ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಂಘಪರಿವಾರ Archives » Dynamic Leader
October 16, 2024
Home Posts tagged ಸಂಘಪರಿವಾರ
ರಾಜ್ಯ

ಮಂಗಳೂರು: ಸೇಂಟ್ ಜೆರೋಸಾ ಇಂಗ್ಲಿಷ್ ಹೈಯರ್ ಪ್ರೈಮರಿ ಶಾಲೆಯು ಶನಿವಾರ ಫೆಬ್ರವರಿ 10, 2024 ರಂದು ಅಲ್ಲಿನ ಇಂಗ್ಲಿಷ್ ಶಿಕ್ಷಕರ ವಿರುದ್ಧ ಆಧಾರರಹಿತ ಆರೋಪಗಳ ಮೇಲೆ ದುರದೃಷ್ಟಕರ ಮತ್ತು ದುಖಃಕರ ಘಟನೆಗಳಿಗೆ ಸಾಕ್ಷಿಯಾಗಿದೆ ಎಂದು ಮಂಗಳೂರಿನ ಕ್ಯಾಥೋಲಿಕ ಧರ್ಮಪ್ರಾಂತ್ಯವು ಹೇಳಿದೆ.

ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಂಗಳೂರಿನ ಕ್ಯಾಥೋಲಿಕ ಧರ್ಮಪ್ರಾಂತ್ಯವು, ‘7ನೇ ತರಗತಿಯಲ್ಲಿ ಇಂಗ್ಲಿಷ್ ಟೀಚರ್ ಸಿಸ್ಟರ್ ಪ್ರಭಾ ಅವರು ಹಿಂದೂ ಧಾರ್ಮಿಕ ಆಚರಣೆಗಳು ಮತ್ತು ರಾಜಕೀಯ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ, ಸಾಮಾಜಿಕ ಮಾಧ್ಯಮದ ಮೂಲಕ ಎರಡು ಆಡಿಯೋ ಸಂದೇಶಗಳನ್ನು ಪ್ರಸಾರ ಮಾಡುವುದರೊಂದಿಗೆ ಇದು ಪ್ರಾರಂಭವಾಯಿತು’ ಎಂದು ಹೇಳಿದೆ.

‘ಸಾಮಾಜಿಕ ಮಾಧ್ಯಮ ಸಂದೇಶಗಳು ಹರುಡುತ್ತಿದ್ದಂತೆ, ನಾಲ್ವರು ಪೋಷಕರು ಮುಖ್ಯೋಪಾಧ್ಯಾಯಿನಿಯನ್ನು ಸಂಪರ್ಕಿಸಿ ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಅವರು ಸತ್ಯವನ್ನು ಹೊರತರಲು ವಿಷಯದ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಭರವಸೆಯನ್ನು ನೀಡಿದ್ದಾರೆ.

ಈ ಹಿನ್ನಲೆಯಲ್ಲಿ, ಮಧ್ಯಾಹ್ನ 12:30ರ ವೇಳೆಗೆ ವ್ಯಕ್ತಿಗಳ ಗುಂಪು ಶಾಲೆಯ ಸುತ್ತಲೂ ಜಮಾಯಿಸಿತ್ತು. ಈ ಬಗ್ಗೆ ಸೂಕ್ತ ತನಿಖೆ ನದೆಸಲಾಗುವುದು ಎಂದು ಮುಖ್ಯ ಶಿಕ್ಷಕಿ ಭರವಸೆ ನೀಡಿದ್ದರು. ಮತ್ತು ಮಧ್ಯಾಹ್ನದ ನಂತರ, ಶಾಲೆಯ ಧರ್ಮ ಭಗಿನಿಯರು ಜಿಲ್ಲಾಡಳಿತಕ್ಕೆ ಪತ್ರ ಬರೆದು ಆಡಿಯೋ ಸಂದೇಶಗಳು ಸತ್ಯಕ್ಕೆ ದೂರವಾಗಿವೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ರಕ್ಷಣೆ ನೀಡುವಂತೆ ಕೋರಿದ್ದರು.

ಸೋಮವಾರ, ಫೆಬ್ರವರಿ 12 ರಂದು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದಾಗ ಪರಿಸ್ಥಿತಿ ಉಲ್ಬಣಗೊಂಡಿತ್ತು. ಸ್ಥಳೀಯ ಶಾಸಕರಾದ ವೇದವ್ಯಾಸ್ ಕಾಮತ್ ಶಾಲೆಗೆ ಆಗಮಿಸಿದಾಗ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಂಡಿತ್ತು. ನ್ಯಾಯಯುತ ತನಿಖೆಯ ಸಾಂವಿಧಾನಿಕ ಪ್ರಕ್ರಿಯೆಯ ಬಗ್ಗೆ ನಿರ್ಲಕ್ಷ್ಯವನ್ನು ಪ್ರದರ್ಶಿಸಿದರು.

ಅವರು ಧರ್ಮ ಭಗಿನಿಯರಾಗಿದ್ದಾರೆ; ಮಹಿಳೆಯರೂ ಆಗಿದ್ದಾರೆ ಎಂದು ಕನಿಷ್ಟ ಸೌಜನ್ಯವನ್ನೂ ತೋರಿಸದೆ, ಅಲ್ಲಿ ನೆರದಿದ್ದ ಧರ್ಮ ಭಗಿನಿಯರು ಹಾಗೂ ಮಹಿಳಾ ಸಿಬ್ಬಂದಿಗಳ ಮೇಲೆ ಹರಿಹಾಯ್ದರು ಮತ್ತು ತಕ್ಷಣವೇ ಲಿಖಿತ ಕ್ಷಮೆ ಯಾಚನೆ ಹಾಗೂ ಶಿಕ್ಷಕಿಯನ್ನು ಅಮಾನತುಗೊಳಿಸಬೇಕೆಂದು ಪಟ್ಟು ಹಿಡಿದರು.

ಸಂಜೆ ವೇಳೆ ಮಕ್ಕಳು ಕ್ಯಾಂಪಸ್ ನಿಂದ ಹೊರಬರುತ್ತಿದ್ದಂತೆ ಶಾಸಕರು ಧಾರ್ಮಿಕ ಘೋಷಣೆಗಳನ್ನು ಕೂಗಿಸಿ, ಶಿಕ್ಷಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಾಲಾ ಆಡಳಿತ ಮಂಡಳಿಯು ಅಪಾರ ಒತ್ತಡಕ್ಕೆ ಮಣಿದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ವಿದ್ಯಾರ್ಥಿ ಸಮುದಾಯವು ಸುರಕ್ಷತೆಯನ್ನು ಖಾತ್ರಿಪಡಿಸಲು, ವಿಚಾರಣೆಗೆ ಬಾಕಿಯಿರುವವರೆಗೂ ಶಿಕ್ಷಕಿಯನ್ನು ಅಮಾನತುಗೊಳಿಸಿತು.

ನಿಜವಾಗಿ ಏನಾಯಿತು ಎಂಬುದರ ಕುರಿತು ಬೆಳಕು ಚೆಲ್ಲುವುದು ಮುಖ್ಯವಾಗಿದೆ. ಇಂಗ್ಲಿಷ್ ಟೀಚರ್ ರವೀಂದ್ರನಾಥ ಟ್ಯಾಗೂರ್ ಅವರ “Work is Worship” ಎಂಬ ಕವಿತೆಯನ್ನು ಕಲಿಸುತ್ತಿದ್ದರು. ಮತ್ತು ಅವರು “Whom dost thou worship in this lonely dark corner of the temple with doors all shut?” (“ದೇವಾಲಯದ ಬಾಗಿಲು ಮುಚ್ಚಿರುವ ಈ ಏಕಾಂಗಿ ಕತ್ತಲೆ ಮೂಲೆಯಲ್ಲಿ ಯಾರನ್ನು ಪೂಜಿಸುತ್ತೀರಿ?”) ಎಂಬ ಸಾಲುಗಳನ್ನು ವಿವರಿಸುತ್ತಿದ್ದರು. (7ನೇ ತರಗತಿಯ ರಾಜ್ಯ ಮಂಡಳಿಯ ಇಂಗ್ಲಿಷ್ ಪಠ್ಯಕ್ರಮ, ಕರ್ನಾಟಕ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವಂತೆ ಅವರು ಯಾವದನ್ನೂ ಕಲಿಸಲಿಲ್ಲ ಅಥವಾ ಹೇಳಲಿಲ್ಲ’ ಎಂದು ಕ್ಯಾಥೋಲಿಕ ಧರ್ಮಪ್ರಾಂತ್ಯವು ಸ್ಪಷ್ಟ ಪಡಿಸಿದೆ.

ಈ ಘಟನೆಗಳ ಹಿನ್ನಲೆಯಲ್ಲಿ, ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು, ಮಕ್ಕಳ ಕಲ್ಯಾಣ ಇಲಾಖೆ ಮತ್ತು ಮಹಿಳಾ ಆಯೋಗವು ಈ ಬಗ್ಗೆ ನ್ಯಾಯಯುತ ತನಿಖೆ ನಡೆಸಿ, ಮಹಿಳಾ ಶಿಕ್ಷಕರು ಮತ್ತು ಮಕ್ಕಳಿಗೆ ಶಾಸಕರಿಂದ ಆಗಿರುವ ಆಘಾತಕಾರಿ ವರ್ತನೆಯ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಕ್ಯಾಥೋಲಿಕ ಧರ್ಮಪ್ರಾಂತ್ಯವು ವಿನಂತಿಸಿರುತ್ತದೆ.

ಇಂಗ್ಲಿಷ್ ಶಿಕ್ಷಕರ ವಿರುದ್ಧ ಸುಳ್ಳು ಆರೋಪಗಳನ್ನು ತನಿಖೆ ಮಾಡಲು ಮತ್ತು ಶಿಕ್ಷಕಿ ಮಹಿಳೆಯಾಗಿದ್ದು ಅವರ ಘನತೆಯನ್ನು ಕಾಪಾಡಲು ಧರ್ಮಪ್ರಾಂತ್ಯವು ಅಧಿಕಾರಿಗಳನ್ನು ಒತ್ತಾಯಿಸಿದೆ. ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳ ಹಿತಾಸಕ್ತಿಗಳನ್ನು ರಕ್ಷಿಸಲು ಸಂಬಂಧಿಸಿದ ಎಲ್ಲರನ್ನೂ ಧರ್ಮಪ್ರಾಂತ್ಯ ವಿನಂತಿಸಿದೆ.

ಮಂಗಳೂರು ಧರ್ಮಪ್ರಾಂತ್ಯವು ಚುನಾಯಿತ ಜನಪ್ರತಿನಿಧಿಯಾದ ಶಾಸಕ ವೇದವ್ಯಾಸ್ ಕಾಮತ್ ಮತ್ತು ಅವರ ಸಹದ್ಯೋಗಿಗಳಿಂದ ಶಿಕ್ಷಕರಿಗೆ, ವಿಧ್ಯಾರ್ಥಿಗಳಿಗೆ ಹಾಗೂ ಶಾಲೆಗೆ ಆಗುತ್ತಿರುವ ತೊಂದರೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ರಾಜಕೀಯ

ಹೈದರಾಬಾದ್: ತಮಿಳುನಾಡಿನಲ್ಲಿರುವ ಹಿಂದೂ ದೇವಾಲಯಗಳನ್ನು ಡಿಎಂಕೆ ಸರ್ಕಾರ ಅತಿಕ್ರಮಣ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಬಹಿರಂಗ ಆರೋಪ ದೇಶಾದ್ಯಂತ ಸಂಚಲನ ಮೂಡಿಸಿದೆ. ಬಿಜೆಪಿ ಈಗಾಗಲೇ ‘ಸನಾತನ’ ವಿಚಾರದಲ್ಲಿ ಡಿಎಂಕೆ ವಿರುದ್ಧ ಭಾರತದಾದ್ಯಂತ ಪ್ರಚಾರ ನಡೆಸುತ್ತಿದ್ದು, ಈ ಆರೋಪವನ್ನು ಪ್ರಧಾನಿ ಮೋದಿ ಸಾರ್ವಜನಿಕವಾಗಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ತೆಲಂಗಾಣ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಭಾರತೀಯ ರಾಷ್ಟ್ರ ಸಮಿತಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ತೆಲಂಗಾಣದಲ್ಲಿ ಇಲ್ಲಿಯವರೆಗೆ ನೆಲೆ ಸ್ಥಾಪಿಸದ ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಗಮನಾರ್ಹ ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದರಿಂದ ತೆಲಂಗಾಣದಲ್ಲಿ ಈ ಬಾರಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಕಸರತ್ತು ನಡೆಸುತ್ತಿದೆ.

ಇದನ್ನೂ ಓದಿ: ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕಿನಿಂದ ದಲಿತ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಹಿಷ್ಕಾರ!

ಆ ನಿಟ್ಟಿನಲ್ಲಿ ಇಂದು ತೆಲಂಗಾಣದ ನಿಜಾಮಾಬಾದ್‌ನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಭಾಷಣ ಮಾಡಿದರು. ತಮ್ಮ ಭಾಷಣದ ಭಾಗವಾಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವನ್ನೂ ಮೋದಿ ಟೀಕಿಸಿ ಮಾತನಾಡಿದರು.

“ತಮಿಳುನಾಡಿನಲ್ಲಿ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಹಿಂದೂ ಜನರ ಜೀವ ಉಸಿರಾದ ಸನಾತನ ಧರ್ಮ ನಾಶವಾಗಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಾರ್ವಜನಿಕವಾಗಿ ಹೇಳುತ್ತಿದ್ದಾರೆ. ಅದರ ಭಾಗವಾಗಿ ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಹಿಂದೂ ದೇವಾಲಯಗಳನ್ನು ತಮಿಳುನಾಡು ಸರ್ಕಾರ ವಶಪಡಿಸಿಕೊಂಡಿದೆ. ಇದು ಅತ್ಯಂತ ದೊಡ್ಡ ಅರಾಜಕತೆ.

ಇದನ್ನೂ ಓದಿ: 19 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ: ಅಕ್ಟೋಬರ್ 14 ರಂದು ಅಮೇರಿಕಾದಲ್ಲಿ ಅನಾವರಣ!

ಹಿಂದೂ ದೇವಾಲಯಗಳ ನಿಯಂತ್ರಣದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ದನಿಯೆತ್ತಿದೆ? ಕಾಂಗ್ರೆಸಿಗೆ ಧೈರ್ಯವಿದ್ದರೆ ಅವರು ತಮಿಳುನಾಡಿನಲ್ಲಿ ಹಾಗೆ ಹೇಳಲು ಸಾಧ್ಯವೇ? ನೀವು (ಕಾಂಗ್ರೆಸ್) ಡಿಎಂಕೆ ಸರ್ಕಾರದ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ; ಹಾಗಾಗಿ ಹಿಂದೂ ದೇವಾಲಯಗಳ ನಿರ್ವಹಣೆಯಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ನೀವು ಡಿಎಂಕೆಗೆ ಹೇಳಬೇಕು” ಎಂದು ಮೋದಿ ಹೇಳಿದಾರೆ.

ರಾಜಕೀಯ

ನವದೆಹಲಿ: ಒಂದು ದೇಶ; ಒಂದೇ ಚುನಾವಣೆ ಎಂಬುದನ್ನು ಪ್ರಾಯೋಗಿಕ ಪಡಿಸಲು ಸಾಧ್ಯವಿರುವ ಅಂಶಗಳನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಪ್ರಥಮವಾಗಿ ಸಮಾಲೋಚನೆ ನಡೆಸಿತು. ಈ ಸಭೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಿದ್ದರು.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ!

ಒಂದು ದೇಶ; ಒಂದೇ ಚುನಾವಣಾ ಜಾರಿಗೊಳಿಸುವ ಸಾಧ್ಯತೆಗಳನ್ನು ಪರಿಶೀಲಿಸಲು, ಮಾಜಿ ರಾಷ್ಟ್ರಪತಿ ರಾಮನಾಥ್ ಗೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿತು. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್, ಲೋಕಸಭೆ ಮಾಜಿ ಕಾರ್ಯದರ್ಶಿ ಸುಭಾಷ್ ಸಿ.ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಜಿಲೆನ್ಸ್ ಆಯುಕ್ತ ಸಂಜಯ್ ಕೊಠಾರಿ ಇದ್ದಾರೆ. ಆದರೆ ಅಧೀರ್ ರಂಜನ್ ಚೌಧರಿ ಈ ಗುಂಪಿನ ಭಾಗವಾಗಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಈ ಹಿನ್ನಲೆಯಲ್ಲಿ ಈ ಸಮಿತಿಯ ಮೊದಲ ಸಭೆ ಇಂದು ನಡೆಯಿತು. ರಾಮ್ ನಾಥ್ ಕೋವಿಂದ್ ಅವರ ನಿವಾಸದಲ್ಲಿ ಸಭೆ ನಡೆದಿದ್ದು, ಕೇಂದ್ರ ಸಚಿವರಾದ ಅಮಿತ್ ಶಾ, ಅರ್ಜುನ್ ರಾಮ್ ಮೇವಾಲ್ ಮತ್ತಿತರರು ಉಪಸ್ಥಿತರಿದ್ದರು. ಒಂದು ದೇಶ; ಒಂದೇ ಚುನಾವಣೆ ಪ್ರಕ್ರಿಯೆಯ ಸಾಧಕ-ಬಾಧಕಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: ಗೇಮ್ ಚೇಂಜರ್ಸ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ ನೇಮ್ ಚೇಂಜರ್ಸ್ ಆಗಿದೆ!