ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮೋದಿ Archives » Page 7 of 7 » Dynamic Leader
October 23, 2024
Home Posts tagged ಮೋದಿ (Page 7)
ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಹಾಸ್ಯ ಪ್ರಜ್ಞೆ ಎಲ್ಲರಿಗೂ ಅಗತ್ಯ; ಹಾಸ್ಯಕ್ಕೆ ಭಾವನೆಗಳನ್ನು ಪರಿವರ್ತಿಸುವ ಶಕ್ತಿ ಇದೆ. ಮಹಾತ್ಮ ಗಾಂಧೀಜಿಯವರು “ನನಗೆ ಹಾಸ್ಯ ಪ್ರಜ್ಞೆ ಇಲ್ಲದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ” ಎಂದು ಹೇಳಿದರಂತೆ.

ಆದರೆ ಪ್ರಧಾನಿ ನರೇಂದ್ರ ಮೋದಿಯವರು ಆತ್ಮಹತ್ಯೆಯನ್ನು ತಮಾಷೆ ಎಂಬ ಹೆಸರಿನಲ್ಲಿ ವ್ಯಾಖ್ಯಾನಿಸಿ, ಭಾರತದ ಯುವ ಪೀಳಿಗೆಗೆ ಅವಮಾನ ಮಾಡಿದ್ದಾರೆ. ಹಾಸ್ಯವು ಯಾರ ಹೃದಯವನ್ನೂ ನೋಯಿಸದಂತೆ ಇರಬೇಕು ಎಂಬುದು ಸಾಮಾನ್ಯ ನಿಯಮ.

ಬಿಜೆಪಿ ಪರಿವಾರವನ್ನು ಹೊಗಳುವುದು ಮತ್ತು ಇತರರನ್ನು ನಿಂದಿಸುವುದೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ರಿಪಬ್ಲಿಕ್ ಟಿವಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಒಬ್ಬ ಪ್ರೊಫೆಸರ್ ಮಗಳು, ‘ನನಗೆ ಬದುಕಲು ಇಷ್ಟವಿಲ್ಲ ಮತ್ತು ನಾನು ಕಂಗಾರಿಯಾ ಸರೋವರಕ್ಕೆ ಹಾರಿ ಸಾಯುತ್ತೇನೆ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಳಂತೆ ಮರುದಿನ ಪ್ರಾಧ್ಯಾಪಕರು ಪತ್ರವನ್ನು ನೋಡಿ ಇಷ್ಟು ವರ್ಷ ಹೇಳಿದರೂ , ಅವಳು ಇನ್ನೂ ಕಂಗಾರಿಯಾ ಸರೋವರದ ಹೆಸರನ್ನು ತಪ್ಪಾಗಿಯೇ ಬರೆದಿದ್ದಾಳೆ’ ಎಂದು ಕೋಪಗೊಂಡರೆಂತೆ ಎಂದು ಹಾಸ್ಯ ಮಾಡಿದ್ದಾರೆ. ಈ ರೀತಿಯ ಕ್ರೂರ ಹಾಸ್ಯಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಿರ್ದಿಷ್ಟ ವ್ಯಕ್ತಿಗಳ ಹೆಸರುಗಳು ಒಂದೇ ರೀತಿಯಲ್ಲಿ ಕೊನೆಗೊಳ್ಳುತ್ತದೆ ಎಂದು ಲೇವಡಿ ಮಾಡಿದ್ದ ಕಾರಣಕ್ಕೆ, ಅದನ್ನು ದೊಡ್ಡ ಸಮಸ್ಯೆಯನ್ನಾಗಿ ಮಾಡಿ; ಸೂರತ್‌ನಲ್ಲಿ ಪ್ರಕರಣ ದಾಖಲಿಸಿ; ತಕ್ಷಣ ತನಿಖೆ ನಡೆಸಿ; ಶಿಕ್ಷೆ ವಿಧಿಸಿ; ಅವರ ಸಂಸದ ಸ್ಥಾನವನ್ನೂ ರದ್ದುಪಡಿಸಿ, ಮನೆಯಿಂದ ಹೊರಹಾಕಲಾಯಿತು. ಅಷ್ಟರಮಟ್ಟಿಗೆ ಆಡಳಿತಗಾರರಿಗೆ ‘ಹಾಸ್ಯ ಪ್ರಜ್ಞೆ’ ಹೆಚ್ಚು.

ಭಾರತದಲ್ಲಿ ಯುವಕರ ಆತ್ಮಹತ್ಯೆ ಪ್ರಮಾಣ ಆತಂಕಕಾರಿಯಾಗಿದೆ. ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ, 2021ರಲ್ಲಿ 1 ಲಕ್ಷದ 64 ಸಾವಿರದ 33 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ತಿಳಿದುಬಂದಿದೆ. 1990ರ ದಶಕದಲ್ಲಿ ಆಧುನಿಕ ಉದಾರೀಕರಣ ನೀತಿಗಳ ಅನುಷ್ಠಾನದ ನಂತರ, ಭಾರತದ ಜನರ ಜೀವನೋಪಾಯಕ್ಕೆ ತೀವ್ರ ತೊಂದರೆಯಾಗಿದೆ.

ಜೀವನದಲ್ಲಿ ಅಭದ್ರತೆ ಇದ್ದಂತೆ ಕಾಣುತ್ತದೆ ಎಂದು ಹದಿಹರೆಯದವರು ತಮ್ಮ ಭಾವನೆಗಳನ್ನು ದಾಖಲಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಅನುಸರಿಸುತ್ತಿರುವ ಆರ್ಥಿಕ ನೀತಿಗಳಿಂದ ನಿರುದ್ಯೋಗ ಹೆಚ್ಚುತ್ತಿದೆ. ವರ್ಷಕ್ಕೆ 2 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿದರು. ಈ ಬಗ್ಗೆ ಕೇಳಿದರೆ ಯುವಕರು ಪಕೋಡ ಮಾರಿ ಬದುಕಬಹುದು ಎಂದು ಸಲಹೆ ನೀಡುತ್ತಾರೆ.

ಭಾರತದಲ್ಲಿ ಯುವಕರು ಅದರಲ್ಲೂ ಯುವತಿಯರೇ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿವಿಧ ಅಂಕಿ ಅಂಶಗಳು ತೋರಿಸುತ್ತಿರುವ ಹಿನ್ನಲೆಯಲ್ಲಿ, ಆತ್ಮಹತ್ಯೆ ಮಾಡಿಕೊಳ್ಳುವವರ ಸ್ಥಿತಿಯನ್ನು ತಮಾಷೆಯಾಗಿ ಪರಿವರ್ತಿಸುವುದು ವಿನೋದವಲ್ಲ. ಅದೊಂದು ಕ್ರೂರ ಹಾಸ್ಯ.

ರಾಜಕೀಯ

ರಜೆಯ ದಿನಗಳಲ್ಲೂ ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ!

ಪ್ರವಾಸೋದ್ಯಮ ಮತ್ತು ಆರ್ಥಿಕ ಕ್ಷೇತ್ರಗಳನ್ನು ಉತ್ತೇಜಿಸಲು ದೇಶದ ಪ್ರಮುಖ ನಗರಗಳಲ್ಲಿ ‘ವಂದೇ ಭಾರತ್’ ರೈಲುಗಳನ್ನು ನಿರ್ವಹಿಸಲಾಗುತ್ತಿದೆ. ಆದರೆ ಈ ರೈಲುಗಳು ಸಂಚರಿಸುವ ಸ್ಥಳಗಳು ವಿವಾದಗಳಿಂದ ಕೂಡಿದೆ.

ಹಸುವಿಗೆ ಡಿಕ್ಕಿ ಹೊಡೆದಿದ್ದರಿಂದ ರೈಲಿನ ಮುಂಭಾಗದ ಭಾಗಗಳು ಜಖಂಗೊಂಡಿತು. ಅದೇ ರೀತಿ, ಪ್ರಧಾನಿ ಮೋದಿ ಪ್ರತಿ ಬಾರಿ ವಂದೇ ಭಾರತ್ ರೈಲು ಧ್ವಜಾರೋಹಣ ಮಾಡುವಾಗ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ. ಭಾನುವಾರವೂ ಶಾಲಾ ಸಮವಸ್ತ್ರದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿರುವುದು ಟೀಕೆಗೆ ಗುರಿಯಾಗಿದೆ. ಅದೇ ರೀತಿ ಶಾಲೆಗೆ ರಜೆ ಇರುವ ಸೆಪ್ಟೆಂಬರ್ 8 ರಂದು ಶನಿವಾರ ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸುವಹಾಗೆ ಕಾರ್ಯಕ್ರಮ ರೋಪಿಸಿರುವುದು ವಿವಾದಕ್ಕೀಡಾಗಿದೆ. ಶಾಲಾ ಸಮವಸ್ತ್ರದಲ್ಲಿ ಕುಳಿತ ವಿದ್ಯಾರ್ಥಿಗಳನ್ನು ಆಕಸ್ಮಿಕವಾಗಿ ಗಮನಿಸಿ ಅವರೊಂದಿಗೆ ಸಂವಾದ ನಡೆಸುವಹಾಗೆ ಸ್ಕ್ರಿಪ್ಟ್ ರೆಡಿಮಾಡಲಾಗಿದೆಯಂತೆ.

ಸಾಂದರ್ಭಿಕ ಚಿತ್ರ

ಈ ಹಿನ್ನಲೆಯಲ್ಲಿ ಚೆನ್ನೈನಿಂದ ಕೊಯಮತ್ತೂರಿಗೆ ತೆರಳಬಹುದಾದ ‘ವಂದೇ ಭಾರತ್’ ರೈಲನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರು  ಏಪ್ರಿಲ್ 8 ರಂದು (ನಾಳೆ) ತಮಿಳುನಾಡಿಗೆ ಬರುತ್ತಿದ್ದಾರೆ. ತಮಿಳುನಾಡಿನೊಳಗೆ ಚಲಿಸುವ ಮೊದಲ ‘ವಂದೇ ಭಾರತ್’ ರೈಲು ಇದಾಗಿದೆ. ಇದು ದಕ್ಷಿಣ ಭಾರತದ ಎರಡನೇ ರೈಲು.

ಫೆಬ್ರವರಿ 15, 2019 ರಂದು ದೆಹಲಿ ಮತ್ತು ವಾರಣಾಸಿ ನಡುವೆ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲಾಯಿತು. ಪ್ರಸ್ತುತ 11 ವಂದೇ ಭಾರತ್ ರೈಲುಗಳು ಓಡುತ್ತಿವೆ. 8ರಂದು ಚೆನ್ನೈ-ಕೊಯಮತ್ತೂರು ನಡುವಿನ 12ನೇ ವಂದೇ ಭಾರತ್ ರೈಲು ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶಾದ್ಯಂತ 100ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳನ್ನು ಓಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಪ್ರತಿ ವಂದೇ ಭಾರತ್ ರೈಲಿನಲ್ಲಿ 1 ಪ್ರಥಮ ದರ್ಜೆ ಎಸಿ ಕೋಚ್, 3 ಸೆಕೆಂಡ್ ಕ್ಲಾಸ್ ಎಸಿ ಕೋಚ್‌ಗಳು ಮತ್ತು 11 ಥರ್ಡ್ ಕ್ಲಾಸ್ ಎಸಿ ಕೋಚ್‌ಗಳಿವೆ ಎಂಬುದು ಗಮನಿಸಬೇಕಾದ ಸಂಗತಿ. The PM is also set to inaugurate the Chennai-Coimbatore Vande Bharat Express and Tambaram- Sengottai Express in Tamil Nadu on April 8, 2023.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಬೆಂಗಳೂರು: ‘ಅದಾನಿ ಗ್ರೂಪ್ ಕಂಪೆನಿಗಳು ಅಕ್ರಮಗಳಲ್ಲಿ ತೊಡಗಿವೆ’ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ ನಂತರ ಅದಾನಿ ಎಂಟರ್‌ಪ್ರೈಸಸ್ ಷೇರುಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮವನ್ನು ಬೀರುತ್ತದೆ ಎಂದು ವಿರೋಧ ಪಕ್ಷಗಳು ಹಾಗೂ ಆರ್ಥಿಕ ತಜ್ಞ್ಯರೆಲ್ಲ ಕಳವಳ ವ್ಯಕ್ತ ಪಡಿಸುತ್ತಿದ್ದಾರೆ. ವಿರೋಧಪಕ್ಷಗಳ ಒಕ್ಕೊರಳಿನ ಒತ್ತಾಯದಿಂದ ಸಂಸತ್ ನಲ್ಲಿ ಕಲಾಪಗಳು ನಡೆಯದೆ ಹಲವಾರು ಬಾರಿ ಮುಂದೂಡಲ್ಪಟ್ಟವು.

ಈ ಹಿನ್ನಲೆಯಲ್ಲಿ ಫೆಬ್ರವರಿ 8 ರಂದು ಸುಮಾರು 9 ಗಂಟೆಗಳ ಕಾಲ ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅದಾನಿಯ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೆ, ನೆಹರು ಕುಟುಂಬವನ್ನು ತರಾಟೆಗೆ ತೆಗೆದುಕೊಂಡರು. ‘ನೆಹರೂ ವಂಶಸ್ಥರೇಕೆ ಅವರ ಉಪನಾಮ ಬಳಸಲ್ಲ’ ಎಂಬುದನ್ನು ಒಂದು ವಿಷಯವಾಗಿ ಮುನ್ನಲೆಗೆ ತಂದು, ಬಿಜೆಪಿ ಸದಸ್ಯರನ್ನು ನಗೆಗಡಲಲ್ಲಿ ತೇಲಿಸಲು ಲೇವಡಿ, ಹಾಸ್ಯ ಚಟಾಕಿ ಹಾರಿಸುತ್ತಾ ಕಾಲ ಕಳೆದರು. ದೇಶವಿರುವ ಪರಿಸ್ಥಿತಿಯಲ್ಲಿ ಮೋದಿಗೆ ಹಾಷ್ಯತನ ಬೇಕೆ? ಎಂಬುದನ್ನು ಜನ  ಕೇಳುತ್ತಿದ್ದಾರೆ. ಭಾರತೀಯ ಪದ್ಧತಿಯಂತೆ – ಪ್ರಪಂಚದ ಪದ್ಧತಿಯಂತೆ ಗಂಡು ಮಕ್ಕಳ ಕುಟುಂಬದ ಹೆಸರೇ ಮುಂದುವರಿಯುತ್ತದೆ. ನೆಹರೂಗೆ ಮಗನಿರಲಿಲ್ಲ. ಇಂದಿರಾ ಒಬ್ಬಳೇ ಮಗಳು. ಆದ್ದರಿಂದ ಅವರ ಪತಿ ಫಿರೋಜ್ ಗಾಂಧಿಯ ಹೆಸರನ್ನು ಉಪನಾಮವಾಗಿ ಬಳಸುತ್ತಿದ್ದಾರೆ. ಇದು ಪ್ರಧಾನಿಗೆ ಗೊತ್ತಿಲ್ಲವೇ?

2014ರಲ್ಲಿ ಅದಾನಿ ಪುತ್ರನ ವಿವಾಹವಾಗಿತ್ತು. ಈ ಮದುವೆಗೆ ಜಗತ್ತಿನಾದ್ಯಂತ ಕ್ಲಾಸ್ ಒನ್ ಶ್ರೀಮಂತರೆಲ್ಲ ಬಂದು ಹೋದರು. ಆದರೆ, ನರೇಂದ್ರ ಮೋದಿಯವರು ಮಾತ್ರ ಮೂರು ದಿನಗಳು ಅಲ್ಲಿಯೇ ಉಳಿದು, ಅದಾನಿ ಪುತ್ರನ ವಿವಾಹದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆದರೆ, ಮೋದಿ ಅವರ ತಾಯಿ ಇತ್ತೀಚೆಗೆ ನಿಧನರಾದಾಗ, ಅವರು ಕೆಲವೇ ಗಂಟೆಗಳಲ್ಲಿ ಅವರ ಅಂತಿಮ ವಿಧಿಗಳನ್ನು ಪೂರ್ಣಗೊಳಿಸಿ ಹೊರನಡೆದರು. ಪ್ರದಾನಿ ಮೋದಿಗೆ ತಾಯಿಗಿಂತ ದೇಶ ಸೇವೆಯೇ ದೊಡ್ಡದು ಎಂಬಂತೆ ಅಂದು ಬಿಂಬಿಸಲಾಯಿತು. ಆದರೆ, ಮೋದಿಗೆ ತನ್ನ ತಾಯಿಗಿಂತ, ಈ ದೇಶದ ಸೇವೆಗಿಂತ; ಅದಾನಿ ಪುತ್ರನ ವಿವಾಹವೇ ಅಂದು ಮುಖ್ಯವಾಗಿತ್ತು ಎಂಬುದನ್ನು ಇನ್ನು ಯಾರೂ ಮರೆತಿಲ್ಲ.    

‘ಮೂವತ್ತು ವರ್ಷಗಳಿಂದ ಕುಟುಂಬದೊಂದಿಗೆ ಇರಲಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಹೇಳಿದ್ದರು. ಹಾಗಾದರೆ, ಇಷ್ಟು ವರ್ಷ ಅಮ್ಮನನ್ನು ಸಾಕುತ್ತಿದ್ದ ಅಣ್ಣನೂ ಸೇರಿದಂತೆ ಜೊತೆಯಲ್ಲಿ ಹುಟ್ಟಿದವರು ಬಂದು ಶಾಸ್ತ್ರೋಕ್ತವಾಗಿ ನಡೆದುಕೊಂಡಿರಬೇಕು ಅಲ್ಲವೇ? ಆದರೆ, ಅಂದು ನಾವು ಮೋದಿಯನ್ನು ಮಾತ್ರ ನೋಡುತ್ತಿದ್ದೆವು. ಪ್ರಧಾನಿಯ ತಾಯಿಯ ಸಾವನ್ನು ಹಾಗೂ ಪ್ರಧಾನಿಯನ್ನು ಲೈವ್ ಟೆಲಿಕಾಸ್ಟ್ ಮಾಡಿ, ತಮ್ಮ ಟಿ.ಆರ್.ಪಿ.ಯನ್ನು ಹೆಚ್ಚಿಸಿಕೊಂಡ ಮಾದ್ಯಮಗಳು, ಪ್ರಧಾನಿ ನರೇಂದ್ರ ಮೋದಿಗೆ ತಾಯಿಗಿಂತ ಈ ದೇಶ ಸೇವೆಯೇ ದೊಡ್ಡದು ಎಂಬಂತೆ ಬಿಂಬಿಸಿದವು. 

ಸಂಸತ್ತಿನಲ್ಲಿ ಮಾತನಾಡಿದ ರಾಹುಲ್ ಗಾಂಧಿಯವರು, ನೀವು (ಮೋದಿ) ಇಸ್ರೇಲ್, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕೆ ಭೇಟಿ ನೀಡಿದಾಗ ಅದಾನಿ ವ್ಯವಹಾರವನ್ನು ಪಡೆಯುತ್ತಾರೆ. ಹಾಗಾದರೆ ನಿಮ್ಮ ಮತ್ತು ಅದಾನಿ ನಡುವೆ ಏನಿದೆ? ಎಂಬುದನ್ನು ಈ ದೇಶಕ್ಕೆ ತಿಳಿಸಿಕೊಡಿ ಎಂದು ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನೆ ಮಾಡುತ್ತಾರೆ. ಸಂಸದ ರಾಹುಲ್ ಗಾಂಧಿಯ ಈ ಗುರುತರವಾದ ಪ್ರಶ್ನೆಗೆ (ಆರೋಪಕ್ಕೆ) ಮೋದಿಯವರು ತಕ್ಕ ಉತ್ತರ ನೀಡುತ್ತಾರೆ ಎಂದು ಈ ದೇಶವೇ ಎದುರು ನೋಡುತ್ತಿರುವಾಗ, ಸಂಸತ್ತಿನಲ್ಲಿ ಸುಮಾರು ಒಂಬತ್ತು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ, ವಿರೋಧ ಪಕ್ಷಗಳನ್ನು ಲೇವಡಿಯಿಂದ, ಹಾಸ್ಯ ಹಾಗೂ ಉಡಾಫೆಯ ಮಾತುಗಳಿಂದ ತಿವಿದು, ವಿರೋಧ ಪಕ್ಷಗಳ ಗುರುತರವಾದ ಆರೋಪಗಳನ್ನು ದಿಕ್ಕು ತಪ್ಪಿಸಿ, ಪ್ರಶ್ನೆ ಮಾಡಿದವರನ್ನೇ ಅಪರಾಧಿಯನ್ನಾಗಿಸುವ ಪ್ರಯತ್ನವನ್ನು ಮಾಡಿದರು.

‘ದೇಶಭಕ್ತಿಯೇ ಕಿಡಿಗೇಡಿಗಳ ಕೊನೆಯ ಆಶ್ರಯ ತಾಣ’ ಎಂಬ ಸ್ಯಾಮ್ಯುಯೆಲ್ ಜಾನ್ಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು, ಮೋದಿ ಸರ್ಕಾರ ಅಧಿಕಾರ ವರ್ಗದೊಂದಿಗೆ ಕೈಜೋಡಿಸಿ, ತನ್ನ ತಪ್ಪುಗಳನ್ನು ಯಾರೂ ಪ್ರಶ್ನಿಸದಂತೆ ಮುಚ್ಚಿಹಾಕಲು, ತನ್ನ ಅಕ್ರಮಗಳನ್ನು ಸಮರ್ಥಿಸಿಕೊಳ್ಳಲು ಮುಂದಾಗಿದೆ. ದೇಶಭಕ್ತಿ, ರಾಷ್ಟ್ರೀಯ ಭದ್ರತೆ ಹಾಗೂ ರಾಷ್ಟ್ರದ ಅಭಿವೃದ್ಧಿಯ ಸುಳ್ಳು ವಿಚಾರಗಳನ್ನು ಮುಂದಿಡುವುದು ಈಗ ಅವರಿಗೆ ವಾಡಿಕೆಯಾಗಿದೆ.

ದೇಶ

ನವದೆಹಲಿ: ಮುಂದಿನ ವರ್ಷ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆ ಎದುರಿಸಲು ಎಲ್ಲ ಪಕ್ಷಗಳು ಈಗಾಗಲೆ ಸಿದ್ದತೆಗಳನ್ನು ನಡೆಸಿಕೊಂಡು ಬರುತ್ತಿವೆ. ಸದ್ಯ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ಕೂಡ 3ನೇ ಅವಧಿಗೆ ಅಧಿಕಾರ ಹಿಡಿಯಲು ತಂತ್ರಗಳನ್ನು ರೂಪಿಸುತ್ತಿದೆ.

ಭಾರತೀಯ ಜನತಾ ಪಾರ್ಟಿ ವಿಶೇಷವಾಗಿ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಯ ಪರವಾಗಿ ಹೆಚ್ಚುವರಿ ಕ್ಷೇತ್ರಗಳನ್ನು ಗೆಲ್ಲಲು ಮುಂದಾಗಿದೆ. ಇದಕ್ಕಾಗಿ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ಅದರ ಭಾಗವಾಗಿಯೇ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ಧಿಯನ್ನು ಹರಿಯಬಿಟ್ಟಿದ್ದಾರೆ.

ಪ್ರಧಾನಿ ಮೋದಿ ಉತ್ತರದಲ್ಲಿ ಒಂದು ಹಾಗೂ ದಕ್ಷಿಣ ರಾಜ್ಯದಲ್ಲಿ ಒಂದು ಕ್ಷೇತ್ರಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದು, ದಕ್ಷಿಣ ರಾಜ್ಯದ ತಮಿಳುನಾಡಿನಿಂದಲೇ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುವುದಾದರೆ ರಾಮನಾಥಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಜನತಾ ಪಕ್ಷದ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಅವರನ್ನು ಕೇಳಿದಾಗ, ‘ಪ್ರಧಾನಿ ನರೇಂದ್ರ ಮೋದಿ ವಿದೇಶಿಯಲ್ಲ; ಆತ ಭಾರತೀಯ. ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ನಾಡಿನ ಜನ ಅವರ ಮೇಲೆ ಪ್ರೀತಿ, ಮಮತೆ ಹೊಂದಿದ್ದಾರೆ. ಅಷ್ಟೇ ಅಲ್ಲ ಮುಂದಿನ ಸಂಸತ್ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಇದು ನಿಜವೇ ಎಂದು ಅನೇಕರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ನಾನು ತೂತ್ತುಕುಡಿಗೆ ಹೋಗಿದ್ದೆ. ಅಲ್ಲಿನ ಅಂಗಡಿಯೊಂದರಲ್ಲಿ ಟೀ ಕುಡಿಯಲು ಹೋಗಿದ್ದಾಗ, ನನ್ನನ್ನು ನೋಡಿದ ಅಲ್ಲಿನ ಜನರು, ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುತ್ತಾರೆಯೇ? ಎಂದು ಕೇಳಿದರು.

ಇದನ್ನು ತಿಳಿದುಕೊಳ್ಳಲು ಜನರು ತುಂಬಾ ಆಸಕ್ತಿ ಹೊಂದಿದ್ದಾರೆ. ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಿಷ್ಠಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ.

ತಮಿಳುನಾಡಿನ ಜನರು ಪ್ರಧಾನಿ ಮೋದಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದಾರೆ. ಅವರ ಚಟುವಟಿಕೆಗಳನ್ನು ಮೆಚ್ಚುತ್ತಾರೆ. ತಮಿಳುನಾಡಿನಲ್ಲೂ ಪ್ರಧಾನಿ ಮೋದಿಯ ಅಲೆ ಎದ್ದಿದೆ. ತಮಿಳುನಾಡಿನಲ್ಲೂ ಭಾರತೀಯ ಜನತಾ ಪಕ್ಷಕ್ಕೆ ಪ್ರತ್ಯೇಕ ಗುರುತು ಸಿಗಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದನ್ನು ನಾವು ಸಾಬೀತು ಮಾಡುತ್ತೇವೆ’ ಎಂದರು.

ದೇಶ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಗೆ ಗೆಲುವಿನ ರಣತಂತ್ರ ರೂಪಿಸುವುದು, ಗಡಿ ಗ್ರಾಮಗಳಲ್ಲಿ ಭದ್ರತೆಯನ್ನು ಬಲಪಡಿಸುವುದು ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಮುಕ್ತಾಯದ ದಿನವಾದ ಇಂದು ಪ್ರಮುಖವಾಗಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಿನ್ನೆ ನವದೆಹಲಿಯಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಟ್ಟಾ ಮತ್ತು 350 ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.

ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ, ಮಿಜೋರಾಂ, ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇಂದಿನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ಮುಂಬರುವ 2024ರ ಲೋಕಸಭೆ ಚುನಾವಣೆಗೆ 400 ದಿನಗಳು ಬಾಕಿಯಿದ್ದು, ನಾವು ಈಗಲೇ ತಯಾರಿ ಮಾಡಿಕೊಳ್ಳಬೇಕಾಗಿದೆ. ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯಲು ನೂತನ ಪದಾಧಿಕಾರಿಗಳ ನೇಮಕ ಅಗತ್ಯವಾಗಿದೆ. ಯುವ ಮತದಾರರನ್ನು ಸೆಳೆಯುವುದು ಮತ್ತು ವಿಶೇಷವಾಗಿ ಗಡಿ ಗ್ರಾಮಗಳಲ್ಲಿ ಭದ್ರತೆ ಹಾಗೂ ಪಕ್ಷದ ಬಲವರ್ಧನೆಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸಲು ಬದ್ದರಾಗಿರಬೇಕು’ ಎಂದು ಹೇಳಿರುವುದಾಗಿ ಬಿಜೆಪಿಯ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.