ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮಧ್ಯಪ್ರದೇಶ ಚುನಾವಣೆ Archives » Dynamic Leader
October 17, 2024
Home Posts tagged ಮಧ್ಯಪ್ರದೇಶ ಚುನಾವಣೆ
ದೇಶ

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುವ ಯೋಜನೆಗೆ ಮತ್ತೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಭರವಸೆ ನೀಡಿದ್ದಾರೆ.

ಮಧ್ಯಪ್ರದೇಶದ ಒಟ್ಟು 230 ಕ್ಷೇತ್ರಗಳಿಗೆ ನವೆಂಬರ್ 17 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ದಸರಾ ಶುಭಾಶಯಗಳನ್ನು ಹೇಳಿಕೊಂಡಿದ್ದಾರೆ.

ಅದರಲ್ಲಿ, “ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಪ್ರದೇಶದ ಜನರ ನಂಬಿಕೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲು ನಾವು ಯಾವುದೇ ಹಂತಕ್ಕೂ ಹೋಗುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಸ್ಥಗಿತಗೊಳಿಸಲಾಗಿದ್ದ ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುವ ಯೋಜನೆ ಮತ್ತೆ ಆರಂಭಿಸಲಾಗುವುದು. ಅಲ್ಲದೆ ಅರ್ಚಕರ ಸಹಾಯಧನ ಹೆಚ್ಚಳ ಮಾಡಲಾಗುವುದು ಹಾಗೂ ಅಕ್ರಮವಾಗಿ ಒತ್ತುವರಿ ಮಾಡಲಾಗಿರುವ ದೇವಸ್ಥಾನಗಳ ಜಮೀನುಗಳನ್ನು ಮರಳಿ ಪಡೆಯಲು ಕ್ರಮ ವಹಿಸಲಾಗುವುದು” ಎಂದು ಹೇಳಿದ್ದಾರೆ.

ರಾಜಕೀಯ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಡೆಯಿತು. ಮೇ 13 ರಂದು ಮತ ಎಣಿಕೆ ನಡೆಯಿತು. ಇದರಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಸೋಲಿಸಿ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿತು.

ಈ ಗೆಲುವಿನೊಂದಿಗೆ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಸಂಪೂರ್ಣವಾಗಿ ಮುಚ್ಚಿದೆ ಎಂದು ರಾಜಕೀಯ ವಿಮರ್ಶಕರು ಅಭಿಪ್ರಾಯಪಡುತ್ತಿದ್ದಾರೆ. ಮೇಲಾಗಿ ಕರ್ನಾಟಕದಲ್ಲಿ ಬಿಜೆಪಿಯ ಸೋಲು ಇತರ ರಾಜ್ಯಗಳಲ್ಲೂ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಹೇಳಿದ್ದವು.

ಈ ಹಿನ್ನಲೆಯಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಳಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಇತ್ತೀಚಿನ ಸಮೀಕ್ಷೆಯ ಫಲಿತಾಂಶಗಳು ಹೇಳುತ್ತಿವೆ. ಅಲ್ಲಿ ನಡೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಾನಗಳಲ್ಲಿ 114 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು.

ಆದರೆ ಕಳೆದ ವರ್ಷ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಪರಿಣಾಮವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನವೇ ಹೆಚ್ಚಾಗಿತ್ತು.

ಸದ್ಯದಲ್ಲೇ ಅಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನವಭಾರತ್ ಸಮಾಚಾರ್ (Navbharat Samachar) ಎಂಬ ಸುದ್ದಿ ಸಂಸ್ಥೆ, ಮಧ್ಯಪ್ರದೇಶದಲ್ಲಿ ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದರ ಕುರಿತು ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಆ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 55 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಮತ್ತು ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

ಈ ಹಿಂದಿನ ಸಮೀಕ್ಷೆಗಳು ಕೂಡ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದವು ಎಂಬುದು ಗನಾರ್ಹ.