ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಪತ್ರಿಕಾ ಸ್ವಾತಂತ್ರ್ಯ Archives » Dynamic Leader
October 23, 2024
Home Posts tagged ಪತ್ರಿಕಾ ಸ್ವಾತಂತ್ರ್ಯ
ದೇಶ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ‘ನ್ಯೂಸ್ ಕ್ಲಿಕ್’ ಸಂಸ್ಥಾಪಕ ಮತ್ತು ಸಂಪಾದಕರ ಬಂಧನ ಸರಿಯಾದ ಕ್ರಮವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ಅಕ್ಟೋಬರ್ 3, 2023 ರಂದು, ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್’ ಸುದ್ದಿ ಜಾಲತಾಣದ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಚೀನಾದಿಂದ ಹಣ ಪಡೆದ ಆರೋಪದಡಿ ಬಂಧಿಸಲಾಯಿತು. ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದರ ವಿರುದ್ಧ ದಾಖಲಾಗಿದ್ದ ಮೊಕದ್ದಮೆಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು (ಮೇ 15) ನೀಡಿರುವ ತಮ್ಮ ತೀರ್ಪಿನಲ್ಲಿ, ಪ್ರಬೀರ್ ಪುರಕಾಯಸ್ಥನ ಬಂಧನ ಮತ್ತು ಸೆರೆವಾಸವು ಸರಿಯಾದ ಕ್ರಮವಲ್ಲ. ಅವರ ಬಂಧನಕ್ಕೆ ಕಾರಣವನ್ನು ಅವರಿಗಾಗಲಿ ಅಥವಾ ಅವರ ವಕೀಲರಿಗಾಗಲಿ ಬಂಧನಕ್ಕೆ ಮುನ್ನ ಹೇಳಿರಲಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್, ಅವರನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶ ಮಾಡಿದೆ.

ದೇಶ

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಹೆಸರಾಗಿರುವ ಭಾರತ ಪ್ರಸ್ತುತ ತನ್ನ ಪ್ರಜಾಪ್ರಭುತ್ವವನ್ನು ಕಳೆದುಕೊಳ್ಳುತ್ತಿದೆ!

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದಂದು (03.05.2024), ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕವು (Press Freedom Index) ಮಾಧ್ಯಮ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಬಿಜೆಪಿ ಸರ್ಕಾರದ ಕ್ರಮವನ್ನು ಶ್ರೇಣೀಕರಿಸಿದೆ.

Reporters Without Borders ಎಂಬ ಸಂಸ್ಥೆ ಪ್ರಕಟಿಸಿದ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕವು, ಪ್ರಜಾಪ್ರಭುತ್ವವನ್ನು ಕಳೆದುಕೊಳ್ಳುತ್ತಿರುವ ದೇಶಗಳನ್ನು ಶ್ರೇಣೀಕರಿಸಿದೆ. ಒಟ್ಟು 176 ದೇಶಗಳ ಪೈಕಿ ಭಾರತ 159ನೇ ಸ್ಥಾನದಲ್ಲಿದೆ. “2014ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಅಂಬಾನಿ, ಅದಾನಿಯೊಂದಿಗೆ ಸೇರಿ ಮಾಧ್ಯಮಗಳನ್ನು ತನ್ನ ಲಾಭಕ್ಕೆ ಬಳಸಿಕೊಂಡಿದ್ದು ಇದಕ್ಕೆ ಕಾರಣವಾಗಿದೆ.

ಇದರ ಪರಿಣಾಮದಿಂದಾಗಿ ಅಂಬಾನಿಯ ರಿಲಯನ್ಸ್ ಗ್ರೂಪ್ ಒಡೆತನದ ಸುಮಾರು 70 ಮಾಧ್ಯಮಗಳು ಮತ್ತು ಅದಾನಿ ಒಡೆತನದ NDTV ಬಿಜೆಪಿಯ ‘Go(mo)di Media’ಗಳಾಗಿ ಪರಿವರ್ತನೆಗೊಂಡಿವೆ. ಇಂತಹ ಮಾಧ್ಯಮಗಳಿಂದ ಸುಮಾರು 80 ಕೋಟಿಗೂ ಹೆಚ್ಚು ಜನರು ಸುಳ್ಳು ಸುದ್ದಿಗಳನ್ನು ಓದುತ್ತಿದ್ದಾರೆ.

ಅಲ್ಲದೆ, ಭಾರತದಲ್ಲಿ ಪತ್ರಕರ್ತರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ. ಮಾಧ್ಯಮಗಳ ತಟಸ್ಥತೆ ಪ್ರಶ್ನಾರ್ಹವಾಗಿದೆ. ಪತ್ರಿಕಾ ಸ್ವಾತಂತ್ರ್ಯವೂ ಪ್ರಶ್ನಾರ್ಹವಾಗಿದೆ” ಎಂದು RSF ಹೇಳಿದೆ. ಶ್ರೇಯಾಂಕ ಪಟ್ಟಿಯಲ್ಲಿ ಭಾರತಕ್ಕಿಂತ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ಪಾಕಿಸ್ತಾನ, ನೇಪಾಳ ಮತ್ತು ಮಾಲ್ಡೀವ್ಸ್ ಹೆಚ್ಚು ಪತ್ರಿಕಾ ಸ್ವಾತಂತ್ರ್ಯವನ್ನು ಉತ್ತೇಜಿಸುವ ದೇಶಗಳಾಗಿವೆ ಎಂದು RSF ಸೂಚ್ಯಂಕ ಬಹಿರಂಗಪಡಿಸಿದೆ.

ಈ ಬಗ್ಗೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಪತ್ರಿಕಾ ಸ್ವಾತಂತ್ರ್ಯ ತೀವ್ರ ಹದಗೆಟ್ಟಿದೆ. ಗೌರಿ ಲಂಕೇಶ್, ಕಲಬುರ್ಗಿ ಸೇರಿದಂತೆ ಹಿರಿಯ ಪತ್ರಕರ್ತರನ್ನು ಹತ್ಯೆ ಮಾಡಲಾಗಿದೆ. ಸಿದ್ದಿಕ್ ಕಪ್ಪನ್, ರಾಣಾ ಅವರಂತಹ ಪ್ರಾಮಾಣಿಕ ಪತ್ರಕರ್ತರಿಗೆ ಬೆದರಿಕೆ ಹಾಕಿ ಸತ್ಯವನ್ನು ಮರೆಮಾಚಲಾಗುತ್ತಿದೆ.

ಇದು ಭಾರತದ ಪ್ರಜಾಪ್ರಭುತ್ವವನ್ನು ಹದಗೆಡಿಸಿದೆ. ಆದ್ದರಿಂದ ನಾವು ಪತ್ರಕರ್ತರ ಸ್ವಾತಂತ್ರ್ಯ ರಕ್ಷಣೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಸ್ಥಾಪಿಸಲು ಕ್ರಮಕೈಗೊಳ್ಳುತ್ತೇವೆ’’ ಎಂದು ಹೇಳಿದ್ದಾರೆ.

ದೇಶ

‘ನ್ಯೂಸ್ ಕ್ಲಿಕ್’ ಸಂಸ್ಥೆ ಚೀನಾದಿಂದ ಹಣ ಪಡೆದಿದೆ ಎಂದು ಅಮೆರಿಕದ ಮಾಧ್ಯಮ ಸಂಸ್ಥೆ ‘ನ್ಯೂಯಾರ್ಕ್ ಟೈಮ್ಸ್’ ಸುಮಾರು 2 ತಿಂಗಳ ಹಿಂದೆ ಆಧಾರರಹಿತ ವರದಿ ಪ್ರಕಟಿಸಿತ್ತು. ಅದರ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ (ಇಡಿ) ಸೆಪ್ಟೆಂಬರ್ 2021 ರಲ್ಲಿ ‘ನ್ಯೂಸ್ ಕ್ಲಿಕ್’ ಮಾಧ್ಯಮ ಕಚೇರಿ ಮೇಲೆ ದಾಳಿ ನಡೆಸಿತು. ಮನಿ ಲಾಂಡರಿಂಗ್ ತಡೆ ಕಾಯಿದೆ ಅಡಿಯಲ್ಲಿ, ‘ನ್ಯೂಸ್ ಕ್ಲಿಕ್’ ಕಂಪನಿಯ ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರ ಮಾಲೀಕತ್ವದಲ್ಲಿನ ರೂ.4.5 ಕೋಟಿ ಮೌಲ್ಯದ ಮನೆ ಮತ್ತು ರೂ. 41 ಲಕ್ಷ ಸ್ಥಿರ ಠೇವಣಿಗಳನ್ನೂ ಸ್ಥಗಿತಗೊಳಿಸಿತು.

ಈ ಹಿನ್ನಲೆಯಲ್ಲಿ, ಅಕ್ಟೋಬರ್ 3 ರಂದು ‘ನ್ಯೂಸ್ ಕ್ಲಿಕ್’ ಮಾಧ್ಯಮ ಮತ್ತು ಅದರ ಸಂಬಂಧಿತ ಪತ್ರಕರ್ತರಿಗೆ ಸೇರಿದ 100 ಸ್ಥಳಗಳಲ್ಲಿ 12 ಗಂಟೆಗಳ ಕಾಲ ದಾಳಿ ನಡೆಸಿದ ದೆಹಲಿ ಪೊಲೀಸರು, ಸೆಲ್ ಫೋನ್, ಲ್ಯಾಪ್ ಟಾಪ್, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಇತ್ಯಾದಿಗಳನ್ನು ಜಪ್ತಿ ಮಾಡಿದ್ದಾರೆ. ‘ನ್ಯೂಸ್ ಕ್ಲಿಕ್’ ನೌಕರರು ಮತ್ತು 9 ಪತ್ರಕರ್ತರಿಗೆ 25 ಪ್ರಶ್ನೆಗಳ ಪಟ್ಟಿಯನ್ನು ನೀಡಿ  ತನಿಖೆ ನಡೆಸಲಾಯಿತು.

ಇದನ್ನೂ ಓದಿ: ಜನರ ಮನಸ್ಥಿತಿ ಬದಲಾಗಿದೆ; ಮುಂದಿನ ದಿನಗಳಲ್ಲಿ ಕುಟುಂಬ ಪ್ರಾಬಲ್ಯವಿರುವ ರಾಜ್ಯ ಪಕ್ಷಗಳು ನೆಲಕಚ್ಚುವುದು ಖಚಿತ!

ಇದಕ್ಕೂ ಮುನ್ನ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿಕೊಂಡ ದೆಹಲಿ ಪೊಲೀಸರು, 12 ಗಂಟೆಗಳ ದಾಳಿ ಮತ್ತು ವಿಚಾರಣೆಯ ನಂತರ, ‘ನ್ಯೂಸ್ ಕ್ಲಿಕ್’ ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ರಾತ್ರಿ ಬಂಧಿಸಲಾಗಿದೆ.

‘ನ್ಯೂಸ್ ಕ್ಲಿಕ್’ ಮೇಲಿನ ದಾಳಿಯು ದೇಶಾದ್ಯಂತ ಆಘಾತವನ್ನು ಉಂಟುಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ವಿರೋಧ ಪಕ್ಷಗಳು ಮತ್ತು ಭಾರತೀಯ ಪತ್ರಕರ್ತರ ಸಂಘ, ಪತ್ರಕರ್ತರ ರಾಷ್ಟ್ರೀಯ ಒಕ್ಕೂಟ, ದೆಹಲಿ ಪತ್ರಕರ್ತರ ಒಕ್ಕೂಟ ಮತ್ತು ಕೇರಳ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಮುಂತಾದ ಸಂಘಟನೆಗಳು ‘ಇದು ಮೋದಿ ಸರ್ಕಾರದ ದಬ್ಬಾಳಿಕೆ ವಿಧಾನ’ ಎಂದು ಖಂಡಿಸಿವೆ.

ಇದನ್ನೂ ಓದಿ: ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ: ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರು, “ಚೀನಾದ ಕಂಪನಿಗಳಿಂದ ಭಾರಿ ಹಣ ಪಡೆದಿರುವ ‘ಪಿಎಂ ಕೇರ್ಸ್’ (PM CARES) ನ ವ್ಯವಸ್ಥಾಪಕರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ” ಎಂದು ಪ್ರಶ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ, “ಮೋದಿ ಸರಕಾರವೇ ಚೀನಾಕ್ಕೆ ಬೆಂಬಲವಾಗಿ ವರ್ತಿಸುತ್ತಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಈ ಬಗ್ಗೆ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ‘ಎಕ್ಸ್’ ಪೇಜ್ ನಲ್ಲಿ, “ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು 20 ಬಾರಿ ಭೇಟಿಯಾಗಿದ್ದಾರೆ. ಜೂನ್ 19, 2020 ರಂದು ಚೀನಾ ಸೇನೆಯು ಗಡಿಯಲ್ಲಿ ಅತಿಕ್ರಮಣ ಮಾಡಿದಾಗ ಅದರ ಬಗ್ಗೆ ಅವರು ಯಾವುದೇ ಪ್ರಶ್ನೆಗಳನ್ನು ಎತ್ತಲಿಲ್ಲ. ಪಿಎಂ ಕೇರ್ಸ್‌ಗಾಗಿ ಚೀನಾ ಕಂಪನಿಗಳಿಗೆ ಕೋಟಿಗಟ್ಟಲೆ ಹಣ ನೀಡಲು ಮೋದಿ ಅವಕಾಶ ನೀಡಿದ್ದರು. ಹಾಗಾದರೆ ವಿದೇಶಿ ಶಕ್ತಿಗಳು ಯಾರನ್ನು ನಿಯಂತ್ರಿಸುತ್ತಿವೆ?” ಎಂದು ಪ್ರಶ್ನಿಸಿ ಆರೋಪಿಸಿದ್ದಾರೆ.