ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮತ ಎಣಿಕೆ Archives » Dynamic Leader
October 17, 2024
Home Posts tagged ಮತ ಎಣಿಕೆ
ರಾಜಕೀಯ

ಅಂಚೆ ಮತಗಳನ್ನು ಮೊದಲು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಿದ ನಂತರವೇ ವಿದ್ಯುನ್ಮಾನ ಮತಯಂತ್ರದಲ್ಲಿ ದಾಖಲಾದ ಮತಗಳನ್ನು ಎಣಿಕೆ ಮಾಡಬೇಕು!

ನವದೆಹಲಿ: ಇಂಡಿಯಾ ಮೈತ್ರಿಕೂಟದ  ನಾಯಕರುಗಳಾದ ಟಿ.ಆರ್.ಬಾಲು, ಅಭಿಷೇಕ್ ಮನು ಸಿಂಘ್ವಿ ಮತ್ತು ಇತರರು ದೆಹಲಿಯಲ್ಲಿ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಮತ ಎಣಿಕೆ ವೇಳೆ ಯಾವುದೇ ಅವ್ಯವಹಾರ ನಡೆಯದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆದಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಇಂಡಿಯಾ ಮೈತ್ರಿಕೂಟದ ನಾಯಕರುಗಳಾದ ಟಿ.ಆರ್.ಬಾಲು, ಅಭಿಷೇಕ್ ಮನು ಸಿಂಘ್ವಿ, ಸೀತಾರಾಮ್ ಯೆಚೂರಿ, ಟಿ.ರಾಜಾ ಮತ್ತಿತರರು ದೆಹಲಿಯಲ್ಲಿ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಮತ ಎಣಿಕೆ ವೇಳೆ ಯಾವುದೇ ಅವ್ಯವಹಾರ ನಡೆಯದೇ ಇರುವುದನ್ನು ಖಚಿತಪಡಿಸಬೇಕು ಎಂದು ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “3 ಪ್ರಮುಖ ಸಮಸ್ಯೆಗಳ ಕುರಿತು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಮತ ಎಣಿಕೆ ನ್ಯಾಯಯುತವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆಯದೇ ಇರುವುದನ್ನು ಖಚಿತಪಡಿಸಬೇಕು. ಅಂಚೆ ಮತಪತ್ರಗಳನ್ನು ಮೊದಲು ಎಣಿಕೆ ಮಾಡಿ ತಕ್ಷಣವೇ ಫಲಿತಾಂಶಗಳನ್ನು ಪ್ರಕಟಿಸಬೇಕು.

ಅಂಚೆ ಮತಗಳ ಎಣಿಕೆಯ ನಂತರವೇ ವಿದ್ಯುನ್ಮಾನ ಮತಯಂತ್ರದಲ್ಲಿ ದಾಖಲಾದ ಮತಗಳನ್ನು ಎಣಿಕೆ ಮಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದೇವೆ. ಅಂಚೆ ಮತಪತ್ರಗಳ ಫಲಿತಾಂಶವನ್ನು ಪ್ರಕಟಿಸದೆ ಮತಯಂತ್ರಗಳಲ್ಲಿ ದಾಖಲಾದ ಮತಗಳನ್ನು ಪ್ರಕಟಿಸುವುದು ಕಾನೂನಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದರು.

INDIA LEADERS MET CHIEF ELECTION COMMISSIONER

INDIA leaders met Chief Election Commissioner and other members of the ECI with following demands:

•Issue clear, detailed guidelines for the counting process on 04.06.2024.

•Clarify counting postal ballots first, per Conduct of Election Rules 1961.

•Ensure CCTV-monitored safe movement of Control Units.

•Verify date/time on Control Units & confirm voting start/end times.

•Specify slips, tags, and details for counting agents.

•Display poll date, candidates, and total votes before candidate-wise results.

•Avoid rushing; allow agents to record results before proceeding. Strengthen transparency and faith in the electoral process!

ಬೆಂಗಳೂರು ರಾಜಕೀಯ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಬೆಂಗಳೂರು ಜಿಲ್ಲೆಗೆ ಸೇರಿರುವ ಒಟ್ಟು 32 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ನಗರದ 5 ಸ್ಥಳಗಳಲ್ಲಿ ಏರ್ಪಡಿಸಲಾಗಿದ್ದು, ಮತ ಎಣಿಕೆ ಸ್ಥಳಗಳಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ ದೃಷ್ಠಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

1. ಮತ ಎಣಿಕೆ ಕೇಂದ್ರ: ಮೌಂಟ್ ಕಾರ್ಮಲ್ ಕಾಲೇಜು, ವಸಂತ ನಗರ. ವಿಧಾನಭಾ ಕ್ಷೇತ್ರಗಳು: ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಪುಲಿಕೇಶಿನಗರ, ಸರ್ವಜ್ಞನಗರ ಹಾಗೂ ಸಿ.ವಿ.ರಾಮನ್ ನಗರ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಪೂರ್ವ ಮತ್ತು ಡಿಸಿಪಿ ಕೇಂದ್ರ ವಿಭಾಗ.

2. ಮತ ಎಣಿಕೆ ಕೇಂದ್ರ: ಸೆಂಟ್ ಜೋಷಫ್ ಇಂಡಿಯನ್ ಹೈಸ್ಕೂಲ್. ವಿಧಾನಭಾ ಕ್ಷೇತ್ರಗಳು: ಆನೇಕಲ್, ಬೆಂಗಳೂರು ದಕ್ಷಿಣ, ಮಹದೇವಪುರ, ಬ್ಯಾಟರಾಯನಪುರ, ಯಲಹಂಕ ಹಾಗೂ ದಾಸರಹಳ್ಳಿ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಅಪರಾಧ ಮತ್ತು ಡಿಸಿಪಿ ವೈಟ್ ಫೀಲ್ಡ್ ವಿಭಾಗ.

3. ಮತ ಎಣಿಕೆ ಕೇಂದ್ರ: ಬಿಎಂಎಸ್ ಮಹಿಳಾ ಕಾಲೇಜು, ಬಸವನಗುಡಿ. ವಿಧಾನಭಾ ಕ್ಷೇತ್ರಗಳು: ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಿಕ್ಕಪೇಟೆ, ಚಾಮರಾಜಪೇಟೆ, ಆರ್.ಆರ್.ನಗರ ಹಾಗೂ ಶಿವಾಜಿನಗರ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ದಕ್ಷಿಣ ವಿಭಾಗ ಮತ್ತು ಡಿಸಿಪಿ ಕಮಾಂಡ್ ಸೆಂಟರ್.

4. ಮತ ಎಣಿಕೆ ಕೇಂದ್ರ: ಎಸ್.ಎಸ್.ಎಂ.ಆರ್.ವಿ ಕಾಲೇಜು, ತಿಲಕನಗರ. ವಿಧಾನಭಾ ಕ್ಷೇತ್ರಗಳು: ಪದ್ಮನಾಭ ನಗರ, ಗೋವಿಂದರಾಜನಗರ, ವಿಜಯನಗರ, ಜಯನಗರ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ಹಾಗೂ ಬಸವನಗುಡಿ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಆಗ್ನೇಯ ವಿಭಾಗ ಮತ್ತು ಡಿಸಿಪಿ ಸಿಎಆರ್ ದಕ್ಷಿಣ.

5. ಮತ ಎಣಿಕೆ ಕೇಂದ್ರ: ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್, ದೇವನಹಳ್ಳಿ. ವಿಧಾನಭಾ ಕ್ಷೇತ್ರಗಳು: ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ. ಉಸ್ತುವಾರಿ ಅಧಿಕಾರಿಗಳು: ಡಿಸಿಪಿ ಈಶಾನ್ಯ ವಿಭಾಗ ಮತ್ತು ಡಿಸಿಪಿ ವಿವಿಐಪಿ ಭದ್ರತೆ.

ಮತ ಎಣಿಕೆ ದಿನದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮವಾಗಿ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಲಂ 144 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಉಪಬಂಧಗಳು ಅನ್ವಯವಾಗುವಂತೆ ದಿನಾಂಕ: 13-05-2023ರ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿರುವುದರ ಜೊತೆಗೆ ಮೇಲ್ಕಂಡ ಅವಧಿಯಲ್ಲಿ ನಗರದಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿರುತ್ತದೆ.

ಮೇಲ್ಕಂಡ ಮುಂಜಾಗರೂಕತಾ ಕ್ರಮಗಳ ಜೊತೆಗೆ ಚುನಾವಣಾ ಫಲಿತಾಂಶವು ಪ್ರಕಟವಾದ ನಂತರ ದಿನಾಂಕ: 13-05-2023ರ ಮುಂಜಾಣೆಯಿಂದ ದಿನಾಂಕ: 14-05-2023ರ ಬೆಳಗ್ಗೆವರೆಗೆ ಸಶಸ್ತ್ರ ದಳವನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಕ್ರಮ ವಹಿಸಲಾಗಿರುತ್ತದೆ. ಈ ಬಂದೋಬಸ್ತ್ ಕರ್ತವ್ಯಕ್ಕೆ ಅಪರ ಪೊಲೀಸ್ ಅಯ್ಯುಕ್ತರು, ಪೂರ್ವ ಮತ್ತು ಪಶ್ಚಿಮ ರವರ ನೇರ ಉಸ್ತುವಾರಿಯಲ್ಲಿ 10 ಡಿಸಿಪಿ, 15 ಎಸಿಪಿ, 38 ಪೊಲೀಸ್ ಇನ್ಸ್ ಪೆಕ್ಟರ್, 250 ಪಿಎಸ್ಐ 1200 ಸಿಬ್ಬಂಧಿಗಳ ಜೊತೆಗೆ 12 ಕೇಂದ್ರಿಯ ಸಿ.ಎ.ಪಿ.ಎಫ್ ತುಕಡಿ, 36 ಕೆ.ಎಸ್.ಆರ್.ಪಿ / ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಸರಹದ್ದಿನಲ್ಲಿ ವಿಶೇಷ ಗಸ್ತು ನೇಮಕ ಮಾಡಿದ್ದು, ಪ್ರತಿಯೊಂದು ವಿಭಾಗದ ಉಸ್ತುವಾರಿಗೆ ಒಬ್ಬರು ಸಹಾಯಕ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ.