ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನೋಟು ಅಮಾನ್ಯೀಕರಣ Archives » Dynamic Leader
October 22, 2024
Home Posts tagged ನೋಟು ಅಮಾನ್ಯೀಕರಣ
ರಾಜಕೀಯ

ಭಾರತದಲ್ಲಿ ರೂ.2000 ನೋಟುಗಳನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದೆ. ಅದರಂತೆ ಭಾರತದಲ್ಲಿ ರೂ.2000 ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಬ್ಯಾಂಕಿಂಗ್ ಸೇವೆಗಳನ್ನು ಬಳಸುವ ಸಾರ್ವಜನಿಕರಿಗೆ ರೂ.2000 ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.

“ಜನರು ತಮ್ಮ ಬಳಿಯಿರುವ ರೂ.2000 ನೋಟುಗಳನ್ನು ಸೆಪ್ಟೆಂಬರ್ 30ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಬಹುದು. ಸೆಪ್ಟೆಂಬರ್ 30ರ ನಂತರ ಭಾರತದಲ್ಲಿ ರೂ.2000 ನೋಟುಗಳ ವ್ಯವಹಾರ ಇರುವುದಿಲ್ಲ” ಎಂದು ಆರ್‌ಬಿಐ ಘೋಷಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, “ಬಿಜೆಪಿ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಬೇಸರದ ಸಂಗತಿ” ಎಂದು ವ್ಯಂಗ್ಯವಾಡಿದ್ದಾರೆ.

“ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು.

2016ರಲ್ಲೇ ರೂ.2000 ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದಿದರೆ ಅದನ್ನು ಏಕೆ ಪರಿಚಯಿಸಿದರು? ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರೆ.

 

ದೇಶ

2000 ರೂಪಾಯಿ ನೋಟು ಚಲಾವಣೆಗೆ ಬಂದಂದಿನಿಂದ ಈ ನೋಟಿನ ಸುತ್ತ ಹಲವು ವಿವಾದಗಳು ಹರಡುತ್ತಲೇ ಇವೆ. ಇತ್ತೀಚೆಗೆ ಯಾವುದೇ ಎಟಿಎಂನಿಂದ 2000 ರೂಪಾಯಿ ಸಿಗುತ್ತಿಲ್ಲ. ಒಂದುವೇಳೆ 2000 ರೂಪಾಯಿ ನಮಗೆ ಸಿಕ್ಕಿ ಅದನ್ನು ಅಂಗಡಿಗಳಿಗೆ ಕೊಟ್ಟರೆ, ನಮ್ಮನ್ನು ಆಶ್ಚರ್ಯದಿಂದ ಮತ್ತು ಅನುಮಾನದಿಂದ ಕಾಣುತ್ತಾರೆ.

ಈ ಹಿನ್ನಲೆಯಲ್ಲಿ ಸಂಸತ್ತಿನಲ್ಲಿ ರಾಜ್ಯಸಭಾ ಸದಸ್ಯೆ ರಜನಿ ಪಾಟೀಲ್ ಅವರು 2000 ರೂಪಾಯಿ ನೋಟಿನ ಬಗ್ಗೆ ಸರ್ಕಾರ ಮತ್ತು ಹಣಕಾಸು ಸಚಿವಾಲಯಕ್ಕೆ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ‘ಆರ್‌ಬಿಐ ಹೊಸ 2000 ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಲು ಹೊರಟಿದೆಯೇ ಮತ್ತು 2000 ರೂಪಾಯಿ ನೋಟುಗಳನ್ನು ವಿತರಿಸದಂತೆ ಸರ್ಕಾರ ಬ್ಯಾಂಕ್‌ಗಳಿಗೆ ಆದೇಶಿಸಿದೆಯೇ ಎಂದು ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಕ್ಕೆ ಹಣಕಾಸು ಸಚಿವಾಲಯವು ಉತ್ತರ ನೀಡಿದೆ.

ರಜನಿ ಪಾಟೀಲ್

ಇದಕ್ಕೆ ಉತ್ತರ ನೀಡಿರುವ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ‘ಭಾರತೀಯ ರಿಸರ್ವ್ ಬ್ಯಾಂಕ್ 2016ರಲ್ಲಿ ಹೊಸ 2000 ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಿತು. ಅಲ್ಲದೆ, 2000 ರೂಪಾಯಿ ನೋಟುಗಳನ್ನು ವಿತರಿಸದಂತೆ ಬ್ಯಾಂಕ್‌ಗಳಿಗೆ ಸರ್ಕಾರದಿಂದ ಯಾವುದೇ ಸೂಚನೆ ನೀಡಲಾಗಿಲ್ಲ’ ಎಂದು ಅವರು ಹೇಳಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ‘ಬ್ಯಾಂಕ್ ಎಟಿಎಂಗಳ ಮೂಲಕ 2000 ರೂಪಾಯಿ ನೋಟುಗಳನ್ನು ವಿತರಿಸುವುದಕ್ಕೆ ಆರ್‌ಬಿಐ ಯಾವುದೇ ನಿಷೇಧ ಹೇರಿಲ್ಲ. ಅಂತಹ ಯಾವುದೇ ನಿರ್ದೇಶನವನ್ನು ಬ್ಯಾಂಕ್‌ಗಳಿಗೆ ನೀಡಲಾಗಿಲ್ಲ. ಆರ್‌ಬಿಐ ವಾರ್ಷಿಕ ವರದಿಯ ಪ್ರಕಾರ, 2019-20ರ ಆರ್ಥಿಕ ವರ್ಷದಿಂದ 2000 ರೂಪಾಯಿ ನೋಟುಗಳಿಗೆ ಯಾವುದೇ ಬೇಡಿಕೆ ಇಲ್ಲದ ಕಾರಣದಿಂದ, 2000 ರೂಪಾಯಿ ನೋಟುಗಳನ್ನು ಮುದ್ರಿಸಿಲ್ಲ’ ಎಂದರು.

2000 ರೂಪಾಯಿ ನೋಟಿನ ಬಗ್ಗೆ ನಾನಾ ಬಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವಾಗ, ‘ಆ ಅಧಿಕ ಮೌಲ್ಯದ ನೋಟುಗಳನ್ನು ನಮ್ಮ ಕೈಯಲ್ಲಿ ಹೆಚ್ಚಾಗಿ ಇಟ್ಟುಕೊಳ್ಳುವ ಅಗತ್ಯವಿಲ್ಲ’ ಎಂದು ಜನ ಅಭಿಪ್ರಾಯಪಡುತ್ತಿದ್ದಾರೆ.