ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಮಾಜವಾದಿ ಪಕ್ಷ Archives » Dynamic Leader
October 23, 2024
Home Posts tagged ಸಮಾಜವಾದಿ ಪಕ್ಷ
ರಾಜಕೀಯ

ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಜನರು ವ್ಯಕ್ತಪಡಿಸುತ್ತಿರುವ ಜನ ಬೆಂಬಲವನ್ನು ತೋರಿಸುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.
https://x.com/i/status/1792125814118785335

ದೇಶಾದ್ಯಂತ 7 ಹಂತದ ಚುನಾವಣೆಯ ಪೈಕಿ 4 ಹಂತಗಳು ಪೂರ್ಣಗೊಂಡಿವೆ. ನಾಳೆ (ಮೇ 20) 5ನೇ ಹಂತದ ಚುನಾವಣೆ ನಡೆದರೆ, 6ನೇ ಹಂತದ ಚುನಾವಣೆ ಮೇ 25 ರಂದು ನಡೆಯಲಿದೆ. 5ನೇ ಹಂತದ ಕ್ಷೇತ್ರಗಳ ಚುನಾವಣಾ ಪ್ರಚಾರ ನಿನ್ನೆ ಪೂರ್ಣಗೊಂಡಿದ್ದರೆ, ಉಳಿದ ಕ್ಷೇತ್ರಗಳಲ್ಲಿ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ.
https://x.com/i/status/1792125814118785335

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಇಂಡಿಯಾ ಮೈತ್ರಿಕೂಟದ ಪರವಾಗಿ ಸ್ಪರ್ಧಿಸುತ್ತಿವೆ. ಹೀಗಾಗಿ ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಒಟ್ಟಿಗೆ ಪ್ರಚಾರ ಮಾಡುತ್ತಿದ್ದಾರೆ. ಅದರಂತೆ, ರಾಹುಲ್ ಗಾಂಧಿ ಮತ್ತು ಅಖಿಲೇಶ್ ಉತ್ತರಪ್ರದೇಶದ ಪ್ರಯಾಗರಾಜ್ ಬಳಿ ಇರುವ ಫುಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ ಜಂಟಿಯಾಗಿ ಪ್ರಚಾರ ನಡೆಸಿದರು.
https://x.com/i/status/1792152028283535798

ಆ ವೇಳೆ 4 ಲಕ್ಷಕ್ಕೂ ಹೆಚ್ಚು ಜನ ಅಲ್ಲಿ ನೆರೆದಿದ್ದರು. ಪ್ರತಿಯೊಬ್ಬರ ಕೈಯಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ಧ್ವಜ ಮತ್ತು ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಇತ್ತು. ಎಲ್ಲರೂ ತಮ್ಮ ತಮ್ಮ ಘೋಷಣೆಗಳನ್ನು ಎತ್ತಿದರು. ಒಂದು ಹಂತದಲ್ಲಿ ಬ್ಯಾರಿಕೇಡ್‌ಗಳನ್ನು ದಾಟಿ ರಾಹುಲ್ ಮತ್ತು ಅಖಿಲೇಶ್ ಅವರನ್ನು ನೋಡಲು ಪ್ರೇಕ್ಷಕರು ವೇದಿಕೆಯತ್ತ ನುಗ್ಗಿದರು.

ಇದರಿಂದ ರಾಹುಲ್ ಗಾಂಧಿ ತಮ್ಮ ಭಾಷಣವನ್ನು ಬೇಗ ಮುಗಿಸುವಂತಾಯಿತು. ಆದಾಗ್ಯೂ ಸಂವಿಧಾನವನ್ನು ರಕ್ಷಿಸಲು ಜನರು ಧ್ವನಿ ಎತ್ತಲು ಪ್ರಾರಂಭಿಸಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ. ದಕ್ಷಿಣ ಮತ್ತು ಈಶಾನ್ಯ ಮಾತ್ರವಲ್ಲದೆ ಉತ್ತರದಲ್ಲೂ ಬಿಜೆಪಿಯ ನಕಲಿ ಮುಖವಾಡವನ್ನು ಜನರು ಅರ್ಥಮಾಡಿಕೊಳ್ಳಲು ಪ್ರಾರಂಭಿಸಿದ್ದಾರೆ. ಇಂಡಿಯಾ ಮೈತ್ರಿಕೂಟಕ್ಕೆ ಜನಬೆಂಬಲ, ಅದೂ ಕೂಡ ಬಿಜೆಪಿ ಆಡಳಿತವಿರುವ ಉತ್ತರಪ್ರದೇಶದಲ್ಲಿ ಜನಸಮೂಹವು ಸಾಗರದಂತೆ ಹರಿದುಬಂದಿದೆ.
https://x.com/i/status/1792152028283535798

ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಅನೇಕರಿಂದ ಕಾಮೆಂಟ್‌ಗಳನ್ನು ಪಡೆಯುತ್ತಿದೆ. ಇಂಡಿಯಾ ಮೈತ್ರಿಕೂಟಕ್ಕೆ ಜನಬೆಂಬಲ ಹೆಚ್ಚುತ್ತಿದ್ದು, ಮೋದಿ, ಅಮಿತ್ ಶಾ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ಸದಸ್ಯರು ಆಘಾತಕ್ಕೆ ಒಳಗಾಗಿದ್ದಾರೆ.

ರಾಜಕೀಯ

ಬುಲ್ಡೋಜರ್‌ಗಳನ್ನು ಎಲ್ಲಿ ಬಳಸಬೇಕು ಮತ್ತು ಎಲ್ಲಿ ಬಳಸಬಾರದು ಎಂಬುದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕಲಿಯಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

ಲಕ್ನೋ,
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಗೆದ್ದು ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಬುಲ್ಡೋಜರ್‌ ಮೂಲಕ ಕೆಡವುತ್ತಾರೆ. ಬಾಲರಾಮ, ದೇವಸ್ಥಾನದಿಂದ ಗುಡಾರಕ್ಕೆ ಹಿಂತಿರುಗುತ್ತಾರೆ.

ಬುಲ್ಡೋಜರ್‌ಗಳನ್ನು ಎಲ್ಲಿ ಬಳಸಬೇಕು ಮತ್ತು ಎಲ್ಲಿ ಬಳಸಬಾರದು ಎಂಬ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ತರಬೇತಿ ಪಡೆಯಬೇಕು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ದೇಶದ ಪ್ರಗತಿಗೆ ಶ್ರಮಿಸುತ್ತಿದೆ. ಇನ್ನೊಂದೆಡೆ ಇಂಡಿಯಾ ಮೈತ್ರಿಕೂಟ ಗೊಂದಲಗಳನ್ನು ಸೃಷ್ಟಿಸುತ್ತಿದೆ. ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೋದಿ ಸರ್ಕಾರ ಹ್ಯಾಟ್ರಿಕ್ ಸಾಧನೆ ಮಾಡಲಿದೆ.” ಎಂದು ಹೇಳಿದರು.

ರಾಜಕೀಯ

ಬಿಜೆಪಿಯ ಸೋಲು ಅನಿವಾರ್ಯ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ದೃಢವಾಗಿ ಹೇಳಿದ್ದಾರೆ.!

18ನೇ ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಮೊದಲ 3 ಹಂತದ ಚುನಾವಣೆ ಪೂರ್ಣಗೊಂಡಿದೆ. ಈ ಲೋಕಸಭೆ ಚುನಾವಣೆಯಲ್ಲಿ 10 ವರ್ಷಗಳ ಫ್ಯಾಸಿಸ್ಟ್ ಬಿಜೆಪಿ ಆಡಳಿತವನ್ನು ಕಿತ್ತೊಗೆಯುವ ಏಕೈಕ ಉದ್ದೇಶದೊಂದಿಗೆ ವಿರೋಧ ಪಕ್ಷಗಳು ಒಗ್ಗೂಡಿ ಇಂಡಿಯಾ ಮೈತ್ರಿಕೂಟವನ್ನು ರಚಿಸಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ.

ಇಂಡಿಯಾ ಮೈತ್ರಿಕೂಟ ರಚನೆಯಾದಂದಿನಿಂದ ಬಿಜೆಪಿಯ ಸೋಲು ಆರಂಭವಾಗಿದೆ. ಇದೀಗ ಪೂರ್ಣಗೊಂಡಿರುವ ಮೂರು ಹಂತದ ಚುನಾವಣಾ ಸಮೀಕ್ಷೆಗಳು ಬಿಜೆಪಿಯ ಸೋಲನ್ನು ಖಚಿತಪಡಿಸಿವೆ ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಹೇಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ಸೋಲು ಅನಿವಾರ್ಯ ಎಂದಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಅದಕ್ಕಾದ ಕಾರಣಗಳನ್ನು ಪಟ್ಟಿ ಮಾಡಿ ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಅದರಲ್ಲಿ ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರದಿಂದಾಗಿ ಬಿಜೆಪಿ ಜನಬೆಂಬಲವನ್ನು ಕಳೆದುಕೊಂಡಿದೆ. ಸಾಮಾಜಿಕ ನ್ಯಾಯದ ವಿರುದ್ಧ ನಿರಂತರವಾಗಿ ಮಾತನಾಡುತ್ತಿರುವುದರಿಂದ ಬಿಜೆಪಿ ಪರಿಶಿಷ್ಟ ಜಾತಿ/ಪಂಗಡಗಳು, ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ವರ್ಗದ ತನ್ನದೇ ಪಕ್ಷದ ಕಾರ್ಯಕರ್ತರ ಬೆಂಬಲವನ್ನು ಕಳೆದುಕೊಂಡಿದೆ.

ರೈತರ ಕಲ್ಯಾಣಕ್ಕೆ ವಿರುದ್ಧವಾದ ಕೃಷಿ ಕಾನೂನುಗಳನ್ನು ಜಾರಿಗೆ ತಂದ ನಂತರ ಬಿಜೆಪಿ ರೈತರ ಬೆಂಬಲವನ್ನು ಕಳೆದುಕೊಂಡಿದೆ. ಇರುವ ವೃತ್ತಿಗಳನ್ನು ಹಾಳು ಮಾಡಿ ಭವಿಷ್ಯವನ್ನು ಪ್ರಶ್ನಿಸುತ್ತಿರುವ ಬಿಜೆಪಿ, ಯುವಕರ ಬೆಂಬಲ ಕಳೆದುಕೊಂಡಿದೆ.

ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದಿಂದ ಬಿಜೆಪಿ ಮಹಿಳೆಯರ ಬೆಂಬಲ ಕಳೆದುಕೊಂಡಿದೆ. ಸ್ಪರ್ದೆಯಲ್ಲಿ ಸೋಲಲು ಹೊರಟಿರುವ ಕುದುರೆಗೆ ನಾವೇಕೆ ಉಣಬಡಿಸಬೇಕು ಎಂದಿರುವ ಉದ್ಯಮಿಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಸೋಲನ್ನು ಎದುರಿಸುತ್ತಿರುವವರಿಗೆ ನಾವೇಕೆ ಬೆಂಬಲಿಸಬೇಕು ಎಂದಿರುವ ಮಾದ್ಯಮಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಇದರಿಂದ ಅನಿವಾರ್ಯ ಸೋಲಿನತ್ತ ಮುಖ ಮಾಡಿರುವ ಬಿಜೆಪಿ ಏನು ಮಾಡಬೇಕೆಂದು ತೋಚದೇ ತಮ್ಮ ದೋಣಿಗಳಲ್ಲೇ ರಂಧ್ರಗಳನ್ನು ಕೊರೆಯುತ್ತಿದ್ದಾರೆ ” ಎಂದು ಹೇಳಿದ್ದಾರೆ.  

ರಾಜಕೀಯ

ಲಖನೌ: ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಸಮಯವನ್ನು ವ್ಯರ್ಥ ಮಾಡುವುದೇ ಬಿಜೆಪಿ ಸರ್ಕಾರದ ಗುರಿಯಾಗಿದೆ. ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ನಡೆಸುತ್ತಿದ್ದಾರೆ. ಈಗ ಉತ್ತರ ಪ್ರದೇಶದಲ್ಲಿ ರ‍್ಯಾಲಿ ನಡೆಯುತ್ತಿದೆ.

ಆಗ್ರಾದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಸಣ್ಣ ವ್ಯಾಪಾರಿಗಳ ಮೇಲೆ ಪರಿಣಾಮ ಬೀರಿದೆ. ಯುವಕರಿಗೆ ಉದ್ಯೋಗವಿಲ್ಲ, ರೈತರು ಇನ್ನೂ ಬೀದಿಯಲ್ಲಿ ಕುಳಿತಿದ್ದಾರೆ. ಜನರಿಗಾಗಿ ಕೆಲಸ ಮಾಡುವುದು ಸರ್ಕಾರದ ಕರ್ತವ್ಯ. ಜನರು ಇದನ್ನು ಅರ್ಥಮಾಡಿಕೊಳ್ಳದಿದ್ದರೆ, ಯಾವುದೇ ಬದಲಾವಣೆ ಸಂಭವಿಸುವುದಿಲ್ಲ.

ನಿಮ್ಮ ಸ್ವಂತ ಯೋಗಕ್ಷೇಮದ ಬಗ್ಗೆ ಯೋಚಿಸಲು ಪ್ರಾರಂಭಿಸಿ ಎಂಬುದನ್ನು ಮಾತ್ರ ನಾನು ನಿಮಗೆ ಹೇಳಲು ಬಯಸುತ್ತೇನೆ. ಅಗ್ನಿಪಥ್ ಯೋಜನೆಯಡಿ ಸೇನೆಯಲ್ಲಿ ಸೇವೆ ಸಲ್ಲಿಸುವ ಯುವಕರ ಆರ್ಥಿಕ ಸ್ಥಿತಿ 4 ವರ್ಷಗಳ ನಂತರ ಹದಗೆಡಲಿದೆ.

ಯುವಕರಿಗೆ ಉದ್ಯೋಗ ನೀಡಲು ಅವರು ಬಯಸದೇ ಇರುವ ಕಾರಣ, ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಸಮಯವನ್ನು ವ್ಯರ್ಥ ಮಾಡುವುದೇ ಬಿಜೆಪಿ ಸರ್ಕಾರದ ಉದ್ದೇಶವಾಗಿದೆ. ದೇಶದಲ್ಲಿ ದ್ವೇಷ ಹೆಚ್ಚಾಗಲು ಅನ್ಯಾಯವೇ ಕಾರಣ. ಭಾರತದಲ್ಲಿ ಬಡವರಿಗೆ, ರೈತರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸಿದ್ದೇನೆ” ಎಂದು ಹೇಳಿದರು.

ರಾಜಕೀಯ

ಲಖನೌ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆ 11 ಕ್ಷೇತ್ರಗಳನ್ನು ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿಯನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ಬರದಂತೆ ತಡೆಯುವ ಉದ್ದೇಶದಿಂದ “ಇಂಡಿಯಾ” ಹೆಸರಿನಲ್ಲಿ 28 ವಿರೋಧ ಪಕ್ಷಗಳು ರಚಿಸಿರುವ ಒಕ್ಕೂಟವು ಕ್ಷೇತ್ರಗಳ ಹಂಚಿಕೆಯ ಬಗ್ಗೆ ಮಾತನಾಡಲು ಪ್ರಾರಂಭಿಸಿದಾಗಿನಿಂದ ಸಮಸ್ಯೆ ತಲೆ ಎತ್ತಲು ಪ್ರಾರಂಭಿಸಿತು.

ಪಶ್ಚಿಮ ಬಂಗಾಳದ ಎಲ್ಲಾ 42 ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಮಮತಾ ಘೋಷಿಸಿದ್ದಾರೆ. ಅದೇ ರೀತಿ ಪಂಜಾಬ್‌ನ ಎಲ್ಲಾ 13 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಘೋಷಿಸಿದ್ದಾರೆ.

ಇದಾದ ನಂತರ ಸಮಾಜವಾದಿ ಪಕ್ಷ “ಇಂಡಿಯಾ” ಮೈತ್ರಿಕೂಟದಿಂದ ಹಿಂದೆ ಸರಿದು, ಪ್ರತ್ಯೇಕವಾಗಿ ಸ್ಪರ್ಧಿಸಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿತ್ತು.

ಈ ಹಿನ್ನಲೆಯಲ್ಲಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ತಮ್ಮ ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಂಡಿರುವ ಹೇಳಿಕೆಯಲ್ಲಿ, “ಉತ್ತರ ಪ್ರದೇಶದಲ್ಲಿ ತೀವ್ರ ಪೈಪೋಟಿ ಇರುತ್ತದೆ ಎಂದು ನಿರೀಕ್ಷಿಸಿದ್ದ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಸುಗಮ ಒಪ್ಪಂದವಾಗಿದೆ” ಎಂದು ಹೇಳಿದ್ದಾರೆ.

ಒಟ್ಟು 80 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳು ಕಾಂಗ್ರೆಸ್‌ಗೆ ನೀಡಲಾಗಿದೆ. “ಉತ್ತರಪ್ರದೇಶದಲ್ಲಿ “ಇಂಡಿಯಾ” ಮೈತ್ರಿಕೂಟ ಗೆಲ್ಲುತ್ತದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಮೈತ್ರಿಕೂಟದ ಅಂಗಪಕ್ಷವಾಗಿರುವ ರಾಷ್ಟ್ರಿಯ ಲೋಕದಳಕ್ಕೆ (ಆರ್‌ಎಲ್‌ಡಿ) ಈ ಹಿಂದೆ 7 ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿತ್ತು ಎಂಬುದು ಗಮನಾರ್ಹ

ದೇಶ

ವಾರಣಾಸಿ ಮತ್ತು ಮಥುರಾದಲ್ಲಿ ಮಸೀದಿಯೊಳಗೆ ಮಂದಿರ ಇರುವುದಕ್ಕೆ ವಿವಾದ ಎದ್ದಿರುವ ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು, ಪುರಿಯ ಜಗನ್ನಾಥ ದೇವಾಲಯ, ಕೇರಳದ ಅಯ್ಯಪ್ಪ ಸ್ವಾಮಿ ದೇವಾಲಯ ಮತ್ತು ಮಹಾರಾಷ್ಟ್ರದ ಬಂದರ್‌ಪುರದ ವಿಠ್ಠಲ ದೇವಾಲಯ ಈ ಹಿಂದೆ ಬೌದ್ಧ ವಿಹಾರಗಳಾಗಿದ್ದವು. ಅಲ್ಲಿ 8ನೇ ಶತಮಾನದವರೆಗೆ ಬುದ್ಧ ವಿಹಾರಗಳು ಇದ್ದವು. ಈಗ ಆ ಸ್ಥಳಗಳಲ್ಲಿ ಹಿಂದೂ ದೇವಾಲಯಗಳು ರೂಪುಗೊಂಡಿವೆ.

ದೇವಸ್ಥಾನಗಳು ಬೌದ್ಧ ವಿಹಾರಗಳಾಗಬೇಕು ಎಂಬುದು ನನ್ನ ಉದ್ದೇಶವಲ್ಲ. ಆದರೆ ನೀವು ಪ್ರತಿ ಮಸೀದಿಯಲ್ಲೂ ದೇವಾಲಯಗಳನ್ನು ಹುಡುಕಿದರೆ, ಪ್ರತಿ ದೇವಾಲಯದಲ್ಲೂ ಬೌದ್ಧ ವಿಹಾರಗಳನ್ನು ಏಕೆ ಹುಡುಕಬಾರದು? ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ, ಸಮಾಜವಾದಿ ಪಕ್ಷ ಮತ್ತು ಅದರ ನಾಯಕರಿಂದ ಸನಾತನ ಧರ್ಮವನ್ನು ಪದೇ ಪದೇ ಅವಮಾನಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೇದಾರನಾಥ, ಬದರಿನಾಥ್ ಮತ್ತು ಜಗನ್ನಾಥ ಪುರಿ ಹಿಂದೂಗಳ ಪವಿತ್ರ ಸ್ಥಳಗಳಾಗಿವೆ. ಇದು ವಿವಾದಾತ್ಮಕ ಹೇಳಿಕೆ ಮಾತ್ರವಲ್ಲ. ಇದು ಅವರ ಕ್ಷುಲ್ಲಕ ಮನಸ್ಥಿತಿ ಮತ್ತು ರಾಜಕೀಯವನ್ನೂ ತೋರಿಸುತ್ತದೆ.

ಭಾರತ ಮತ್ತು ಉತ್ತರ ಪ್ರದೇಶದ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಸಮಾಜದಲ್ಲಿ ದ್ವೇಷ ಹುಟ್ಟು ಹಾಕಿದೆ. ಇದಕ್ಕೆ ಮೌರ್ಯ ಕ್ಷಮೆ ಕೇಳಬೇಕು. ಒಂದು ವೇಳೆ ಸಮಾಜವಾದಿ ಪಕ್ಷ ಇದನ್ನು ಒಪ್ಪಿಕೊಂಡರೆ ಅಖಿಲೇಶ್ ಯಾದವ್ ಈ ಬಗ್ಗೆ ವಿವರಣೆ ನೀಡಬೇಕು ಎಂದಿದ್ದಾರೆ.