ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮಾವೋವಾದ Archives » Dynamic Leader
October 17, 2024
Home Posts tagged ಮಾವೋವಾದ
ದೇಶ

ನವದೆಹಲಿ: 2026ರ ವೇಳೆಗೆ ದೇಶದಲ್ಲಿ ಎಡಪಂಥೀಯ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಾವೋವಾದಿ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಇಂದು ನಡೆದ ಪ್ರಮುಖ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದರು:

ಸುಧಾರಿತ ಭದ್ರತಾ ಪರಿಸ್ಥಿತಿಯಿಂದಾಗಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಮಾವೋವಾದಿ ಪೀಡಿತ ಪ್ರದೇಶದಲ್ಲಿ ಶೇ.70 ರಷ್ಟು ಹೆಚ್ಚಿನ ಮತದಾನವಾಗಿದೆ. ಮೊದಲು ಈ ಕ್ಷೇತ್ರಗಳಲ್ಲಿ ಶೂನ್ಯ ಮತದಾನವಾಗಿತ್ತು. ಈ ಹಿಂದೆ ಭದ್ರತಾ ಪಡೆಗಳು ರಕ್ಷಣಾ ಕಾರ್ಯದಲ್ಲಿ ಮಾತ್ರ ನಿರತರಾಗಿದ್ದರು. ಈಗ ಅವರು ಆಕ್ರಮಣಕಾರಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಮಹಾರಾಷ್ಟ್ರ, ಜಾರ್ಖಂಡ್, ಬಿಹಾರ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶ ಮಾವೋವಾದಿಗಳ ದಾಳಿಗೆ ತುತ್ತಾಗಿವೆ. ಮೋದಿ ಸರಕಾರದ ಕಾರ್ಯತಂತ್ರದಿಂದ ಎಡಪಂಥೀಯ ಭಯೋತ್ಪಾದನೆ ಶೇ.72ರಷ್ಟು ಕುಸಿದಿದ್ದು, 2010ಕ್ಕೆ ಹೋಲಿಸಿದರೆ 2023ರ ವೇಳೆಗೆ ಸಾವಿನ ಸಂಖ್ಯೆ ಶೇ.86ರಷ್ಟು ಕಡಿಮೆಯಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ ಕೇಂದ್ರವು ಮಾರ್ಚ್ 2026 ರೊಳಗೆ ಎಡಪಂಥೀಯ ಭಯೋತ್ಪಾದನೆಯ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಬದ್ಧವಾಗಿದೆ.

ಎಡಪಂಥೀಯ ಭಯೋತ್ಪಾದನೆಯಿಂದ ಬಾಧಿತವಾಗಿರುವ ಜಿಲ್ಲೆಗಳ ಸಂಖ್ಯೆ ಈಗ ಕೇವಲ 38 ಆಗಿದೆ. ಕೇಂದ್ರ ಸರ್ಕಾರವು ಪೀಡಿತ ರಾಜ್ಯಗಳ ದೂರದ ಪ್ರದೇಶಗಳಿಗೆ ಅಭಿವೃದ್ಧಿ ಯೋಜನೆಗಳನ್ನು ಕೊಂಡೊಯ್ಯುವುದು ಮತ್ತು ರಸ್ತೆ ಹಾಗೂ ಮೊಬೈಲ್ ಸಂಪರ್ಕಕ್ಕೆ ಉತ್ತೇಜನ ನೀಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ದೇಶ

ನವದೆಹಲಿ: 14 ವರ್ಷಗಳ ಹಿಂದೆ ಖ್ಯಾತ ಲೇಖಕಿ ಅರುಂಧತಿರಾಯ್ ಮಾಡಿದ ವಿವಾದಾತ್ಮಕ ಭಾಷಣದ ವಿಚಾರಣೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿದ್ದಾರೆ.

ಪ್ರಸಿದ್ಧ ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿರುವ ಅರುಂಧತಿರಾಯ್, 2010ರಲ್ಲಿ ದೆಹಲಿಯಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಕಾಶ್ಮೀರ ಸಮಸ್ಯೆ ಮತ್ತು ಮಾವೋವಾದಿಗಳ ಪರವಾದ ನಿಲುವಿನ ಕುರಿತು ಮಾತನಾಡಿದ್ದರು. ಅವರ ಮಾತು ರಾಷ್ಟ್ರಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿತ್ತು.

ಈ ಸಂಬಂಧ ಅರುಂಧತಿರಾಯ್ ಹಾಗೂ ಪ್ರೊಫೆಸರ್ ಸೌಕತ್ ಹುಸೇನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ದೆಹಲಿ ಮೆಟ್ರೋಪಾಲಿಟನ್ ಕೋರ್ಟ್ ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಈ ಹಿನ್ನೆಲೆಯಲ್ಲಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಇಂದು ಅನುಮೋದನೆ ನೀಡಿದ್ದಾರೆ.