ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬಾಬು ಜಗಜೀವನರಾಮ್ Archives » Dynamic Leader
October 18, 2024
Home Posts tagged ಬಾಬು ಜಗಜೀವನರಾಮ್
ರಾಜ್ಯ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಸುಮನಹಳ್ಳಿ ಸರ್ಕಲ್ ಸಮೀಪದ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿದ ಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ ಸಂಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಈ ಉದ್ಘಾಟನಾ ಸಮಾರಂಭಕ್ಕೆ “ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ, ನಾವು ನೀವು ಎಲ್ಲರೂ ಜೊತೆಗೂಡಿ ಹಸಿರು ಕ್ರಾಂತಿಯ ಹರಿಕಾರ, ಕಾರ್ಮಿಕ ವರ್ಗದ ಹಿತಚಿಂತಕ, ರಾಷ್ಟ್ರದ ಹೆಮ್ಮೆಯ ಉಪಪ್ರಧಾನಿಯಾಗಿದ್ದ ಬಾಬು ಜಗಜೀವನ ರಾಮ್ ಅವರನ್ನು ಈ ಮೂಲಕ ಸ್ಮರಿಸಿ, ಗೌರವಿಸೋಣ” ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ನೀಡಿದ್ದಾರೆ.

ಬೆಳಿಗ್ಗೆ 11 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉಪಸ್ಥಿತರಿರುತ್ತಾರೆ. ಲೋಕಸಭೆಯ ಮಾಜಿ ಸ್ಪೀಕರ್ ಶ್ರೀಮತಿ ಮೀರಾಕುಮಾರ್ ಅವರು ಗೌರವಾನ್ವಿತ ಆಹ್ವಾನಿತರಾಗಿ ಭಾಗವಹಿಸಲಿರುವ ಈ ಕಾರ್ಯಕ್ರಮಕ್ಕೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯ

ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತರಾದ ಡಾ.ಬಾಬು ಜಗಜೀವನರಾಮ್ ಅವರ ಪುಣ್ಯಸ್ಮರಣೆಯನ್ನು ಇಂದು ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಸಿ.ಮಹದೇವಪ್ಪ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ  ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ಹಸಿರು ಕ್ರಾಂತಿಯ ಹರಿಕಾರರಾಗಿ, ಯುದ್ಧ ಕಾಲದ ಯಶಸ್ವಿ ರಕ್ಷಣಾ ಸಚಿವರಾಗಿ, ದುಡಿಯುವ ವರ್ಗದ ಹಿತರಕ್ಷಕ ಕಾರ್ಮಿಕ ಸಚಿವರಾಗಿ ಬಾಬು ಜಗಜೀವನ ರಾಮ್ ಅವರು ನವಭಾರತದ ನಿರ್ಮಾಣಕ್ಕೆ ನೀಡಿರುವ ಕೊಡುಗೆಯನ್ನು ದೇಶ ಸದಾ ಕಾಲ ಸ್ಮರಿಸುತ್ತದೆ. ಬಾಬೂಜಿಯವರ ಪುಣ್ಯಸ್ಮರಣೆಯಂದು ಹಿರಿಯ ಚೇತನಕ್ಕೆ ಗೌರವಪೂರ್ವಕ ನಮನಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರು, ಶೋಷಿತರ-ದಮನಿತರ ಧ್ವನಿಯಾಗಿ ಅಸ್ಪೃಶ್ಯತೆಯ ವಿರುದ್ಧ ತಮ್ಮ ಜೀವನದ ಉದ್ದಕ್ಕೂ ಹೋರಾಟವನ್ನು ಮಾಡಿದ್ದಾರೆ.