ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬುಡಕಟ್ಟು ಜನಾಂಗ Archives » Dynamic Leader
October 16, 2024
Home Posts tagged ಬುಡಕಟ್ಟು ಜನಾಂಗ
ದೇಶ

ಮಧ್ಯಪ್ರದೇಶದ ಆದಿವಾಸಿ ಯುವಕನ ಮೇಲೆ ಮುತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

ಮಧ್ಯಪ್ರದೇಶ ಸಿಧಿ ಜಿಲ್ಲೆಗೆ ಸೇರಿದ ಅದಿವಾಸಿ ಯುವಕನ ಮೇಲೆ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ, ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆಯೊಂದು ನಡೆದಿತ್ತು. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಈ ವಿಚಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಗಮನಕ್ಕೆ ಬಂದಿದ್ದು, ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಇಂದು ಮುಂಜಾನೆ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾವನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.     

ದೇಶ

ಜಗನ್ನಾಥ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗರ್ಭಗುಡಿ ಪ್ರವೇಶಿಸಲು ಅವಕಾಶ ನೀಡದ ಘಟನೆ ನಾನಾ ವಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳೆದ 20 ರಂದು ದೆಹಲಿಯ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ್ದರು. ಆಗ ಅವರು ಗರ್ಭಗುಡಿಯ ಹೊರಗೆ ಎರಡೂ ಕೈಗಳನ್ನು ಮೇಲೆತ್ತಿ ಪೂಜೆ ಮಾಡುತ್ತಿರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ಅದು ಕಳೆದ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ.

ಭಾರತದ ಪ್ರಥಮ ದ್ರೌಪದಿ ಮುರ್ಮು ಅವರಿಗೆ ಪೂಜೆ ಮಾಡಲು ಗರ್ಭಗುಡಿ ಪ್ರವೇಶಿಸಲು ಏಕೆ ಅವಕಾಶ ನೀಡಲಿಲ್ಲ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ. ಈ ಹಿಂದೆ ಇದೇ ದೇವಸ್ಥಾನದಲ್ಲಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್ ಮತ್ತಿತರರು ಗರ್ಭಗುಡಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಆದರೆ ಗಣರಾಜ್ಯದ ಅಧ್ಯಕ್ಷರಾದ ನಂತರವೂ ದ್ರೌಪದಿ ಮುರ್ಮು ಅವರಿಗೆ ಅವಕಾಶ ನೀಡಲಿಲ್ಲ ಏಕೆ ಎಂಬ ವಿವಾದ ತೀವ್ರವಾಗುತ್ತಿದೆ.

ಆದರೆ, ‘ಸಾಮಾನ್ಯವಾಗಿ ವಿಶೇಷ ಆಹ್ವಾನಿತರಾಗಿ ಬರುವವರಿಗೆ ಮಾತ್ರ ಗರ್ಭಗುಡಿಯೊಳಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗನ್ನಾಥ ಯಾತ್ರೆಯ ಪ್ರಾರಂಭದ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದರು.  ಹಾಗಾಗಿ ಗರ್ಭಗುಡಿಯೊಳಗೆ ಹೋಗಿ ಪೂಜೆ ಮಾಡುವ ಬದಲು ಹೊರಗೆ ನಿಂತು ಪೂಜೆ ಸಲ್ಲಿಸಿ ಹೋದರು.

ಈ ಹಿಂದೆ ಕೆಲವು ಸಚಿವರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಹಾಗಾಗಿ ಗರ್ಭಗುಡಿ ಪ್ರವೇಶಿಸಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ದ್ರೌಪದಿ ಮುರ್ಮು ವಿಶೇಷ ಆಹ್ವಾನಿತರಾಗಿ ಬಂದಿಲ್ಲ’ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಆದರೆ, ಅನೇಕರು ಇದನ್ನು ಒಪ್ಪಿಕೊಳ್ಳಲು ನಿರಾಕರಿಸಿ, ಇದು ಜಾತಿ ಅಸ್ಪೃಶ್ಯತೆ ಎಂದು ಟೀಕಿಸಿದ್ದಾರೆ.

ಈ ಕುರಿತು ಅಖಿಲ ಭಾರತ ಸಾಮಾಜಿಕ ನ್ಯಾಯ ಒಕ್ಕೂಟ ಹೊರಡಿಸಿರುವ ಪ್ರಕಟಣೆಯಲ್ಲಿ, “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶ್ರೀ ಜಗನ್ನಾಥ ದೇವಸ್ಥಾನದ ಗರ್ಭಗುಡಿಯೊಳಗೆ ಬಿಡಲಿಲ್ಲ ಎಂಬ ಸುದ್ದಿ ಆಘಾತಕಾರಿಯಾಗಿದೆ. ಈ ಸುದ್ದಿ ನಿಜವಾಗಿದ್ದರೆ, ಭಾರತ ಸಂವಿಧಾನದ 14-17ನೇ ವಿಧಿಯ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು. ಮಂತ್ರಿಗಳು ಗರ್ಭಗುಡಿ ಪ್ರವೇಶಿಸಿ ವಿಗ್ರಹಗಳನ್ನು ಪೂಜಿಸುವಾಗ ರಾಷ್ಟ್ರಪತಿಗಳು ಪ್ರವೇಶಿಸಬಾರದೇ?

ಅದೇ ರೀತಿ 2018ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಗೂ ಅವಕಾಶ ನೀಡಿರಲಿಲ್ಲ. ಈ ಬಗ್ಗೆ ದೂರು ಕೇಳಿ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇವು ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ಕ್ರೌರ್ಯ ಚಾಲ್ತಿಯಲ್ಲಿದೆ ಎಂಬುದನ್ನು ತೋರಿಸುತ್ತದೆ.

ರಾಷ್ಟ್ರಪತಿಯಾಗಿದ್ದರೂ ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಆದ್ದರಿಂದಲೇ ಭಾರತಕ್ಕೆ ವೈಚಾರಿಕತೆ ಮತ್ತು ಸಮಾನತೆಯ ದ್ರಾವಿಡ ಸಿದ್ಧಾಂತದ ಅಗತ್ಯವಿದೆ ಎಂದು ಹೇಳುತ್ತಿದ್ದೇವೆ. ಸಾಮಾಜಿಕ ನ್ಯಾಯದ ಆಂದೋಲನವನ್ನು ಭಾರತದಾದ್ಯಂತ ತೆಗೆದುಕೊಳ್ಳಬೇಕಾಗಿದೆ” ಎಂದು ಹೇಳಿದ್ದಾರೆ.

ಜಗನ್ನಾಥ ದೇವಾಲಯದ ಆಡಳಿತ ಮಂಡಳಿ ನೀಡಿರುವ ವಿವರಣೆ ತುಂಬಾ ವಿಚಿತ್ರವಾಗಿದೆ. ಇವರಂತೆಯೇ ಬಿಜೆಪಿಯ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿಯವರು ಇದ್ದಕ್ಕಿದ್ದಂತೆ ಪೂಜೆಗೆಂದು ಹೋದರೆ, ಅವರನ್ನು ಗರ್ಭಗುಡಿಯೊಳಗೆ ಬಿಡದೆ ಕಳುಹಿಸುತ್ತಿದ್ದರೇ? ಈ ದೇಶದ ಪ್ರಥಮ ಮಹಿಳಾ ಪ್ರಜೆ ಬಂದಾಗ, ನಿಯಮಗಳನ್ನು ಮುರಿದು ಗೌರವವನ್ನು ತೋರಿಸುವುದು ಸಂಪ್ರದಾಯವಾಗಿದೆ. ಆದರೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೆ ಮಾಡಲಿಲ್ಲ.

ಬುಡಕಟ್ಟು ಜನರೂ ಹಿಂದೂಗಳೇ ಎಂದು ಆರ್‌ಎಸ್‌ಎಸ್ ಪ್ರಚಾರ ಮಾಡಿದರೂ, ಅವರನ್ನು ಸನಾತನ ಧರ್ಮಕ್ಕೆ ತರಲು ಸಾಧ್ಯವಿಲ್ಲ ಎಂಬುದೇ ವಾಸ್ತವ. ಏಕೆಂದರೆ ಬುಡಕಟ್ಟು ಜನರು ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿದ್ದಾರೆ ಎಂಬುದು ಸತ್ಯ.