ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮಾಜಿ ಸೈನಿಕರು Archives » Dynamic Leader
October 16, 2024
Home Posts tagged ಮಾಜಿ ಸೈನಿಕರು
ದೇಶ ರಾಜಕೀಯ

ಜೈಪುರ: ‘ಬಡವರನ್ನು ವಂಚಿಸುವುದು ಕಾಂಗ್ರೆಸ್ ತಂತ್ರ; ಕಳೆದ 50 ವರ್ಷಗಳಿಂದಲೂ ಅದನ್ನೇ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಆಯೋಜಿಸಿದ್ದ ಬೃಹತ್ ರ‍್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿಯ 9 ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಇಂದು (ಮೇ 31) ಪ್ರಧಾನಿ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ಮೆಗಾ ರ‍್ಯಾಲಿಯನ್ನು ಉದ್ಘಾಟಿಸಿದರು. ಇದೇ ರೀತಿಯ ರ‍್ಯಾಲಿಗಳನ್ನು ದೇಶಾದ್ಯಂತ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಒಂದು ತಿಂಗಳ ಕಾಲ ಈ ರ‍್ಯಾಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ಸಂಸದರು, ಬಿಜೆಪಿ ನಾಯಕರು ಭಾಗವಹಿಸಿ, ತಮ್ಮ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ.

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ರಾಜಸ್ಥಾನದ ಅಜ್ಮೀರ್‌ಗೆ ಬರುವ ಮೊದಲು, ಬ್ರಹ್ಮ ದೇವಾಲಯ ಪುಷ್ಕರಕ್ಕೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತು. ಬ್ರಹ್ಮದೇವನ ಆಶೀರ್ವಾದದಿಂದ, ಭಾರತದಲ್ಲಿ ಹೊಸ ಸೃಷ್ಟಿಗಳ ಯುಗ ನಡೆಯುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ 9 ವರ್ಷಗಳ ಆಡಳಿತ ಪೂರ್ಣಗೊಂಡಿದೆ. ಈ 9 ವರ್ಷಗಳ ಸರ್ಕಾರದ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ತರಲಾಗಿದೆ.

ಬ್ರಹ್ಮ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ

2014ರ ಮೊದಲು ಪರಿಸ್ಥಿತಿ ಹೇಗಿತ್ತು? ಆ ಸಂದರ್ಭದಲ್ಲಿ ಭಯೋತ್ಪಾದಕ ದಾಳಿಗಳು ನಡೆದವು. ಗಡಿಯಲ್ಲಿ ರಸ್ತೆ ನಿರ್ಮಿಸಲು ಕಾಂಗ್ರೆಸ್ ಸರಕಾರ ಹೆದರುತಿತ್ತು. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಾಣುತಿತ್ತು. ಕಾಂಗ್ರೆಸ್ ಸರ್ಕಾರ ರಿಮೋಟ್ ಕಂಟ್ರೋಲ್ ಮೂಲಕ ಕೆಲಸ ಮಾಡುತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಕೇವಲ 60% ಲಸಿಕೆಗಳನ್ನು ಮಾತ್ರ ಜನರಿಗೆ ನೀಡಲಾಗುತ್ತಿತ್ತು. 100ರಲ್ಲಿ 40 ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಜೀವ ಉಳಿಸುವ ಲಸಿಕೆಗಳನ್ನು ನೀಡಲು ಅಸಮರ್ಥರಾಗಿದ್ದರು. ಪ್ರಸ್ತುತ, 100% ಲಸಿಕೆಗಳನ್ನು ಎಲ್ಲರಿಗೂ ನೀಡಲಾಗುತ್ತಿದೆ.

ಈಗ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ. ದೇಶದಲ್ಲಿ 100% ಲಸಿಕೆಗಳ ವ್ಯಾಪ್ತಿಯನ್ನು ಸಾಧಿಸಲು ಇನ್ನೂ 40 ವರ್ಷಗಳನ್ನು ತೆಗೆದುಕೊಳ್ಳುತಿತ್ತು. ಜೀವ ಉಳಿಸುವ ಲಸಿಕೆಗಳು ಲಭ್ಯವಿಲ್ಲದಿದ್ದಾಗ, ಸತ್ತ ಬಡ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆಯನ್ನು ನೀವು ಊಹಿಸಬಲ್ಲಿರಾ? ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಸುಳ್ಳು ಭರವಸೆ ನೀಡುವುದು ಹೊಸದೇನಲ್ಲ. ಇದನ್ನು 50 ವರ್ಷಗಳ ಹಿಂದಿನಿಂದಲೂ ಮಾಡುತ್ತಿದೆ.

ಇದು ಬಡವರಿಗೆ ಆ ಪಕ್ಷ ಮಾಡುವ ದೊಡ್ಡ ದ್ರೋಹವಾಗಿದೆ. ಬಡವರಿಗೆ ಮೋಸ ಮಾಡುವುದೇ ಕಾಂಗ್ರೆಸ್ ತಂತ್ರ. ಇದರಿಂದ ರಾಜಸ್ಥಾನದ ಜನರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಒಂದು ಹುದ್ದೆ, ಒಂದು ಪಿಂಚಣಿ ಹೆಸರಿನಲ್ಲಿ, ಮಾಜಿ ಸೈನಿಕರಿಗೆ ದ್ರೋಹ ಬಗೆದಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾಜಿ ಸೈನಿಕರಿಗೆ ಬಾಕಿ ಹಣ ನೀಡಿ, ಅವರ ಅಭಿವೃದ್ಧಿಗೆ ನೆರವಾದರು’ ಎಂದು ಪ್ರಧಾನಿ ಮೋದಿ ಮಾತನಾಡಿದರು.