ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಭೂಕುಸಿತ Archives » Dynamic Leader
October 23, 2024
Home Posts tagged ಭೂಕುಸಿತ
ದೇಶ

ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾಗಿರುವ ಭೂಕುಸಿತಕ್ಕೆ ತಾಪಮಾನವೇ ಪ್ರಮುಖ ಕಾರಣ ಎಂಬ ಅಂಶ ಬಯಲಾಗಿದೆ!

“ಅರಬ್ಬೀ ಸಮುದ್ರದ ತಾಪಮಾನದಿಂದ ದಟ್ಟವಾದ ಮೋಡಗಳು ನಿರ್ಮಾಣಗೊಂಡು ಅಲ್ಪಾವಧಿಯಲ್ಲಿಯೇ ಭಾರಿ ಮಳೆಯಾಗಲು ಕಾರಣವಾಯಿತು” ಎಂದು ಋತುಮಾನಗಳ ಕುರಿತು ಅಧ್ಯಯನ ನಡೆಸುತ್ತಿರುವ ಹಿರಿಯ ವಿಜ್ಞಾನಿ ಅಭಿಲೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಾಯುಮಂಡಲದ ರಾಡಾರ್ ಸಂಶೋಧನಾ ಕೇಂದ್ರದ ನಿರ್ದೇಶಕ ಅಭಿಲೇಶ್, “ಇಡೀ ಕೊಂಕಣ ಪ್ರದೇಶದಲ್ಲಿ ಕಳೆದ ಎರಡು ವಾರಗಳಿಂದ ಮುಂಗಾರು ಮಳೆ ಚುರುಕುಗೊಂಡಿರುವುದೇ ಭೂಕುಸಿತಕ್ಕೆ ಕಾರಣ.

ಈ ಕಾರಣದಿಂದಾಗಿ ಕಾಸರಗೋಡು, ಕಣ್ಣೂರು, ವಯನಾಡು, ಕೋಳಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಎರಡು ವಾರಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಮಣ್ಣು ತುಂಬಾ ತೇವವಾಗಿತ್ತು. ಈ ಹಿನ್ನೆಲೆಯಲ್ಲಿ, ಅತಿಯಾದ ಕಪ್ಪು ಮೋಡಗಳು ಅರೇಬ್ಬೀ ಸಮುದ್ರದ ಕರಾವಳಿ ಪ್ರದೇಶಗಳಲ್ಲಿ ಸುತ್ತುವರಿದು, ಭಾರೀ ಮಳೆಯಾದ ಕಾರಣ, ಸಡಿಲವಾದ ಮಣ್ಣು ದುರ್ಬಲಗೊಂಡು ಭೂಕುಸಿತ ಸಂಭವಿಸಿದೆ.

ಅಂದರೆ, 2019 ರಲ್ಲಿ ಕೇರಳದಲ್ಲಿ ಪ್ರವಾಹ ಬಂದಾಗ ಮೋಡಗಳು ಎಷ್ಟು ದಟ್ಟವಾಗಿತ್ತೋ ಅದೇ ಮಟ್ಟಿಗೆ ಈಗಲೂ ಮೋಡಗಳು ದಟ್ಟವಾಗಿ ಸುತ್ತುವರಿದಿದೆ. ಇದಲ್ಲದೆ, ಆಗ್ನೇಯ ಅರಬ್ಬೀ ಸಮುದ್ರದ ಪ್ರದೇಶದಲ್ಲಿ ಏರಿಕೆಯಾಗುತ್ತಿರುವ ತಾಪಮಾನದಿಂದ ಅಲ್ಲೊಂದು ವಾಯುಮಂಡಲ ನಿರ್ಮಾಣವಾಗಿತ್ತು. ಇದಕ್ಕೂ ಹವಾಮಾನದ ತಾಪಮಾನಕ್ಕೂ ಸಂಬಂಧ ಇದೆ” ಎಂದು ಹೇಳಿದ್ದಾರೆ.

ದೇಶ

ತಿರುವನಂತಪುರಂ: ಕೇರಳದ ತಿರುವನಂತಪುರದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಕಳೆದ ಕೆಲವು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ಆ ಮೂಲಕ ಕೇರಳದ ವಯನಾಡು ಪ್ರದೇಶದಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಈ ಭಾರಿ ಮಳೆಯ ನಂತರ ಮುಂಜಾನೆ ಭೂಕುಸಿತ ಸಂಭವಿಸಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಸೂರಲ್ಮಲೈ ಪ್ರದೇಶದಲ್ಲಿ ಮೊದಲ ಭೀಕರ ಭೂಕುಸಿತ ಸಂಭವಿಸಿದೆ.

ನಂತರ, ಮುಂಜಾನೆ 4.30ಕ್ಕೆ 2ನೇ ಭಾರಿ ಮತ್ತೊಂದು ಭೂಕುಸಿತ ಸಂಭವಿಸಿದೆ. ಸತತ ಭೂಕುಸಿತದಿಂದಾಗಿ ವೈತ್ತಿರಿ, ವೆಲ್ಲೇರಿಮಲೈ ಮತ್ತು ಮೇಪ್ಪಾಡಿ ಪ್ರದೇಶಗಳು ತೀವ್ರ ಹಾನಿಗೊಳಗಾಗಿವೆ. ಅಟ್ಟಮಲೈನಿಂದ ಮುಂಡಗಿ ಪ್ರದೇಶಕ್ಕೆ ತೆರಳಲು ಇದ್ದ ಒಂದೇ ಒಂದು ಸೇತುವೆ ಕೂಡ ಕೊಚ್ಚಿ ಹೋಗಿದೆ.

ಹೀಗಾಗಿ, 500 ಮನೆಗಳಿಗೆ ಸೇರಿದ ಸಾವಿರಾರು ಜನರು ಪ್ರತ್ಯೇಕ ದ್ವೀಪದಲ್ಲಿ ಸಿಕ್ಕಿಕೊಂಡಂತೆ ಆಗಿದ್ದಾರೆ. ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಹೆಲಿಕಾಪ್ಟರ್ ಮೂಲಕ ಸಂತ್ರಸ್ತ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ. ಹಲವರ ಸ್ಥಿತಿ ತಿಳಿಯದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.

ಭೂಕುಸಿತದಲ್ಲಿ ನೂರಾರು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬಳಿಕ ನಾಪತ್ತೆಯಾದವರನ್ನು ರಕ್ಷಿಸುವ ಕಾರ್ಯ ಚುರುಕುಗೊಂಡಿದೆ. ಅರಕ್ಕೋಣಂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಧಾವಿಸಿದೆ.

ಭೂಕುಸಿತ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯ ನಡೆಸಲು ತೊಂದರೆಯಾಗಿದೆ ಎಂದು ವರದಿಗಳಾಗಿವೆ. ಏತನ್ಮಧ್ಯೆ, ವಯನಾಡು ಭೂಕುಸಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

“ವಯನಾಡಿನ ಕೆಲವು ಭಾಗಗಳು ಭೂಕುಸಿತದಿಂದ ಹಾನಿಗೊಳಗಾಗಿವೆ. ನನ್ನ ಆಲೋಚನೆಗಳು ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ಇವೆ; ಗಾಯಾಳುಗಳೊಂದಿಗೆ ಪ್ರಾರ್ಥನೆಗಳೂ ಇವೆ. ಎಲ್ಲಾ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ” ಕೇರಳಕ್ಕೆ ಎಲ್ಲ ನೆರವು ನೀಡಲು ಕೇಂದ್ರ ಸರಕಾರ ಸಿದ್ಧವಿದೆ ಎಂದ ಮೋದಿ, ಕೇರಳ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.

ಅಲ್ಲದೆ, “ವಯನಾಡು ಭೂಕುಸಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ.ಗಳನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಾಗುವುದು” ಎಂದೂ ಅವರು ಹೇಳಿದ್ದಾರೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ರಾಜ್ಯ ಸಚಿವ ಸುರೇಶ್ ಗೋಪಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ವಯನಾಡಿನ ಪರಿಸ್ಥಿತಿಯನ್ನು ವಿಚಾರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು:
“ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಮೃತಪಟ್ಟ ಘಟನೆ ನೋವಿನ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಹಾಗೂ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಪರ್ತಿಪಕ್ಷದ ನಾಯಕ ರಾಹುಲ್ ಗಾಂಧಿ:
“ವಯನಾಡಿನ ಮೇಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ. ಇನ್ನೂ ಸಿಕ್ಕಿಬಿದ್ದಿರುವವರನ್ನು ಶೀಘ್ರದಲ್ಲೇ ರಕ್ಷಿಸಲಾಗುವುದು ಎಂದು ನಾನು ಭಾವಿಸುತ್ತೇನೆ. ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ.

ಎಲ್ಲಾ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಕಾರ್ಯಗಳಿಗೆ ನೆರವು ಅಗತ್ಯವಿದ್ದರೆ ನಮಗೆ ತಿಳಿಸಲು ನಾನು ಅವರನ್ನು ಕೇಳಿದ್ದೇನೆ. ನಾನು ಕೇಂದ್ರ ಸಚಿವರೊಂದಿಗೆ ಮಾತನಾಡುತ್ತೇನೆ ಮತ್ತು ವಯನಾಡಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಕೇಳುತ್ತೇನೆ. ಎಲ್ಲಾ ಯುಡಿಎಫ್ (UDF) ಕಾರ್ಯಕರ್ತರು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಆಡಳಿತಕ್ಕೆ ಸಹಾಯ ಮಾಡಲು ನಾನು ವಿನಂತಿಸುತ್ತೇನೆ” ಎಂದು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ತಿಳಿಸಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ:
“ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಲು ಮತ್ತು ತುರ್ತು ವೈದ್ಯಕೀಯ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ನಾನು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ:
“ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಘಟನೆಗಳು ತೀವ್ರ ಕಳವಳಕಾರಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯುದ್ಧಕಾಲದ ಆಧಾರದ ಮೇಲೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲು ಎರಡನೇ ತಂಡ ತೆರಳಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ದೇಶ

ಚೆನ್ನೈ: ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದ ನಾಮಕ್ಕಲ್ ಮತ್ತು ಕೃಷ್ಣಗಿರಿ ಜಿಲ್ಲೆಗಳ ಇಬ್ಬರು ಲಾರಿ ಚಾಲಕರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಧನ ನೀಡುವಂತೆ ಆದೇಶಿಸಿದ್ದಾರೆ.

ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಸಂತಾಪ ಸೂಚಿಸಿ ಹೊರಡಿಸಿರುವ ಸಂದೇಶದಲ್ಲಿ, “ನಾಮಕ್ಕಲ್ ಜಿಲ್ಲೆಯ ಪುದುಚತ್ರಂ ವೃತ್ತದ ತಾತಯ್ಯಂಗಾರಪಟ್ಟಿ ಗ್ರಾಮದ ಚಿನ್ನನ್ ಮತ್ತು ಕೃಷ್ಣಗಿರಿ ಜಿಲ್ಲೆಯ ಊತ್ತಂಗರೈ ಒಳ ವೃತ್ತದ ಎಂ.ವೆಲ್ಲಾಪಟ್ಟಿ ಗ್ರಾಮದ ಮುರುಗನ್ ಇಬ್ಬರೂ, ಕಳೆದ ಜುಲೈ 16 ರಂದು ಎಲ್‌ಪಿಜಿ ಟ್ಯಾಂಕರ್ ಲಾರಿಯಲ್ಲಿ ಚಾಲಕರಾಗಿ ಹೋಗಿದ್ದಾಗ, ಕರ್ನಾಟಕ ರಾಜ್ಯ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ವೃತ್ತದ ಶಿರೂರು ಪ್ರದೇಶದಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದರು ಎಂಬ ದುಃಖದ ಸುದ್ದಿಯನ್ನು ಕೇಳಿ ನನಗೆ ಅತೀವ ದುಃಖ ಮತ್ತು ನೋವಾಗಿದೆ” ಎಂದು ಹೇಳಿದ್ದಾರೆ.

ಅಲ್ಲದೆ, ಅಪಘಾತದಲ್ಲಿ ಸಾವನ್ನಪ್ಪಿದ ಟ್ರಕ್ ಚಾಲಕರ ಕುಟುಂಬಗಳಿಗೆ ಮತ್ತು ಅವರ ಸಂಬಂಧಿಕರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುವದರ ಜೊತೆಗೆ ಮುಖ್ಯಮಂತ್ರಿಗಳ ಸಾಮಾನ್ಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂಪಾಯಿಗಳನ್ನು ನೀಡಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.