ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮುಸ್ಲಿಂ ಹಕ್ಕುಗಳು Archives » Dynamic Leader
October 20, 2024
Home Posts tagged ಮುಸ್ಲಿಂ ಹಕ್ಕುಗಳು
ದೇಶ

ಡಿ.ಸಿ.ಪ್ರಕಾಶ್

ಭಾರತದ ಸಂವಿಧಾನವು ಈ ಸಮಾಜದಲ್ಲಿ ಧಾರ್ಮಿಕ ಸಾಮರಸ್ಯವನ್ನು ಮತ್ತು ಸಮಾನತೆಯನ್ನು ಬೆಳೆಸಿದೆ. ಅದಕ್ಕಾಗಿಯೇ ಆ ಸಮಾನತೆಯನ್ನು ಒಪ್ಪಿಕೊಳ್ಳಲು ಆರ್‌ಎಸ್‌ಎಸ್ (RSS) ನಿರಾಕರಿಸುತ್ತಿದೆ.

ಭಾಷೆಯಿಂದ, ಪದ್ಧತಿಗಳಿಂದ, ನಮ್ಮ ಪೂರ್ವಜರ ಮಾರ್ಗಗಳನ್ನು ಅಳವಡಿಸಿಕೊಳ್ಳುವುದರಿಂದ ಇತಿಹಾಸ, ಪ್ರೀತಿ ಮತ್ತು ಜ್ಞಾನ ಬೆಳೆಯಬೇಕೆ ಹೊರತು, ಗುಲಾಮಗಿರಿ ಬೆಳೆಯಬಾರದು ಎಂಬುದನ್ನು ಕಳೆದ 1,000 ವರ್ಷಗಳ ರಾಜಕೀಯದಿಂದ ನಾವು ಕಲಿತಿದ್ದೇವೆ.

ಅದರ ಭಾಗವಾಗಿಯೇ ಡಾ.ಬಿ.ಆರ್.ಅಂಬೇಡ್ಕರ್ (Dr.B.R.Ambedkar) ಅವರು ಸಂವಿಧಾನದಲ್ಲಿ ಸ್ವಯಂ ನಿರ್ಣಯದ ಹಕ್ಕು ಮತ್ತು ನಿಮ್ಮ ಇಷ್ಟದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕನ್ನು ಒತ್ತಿ ಹೇಳಿದರು. ಈ ಕ್ರಮದಿಂದಾಗಿ ಧಾರ್ಮಿಕ ಸಾಮರಸ್ಯವನ್ನು ಮತ್ತು ಎಲ್ಲರನ್ನೂ ಸಮಾನವಾಗಿ ಕಾಣುವ ವ್ಯವಸ್ಥೆ ಈ ಸಮಾಜದಲ್ಲಿ ಚಿಗುರೊಡೆಯಿತು. ಅದಕ್ಕಾಗಿಯೇ ಆ ಸಮಾನತೆಯನ್ನು ಒಪ್ಪಿಕೊಳ್ಳಲು ಆರ್‌ಎಸ್‌ಎಸ್ ನಿರಾಕರಿಸಿದೆ.

ಆರ್‌ಎಸ್‌ಎಸ್ ಹುಟ್ಟಿನ ಆಧಾರದ ಮೇಲೆ ಜನರ ನಡುವೆ ವಿಭಜನೆಯನ್ನು ಸೃಷ್ಟಿಸುವ… ಮನು ಧರ್ಮವನ್ನು ಉತ್ತೇಜಿಸುವ ಸಂಘಟನೆಯಾಗಿದೆ. ಅಲ್ಲದೆ, ಉತ್ತರ ಪ್ರದೇಶದ ಬಾಬರಿ ಮಸೀದಿ ಧ್ವಂಸಕ್ಕೆ ಮತ್ತು ಭಾರತದ ಹಲವೆಡೆ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳಲು ಮೂಲ ಕಾರಣವಾಗಿದೆ.

ಆರ್‌ಎಸ್‌ಎಸ್ ಆರಂಭವಾಗಿ 98 ವರ್ಷಗಳಾಗಿವೆ. ಇನ್ನು ಒಂದು ತಿಂಗಳಲ್ಲಿ 99ನೇ ವರ್ಷ ಪೂರ್ಣಗೊಳ್ಳಲಿದೆ. ಅಂದರೆ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುನ್ನವೇ ಈ ಸಂಘಟನೆಯನ್ನು ಆರಂಭಿಸಲಾಗಿತ್ತು. ಅದರ ಪ್ರತ್ಯೇಕತಾವಾದವು ಕೂಡ ತುಂಬಾ ಹಳೆಯದ್ದೆ.

ಇಲ್ಲಿ ಪ್ರಾಚೀನತೆ ಎಂಬುದು ಸಂಸ್ಕೃತಿಯಲ್ಲ! ಪ್ರತ್ಯೇಕತೆಯಾಗಿ ಕಾಣಿಸಿಕೊಳ್ಳುತ್ತದೆ. ಕಾರಣ ಆರ್‌ಎಸ್‌ಎಸ್ ಎಲ್ಲರಿಗೂ ಆಡಳಿತ ನಡೆಸಲು ಅವಕಾಶ ನೀಡುವುದಿಲ್ಲ. ಎಲ್ಲರಿಗೂ ಎಲ್ಲಾ ಹಕ್ಕುಗಳನ್ನು ಹೊಂದಲು ಅವಕಾಶ ನೀಡುವುದಿಲ್ಲ. ಅದಕ್ಕೆ ಅತ್ಯುತ್ತಮ ಪುರಾವೆ ಎಂದರೆ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಭಾರತೀಯ ಸಂವಿಧಾನವನ್ನು ಮೊದಲಿನಿಂದಲೂ ನಾಶಮಾಡಲು ಬಯಸುವ ಗುಂಪು ಆರ್‌ಎಸ್‌ಎಸ್ ಆಗಿರುವುದು.

ಅಂದು ಕೇವಲ ಕೂಗಾಟವಾಗಿದ್ದ ಪ್ರತಿಭಟನೆ, ಈಗ ಅಧಿಕಾರವನ್ನು ವಶಪಡಿಸಿಕೊಳ್ಳುವ ಮೂಲಕ ಶಾಸನ ತಿದ್ದುಪಡಿಯಾಗಿ ಬದಲಾಗಿದೆ. ಅಲ್ಪಸಂಖ್ಯಾತರಿಗೆ ಹಕ್ಕು ನೀಡುವ ವಿವಿಧ ಕಾನೂನುಗಳಲ್ಲಿ ಬಿಜೆಪಿ ಬದಲಾವಣೆ ತರಲು ಆರ್‌ಎಸ್‌ಎಸ್‌ನ ಸಿದ್ಧಾಂತವೇ ಕಾರಣವಾಗಿದೆ.

ಆರ್‌ಎಸ್‌ಎಸ್ ಬಿಜೆಪಿಯ ಮೂಲಾಧಾರವಾಗಿದೆ. ಇಂದು ಬಿಜೆಪಿಯ ನೇತೃತ್ವ ವಹಿಸಿರುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲರೂ ಆರ್‌ಎಸ್‌ಎಸ್‌ನ ಕಟ್ಟಾ ಅನುಯಾಯಿಗಳೇ.

ಆ ಕಾರಣದಿಂದಲೆ, ಆಡಳಿತ ಶಕ್ತಿಯೊಂದಿಗೆ ಕಾನೂನನ್ನು ಬದಲಾಯಿಸಿದರೆ ಸಾಲದು… ಅಲ್ಪಸಂಖ್ಯಾತರನ್ನು ಗುಲಾಮರನ್ನಾಗಿ ಮಾಡಿದರೆ ಸಾಲದು… ಸೈದ್ಧಾಂತಿಕ ಹೇರಿಕೆಯ ಅಗತ್ಯವಿದೆ ಎಂಬ ದೃಷ್ಟಿಯಿಂದ ಹೊಸ ಶಿಕ್ಷಣ ನೀತಿ, ರಾಜ್ಯ ಸರ್ಕಾರದ ಪಠ್ಯಕ್ರಮಗಳಲ್ಲಿ ಬದಲಾವಣೆ ಸೇರಿದಂತೆ ಅನೇಕ ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ನಡೆಸುತ್ತಿದೆ.

ಅಂತಹ ಚಟುವಟಿಕೆಗಳ ಮುಂದುವರಿಕೆಯಾಗಿ, ಮಧ್ಯಪ್ರದೇಶದ ಉನ್ನತ ಶಿಕ್ಷಣ ಪಠ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕರ ಪುಸ್ತಕಗಳನ್ನು ಸೇರಿಸುವುದೂ ಆಗಿದೆ. ಈ ನಡೆ ತಪ್ಪು ಎಂದು ವಿರೋಧ ಪಕ್ಷಗಳು ಪ್ರತಿಪಾದಿಸುತ್ತಿದ್ದರೆ, ಸಂಸ್ಕೃತಿ ಬೆಳೆಸುವುದೇ ಆರ್‌ಎಸ್‌ಎಸ್‌ ಉದ್ದೇಶ ಎಂದು ಬಿಜೆಪಿ ತಿರುಚಿ ಹೇಳುತ್ತಿದೆ.

ಹೀಗಾಗಿ, ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶದ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್, “ಮುಂದಿನ ಪೀಳಿಗೆಗೆ ನಮ್ಮ ಹಿಂದಿನ ಸಂಸ್ಕೃತಿಯನ್ನು ಕಲಿಸುವುದು ತಪ್ಪೇ? ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಈ ಮೂಲಕ, ಆರ್‌ಎಸ್‌ಎಸ್‌ನ ಮೂಲಭೂತ ರಾಜಕೀಯವಾದ ವಿಭಜನೆಯನ್ನು ಸಾಂಸ್ಕೃತಿಕೀಕರಣಗೊಳಿಸಿ ಜನರನ್ನು ದಿಕ್ಕು ತಪ್ಪಿಸುವ ಕೃತ್ಯವನ್ನು ಇತಿಹಾಸಕಾರರು ಮತ್ತು ರಾಜಕೀಯ ನಾಯಕರು ತೀವ್ರವಾಗಿ ಟೀಕಿಸುತ್ತಿದ್ದಾರೆ.

ರಾಜ್ಯ

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿಯು ಪುನರ್ ರಚನೆಯಾಗಿದ್ದು, ಜನಾಬ್ ಜಬ್ಬಾರ್ ಕಲಬುರ್ಗಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಂದು ಕೆ.ಎಂ.ಯುನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಖಾಸಿಂ ಸಾಬ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೊತೆಗೆ ಗೌರವ ಅಧ್ಯಕ್ಷರಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳಾದ ಜಿ.ಎ.ಬಾವ ರವರನ್ನು, ಶೇಕಬ್ಬ ಅವರನ್ನು ಕಾರ್ಯಾಧ್ಯಕ್ಷರಾಗಿ, ಉತ್ತರ ಕರ್ನಾಟಕದ ಸಂಚಾಲಕರಾಗಿ ಬಾಗಲಕೋಟೆ ಜಿಲ್ಲೆಯ ವಕ್ಫ್ ಬೋರ್ಡ್ನ ಅಧ್ಯಕ್ಷರಾದ ಎಂ.ಎಲ್.ಸರ್ಕಾವಾಸ ಅವರನ್ನು, ದಕ್ಷಿಣ ಕರ್ನಾಟಕದ ಸಂಚಾಲಕರಾಗಿ ಚಿಕ್ಕಮಗಳೂರಿನ ಅಬ್ದುಲ್ ವಾಹಿದ್ ಮಾಗುಂಡಿ ಅವರನ್ನು ನೇಮಿಸಲಾಯಿತು. ಅಲ್ಲದೆ ಒಟ್ಟು 21 ಸದಸ್ಯರ ರಾಜ್ಯಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಲಾಗಿದೆ ಎಂದು ಖಾಸಿಂ ಸಾಬ್ ತಿಳಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ನಂಬಿ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಆ ಕಾರಣಕ್ಕಾಗಿ ವರ್ತಮಾನದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಈ ಸರ್ಕಾರದ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ. ಎಂಬುದನ್ನು ರಾಜ್ಯ ಸರ್ಕಾರ ಮರೆಯಬಾರದು ಎಂದು ಕರ್ನಾಟಕ ಮುಸ್ಲಿಮ್ ಯುನಿಟಿಯ ನೂತನ ಅಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಯವರು ಪತ್ರಿಕಾ ಹೇಳಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಕೆ.ಎಂ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್

2ಬಿ ಮೀಸಲಾತಿ ಪರಿಹಾರ ಮುಂತಾದ ಹಲವು ಬೇಡಿಕೆಗಳು ಸೇರಿದಂತೆ ಪರಿಹರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕರ್ನಾಟಕದ ಮುಸ್ಲಿಮ್ ಸಮುದಾಯವು ಇದೀಗ ರಾಜಕೀಯವಾಗಿ ಅತ್ಯಂತ ಪ್ರಬುದ್ಧವಾಗಿದೆ. ಆದ್ದರಿಂದ ಈ ಸತ್ಯವನ್ನು ಅರಿತು ರಾಜ್ಯ ಸರ್ಕಾರವು ಮುಸ್ಲಿಮ್ ಸಮುದಾಯದ ಸಮಗ್ರ ಕಲ್ಯಾಣ ಹಾಗೂ ಸಾಮಾಜಿಕ ನ್ಯಾಯದ ಬೇಡಿಕೆಗಳನ್ನು ಈಡೇರಿಸುವ ಯೋಜನೆಗಳನ್ನು ಕಾರ್ಯಗತ ಗೊಳಿಸುವುದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಸಚಿವರುಗಳ ಹೊಣೆಗಾರಿಕೆಯಾಗಿದೆ.

ಕರ್ನಾಟಕದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಕಳೆದ ನಾಲ್ಕು ವರ್ಷಗಳಲ್ಲಿ ಸಾಕಷ್ಟು ನೋವು, ಅನ್ಯಾಯ, ಹಿಂಸೆ ಅನುಭವಿಸಿದೆ. ಗೋವು ಸಂರಕ್ಷಕರ ಹೆಸರಿನಲ್ಲಿ ಅನೈತಿಕ ಪೋಲಿಸ್ ಗಿರಿ, 4% ಒಬಿಸಿ ಮೀಸಲಾತಿ ಮತ್ತು ಅಲ್ಪಸಂಖ್ಯಾತ ವಿಧ್ಯಾರ್ಥಿ ವೇತನವನ್ನು ಕಡಿತಗೊಳಿಸಿ, ಸುಮಾರ 6 ಲಕ್ಷಕ್ಕೂ ಹೆಚ್ಚು ಮಕ್ಕಳ ಭವಿಷ್ಯವನ್ನು ಹಾಳು ಮಾಡಿರುವುದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ನಿಗಮದಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನು ದ್ವೇಷದಿಂದ ರದ್ದುಗೊಳಿಸಿ, ಅನುದಾನಗಳನ್ನು ಕಡಿತಗೊಳಿಸಿದ ಕಾರಣ ರಾಜ್ಯದ ಮುಸ್ಲಿಮರಿಗೆ ಅಘಾದ ನೋವು ಮತ್ತು ಅನ್ಯಾಯವಾಗಿದೆ.

ಈ ಎಲ್ಲಾ ಮುಸ್ಲಿಮರ ಮೇಲಿನ ಅಸಮಾನತೆಗಳನ್ನು ಹೋಗಲಾಡಿಸಿ, ನ್ಯಾಯ ಮತ್ತು ಭದ್ರತೆಯನ್ನು ಕೊಡುವುದು ಈ ಸರ್ಕಾರದ ಹೊಣೆ ಮತ್ತು ಜವಾಬ್ದಾರಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ನೂತನ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಹೇಳಿಕೆ ನೀಡಿದ್ದಾರೆ. ರಾಜ್ಯದ ಮುಸ್ಲಿಮರ ಸಾಮಾಜಿಕ ನ್ಯಾಯ, ಎಲ್ಲಾ ಕ್ಷೇತ್ರಗಳಲ್ಲಿ ಸಮಪಾಲು ಹಾಗು ಸರಕಾರಿ ಯೋಜನೆಗಳ ಸಮಗ್ರ ಬಳಕೆಯ ಗುರಿಯುಳ್ಳ ಕರ್ನಾಟಕ ಮುಸ್ಲಿಮ್ ಯೂನಿಟಿಯು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕುಗಳ ಮಟ್ಟದಲ್ಲಿ ವಿಸ್ತರಿಸಿ ಇಡೀ ರಾಜ್ಯಾದಂತ್ಯ ಮುಸ್ಲಿಮರ ಸಾಮಾಜಿಕ ಜಾಗೃತಿಯಲ್ಲಿ ತೊಡಗಲಿದೆ ಎಂದು ಖಾಸಿಂ ಸಾಬ್ ತಿಳಿಸಿದರು.