ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬಡವರು Archives » Dynamic Leader
October 17, 2024
Home Posts tagged ಬಡವರು
ದೇಶ

ನವದೆಹಲಿ: 2046ರ ವೇಳೆಗೆ ಭಾರತದಲ್ಲಿ 15 ವರ್ಷದವರೆಗಿನ ಮಕ್ಕಳ ಸಂಖ್ಯೆಗಿಂತ ವಯಸ್ಸಾದವರ ಸಂಖ್ಯೆ ಹೆಚ್ಚಾಗಿರುತ್ತದೆ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ ಹೇಳಿದೆ. ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ – ಭಾರತ, ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್‌ನ ಸಹಯೋಗದೊಂದಿಗೆ ಭಾರತದ ವೃದ್ಧಾಪ್ಯದ ಕುರಿತು ಬಹು ನಿರೀಕ್ಷಿತ ವರದಿಯನ್ನು ಬಿಡುಗಡೆ ಮಾಡಿದೆ.

ಭಾರತದ ಜನಗಣತಿ, ಭಾರತ ಸರ್ಕಾರದ ಜನಸಂಖ್ಯೆಯ ಪ್ರಕ್ಷೇಪಗಳು ಮತ್ತು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆಯ ವಿಶ್ವ ಜನಸಂಖ್ಯೆಯ ನಿರೀಕ್ಷೆಗಳು 2022ರ ಇತ್ತೀಚಿನ ಮಾಹಿತಿಯನ್ನು ಬಳಸಿಕೊಂಡು ಈ ವರದಿಯನ್ನು ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂದ್‌ಗೆ ಅವಕಾಶ ಇಲ್ಲ; ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲು ಅವಕಾಶ: ಪೊಲೀಸ್ ಇಲಾಖೆ

ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 10 ವರ್ಷಗಳಲ್ಲಿ ಶೇಕಡಾ 41ರಷ್ಟು ಹೆಚ್ಚಳವಾಗಿದೆ. 2050ರ ವೇಳೆಗೆ ಭಾರತದ ಜನಸಂಖ್ಯೆಯಲ್ಲಿ ಶೇ.20ರಷ್ಟು ಜನರು ವೃದ್ಧರಾಗಿರುತ್ತಾರೆ. 2046ರ ಹೊತ್ತಿಗೆ ಭಾರತದಲ್ಲಿ 15 ವರ್ಷದೊಳಗಿನ ಮಕ್ಕಳ ಸಂಖ್ಯೆಗಿಂತ ವೃದ್ಧರ ಸಂಖ್ಯೆ ಹೆಚ್ಚಿರುತ್ತದೆ.

ಭಾರತದ ಶೇಕಡ 40ರಷ್ಟು ವೃದ್ಧರು ಬಡತನದಲ್ಲಿ ಬದುಕುತ್ತಿದ್ದಾರೆ. 18.7 ರಷ್ಟು ಜನರು ಯಾವುದೇ ಆದಾಯವಿಲ್ಲದೆ ಬದುಕುತ್ತಿದ್ದಾರೆ. ಇದು ವಯಸ್ಸಾದವರ ಜೀವನದ ಗುಣಮಟ್ಟ ಮತ್ತು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. 2022 ಮತ್ತು 2050ರ ನಡುವೆ, 80 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರ ಸಂಖ್ಯೆಯು ಶೇ.279 ರಷ್ಟು ಹೆಚ್ಚಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ರಾಜಕೀಯ ರಾಜ್ಯ

ಬೆಂಗಳೂರು: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ.50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು” ಎಂದು ಹೇಳಿದ್ದಾರೆ.