ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಪತ್ರಕರ್ತರು Archives » Dynamic Leader
October 23, 2024
Home Posts tagged ಪತ್ರಕರ್ತರು
ದೇಶ

ನವದೆಹಲಿ: ಪತ್ರಕರ್ತರಿಗೆ ನ್ಯಾಯಯುತ ವೇತನ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸಿಪಿಎಂ ಸಂಸದ ಶಿವದಾಸನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಶಿವದಾಸನ್, “ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ಪ್ರಕಟಿಸಿದ ಪ್ರೆಸ್ ಫ್ರೀಡಂ ಇಂಡೆಕ್ಸ್‌ನ 2024ರ ಆವೃತ್ತಿಯಲ್ಲಿ 180 ದೇಶಗಳ ಪೈಕಿ ಭಾರತವು 159ನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕಿಂತ ಕೊಂಚ ಸುಧಾರಣೆ ಕಂಡಿದ್ದರೂ ಇತ್ತೀಚಿನ ದಿನಗಳಲ್ಲಿ ಭಾರತದ ಪ್ರದರ್ಶನ ಕಳಪೆಯಾಗಿಯೇ ಮುಂದುವರಿದಿದೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಸೇರಿದಂತೆ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪತ್ರಕರ್ತರನ್ನು ಬಂಧಿಸಲಾಗುತ್ತದೆ. ಪತ್ರಕರ್ತರಾದ ಪ್ರಬೀರ್ ಪುರ್ಕಾಯಸ್ಥ ಮತ್ತು ಸಿದ್ದಿಕ್ ಕಪ್ಪನ್ ಅವರ ಬಂಧನಗಳು ಇದಕ್ಕೆ ಉದಾಹರಣೆಗಳು. ಕಳೆದ ಹತ್ತು ವರ್ಷಗಳಲ್ಲಿ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಸೇರಿದಂತೆ ಭಾರತದ ವಿವಿಧೆಡೆ 100ಕ್ಕೂ ಹೆಚ್ಚು ಪತ್ರಕರ್ತರು ಹತ್ಯೆಯಾಗಿದ್ದಾರೆ.

ಭಾರತದಲ್ಲಿ ಹೆಚ್ಚು ಶೋಷಿತ ಗುಂಪುಗಳಲ್ಲಿ ಪತ್ರಕರ್ತರೂ ಸೇರಿದ್ದಾರೆ. ಇವರಿಗೆ ಸರಿಯಾದ ವೇತನ ನೀಡಲು ಸರ್ಕಾರ ಕ್ರಮ ಕೈಗೊಂಡಿಲ್ಲ. ಪತ್ರಕರ್ತರಿಗೆ ಸರಿಯಾದ ಸಂಭಾವನೆ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.