ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಪೊಲೀಸ್ Archives » Dynamic Leader
October 18, 2024
Home Posts tagged ಪೊಲೀಸ್
ದೇಶ

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ?

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಮೇಲೆ ಪ್ರತಿದಿನ ದಾಳಿಗಳು ನಡೆಯುತ್ತಿವೆ. ಸಿಎಎ (CAA) ಹಾಗೆ ಕಠಿಣ ಕಾನೂನುಗಳನ್ನು ತರುವ ಮೂಲಕ ಅಲ್ಪಸಂಖ್ಯಾತರನ್ನು ಭಾರತದಿಂದ ಪ್ರತ್ಯೇಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಒಂದೆಡೆಯಾದರೆ ಮತ್ತೊಂದು ಕಡೆ ಹಿಂದೂ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಹಿಂಸಾಚಾರವನ್ನು ಅನಾವರಣಗೊಳಿಸುತ್ತಿವೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಹೆಚ್ಚು ಧಾರ್ಮಿಕ ಸಂಘರ್ಷಗಳಿವೆ. ಆದರೆ ಈಗ ಬಿಜೆಪಿಯೇತರ ರಾಜ್ಯಗಳಲ್ಲಿ ಕೂಡ ಧಾರ್ಮಿಕ ಸಂಘರ್ಷಗಳು ನಡೆಯುತ್ತಿವೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಸುದೀರ್ಘ ಕಾಲ ಆಡಳಿತ ನಡೆಸುತ್ತಿರುವ ಹಾಗೂ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ, ಕಳೆದ ವರ್ಷ ನಡೆದ ಕ್ರೂರ ಘಟನೆಗೆ ಸಂಬಂಧಿಸಿದಂತೆ ತೀರ್ಪೊಂದು ಇದೀಗ ಹೊರಬಿದ್ದಿದೆ.

ಅಕ್ಟೋಬರ್ 2022ರಲ್ಲಿ, ಗುಜರಾತ್‌ನ ಖೇಡಾ ಜಿಲ್ಲೆಯ ಉಂಡೆಲಾ ಗ್ರಾಮದಲ್ಲಿ ಮೂವರು ಯುವಕರು ಪೊಲೀಸರಿಗೆ ಸಿಕ್ಕಿಬಿದ್ದರು. ಕಾರ್ಯಕ್ರಮವೊಂದರಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾದಾಗ ಹಲವರು ಘಟನೆಯನ್ನು ಖಂಡಿಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಪ್ರಕರಣದಲ್ಲಿ, ‘ಲಾಠಿಯಿಂದ ಹೊಡೆಯುವುದು ಹಿಂಸೆಯಾಗುವುದಿಲ್ಲ; ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ’ ಎಂದು ಘಟನೆಯಲ್ಲಿ ಭಾಗಿಯಾದ ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದು ವಿವಾದಕ್ಕೀಡಾಗಿತ್ತು.

ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಪೊಲೀಸರ ಅಪರಾಧ ಸಾಬೀತಾಗಿದ್ದು, ಕಳೆದ ವರ್ಷ (2023) ಅಕ್ಟೋಬರ್‌ನಲ್ಲಿ ತಪ್ಪಿತಸ್ಥರಾದ 4 ಪೊಲೀಸರಿಗೆ ಶಿಕ್ಷೆ ಪ್ರಕಟಿಸಲಾಗಿತ್ತು. ಅದರಂತೆ ಗುಜರಾತ್ ಹೈಕೋರ್ಟ್ ಅವರಿಗೆ 14 ದಿನಗಳ ಜೈಲು ಶಿಕ್ಷೆ ಮತ್ತು ರೂ.2,000 ದಂಡ ವಿಧಿಸಿ ತೀರ್ಪು ನೀಡಿತು.

ಆದರೆ ಗುಜರಾತ್ ನ್ಯಾಯಾಲಯದ ತೀರ್ಪಿನ ವಿರುದ್ಧ 4 ಮಂದಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ನಿನ್ನೆ ಸುಪ್ರೀಂ ಕೋರ್ಟ್ ಮತ್ತೊಮ್ಮೆ ಗುಜರಾತ್ ಪೊಲೀಸರನ್ನು ಪ್ರಶ್ನಿಸಿದೆ.

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೂ “ಜನರನ್ನು ಕಂಬಗಳಿಗೆ ಕಟ್ಟಿಹಾಕಿ, ಸಾರ್ವಜನಿಕವಾಗಿ ಹೊಡೆದು, ವಿಡಿಯೋ ತೆಗೆಯುವುದೆಲ್ಲ ಯಾವ ರೀತಿಯ ಹಿಂಸೆ? ಹಾಗಾಗಿ ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕಾಗಿದೆ” ಎಂದು ಹೇಳಿ, ಸದರಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಬೆಂಗಳೂರು

ಬೆಂಗಳೂರು: ಬೆಂಗಳೂರು ಬಂದ್ ವೇಳೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ತೊಂದರೆಯಾಗಿಲ್ಲ. ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಬೆಂಗಳೂರು ನಗರಾದ್ಯಂತ ಈ ದಿನ (ಸೆ.26) ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕೆಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನಲೆಯಲ್ಲಿ, ನಗರಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಎಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ. ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ದಕ್ಕೆ ಆಗದಂತೆ ನೋಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು! – ಸಿದ್ದರಾಮಯ್ಯ

ಬಂದ್ ಅಂಗವಾಗಿ ಕೆಲವು ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮತ್ತು ಮೆರೆವಣಿಗೆ ಮಾಡಲು ಯತ್ನಿಸಿದ್ದು, ಅವರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ಬಂಧಿಸಿ, ನಂತರ ಬಿಡುಗಡೆ ಮಾಡಿರುತ್ತಾರೆ. ಈ ರೀತಿ ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿರುತ್ತದೆ. ಆಟೋರಿಕ್ಷ ಸಂಚಾರ ಸೇರಿದಂತೆ ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿದ್ದು, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್‌ಗಳು ಸಾಮಾನ್ಯವಾಗಿ ತೆರೆದಿದ್ದವು.

ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ಇದೇ ಅಂಗವಾಗಿ ಸುಮಾರು ಒಂದು ಸಾವಿರ ಜನರು ಪೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ಈ ಸಮಯದಲ್ಲಿ ವಿವಿಧ ಸಂಘಟನೆ ಮುಖಂಡರು ಸರ್ಕಾರದ ದೋರೆಣೆಯ ವಿರುದ್ಧ ಪ್ರತಿಭಟಿಸಿರುತ್ತಾರೆ. ನಂತರ ರಾಜ್ಯದ ಮಂತ್ರಿಗಳಾದ ಆರ್.ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿ ತೆರಳಿರುತ್ತಾರೆ. ಒಟ್ಟಾರೆ, ಜನ-ಸಾಮಾನ್ಯರಿಗೆ ಯಾವುದೇ ತೊಂದರೆ ಆಗದೇ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿರುತ್ತದೆ” ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಇಂದು ಪಾಲ್ಗೊಂಡು ಮಾತನಾಡಿದರು.

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂಬ ಭರವಸೆಯನ್ನು ನೀಡಿದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಲೈಜ್ಞರ್ ಮಹಿಳಾ ಹಕ್ಕುಭತ್ಯೆ ಯೋಜನೆಗೆ ಇಂದು ಚಾಲನೆ; ತಮಿಳುನಾಡಿನಲ್ಲಿ ಸಂಭ್ರಮದ ವಾತಾವರಣ!

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಕಸ್ಟಮರ್‌ಗಳಿಗೆ ನೀಡುವ ವೋಚರ್‌ಗಳನ್ನು ತನ್ನ ವಶಕ್ಕೆ ಪಡೆದುಕೊಂಡು ಕಸ್ಟಮರ್‌ಗಳು ವೋಚರನ್ನು ಬಳಕೆ ಮಾಡುವ ಮೊದಲೇ ಬಳಕೆ ಮಾಡಿ, ಇ-ಕಾಮರ್ಸ್ ಕಂಪನಿಗಳ ಮೂಲಕ ಕೋಟ್ಯಾಂತರ ರೂ ಬೆಲೆ ಬಾಳುವ ಚಿನ್ನ, ಬೆಳ್ಳಿ, ದ್ವಿಚಕ್ರ ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ನಗದು ಹಣವನ್ನು ಆನ್‌ಲೈನ್ ಮುಖಾಂತರ ಖರೀದಿಸಿ ಚಂಚನೆ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿ.ಎ.ಎನ್ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಆರೋಪಿಯಿಂದ 5.269 ಕೆಜಿ ಚಿನ್ನ, 27.250 ಕೆಜಿ ಬೆಳ್ಳಿ, ರೂ.11 ಲಕ್ಷ 13 ಸಾವಿರ ನಗದು, ವಿವಿಧ ಕಂಪನಿಯ 07 ದ್ವಿಚಕ್ರ ವಾಹನಗಳು, ಪ್ಲಿಪ್ ಕಾರ್ಟ್ ವಾಲೇಟ್ ಪ್ರೀಜ್ ಆದ ರೂ.3 ಲಕ್ಷ 50 ಸಾವಿರ ಹಣ, 2 ಲ್ಯಾಪ್ ಟಾಪ್, 03 ಮೊಬೈಲ್‌ಗಳು ಒಟ್ಟು ಅಂದಾಜು ಮೊತ್ತ 4,16,63,000/- ರೂ ಮೌಲ್ಯದ ವಸ್ತುಗಳನ್ನು ಅಮಾನತ್ತು ಮಾಡಲಾಗಿದೆ

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಬೆಂಗಳೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆ ಅಧಿಕಾರಿಗಳು ಫ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡುಗಳನ್ನು ದುರುಪಯೋಗಪಡಿಸಿ, ಪ್ರತಿಷ್ಠಿತ ಕ್ಯಾಬ್ (Cab Aggregators) ಆಪರೇಟಿವ್ ಸಂಸ್ಥೆಗಳಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿ 3 ಆರೋಪಿಗಳನ್ನು ಬಂಧಸಿದ್ದಾರೆ. 1055 ಫ್ರೀ ಆಕ್ಟಿವೇಟೆಡ್ ಮೊಬೈಲ್ ಸಿಮ್ ಕಾರ್ಡುಗಳು, 15 ಮೊಬೈಲ್ ಪೋನ್, 4 ಲ್ಯಾಪ್‌ಟಾಪ್, 1 ಕಂಪ್ಯೂಟರ್ ಸಿಸ್ಟಮ್ ಅನ್ನು ವಸಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರದಲ್ಲಿ ಬಾಡಿಗೆ ವಾಹನ ಸೇವೆ ನೀಡುತ್ತಿರುವ ಹೆಸರಾಂತ ಕಂಪನಿಗಳಾದ ಉಬರ್ ಮತ್ತು ರ‍್ಯಾಪಿಡೋ ಕಂಪನಿಗಳಿಗೆ ಡ್ರೈವರ್‌ಗಳನ್ನು ಮತ್ತು ವಾಹನಗಳನ್ನು ನೋಂದಣಿ ಮಾಡುವ ಸಲುವಾಗಿ ವೆಂಡರ್‌ಶಿಪ್ ಪಡೆದು, ಆನ್‌ಲೈನ್ ಮೂಲಕ ಡ್ರೈವರ್ ಮತ್ತು ವಾಹನಗಳನ್ನು ಅಟಾಚ್ ಮಾಡಿಸಿ, ಬೇರೆಯವರ ಹೆಸರಿನಲ್ಲಿ ತೆಗೆದುಕೊಂಡಿದ್ದ ಸಾವಿರಾರು ಮೊಬೈಲ್ ಸಿಮ್ ಕಾರ್ಡುಗಳನ್ನು ಉಪಯೋಗಿಸಿ, ಯಾವುದೇ ಸಂಚಾರ ಸೇವೆಯನ್ನು ನೀಡದೆ, ಸಾಪ್ಟ್ ವೇರ್ ದುರುಪಯೋಗಪಡಿಸಿಕೊಂಡು ಸಂಚಾರಿ ಸೇವೆ ನೀಡಿದಂತೆ ಮಾಡಿ ಕಂಪನಿಗಳಿಂದ ಬರುತ್ತಿದ್ದ ಸಾವಿರಾರು ರೂಪಾಯಿಗಳ ಇನ್ ಸೆಂಟಿವ್ ಹಣವನ್ನು ಪಡೆದು, ಕಂಪನಿಗಳಿಗೆ ಮೋಸ ಮಾಡುತ್ತಿದ್ದ 3 ಆಸಾಮಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

ಸಾಂದರ್ಭಿಕ ಚಿತ್ರ

ಇವರುಗಳಲ್ಲಿ ಎ1 ಆರೋಪಿಯು ಉಬರ್ ಮತ್ತು ರ‍್ಯಾಪಿಡೋ ಕಂಪೆನಿಗಳ ವೆಂಡರ್‌ಶಿಪ್ ಪಡೆದಿದ್ದು, ಈತನ ಸ್ನೇಹಿತನಾದ ಎ2 ಫೈನಾನ್ಸ್ ಕಂಪನಿಯಲ್ಲಿ ಲೋನ್ ಕೊಡಿಸುವ ಕೆಲಸ ಮಾಡಿಕೊಂಡಿದ್ದು, ಎ3 ಆರೋಪಿಯು ವೋಡಾ ಪೋನ್ ಕಂಪನಿಯಲ್ಲಿ ಸಿಮ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಈ ಮೂರು ಜನರು ಸೇರಿ ಸುಲುಭವಾಗಿ ಹಣ ಮಾಡುವ ಸಲುವಾಗಿ, ದುರುದ್ದೇಶದಿಂದ ಒಳ ಸಂಚು ರೂಪಿಸಿ, ಎ1 ಹೊಂದಿದ್ದ ಉಬರ್ ಮತ್ತು ರ‍್ಯಾಪಿಡೋ ವೆಂಡರ್‌ಶಿಪ್ನ ಸಹಾಯದಿಂದ ಎ2 ಒದಗಿಸುತ್ತಿದ್ದ ದಾಖಲಾತಿಗಳನ್ನು ಬಳಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿ, ಎ3 ನೀಡುತ್ತಿದ್ದ ಫ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡುಗಳನ್ನು ಬಳಸಿಕೊಂಡು ಕಾರು / ಬೈಕುಗಳು ಓಡುವ ರೀತಿಯಲ್ಲಿ ಮೊಬೈಲ್ ಪೋನ್, ಲ್ಯಾಪ್‌ಟಾಪ್‌ಗಳ ಮೂಲಕ ಸಾಪ್ಟ್ ವೇರ್ ಬಳಸಿ ಯಾವುದೇ ವಾಹನವನ್ನು ಚಲಿಸದೇ ಇದ್ದರೂ ವಾಹನಗಳು ಚಲಿಸಿದ ರೀತಿಯಲ್ಲಿ ಡಾಟಾ ಸೃಷ್ಟಿಸಿ, ಕಂಪನಿಗಳಿಂದ ವೆಂಡರ್‌ಗೆ ಬರುವ ಇನ್‌ಸೆಂಟಿವ್ ಹಣವನ್ನು ಅಕ್ರಮವಾಗಿ ಪಡೆದುಕೊಂಡು ಹಂಚಿಕೊಳ್ಳುತ್ತಿದ್ದರೆಂಬುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.

ಮೇಲ್ಕಂಡ 3 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅವರುಗಳ ವಿಚಾರಣೆ ಮಾಡಿ ಅವರು ಕೃತ್ಯಕ್ಕೆ ಉಪಯೋಗಿಸುತ್ತಿದ್ದ 1055 ಫ್ರೀ ಆಕ್ಟಿವೇಟೆಡ್ ಮೊಬೈಲ್ ಸಿಮ್‌ಗಳು, 15 ಮೊಬೈಲ್ ಪೋನ್‌ಗಳು, 4 ಲ್ಯಾಪ್‌ಟಾಪ್, 1 ಕಂಪ್ಯೂಟರ್ ಸಿಸ್ಟಮ್ ಮತ್ತು ಒಂದು ಬಯೋಮೆಟ್ರಿಕ್ ಡಿವೈಸ್ ಇವುಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಆರೋಪಿಗಳ ವಿರುದ್ಧ ಐಪಿಸಿ, ಟೆಲಿಗ್ರಾಫ್ ಆಕ್ಟ್ ಹಾಗೂ ಐಟಿ ಆಕ್ಟ್ ಗಳಡಿಯಲ್ಲಿ ತನಿಖೆ ಮುಂದುವರಿದಿದೆ ಎಂದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿಗಳಿಂದ ತಿಳಿದುಬಂದಿದೆ.     

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್ ಪೆಡ್ಲರ್‌ಗಳ ಜಾಲವನ್ನು ಭೇದಿಸಿ, ಸುಮಾರು 7 ಕೋಟಿ 6 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ganja

ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು, ಡ್ರಗ್ ಪೆಡ್ಲರ್‌ಗಳ ವಿರುದ್ಧ ಕಾರ್ಯಚರಣೆಯನ್ನು ಮುಂದುವರಿಸಿ, ಕಳೆದ ಒಂದು ತಿಂಗಳಿನಿಂದ ಸಂಗ್ರಹಿಸಲಾದ ಮಾಹಿತಿಗಳ ಆಧಾರದ ಮೇಲೆ ನೈಜೀರಿಯಾದ ಇಬ್ಬರು, ಐವರಿಕೋಸ್ಟ್ ದೇಶದ ಒಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳದ ಒಬ್ಬ, ಆಂದ್ರ ಪ್ರದೇಶದ ಒಬ್ಬ ಮತ್ತು ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಸೇರಿದಂತೆ ಒಟ್ಟು 19 ಜನ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ, ಅಂದಾಜು 7,06,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 6kg Hashish Oil, 51.89kg Ganja, 140grm MDMA Crystal, 236 Ecstasy Pills, 34 LSD strips, 23grm Cocaine, 17 Mobile Phone, 1 Car, 1 Bike ಅನ್ನು ವಸಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

Wilson Garden PS Cr. No.100/2023 u/s 8(c), 20 (ii) (B) 27-A, 29 NDPS Act

ಬಂಧಿತ ಆರೋಪಿಗಳು, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ, ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆ.

Ashok Nagar Cr. No.76/2023 u/s 8(c), 22(b)(c), 23, 27-A, 29 NDPS Act

ಬಂಧಿತ ಆರೋಪಿಗಳ ವಿರುದ್ಧ ಬೆಂಗಳೂರಿನ ವಿಲ್ಸನ್ ಗಾರ್ಡನ್, ಬೇಗೂರು, ಅಶೋಕ್ ನಗರ, ಬಾಣಸವಾಡಿ, ಸಿದ್ದಾಪುರ, ಪುಲಿಕೇಶಿನಗರ, ಹೆಣ್ಣೂರು, ಕೆ.ಆರ್.ಪುರ, ಯಲಹಂಕ ಹಾಗೂ ಆರ್.ಟಿ.ನಗರ ಠಾಣೆಗಳಲ್ಲಿ NDPS ಕಾಯ್ದೆ-1985 ರೀತ್ಯಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Begur PS Cr. No.84/2023 u/s 8(c) 22(c) NDPS Act

ಈ ಕಾರ್ಯಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಸಿಬ್ಬಂಧಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.