ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮೇಕೆದಾಟು Archives » Page 2 of 2 » Dynamic Leader
October 23, 2024
Home Posts tagged ಮೇಕೆದಾಟು (Page 2)
ದೇಶ

ಡಿ.ಸಿ.ಪ್ರಕಾಶ್

ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಪುನರುಚ್ಚರಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಇದೇ ಅಣ್ಣಾಮಲೈ “ತಮಿಳುನಾಡು ಮುಖ್ಯಮಂತ್ರಿ ಏನಾದರೂ ಕರ್ನಾಟಕಕ್ಕೆ ಹೋಗಿ, ಕಾಂಗ್ರೆಸ್ ಕರೆದಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದರೆ, ತಮಿಳುನಾಡಿನಲ್ಲಿ ಸ್ಟಾಲಿನ್ ಅವರಿಗೆ ಪ್ರವೇಶ ನೀಡುವುದಿಲ್ಲ” ಎಂದು ಭಹಿರಂಗ ಹೇಳಿಕೆ ನೀಡಿದ್ದರು.

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀಡಬೇಕಿದ್ದ ಜೂನ್ ತಿಂಗಳ ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿರುವುದಕ್ಕೆ ಅಣ್ಣಾಮಲೈ ಪ್ರತಿಕ್ರಿಯೆ ಇದಾಗಿತ್ತು. ಈಗ ಮುಂದುವರೆದು “ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ಪುನರುಚ್ಚರಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈತನನ್ನು ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷ ನೇಮಕ ಮಾಡಿತ್ತು. ಅದೂ ಅಲ್ಲದೇ ಈ ಆಸಾಮಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾಗ, ನಮ್ಮ ಕನ್ನಡಿಗರು ಇವರನ್ನು “ರಿಯಲ್ ಸಿಂಗಂ” ಎಂದೆಲ್ಲಾ ಕರೆದು ಕೊಂಡಾಡಿದ್ದರು. ಆದರೆ ಇವರು ಮೇಕೆದಾಟುವಿನಲ್ಲಿ ಅಣೆಕಟ್ಟುವುದಕ್ಕೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ನೀರು ಕೊಡದ ಕರ್ನಾಟಕಕ್ಕೆ ಹೋದರೆ, ತಮಿಳುನಾಡಿಗೆ ವಾಪಸ್ಸ್ ಬರಲು ಅವಕಾಶ ನೀಡುವುದಿಲ್ಲ ಮತ್ತು ಗೋ ಬ್ಯಾಕ್ ಸ್ಟಾಲಿನ್ ಎಂದು ಬ್ಯಾನರ್ಗಳೊಂದಿಗೆ ಕಪ್ಪು ಬಲೂನ್ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧಮ್ಕಿ ಹಾಕಿದ ಅಣ್ಣಾಮಲೈ, ಈಗ ಮೇಕೆದಾಟು ಅಣೆಕಟ್ಟಿಗೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದರ ಬಗ್ಗೆ ಕೆಲವು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಬಳಿ ಮಾತನಾಡಿದಾಗ, “ಮೇಕೆದಾಟು ಅಣೆಕಟ್ಟು ವಿರೋಧಿ, ಕನ್ನಡ ದ್ರೋಹಿ ಅಣ್ಣಾಮಲೈ ಕರ್ನಾಟಕಕ್ಕೆ ಪ್ರವೇಶ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಮ್ಮ ನೀರನ್ನು ಕುಡಿದು, ನಮ್ಮಲ್ಲಿ ಬೆಳದ ಆತನಿಗಿ ಎಷ್ಟು ಅಹಂಕಾರ ಇರಬಹುದು” ಎಂದು ಹೇಳಿಕೊಂಡಿದ್ದಾರೆ.

ರಾಜಕೀಯ

ಬೆಂಗಳೂರು: “ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ; ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ; ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.