ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಪಾಲಕ್ಕಾಡ್ Archives » Dynamic Leader
October 22, 2024
Home Posts tagged ಪಾಲಕ್ಕಾಡ್
ರಾಜಕೀಯ

ಪಾಲಕ್ಕಾಡ್: ಆರ್‌ಎಸ್‌ಎಸ್‌ನ 3 ದಿನಗಳ ಸಮಾವೇಶ ನಿನ್ನೆ ಕೇರಳದಲ್ಲಿ ಆರಂಭವಾಗಿದೆ. ಇದರಲ್ಲಿ ಸಮಾಜ ಸುಧಾರಣೆ, ಬಾಂಗ್ಲಾದೇಶ ಸಮಸ್ಯೆ ಕುರಿತು ಚರ್ಚಿಸಲು ಯೋಜಿಸಲಾಗಿದೆ.

ನಿನ್ನೆ ಕೇರಳದ ಪಾಲಕ್ಕಾಡ್ (Palakkad)ನಲ್ಲಿ ಆರ್‌ಎಸ್‌ಎಸ್‌ನ (RSS) ಅಖಿಲ ಭಾರತ ಸಮನ್ವಯ ಸಭೆ ಆರಂಭವಾಗಿದೆ. ರಾಷ್ಟ್ರೀಯ ಮಟ್ಟದ ವಾರ್ಷಿಕ ಸಭೆ ಕೇರಳದಲ್ಲಿ ನಡೆಯುತ್ತಿರುವುದು ಇದೇ ಮೊದಲು. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ಆರ್‌ಎಸ್‌ಎಸ್‌ನ ಸಹಬಾಗಿ ಸಂಘಟನೆಗಳಾದ 32 ಸಂಘ / ಸಂಸ್ಥೆಗಳ 320 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್ (Mohan Bhagwat) ಮತ್ತು 6 ಜಂಟಿ ಪ್ರಧಾನ ಕಾರ್ಯದರ್ಶಿಗಳೂ ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಈ ಸಭೆಯ ಆರಂಭದಲ್ಲಿ ವಯನಾಡು ಭೂಕುಸಿತದ ವಿವರಗಳು ಮತ್ತು ಆರ್‌ಎಸ್‌ಎಸ್ ಸ್ವಯಂಸೇವಕರು ಮಾಡಿದ ಸಹಾಯದ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಶತಮಾನೋತ್ಸವ (Centenary) ಆಚರಣೆ: ಆರ್‌ಎಸ್‌ಎಸ್ ಸಂಘಟನೆಯ ಶತಮಾನೋತ್ಸವ ಸಮಾರಂಭ ಮುಂದಿನ ವರ್ಷ ಸೆಪ್ಟೆಂಬರ್ ನಲ್ಲಿ ನಡೆಯಲಿದ್ದು, ಮುಂದಿನ ಒಂದು ವರ್ಷಕ್ಕೆ ಸಮಾಜ ಸುಧಾರಣೆ ಮತ್ತು ದೇಶ ನಿರ್ಮಾಣಕ್ಕೆ ಸಂಬಂಧಿಸಿದ 5 ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.

ಶೇಖ್ ಹಸೀನಾ (Sheikh Hasina) ಅವರನ್ನು ಬಾಂಗ್ಲಾದೇಶದ ಪ್ರಧಾನಿ ಹುದ್ದೆಯಿಂದ ಹೊರಹಾಕಿದ ನಂತರ, ಆ ದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲಿನ ಹಲ್ಲೆ ಹಾಗೂ ಅಲ್ಲಿನ ದೇವಾಲಯಗಳ ಮೇಲಿನ ದಾಳಿ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ (BJP) 240 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಇದರಿಂದ ಸರಳ ಬಹುಮತ ಸಿಗಲಿಲ್ಲ. ಆದಾಗ್ಯೂ, ಸಮ್ಮಿಶ್ರ ಪಕ್ಷಗಳ ಬೆಂಬಲದೊಂದಿಗೆ ಸತತ 3ನೇ ಅವಧಿಗೆ ಸರ್ಕಾರ ರಚಿಸಿದೆ. ಕಳೆದ 2 ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿ ಕಡಿಮೆ ಸ್ಥಾನ ಗಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಸಂಘರ್ಷವೇ ಕಾರಣ ಎಂದೂ ಹೇಳಲಾಗುತ್ತಿದೆ. ಈ ಸನ್ನಿವೇಶದಲ್ಲಿ ಈ ಸಭೆ ನಡೆಯುತ್ತಿದೆ.

ದೇಶ

ತಿರುವನಂತಪುರಂ: ಕೇಂದ್ರದಲ್ಲಿ 3ನೇ ಬಾರಿಗೆ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಘಟನೆ ಸಮಾಲೋಚನೆ ನಡೆಸಲು ನಿರ್ಧರಿಸಿವೆ. ಜುಲೈ 31 ರಿಂದ ಆಗಸ್ಟ್ 2ರ ವರೆಗೆ ನಡೆಯುವ ಈ ಸಮಾಲೋಚನಾ ಸಭೆಯಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿತ್ತು. ಸಮ್ಮಿಶ್ರ ಪಕ್ಷಗಳ ಬೆಂಬಲದೊಂದಿಗೆ ಕೇಂದ್ರದಲ್ಲಿ 3ನೇ ಅವಧಿಗೆ ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿದ್ದಾರೆ. ಕೇರಳದಿಂದ ಪ್ರಥಮ ಬಾರಿಗೆ ಸುರೇಶ್ ಗೋಪಿ ಬಿಜೆಪಿ ಪರವಾಗಿ 74 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ತ್ರಿಶೂರ್ ಪೂರಂ ನಡೆಯುವ ಈ ನಗರದಲ್ಲಿ ಬಿಜೆಪಿಯ ಗೆಲುವನ್ನು ಆರ್‌ಎಸ್‌ಎಸ್‌ ಪ್ರಮುಖವಾಗಿ ಪರಿಗಣಿಸುತ್ತಿದೆ. ಆರ್‌ಎಸ್‌ಎಸ್‌ಗೆ ಕೇರಳದಲ್ಲಿ ಹಲವು ಶಾಖೆಗಳಿವೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪದಾಧಿಕಾರಿಗಳು ವರ್ಷಕ್ಕೊಮ್ಮೆ ಸಭೆ ಸೇರಿ ಮಾತನಾಡುವುದು ವಾಡಿಕೆ.

ಈ ಹಿನ್ನೆಲೆಯಲ್ಲಿ, ಜುಲೈ 31 ರಿಂದ ಆಗಸ್ಟ್ 2 ರವರೆಗೆ 3 ದಿನಗಳ ಕಾಲ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪದಾಧಿಕಾರಿಗಳ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಪಾಲಕ್ಕಾಡ್‌ನಲ್ಲಿ ನಡೆಯುವ ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ರಾಜಕೀಯ

ಪಾಲಕ್ಕಾಡ್: ಭಾರತದ ಶತ್ರು ಚೀನಾ ದೇಶಕ್ಕೆ ಆರ್ಥಿಕ ಅವಕಾಶವನ್ನು ಒದಗಿಸುವುದು ಕೇರಳ ಸರ್ಕಾರದ ನೀತಿಯಾಗಿದೆ. ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬ ಆರೋಪಿಸಿದ್ದಾರೆ.

ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ ಆಡಳಿತ ನಡೆಯುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರದ ಒಂಬತ್ತನೇ ವಾರ್ಷಿಕೋತ್ಸವದ ಅಂಗವಾಗಿ. ನಿನ್ನೆ ಕೇರಳದ ಪಾಲಕ್ಕಾಡ್‌ಗೆ ಬಂದಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬ ಸಭೆಯನ್ನು ಉದ್ದೇಶಿಸಿ ಮಾತನಾಡಿದರು:

“ಕೇರಳ ರಾಜ್ಯ ಸರ್ಕಾರದ ‘ಕೆ-ಪೋನ್’ ಎಂಬ ಹೈಸ್ಪೀಡ್ ಇಂಟರ್ನೆಟ್ ಸೇವಾ ಯೋಜನೆಗಾಗಿ, ಚೀನಾದಿಂದ ಕೇಬಲ್ ಖರೀದಿಸಿದ್ದಾರೆ. ನಮ್ಮ ದೇಶದಲ್ಲಿ ಸಿಗುವುದಕ್ಕಿಂತ ಐದಾರು ಪಟ್ಟು ಹೆಚ್ಚು ಬೆಲೆ ಕೊಟ್ಟು ಅದನ್ನು ಖರೀದಿಸಿದ್ದಾರೆ.

ಸ್ವಾವಲಂಬಿ ಭಾರತದ ಪರಿಕಲ್ಪನೆಯೊಂದಿಗೆ ಪ್ರಧಾನಿ ಮುನ್ನಡೆಯುತ್ತಿರುವಾಗ, ಕೇರಳ ಸರ್ಕಾರ ಚೀನಾ ದೇಶಕ್ಕೆ ಸಹಾಯ ಮಾಡುತ್ತಿದೆ.

ನರೇಂದ್ರ ಮೋದಿ ಸರ್ಕಾರ ಒಂಬತ್ತು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ, ಭಾರತವು ವಿಶ್ವದ ಅಗ್ರ ಐದು ಆರ್ಥಿಕ ಶಕ್ತಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ” ಎಂದು ಹೇಳಿದರು.