ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಪ್ರಿಯಾಂಕ್ ಖರ್ಗೆ Archives » Dynamic Leader
October 20, 2024
Home Posts tagged ಪ್ರಿಯಾಂಕ್ ಖರ್ಗೆ
ರಾಜ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಸುರಪುರ ಕ್ಷೇತ್ರದ ಶಾಸಕರಾದ ರಾಜಾ ವೆಂಕಟ್ಟಪ್ಪ ನಾಯಕ ಅವರು ಇಂದು ಹೃದಯಘಾತದಿಂದ ನಿಧನ ಹೊಂದಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಐಟಿ ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ನಮ್ಮ ಕುಟುಂಬದ ಆತ್ಮೀಯರಾಗಿ, ಚಿಕ್ಕಂದಿನಿಂದ ನನ್ನ ಮಾರ್ಗದರ್ಶಕರಾಗಿದ್ದ ಅವರು ನಮ್ಮನ್ನು ಅಗಲಿರುವ ವಿಚಾರ ನಂಬಲು ಅತೀವ ಕಷ್ಟವಾಗುತ್ತಿದೆ.

ಬ್ರಿಟಿಷರೊಂದಿಗೆ ಹೋರಾಡಿ ವೀರ ಮರಣ ಹೊಂದಿದ ಸುರಪುರ ಸಂಸ್ಥಾನದ ದೊರೆ ನಾಲ್ಕನೇ ರಾಜಾ ವೆಂಕಟಪ್ಪ ನಾಯಕ ಅವರ ಕುಟುಂಬದಿಂದ ಬಂದಿದ್ದ ಜನರ ಪ್ರೀತಿಯ ನಾಯಕ ನಮ್ಮ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಹು ದೊಡ್ಡ ಶಕ್ತಿಯಾಗಿದ್ದರು.

ಅವರ ಈ ಅಕಾಲಿಕ ಅಗಲಿಕೆ ನಮ್ಮ ಭಾಗದ ಜನತೆಗೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ದೊರಕುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಉದ್ಯೋಗ

ಬೆಂಗಳೂರು: ಕರ್ನಾಟಕ ಸರ್ಕಾರವು ನಮ್ಮ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇದೇ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಯುವ ಸಮೃದ್ಧಿ’ ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಿದ್ದು ನಾಡಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈ ಉದ್ಯೋಗ ಮೇಲಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ‘ಯುವ ಸಮೃದ್ಧಿ’ ಮೆಗಾ ಉದ್ಯೋಗ ಮೇಳದ ಕುರಿತು ವಿವರ ಹಂಚಿಕೊಂಡರು.

ಈ ಉದ್ಯೋಗ ಮೇಳದಲ್ಲಿ ರಾಷ್ಟೀಯ, ಅಂತಾರಾಷ್ಟ್ರೀಯ ಮಟ್ಟದ ಸುಮಾರು 500ಕ್ಕೂ ಅಧಿಕ ಕಂಪನಿಗಳು ಭಾಗವಹಿಸುತ್ತಿದ್ದು ಒಂದು ಲಕ್ಷಕ್ಕೂ ಅಧಿಕ ಉದ್ಯೋಗಗಳು ಲಭ್ಯವಿದೆ ಎಂದು ಹೇಳಿದರು.

ಈಗಾಗಲೇ ಆನ್ಲೈನ್ ಮೂಲಕ ರಾಜ್ಯದ 31 ಸಾವಿರಕ್ಕೂ ಅಧಿಕ ಯುವಕರು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿದ್ದಾರೆ. ಅವರ ಅನುಕೂಲಕ್ಕಾಗಿ 600ಕ್ಕೂ ಅಧಿಕ ಸ್ಟಾಲ್ ಗಳನ್ನು ಹಾಕಲಾಗಿದ್ದು ವಿವಿಧ ಭಾಗಗಳಿಂದ ಆಗಮಿಸುವ ಯುವಕರಿಗಾಗಿ ಉಚಿತ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂಬ ಮಾಹಿತಿಯನ್ನು ಒದಗಿಸಿದರು.

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಡಿಪ್ಲೊಮೊ, ಐಟಿಐ, ಎಂಜಿನಿಯರಿಂಗ್ ಸೇರಿದಂತೆ ಯಾವುದೇ ವಿದ್ಯಾರ್ಹತೆ ಹೊಂದಿದವರಿಗೂ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು ನಾಡಿನ ಯುವಜನತೆ ಈ ಉದ್ಯೋಗಮೇಳದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ರಾಜ್ಯ

ಬೆಂಗಳೂರು: ಕರ್ನಾಟಕದ ವು PSI ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ ಎಂದು ಹೇಳಿದ್ದಾರೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ.

ಹಿಂದೆ ನಡೆದಿರುವ 545 ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಲು ಆದೇಶಿಸಿ ಸ್ವತಂತ್ರ ಸಂಸ್ಥೆಯಿಂದ ಮತ್ತೆ ಮರುಪರೀಕ್ಷೆ ನಡೆಸಬೇಕು ಎಂದು ಆದೇಶಿಸಿರುವುದು ಹಿಂದಿನ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ ಉಚ್ಚ ನ್ಯಾಯಾಲಯದ ಸಾಕ್ಷಿ ಮುದ್ರೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದೇ ಇಲ್ಲಾ ಎಂದು ಹಲವಾರು ಬಾರಿ ಸದನಕ್ಕೆ ವಾದಿಸಿದ್ದ ಹಿಂದಿನ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಾಗೂ ಪ್ರಕರಣವನ್ನು ಹಳ್ಳ ಹಿಡಿಸಲು ತನಿಖೆ ಮೇಲೆ ಪ್ರಭಾವ ಬೀರಿದ ಮತ್ತು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ ಅಂದಿನ ಬಿಜೆಪಿ ಸಚಿವರಿಗೆ ಛೀಮಾರಿಗೆ ಹಾಕಿದಂತೆ ಎಂದು ಹೇಳಿದ್ದಾರೆ.

ಆಗಿರುವ ಅಕ್ರಮದ ಸಂಪೂರ್ಣ ಚಿತ್ರಣವನ್ನು ನ್ಯಾಯಲಯಕ್ಕೆ ಸಮರ್ಥವಾಗಿ ಮನವರಿಕೆ ಮಾಡಿಸಿ 56,000ಕ್ಕೂ ಹೆಚ್ಚು ಆಕಾಂಕ್ಷಿಗಳ ಪರವಾಗಿ ತೀರ್ಪು ಬರುವಂತೆ ಮಾಡಿರುವ ನಮ್ಮ ಸರ್ಕಾರದ ವಕೀಲರ ತಂಡಕ್ಕೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಈ ಗೆಲುವು ಬಿಜೆಪಿಯ ಭ್ರಷ್ಟ ಆಡಳಿತದ ವಿರುದ್ಧ ಸಿಡಿದೆದ್ದು ಸಂಘಟಿರಾಗಿ, ಪ್ರಕರಣವನ್ನು ಮುನ್ನಲೆಗೆ ತರಲು ಹೋರಾಡಿದ ಎಲ್ಲಾ ನ್ಯಾಯಯುತ ಪಿಎಸ್ಐ ಉದ್ಯೋಗ ಆಕಾಂಕ್ಷಿಗಳ ಗೆಲುವಾಗಿದೆ ಎಂದರು.

ರಾಜಕೀಯ

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ! ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ!” ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಉಪಸ್ಥಿತರಿದ್ದರು.

ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುವ ಹಾಗೂ ಸಮಾಜದ ಸ್ವಾಸ್ಥ್ಯ ಕದಡುವ ಸುಳ್ಳು ಸುದ್ದಿಗಳ ನಿಯಂತ್ರಣ ಮಾಡಬೇಕಿದ್ದು, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸಲಾಗುವುದು. ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಲಾಯಿತು.

ರಾಜಕೀಯ

ಮಳೆ ನಿಂತರೂ ಹನಿ ನಿಲ್ಲದು ಎಂಬ ಗಾದೆಯಂತೆ ಬಿಜೆಪಿಯ ನಾಲ್ಕು ವರ್ಷದ ಭ್ರಷ್ಟ ಆಡಳಿತದ ಅವ್ಯವಸ್ಥೆಯು ಫಲ ಈಗಲೂ ಜನರ ಜೀವ ಹಿಂಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರ ಬಂದು ಎರಡು ತಿಂಗಳಾಗಿದೆ; ಭ್ರಷ್ಟ ಬಿಜೆಪಿ ಮಾಡಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಜಾರಿಯಲ್ಲಿದೆ. ಜಲಜೀವನ್ ಮಿಷನ್‌ನಲ್ಲಿ ಪ್ರತಿ ಮನೆಗೂ ನೀರು ಕೊಟ್ಟೇ ಬಿಟ್ಟಿದ್ದೇವೆ ಎಂದು ಪ್ರಚಾರ ಮಾಡಿದ್ದ ಬಿಜೆಪಿ, ಈಗ ತಮ್ಮ ಸುಳ್ಳನ್ನು ತಾವೇ ಬಯಲು ಮಾಡುತ್ತಿದ್ದಾರೆ. ಈ ಫ್ಯಾಕ್ಟ್ ಚೆಕ್ ಕೆಲಸವನ್ನು ಬಿಜೆಪಿ ಹೀಗೆಯೇ ಮುಂದುವರೆಸಲಿ!

ಜಲಜೀವನ್ ಮಿಷನ್ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು 55%, ಕೇಂದ್ರದ ಪಾಲು 45%, ಬಿಜೆಪಿಯ ಭ್ರಷ್ಟಾಚಾರದ ಪಾಲು 40%, ಮೋದಿಯವರಿಗೆ ಕ್ರೆಡಿಟ್ ಮಾತ್ರ 100%. ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಎನ್ನುವುದು “ಭ್ರಷ್ಟಾಚಾರದ ಮಿಷನ್” ಆಗಿತ್ತು, ಇದರ ಪರಿಣಾಮವನ್ನೇ ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಭ್ರಷ್ಟಾಚಾರದ ಆರೋಪದಲ್ಲಿ ರಾಜೀನಾಮೆ ನೀಡಿದ್ದರು; ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 40% ಕಮಿಷನ್‌ಗೆ ಗುತ್ತಿಗೆದಾರರೊಬ್ಬರು ಜೀವವನ್ನೇ ಬಿಡಬೇಕಾಯ್ತು. ನನ್ನ ಇಲಾಖೆಗೆ ಇಷ್ಟು ಘಾಡವಾಗಿ ಅಂಟಿರುವ ಕೊಳೆಯನ್ನು ಸ್ವಚ್ಛ ಮಾಡುತ್ತಿದ್ದೇನೆ.

ಬಿಜೆಪಿ ಅವಧಿಯಲ್ಲಿ ಪರ ರಾಜ್ಯಗಳತ್ತ ಮುಖ ಮಾಡಿದ್ದ ಉದ್ಯಮಗಳನ್ನು, ಹೂಡಿಕೆಗಳನ್ನು ಕರ್ನಾಟಕದತ್ತ ಕರೆತರುತ್ತಿದ್ದೇವೆ. ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ನಿರ್ಮಿಸುತ್ತಿದ್ದೇವೆ. ಅಜಾನ್, ಹಲಾಲ್, ಹಿಜಾಬ್ ಎಂಬ ಪ್ರಚೋದನೆಗೆ ಕನ್ನಡಿಗರು ಸಂಪೂರ್ಣ ತಿರಸ್ಕಾರದ ಉಡುಗೊರೆ ಕೊಟ್ಟಿದ್ದಾರೆ. ಬಿಜೆಪಿ ಮುಕ್ತ ದಕ್ಷಿಣ ಭಾರತವಾಗಿದೆ; ಆದರೂ, ಬುದ್ದಿ ಕಲಿಯದೆ ಸುಳ್ಳಿನ ಸೌಧ ಕಟ್ಟವುದನ್ನು ಮುಂದುವರೆಸಿದ ಬಿಜೆಪಿಯನ್ನು ದೇಶದ ಜನ ತಿರಸ್ಕರಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷವಾಗಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ್ದು ಬಿಜೆಪಿ ರಾಜಕೀಯ ದಿವಾಳಿತನ. ಮೇಲ್ಮನೆ, ಕೆಳಮನೆಗಳಲ್ಲಿ ವಿರೋಧ ಪಕ್ಷದ ನಾಯಕನ ಕುರ್ಚಿ ಖಾಲಿ ಇದೆ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಮೊದಲು ತಮ್ಮ ರಾಜಕೀಯ ದಾರಿದ್ರ್ಯವನ್ನು ನಿವಾರಣೆ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ದೇಶ ರಾಜ್ಯ

ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಎರಡನೇ ಸಭೆಯಲ್ಲಿ ಒಕ್ಕೂಟಕ್ಕೆ ಇಂಡಿಯಾ (I.N.D.I.A) ಎಂದು ಹೆಸರಿಡಲಾಗಿತ್ತು. ಇದು ವೈರಲ್ ಆಗಿದ್ದು, ಈಗ ದೇಶಾದ್ಯಂತ ಇಂಡಿಯಾ VS ಎನ್ ಡಿಎ ಎಂದು ರಾಜಕೀಯ ಮಾಡಲಾಗುತ್ತಿದೆ.

ಈ ಹಿನ್ನಲೆಯಲ್ಲಿ,  ವಿರೋಧ ಪಕ್ಷಗಳ ಮೈತ್ರಿಯನ್ನು ‘ಇಂಡಿಯನ್ ಮುಜಾಹಿದ್ದೀನ್, ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ ಕೂಡ ಇಂಡಿಯಾವನ್ನು ಹೊಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, “ನಮ್ಮ ಪಾಸ್‌ಪೋರ್ಟ್ ಕೂಡ ರಿಪಬ್ಲಿಕ್ ಆಫ್ ಇಂಡಿಯಾ ಎಂದು ಬರೆಯುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.  

“ಮೋದಿಜಿಯವರ ಮುದ್ದಿನ ಯೋಜನೆಗಳಾದ ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಖೇಲೋ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಡಿಜಿಟಲ್ ಇಂಡಿಯಾ ಅವರ ಪ್ರಮುಖ ಚಿಂತಕರ ಚಾವಡಿ (ನೀತಿ ಆಯೋಗ) ಕೂಡ ಟೀಮ್ ಇಂಡಿಯಾ ಎಂದು ಕರೆಯಲ್ಪಡುತ್ತದೆ.

ಸರ್ವೋಚ್ಚ ನಾಯಕ (ನರೇಂದ್ರ ಮೋದಿ) ಇಂಡಿಯಾ ಮೈತ್ರಿಯಿಂದ ವಿಚಲಿತರಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ನಮಗಿರುವ ಸಮಸ್ಯೆ ಏನೆಂದರೆ, ಪ್ರಧಾನಿ ಈಶಾನ್ಯಕ್ಕಿಂತ (ಮಣಿಪುರ) ಈಸ್ಟ್ ಇಂಡಿಯಾ ಕಂಪನಿಯ ಮೇಲೆ ಹೆಚ್ಚು ಒಲವು ಹೊಂದಿದ್ದಾರೆ. ಮಣಿಪುರ ಟೂಲ್‌ಕಿಟ್‌ನ ದಿಕ್ಕು ತಪ್ಪಿಸುವ ಸಮಸ್ಯೆಗಳ ಕಿಟ್ ಅನ್ನು ಸಕ್ರಿಯಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ರಾಜಕೀಯ

“ನಿಮ್ಮ ಕ್ಷೇತ್ರದಲ್ಲಿ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ, ಒಮ್ಮೆ ಆ ಕಡೆ ಗಮನ ಹರಿಸಿ ನಿಮ್ಮ ಟಿಕೆಟ್ ಭದ್ರಪಡಿಸಿಕೊಳ್ಳಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.  

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವಾರದ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಜೂನ್ 20 ರಂದು ಕಲಬುರ್ಗಿಯಲ್ಲಿ ಗೃಹ ಇಲಾಖೆಯ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ, ಮಾದಕ ದ್ರವ್ಯ ಮತ್ತು ಅಕ್ರಮ ಮದ್ಯ, ಅಕ್ರಮ ಮರಳು ಗಣಿಗಾರಿಕೆ ಮತ್ತು ಕಲ್ಲುಗಣಿಗಾರಿಕೆ, ಬೆಟ್ಟಿಂಗ್ ಮತ್ತು ಜೂಜು, ಅಂದಗೊಳಿಸುವ ರೌಡಿಗಳು, ದೇಶ ನಿರ್ಮಿತ ಬಂದೂಕುಗಳ ಅಕ್ರಮ ಪೂರೈಕೆ ಮುಂತಾದವುಗಳನ್ನು ತಡೆಯಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಇದಕ್ಕೆ ಪ್ರತಿಕ್ರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,  “ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ. ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಅವರಿಗೆ  ಲೀಸ್ ಗೆ ಕೊಟ್ಟಿದ್ದಾರೋ? ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಸಿದ್ದರಾಮಯ್ಯ ನವರೇ” ಎಂದು ಕೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, “ಶಾಸಕಾಂಗದ ಕಾರ್ಯವ್ಯಾಪ್ತಿಯ ಅರಿವಿಲ್ಲದ ನಳೀನ್ ಕುಮಾರ್ ಕಟೀಲ್ ಅವರೇ, ನೀವು ಅಧಿಕಾರ ಕಳೆದುಕೊಂಡಿದ್ದೇ ಇಂತಹ ಅಜ್ಞಾನಕ್ಕೋಸ್ಕರ. ಸಂಸದರಾಗಿರುವ ನಿಮಗೆ ನಿಮ್ಮ ಸ್ಥಾನದ ಹೊಣೆಯ ಅರಿವಿಲ್ಲದಿರಬಹುದು, ನನಗೆ ನನ್ನ ಹೊಣೆಯ ಅರಿವಿದೆ. ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವನಾದ ನಾನು ಜಿಲ್ಲೆಯ ಎಲ್ಲಾ ಇಲಾಖೆಗಳ ಆಗುಹೋಗುಗಳಿಗೂ ಹೊಣೆಯಾಗಿರುತ್ತೇನೆ, ನನ್ನ ಜಿಲ್ಲೆಯ ಗೃಹ ಇಲಾಖೆಯನ್ನೂ ನಾನೇ ನಿಯಂತ್ರಿಸಬೇಕಿರುವುದು ನನ್ನ ಕರ್ತವ್ಯ. ನಿಮ್ಮ ಪಕ್ಷದವರಿಗೆ ಇಂತಹ ಸಾಮಾನ್ಯ ಜ್ಞಾನ ಇಲ್ಲದಿರುವುದಕ್ಕಾಗಿಯೇ ಜನತೆ ನಿಮ್ಮನ್ನು ಮನೆಯಲ್ಲಿ ಕೂರಿಸಿದ್ದಾರೆ.

ನಿಮ್ಮ 40% ಸರ್ಕಾರ ಈ ರಾಜ್ಯವನ್ನು ಕೊಳ್ಳೆ ಹೊಡೆದಿದ್ದು, ರೈತರು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿದ್ದನ್ನು ರಾಜ್ಯ ಕಂಡಿದೆ. ನಿಮ್ಮಂತ ವಿಫಲ ಆಡಳಿತಗಾರರಿಂದ ನಾವು ಆಡಳಿತಾತ್ಮಕ ಪಾಠ ಕಲಿಯುವ ಅಗತ್ಯವಿಲ್ಲ. ಅಧ್ಯಕ್ಷಗಿರಿಗೆ ರಾಜೀನಾಮೆ ಕೊಟ್ಟೆ ಎಂದು ಯೂ ಟರ್ನ್ ಹೊಡೆದಿದ್ದೇಕೆ ಎಂಬುದನ್ನು ಸ್ಪಷ್ಟಪಡಿಸಿ, ನಿಮ್ಮ ಕ್ಷೇತ್ರದಲ್ಲಿ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ, ಒಮ್ಮೆ ಆ ಕಡೆ ಗಮನ ಹರಿಸಿ ನಿಮ್ಮ ಟಿಕೆಟ್ ಭದ್ರಪಡಿಸಿಕೊಳ್ಳಿ” ಎಂದಿದ್ದಾರೆ.

ರಾಜಕೀಯ

“ಹಿಂದುತ್ವ – ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿದೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ. ಆದರೆ, ಪ್ರೀತಿ ಹಾಗೂ ಕಾಂಗ್ರೆಸ್ ನ ಶಕ್ತಿ ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ. “ಶಕ್ತಿ” ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆಯನ್ನು ಸಬಲಗೊಳಿಸಲಾಗಿದೆ.

ಇದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ” ಎಂದರು.

ರಾಜಕೀಯ ರಾಜ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪಕ್ಷ ತಮ್ಮ ಪ್ರಣಾಳಿಕೆಯಲ್ಲಿ ಹೇಳಿತ್ತು. ಅದರಂತೆ ಅಕ್ಕಿ ವಿತರಣಾ ತಯಾರಿ ಕಾರ್ಯದಲ್ಲಿ ಸರ್ಕಾರ ತೊಡಗಿಕೊಂಡಿರುವುದು ತಿಳಿದುಬಂದಿದೆ. ಹೆಚ್ಚುವರಿಯಾಗಿ ಬೇಕಾಗಿರುವ ಅಕ್ಕಿಯನ್ನು ಭಾರತೀಯ ಆಹಾರ ನಿಗಮ (FCI) ದಲ್ಲಿ ಕೋರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.     

“ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10KG ಅಕ್ಕಿ ನೀಡಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCI ನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ.

ಕಾಂಗ್ರೆಸ್ ಗ್ಯಾರೆಂಟಿಗಳು ಜನರಿಗೆ ತಲುಪಲು ಬಿಡದಂತೆ ಕೇಂದ್ರ BJP ಸರ್ಕಾರ ಈ ರೀತಿ ಷಡ್ಯಂತ್ರ ನಡೆಸಲು ಮುಂದಾಗಿರುವುದು ನಾಚಿಗೇಡಿನ ವಿಚಾರ. ಈಗಾಗಲೇ ರಾಜ್ಯದಲ್ಲಿ BJP 63 ಸೀಟಿಗೆ ತೃಪ್ತಿಪಡಬೇಕಾಗಿದೆ. ಇದೇ ರೀತಿ ದುಷ್ಟ ರಾಜಕಾರಣ ಮುಂದುವರೆಸಿದರೆ, ಮುಂದೆ ಅದು 6 ಮತ್ತು 3 ಆಗಲಿದೆ. ಇದು ಗ್ಯಾರಂಟಿ” ಎಂದು ಹೇಳಿದ್ದಾರೆ.