಟೆಯಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ಗಿಂತ ಜೆಡಿಎಸ್ ಚುನಾವಣಾ ಆರ್ಭಟ ಮುಗಿಲು ಮುಟ್ಟಿದೆ. ಆದರೆ ಮುಂದಿನ ದಿನಗಳಲ್ಲಿ ಯಾರ ಅರ್ಭಟ ಹೆಚ್ಚಾಗುತ್ತದೆ ಎಂಬುದನ್ನು ಕಾದು ನೋಡಿ.! ನಮ್ಮ ನಿಖರವಾದ ವರದಿಯನ್ನೂ ನೋಡಿ.!!

ದೇಶ

ವರದಿ: ರಾಮು, ನೀರಮಾನ್ವಿ

ರಾಯಚೂರು: ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ನಾಳೆ ಫೆಬ್ರವರಿ 10 ರಂದು ಶ್ರೀ.ಯಲ್ಲಮ್ಮ ದೇವಿಯ ಜಾತ್ರೆಯು ಬಹಳ ಅದ್ದೂರಿಯಾಗಿ ನಡೆಯಲಿದೆ.

ಪ್ರತಿವರ್ಷವು ಈ ಜಾತ್ರೆಯ ಹೆಸರಿನಲ್ಲಿ ಅದಿಕಾರಿಗಳು ಟೆಂಡರ್ ಕರೆಯುತ್ತಾರೆ. ಆದರೆ, ಟೆಂಡರ್ ನಿಯಮಗಳು ಎಲ್ಲಿಯೂ ಪಾಲನೆ ಆಗುತ್ತಿಲ್ಲ. ಜಾತ್ರೆಗೆ ಬರುವ ಭಕ್ತಾದಿಗಳಿಂದ ಅಕ್ರಮವಾಗಿ ಒಂದಕ್ಕೆ ಎರಡು ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದು ದೊಡ್ಡ ದರೋಡೆಯಾಗಿದೆ. ಈ ವಿಷಯದ ಬಗ್ಗೆ ಜಿಲ್ಲಾ ಮತ್ತು ತಾಲ್ಲೂಕಿನ ಆಡಳಿತಕ್ಕೆ ಗೊತ್ತಿದ್ದರು, ಗುತ್ತಿಗೆದಾರರಿಗೆ ಅಕ್ರಮವಾಗಿ ಸಹಾಯ ಮಾಡುತ್ತಿದ್ದಾರೆ. ಶ್ರೀ.ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ನಡೆಯುವ ಈ ಕರಾಳ ದಂದೆಯಲ್ಲಿ, ಜಿಲ್ಲಾ ಮತ್ತು ತಾಲ್ಲೂಕಿನ ಅಧಿಕಾರಿಗಳಿಗೂ ಪಾಲು ಕೊಡುತ್ತೇವೆ ಎಂದು ಗುತ್ತಿಗೆದಾರರು ರಾಜಾರೋಷವಾಗಿ ಹೇಳಿಕೊಂಡು ತಿರುಗಾಡುವುದೇ ಇದಕ್ಕೆ ಸಾಕ್ಷಿಯಾಗಿದೆ. ಈ ಅಕ್ರಮ ದಂದೆ ಪ್ರತಿವರ್ಷವು ನಿರಂತರವಾಗಿ ನಡೆಯುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಬೇಕಾದವರು ಯಾರು?

ಪ್ರತಿವರ್ಷ ಯಲ್ಲಮ್ಮನ ದೇವಸ್ಥಾನಕ್ಕೆ ಕಾಣಿಕೆಯಾಗಿ ಬರುವ ಲಕ್ಷಾಂತರ ರೂಪಾಯಿಗಳು ಖಜಾನೆಯಲ್ಲಿ ಜಮಾವಣೆಯಾಗುತ್ತಿದ್ದರು, ಇಲ್ಲಿ ಶೌಚಾಲಯ, ತಂಗುದಾಣ, ಕುಡಿಯುವ ನೀರಿನ ಸೌಲಭ್ಯಗಳು ಮರೀಚಿಕೆಯಾಗಿದೆ. ಸ್ಥಳೀಯ ಆಡಳಿತ ಮಂಡಳಿ ಭಕ್ತಾಧಿಗಳಿಗೆ ಮಾಡಿಕೊಡಬೇಕಾದ ಮೂಲಭೂತ ಸೌಲಭ್ಯಗಳನ್ನು ಮಾಡುವುದರಲ್ಲಿಯೂ ಅಧಿಕಾರಿಗಳು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ.

ಮದ್ಯ, ಮಾಂಸ ನೀಷೇಧ ವಿದ್ದರೂ ದೇವಸ್ಥಾನದ ಅಕ್ಕ ಪಕ್ಕದಲ್ಲಿ ಪ್ರಾಣಿ ಬಲಿ ನಡೆಯುತ್ತಿದೆ. ಇದಕ್ಕೆ ಅಧಿಕಾರಿಗಳು ಹಾಗೂ ದೇವಸ್ಥಾನದ ಪ್ರಮುಖರು ಕಣ್ಣು ಮುಚ್ಚಿ ಸಹಕಾರ ನೀಡುತ್ತಿದ್ದಾರೆ. ಕಾನೂನನ್ನು ಗಾಳಿಗೆ ತೂರುವುದೆಲ್ಲ ಇವರಿಗೆ ಹಾಲು ಅನ್ನ ಸವಿದಂಗೆ.

ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಸುತ್ತಮುತ್ತ ನೆಡೆಯುವ ಅಕ್ರಮ ಚಟುವಟಿಕೆಗಳನ್ನು ಸ್ಥಳೀಯ ಆಡಳಿತ ಮಂಡಳಿ ಕೂಡಲೇ ತಡೆಗಟ್ಟಿ, ಸೇರಲಿರುವ ಲಕ್ಷಾಂತರ ಭಕ್ತಾಧಿಗಳಿಗೆ ಅನುಕೂಲ ಮಾಡಿಕೊಡಬೇಕೆಂಬುದು ನೀರಮಾನ್ವಿ ಗ್ರಾಮ ಜನರ ಆಶಯವಾಗಿದೆ.