ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಿದ್ದರಾಮಯ್ಯ Archives » Page 13 of 13 » Dynamic Leader
October 24, 2024
Home Posts tagged ಸಿದ್ದರಾಮಯ್ಯ (Page 13)
ರಾಜಕೀಯ

ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ಯನ್ನು ಆಧರಿಸಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಬುನಾದಿಯೇ ಅತ್ಯಂತ ಅಸ್ಥಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ರಾಜ್ಯ ಬಿಜೆಪಿ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ.

‘ಮುಸ್ಲಿಂಮರು ಕೇವಲ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಪರಿಗಣಿಸಿತ್ತು’ ಎಂಬ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಹೇಳಿಕೆ ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ‘ಮುಸ್ಲಿಂಮರು ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಹೇಳಿತ್ತು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತವಾದ ವರದಿ, ವಿಶ್ವಾಸಾರ್ಹ ಅಂಕಿ-ಅಂಶಗಳ ಸಂಗ್ರಹ ಹೀಗೆ ಯಾವುದೇ ತಯಾರಿ ಇಲ್ಲದೆ ಬಿಜೆಪಿ ಸರ್ಕಾರ ಅತ್ಯವಸರದಿಂದ ಮುಸ್ಲಿಂ ಮೀಸಲಾತಿ ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ.

ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಉಳಿಸಿಕೊಂಡ ಶೇಕಡಾ 4 ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿಕೆ ಮಾಡಿರುವುದರಿಂದ ಮುಸ್ಲಿಂ ಮೀಸಲಾತಿ ರದ್ದತಿ ಆದೇಶ ರದ್ದಾದರೆ ಆ ಎರಡೂ ಸಮುದಾಯಗಳಿಗೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ.

ಒಳ ಮೀಸಲಾತಿ ಮತ್ತು ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲ. ಆದರೆ ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ ಸರ್ಕಾರ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ.

ಒಟ್ಟು ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇಕಡ 75ಕ್ಕೆ ಹೆಚ್ಚಿಸಿ ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವುದೊಂದೇ ಈಗಿನ ಮೀಸಲಾತಿ ವಿವಾದಕ್ಕೆ ಇರುವ ಶಾಶ್ವತ ಪರಿಹಾರ.

ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಲು ಖಂಡಿತ ಕ್ರಮಕೈಗೊಳ್ಳುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸದೆ ಸರ್ವಸಮ್ಮತ ಪರಿಹಾರ ನೀಡುತ್ತೇವೆ.

ಮೀಸಲಾತಿಗೆ ಶೇಕಡಾ 50ರ ಮಿತಿ ಎನ್ನುವುದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗವೇ ಹೊರತು ಅದು ಸಾಂವಿಧಾನಿಕವಾದುದೇನಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ.

ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಆಯೋಗ ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಬಿಜೆಪಿ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ.

ಕೇಂದ್ರ ಬಿಜೆಪಿ ಸರ್ಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು.

ರಾಜಕೀಯ ರಾಜ್ಯ

1) ಕೇಂದ್ರದ ಟ್ರಬಲ್ ಎಂಜಿನ್ ಬಿಜೆಪಿ ಸರ್ಕಾರ ಕಳೆದ 8 ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್’ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ 2023-2024ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

2) ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟುಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುವ ರೈತರ ಬದುಕು ನೆಲ ಹಿಡಿದಿದೆ.

3) ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇಕಡಾ 54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

4) 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿ ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ.

5) ಎಂಎಸ್‌ಪಿಯಲ್ಲಿನ ಅನ್ಯಾಯ, ಅವೈಜ್ಞಾನಿಕ ಬೆಳೆ ವಿಮೆ, ಸಾಲದಹೊರೆ, ನೆರೆ ಮತ್ತು ಬರಪರಿಹಾರದಲ್ಲಿನ ಕೊರತೆಗಳ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ. ರೈತರ ಆದಾಯವನ್ನು ದುಪ್ಪಟ್ಟು ಮಾಡಲಾಗುವುದು ಎಂಬ ಘೋಷಣೆ ಪೊಳ್ಳಾಗಿದೆ. ಕನಿಷ್ಠ ಸಣ್ಣ ಹಿಡುವಳಿದಾರ ರೈತರ ಸಾಲವನ್ನಾದಾರೂ ಮನ್ನಾ ಮಾಡಬಹುದೆಂಬ ನಿರೀಕ್ಷೆ ಸುಳ್ಳಾಗಿದೆ.

6) ರೈತರಿಗೆ ಸಾಲ ನೀಡಲು ಎರಡು ಲಕ್ಷ ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ರೈತರನ್ನು ಋಣಮುಕ್ತಗೊಳಿಸಬೇಕಾಗಿರುವ ಸರ್ಕಾರ ಅವರನ್ನು ಇನ್ನಷ್ಟು ಸಾಲದ ಬಲೆಗೆ ನೂಕಲು ಹೊರಟಿದೆ. ಹೊಸ ಸಾಲ ಪಡೆದು ಹಳೆಸಾಲ ತೀರಿಸಿ ಎನ್ನುವುದನ್ನು ಸರ್ಕಾರ ಹೇಳಿದೆ. ಈ ಸಾಲದ ಬಡ್ಡಿದರ ಎಷ್ಟು ಎನ್ನುವುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ.

7) ಹತ್ತಿಬೆಳೆಯನ್ನು ಹೊರತುಪಡಿಸಿದರೆ ಬೇರೆ ಯಾವ ಬೆಳೆಗಳಿಗೂ ಬೆಳೆ ಕೇಂದ್ರಿತ ಯೋಜನೆಗಳು ಬಜೆಟ್ ನಲ್ಲಿ ಇಲ್ಲ. ತೋಟಗಾರಿಕಾ ಬೆಳೆಗಳನ್ನು ಪ್ರಸ್ತಾಪ ಮಾಡಲಾಗಿದ್ದರು ಅಲ್ಲಿಯೂ ಬೆಳೆ ಕೇಂದ್ರಿತ ಯೋಜನೆ ಇಲ್ಲ. ಉದಾಹರಣೆಗೆ ತೆಂಗು, ಅಡಿಕೆ ಇತ್ಯಾದಿ ಬೆಳೆಗಳಿಗೆ ನಿರ್ಧಿಷ್ಟ ಯೋಜನೆಗಳನ್ನು ಹೇಳಿಲ್ಲ.

8) ಭದ್ರ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರದ ಬಿಜೆಪಿ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ.

9) ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವದನ್ನೂ ಸ್ಪಷ್ಟಪಡಿಸಿಲ್ಲ.

10) ಬಹಳ ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ‘ಬಿ ಸ್ಕೀಮ್’ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯ ವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ.

11) ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ. ಉಪನಗರ ರೈಲ್ವೆ ಮತ್ತು ಮೆಟ್ರೋ ರೈಲು ಯೋಜನೆಗೆ ಹೆಚ್ಚಿನ ಅನುದಾನ ನೀಡಬಹುದೆಂಬ ನಿರೀಕ್ಷೆ ಇತ್ತು ಅದೂ ಸುಳ್ಳಾಗಿದೆ.

12) ಆಹಾರ ಸಬ್ಸಿಡಿಯನ್ನು ಶೇಕಡಾ 31ರಷ್ಟು ಕಡಿಮೆ ಮಾಡಲಾಗಿದೆ. 2022-23ರಲ್ಲಿ ರೂ.2,87,194 ಕೋಟಿಯಷ್ಟು ಆಹಾರ ಸಬ್ಸಿಡಿ ನೀಡಲಾಗಿತ್ತು. ಈ ಬಾರಿ ಅದನ್ನು ರೂ.1,97,350 ಕೋಟಿಗೆ ಇಳಿಸಲಾಗಿದೆ.

13) ನರೇಗಾ ಯೋಜನೆಗೆ ಶೇಕಡಾ 32ರಷ್ಟು ಕಡಿಮೆ ಅನುದಾನ ನಿಗದಿಪಡಿಸಲಾಗಿದೆ. 2022-23ರಲ್ಲಿ ರೂ.89,154 ಕೋಟಿ ಗಳಷ್ಟು ನೀಡಲಾಗಿದ್ದ ಅನುದಾನವನ್ನು 2023-24ರ ಸಾಲಿನಲ್ಲಿ ರೂ.61,032 ಕೋಟಿಗೆ ಇಳಿಸಲಾಗಿದೆ.

14) ಎಲ್.ಪಿ.ಜಿ. ಸಬ್ಸಿಡಿಯನ್ನು ಶೇಕಡಾ 75ರಷ್ಟು ಕಡಿತಗೊಳಿಸಲಾಗಿದೆ. 2022-23ರಲ್ಲಿ ರೂ.9,170 ಕೋಟಿಗಳಷ್ಟಿದ್ದ ಎಲ್‌ಪಿಜಿ ಸಬ್ಸಿಡಿಯನ್ನು 2023-24ರ ಸಾಲಿಗೆ ರೂ.2,257 ಕೋಟಿಗೆ ಇಳಿಸಲಾಗಿದೆ.

15) ಪ್ರಧಾನ ಮಂತ್ರಿ ಆವಾಸ್ ಯೋಜನಾ ವೆಚ್ಚವನ್ನು ಶೇಕಡಾ 66ರಷ್ಟು ಹೆಚ್ಚಿಸಲಾಗಿದೆ. ಪ್ರತಿಮನೆ ನಿರ್ಮಾಣ ವೆಚ್ಚವನ್ನು ರೂ.48,000 ರೂಪಾಯಿಗಳಿಂದ ರೂ.79,590 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಹೆಚ್ಚಳ ಬಡ ಕುಟುಂಬಗಳಿಗೆ ನೆರವಾಗುವುದಕ್ಕೋ? ಗುತ್ತಿಗೆದಾರರಿಗೆ ಲಾಭ ಮಾಡಿಕೊಡಲಿಕ್ಕೋ?

16) ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ಶೇಕಡಾ 50ರಷ್ಟು ಮನೆಗಳನ್ನು ನಿರ್ಮಿಸಲಾಗಿಲ್ಲ. ಬಹಳ ಮುಖ್ಯವಾಗಿ ನಗರ ಪ್ರದೇಶದಲ್ಲಿರುವ ಕೊಳಗೇರಿ ನಿವಾಸಿಗಳ ವಸತಿ ಸಮಸ್ಯೆಯನ್ನು ಪರಿಹರಿಸುವ ಪ್ರಸ್ತಾಪ ಬಜೆಟ್ ನಲ್ಲಿ ಇಲ್ಲ.

17) ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದರೂ ಅವರು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಒಂದೆರಡು ಬಾರಿ ಕರ್ನಾಟಕದ ಹೆಸರನ್ನು ಉಲ್ಲೇಖಮಾಡಿದ ಹೊರತಾಗಿ ವಿಶೇಷ ನೆರವಿನ ಘೋಷಣೆಗಳನ್ನು ಮಾಡಿಲ್ಲ.

18) ಕೇಂದ್ರ ಬಿಜೆಪಿ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಸಂಪೂರ್ಣ ವಿಫಲವಾಗಿದೆ.

19) ಸಾಮಾನ್ಯವಾಗಿ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಸಂಸತ್ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ರಾಜ್ಯದ ಬೇಡಿಕೆಗಳನ್ನು ಕೇಂದ್ರ ಬಿಜೆಪಿ ಸರ್ಕಾರದ ಮುಂದಿಡುವುದು ರೂಢಿ. ಆದರೆ ಈ ಬಾರಿ ಈ ಸಂಪ್ರದಾಯವನ್ನು ಮುರಿಯಲಾಗಿದೆ.

20) ರಾಜ್ಯದಿಂದ ಆರಿಸಿಹೋಗಿರುವ ರಾಜ್ಯದ 25 ಲೋಕಸಭಾ ಸದಸ್ಯರು ಮತ್ತು ಆರು ರಾಜ್ಯಸಭಾ ಸದಸ್ಯರಿದ್ದಾರೆ. ಇವರಲ್ಲಿ ಯಾರೋಬ್ಬರು ರಾಜ್ಯದ ಬೇಡಿಕೆಗಳ ಬಗ್ಗೆಯಾಗಲಿ, ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆಯಾಗಲಿ ಎಲ್ಲಿಯೂ ಸೊಲ್ಲೆತ್ತಿಲ್ಲ, ಇದರಿಂದಾಗಿ ಕೇಂದ್ರ ಸರ್ಕಾರ ಕೂಡಾ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ.

ಬೆಂಗಳೂರು ರಾಜಕೀಯ ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೋಳಿಯ ವಿರುದ್ಧ ಇಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ದೂರನ್ನು ದಾಖಲಿಸಿದ್ದಾರೆ.

ಇದರ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ‘ಕರ್ನಾಟಕ ಹಗರಣಗಳಿಂದ ಗ್ರಹಣ ಹಿಡಿದಿದ್ದು, ಇವುಗಳಿಗೆ ಕಡಿವಾಣ ಹಾಕಲು ಸಿಎಂ ಬೊಮ್ಮಾಯಿ ಗಂಭೀರವಾಗಿ ಚಿಂತಿಸಿದ್ದರೆ ಏನಾದರೂ ಮಾಡುತ್ತಿದ್ದರು.

ಸಿಐಡಿ ಅಧಿಕಾರಿ 3 ಕೋಟಿ ಲಂಚ ಕೇಳಿದ್ದಾರೆ ಎಂದು ಪಿಎಸ್‌ಐ ಹಗರಣದ ಆರೋಪಿ ಬಹಿರಂಗವಾಗಿ ಹೇಳಿಕೊಂಡಿರುವುದು ಕೊಳೆತ ಎಷ್ಟು ಆಳವಾಗಿದೆ ಎಂಬುದನ್ನು ತೋರಿಸುತ್ತದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೋಳಿ ಹಾಗೂ ಇತರರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ದೂರು.

ರಾಜ್ಯ BJP ಸರ್ಕಾರದ ಲಂಚಾವತಾರ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಇಲ್ಲಿ ಹಗರಣಗಳ ಸಂಬಂಧ ನಡೆಯುತ್ತಿರುವ ತನಿಖೆಗಳೂ ನ್ಯಾಯಸಮ್ಮತವಾಗಿಲ್ಲ. PSI ಹಗರಣ ಸಂಬಂಧ ನಡೆಯುತ್ತಿರುವ CID ತನಿಖೆಯ ದಾರಿ ತಪ್ಪಿಸಲು ಅಧಿಕಾರಿಗಳು ರೂ.3 ಕೋಟಿ ಲಂಚ ಕೇಳಿದ್ದರು, ಈಗಾಗಲೇ ರೂ.76 ಲಕ್ಷ ನೀಡಿರುವುದಾಗಿ RD ಪಾಟೀಲ್‌ ಹೇಳಿದ್ದಾರೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮತದಾರರಿಗೆ 6ಸಾವಿರ ಲಂಚ ನೀಡುವುದಾಗಿ ಹೇಳುತ್ತಿದ್ದಾರೆ. ಒಂದು ಕಡೆ ನ್ಯಾಯಸಮ್ಮತ ತನಿಖೆಯೂ ನಡೆಯುತ್ತಿಲ್ಲ, ಮತ್ತೊಂದು ಕಡೆ PSI ಉದ್ಯೋಗಾಕಾಂಕ್ಷಿಗಳಿಗೆ ಮರು ಪರೀಕ್ಷೆಯನ್ನೂ ನಡೆಸುತ್ತಿಲ್ಲ. ಮತದಾರರಿಗೆ ಲಂಚ ನೀಡುವುದಾಗಿ ಹೇಳುತ್ತಿರುವ ತಮ್ಮ ಪಕ್ಷದ ನಾಯಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ತಮ್ಮ ಮೂಗಿನ ಕೆಳಗೆ ಇಷ್ಟೆಲ್ಲಾ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಪಿಎಸ್‌ಐ ಹಗರಣದ ಸಂಬಂಧ ನ್ಯಾಯಯುತ ತನಿಖೆ ನಡೆಸದ ಗೃಹ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು. ಹಾಗೆಯೇ ಪ್ರಕರಣ ಸಂಬಂಧ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್  ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರನ್ನು ಆರಂಭಿಸಿದ್ದಾರೆ. ಮತದಾರರನ್ನು ಸೆಳೆಯಲು ಹೊಸ ಭರವಸೆಗಳನ್ನು ನೀಡುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂಬ ಭರವಸಯೆನ್ನು ನೀಡಿ ರಾಜ್ಯದ ಜನರಿಗೆ ಅಚ್ಚರಿಯನ್ನು ಕೊಟ್ಟರು. ಇದೀಗ ಗೃಹಿಣಿಯರಿಗೆ ಮಾಸಿಕ 2,000 ರೂ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಮೂಲಕ ರಾಜ್ಯದ ಮಹಿಳೆಯರಿಗೆ ವಾಗ್ದಾನ ಮಾಡಿದ್ದಾರೆ.   

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಎಂಬ ಶೀರ್ಷಿಕೆಯಡಿ ಇಂದು ಮಹಿಳಾ ಸಮಾವೇಶವನ್ನು ಆಯೋಜಿಸಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಅಭ್ಯುದಯಕ್ಕಾಗಿ ಮನೆಯ ಮುಖ್ಯಸ್ಥರಿಗೆ ತಿಂಗಳಿಗೆ 2000 ಹಾಗೂ ವರ್ಷಕ್ಕೆ 24000 ರೂಪಾಯಿ ನೀಡುವುದಾಗಿ ಭರವಸೆ ನೀಡಿದರು.

‘ಗ್ರಹ ಲಕ್ಷ್ಮಿ’ ಎಂಬ ಈ ಯೋಜನೆಯಡಿ 1.5 ಕೋಟಿ ಮನೆಯ ಮುಖ್ಯಸ್ಥರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಸಮಿತಿ ಹೇಳಿಕೊಂಡಿದೆ. ಪ್ರತಿ ಮನೆಯ ಮುಖ್ಯಸ್ಥರಿಗೂ ದೊರೆಯುವ ಈ ಆರ್ಥಿಕ ನೆರವು ಬೆಲೆ ಏರಿಕೆ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಹೊರೆಯಿಂದ ಹೊರಬರಲು ನೆರವಾಗಲಿದೆ ಎನ್ನಲಾಗುತ್ತಿದೆ. ‘ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ’ ಎಂಬ ಮಾತುಗಳು ಕೇಳಿ ಬರುತ್ತಿದೆ.

ಕರ್ನಾಟಕದ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ವಿದ್ಯುತನ್ನು ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಈಗಾಗಲೇ ಭರವಸೆ ನೀಡಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷದ ಎರಡನೇ ಭರವಸೆ ಇಂದು ಬಿಡುಗಡೆಯಾಗಿದೆ.

‘2008 ರಿಂದ 2015ರ ತನಕ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಇಂತಹ ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೊಲಿಸಿದ್ದರು. ಬಿಜೆಪಿಯು ಇದನ್ನೆಲ್ಲ ‘ಸುಳ್ಳು ಭರವಸೆಗಳು’ ಎಂದು ಹೇಳುತ್ತಿರುವುದನ್ನು ಯಾರೂ ನಂಬಲು ಸಾಧ್ಯವಿಲ್ಲ’ ಎಂಬ ಮಾತುಗಳು ಜನರಲ್ಲಿ ಪ್ರಭಲವಾಗಿ ಕೇಳಿಬರುತ್ತಿದೆ.  

ದೇಶ ರಾಜಕೀಯ ರಾಜ್ಯ

ಡಿ.ಸಿ.ಪ್ರಕಾಶ್, ಸಂಪಾದಕರು

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗುತ್ತಿದ್ದಂತೆ, ಯಾತ್ರೆಗಳು ನಡೆಯದ ರಾಜ್ಯಗಳಲ್ಲಿ ಕಾಂಗ್ರೆಸ್ ಘಟಕಗಳು ರಾಷ್ಟ್ರೀಯ ನಾಯಕರುಗಳ ನಿರ್ದೇಶನದಂತೆ ರಾಜ್ಯಾದ್ಯಂತ ಯಾತ್ರೆಗಳನ್ನು ನಡೆಸುತ್ತಿವೆ. ಭಾರತ್ ಜೋಡೋ ಯಾತ್ರೆಯ ಮುಂದುವರಿದ ಭಾಗವಾಗಿ, ಕಾಂಗ್ರೆಸ್ ಪಕ್ಷವು ಜನವರಿ 26 ರಿಂದ ಎರಡು ತಿಂಗಳ ಅವಧಿಯ ‘ಹಾತ್ ಸೇ ಹಾತ್ ಜೋಡೋ’ (ಕೈ ಜೋಡಿಸೋಣ) ಅಭಿಯಾನವನ್ನು ಅಂತಿಮಗೊಳಿಸಿದೆ. ಪ್ರಧಾನ ಕಾರ್ಯದರ್ಶಿ ಪ್ರಿಯಂಕಾ ಗಾಂಧಿ ಮುದಳುತ್ವದಲ್ಲಿ ಈ ಯಾತ್ರೆಗಳು ನಡೆಯಲಿವೆ.

ಈ ಯಾತ್ರೆಯ ಒಂದು ಭಾಗವು, ಎಲ್ಲಾ ಗ್ರಾಮ ಪಂಚಾಯತಿಗಳು ಮತ್ತು ಮತದಾನದ ಚಾವಡಿಗಳನ್ನು ಒಳಗೊಂಡಿರುವ, ಕ್ಷೇತ್ರ ಮಟ್ಟದಲ್ಲಿ ನಡೆಯುವ ಪ್ರಯಾಣವಾಗಿರುತ್ತದೆ. ಈ ಯಾತ್ರೆಯ ಕುರಿತ ರಾಹುಲ್ ಗಾಂಧಿಯ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿಯ ವಿರುದ್ಧದ ಅಪರಾಧಪತ್ರಿಕೆಯಾಗಿ ಎಲ್ಲಡೆಯು ವಿತರಿಸಲಾಗುವುದು. ಪ್ರತಿ ರಾಜ್ಯದಲ್ಲೂ ಮಹಿಳಾ ಯಾತ್ರೆಗಳನ್ನು ಸಂಘಟಿಸಿ ಪ್ರಿಯಾಂಕಾ ಗಾಂಧಿಯೇ ಅದನ್ನು ಮುನ್ನಡೆಸುತ್ತಾರೆ ಎಂದು ಹೇಳಲಾಗುತ್ತಿದೆ.

ಬಿಹಾರ ಕಾಂಗ್ರೆಸ್ ಮುಖಂಡ ಅಖಿಲೇಶ್ ಪ್ರಸಾದ್ ಸಿಂಗ್, ಬಂಕಾ ಜಿಲ್ಲೆಯ ಐತಿಹಾಸಿಕವಾದ ಮಂದರ್ ಮಲೆನಾಡಿನಿಂದ ಬುದ್ಧ ಗಯಾವರೆಗೆ 1,250 ಕಿ.ಮೀ., ರಾಜ್ಯಮಟ್ಟದ ಕಾಂಗ್ರೆಸ್ ಯಾತ್ರೆಯನ್ನು ಗುರುವಾರ ಪ್ರಾರಂಭಿಸಿದ್ದಾರೆ.

ಅದೇ ರೀತಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮುಖಂಡ ಆದಿರ್ ರಂಜನ್ ಚೌದ್ರಿಕೂಡ ಯಾತ್ರೆಯನ್ನು ಆಯೋಜಿಸಿದ್ದಾರೆ. ರಾಜ್ಯಾದ್ಯಂತ ಸುಮಾರು 800 ಕಿ.ಮೀ., ದೂರದ ಯಾತ್ರೆಯನ್ನು ಅವರು ಮುನ್ನಡೆಸಲಿದ್ದಾರೆ. ಕೆಲವು ದಿನಗಳ ಹಿಂದೆ ಗಂಗಾ ಸಾಗರದ ದಕ್ಷಿಣ ತುದಿಯಿಂದ ಡಾರ್ಜಿಲಿಂಗ್ ವರೆಗೆ ನಡಿಗೆ ಪ್ರಯಾಣ ನಡೆಸಿದ್ದರು.

ಅಸ್ಸಾಂನ ಪೂರ್ವ ಭಾಗದಲ್ಲಿ, ಪಶ್ಚಿಮ ಬಂಗಾಳ-ಅಸ್ಸಾಂ ಗಡಿಯಲ್ಲಿ ತುಪ್ರಿ ಜಿಲ್ಲೆಯ ಕೋಲಕ್ಕಂಜ್ ನಿಂದ ರಾಜ್ಯದ ಪೂರ್ವ ಪ್ರದೇಶದಲ್ಲಿರುವ ಸದಿಯಾ ವರೆಗೆ, ರಾಜ್ಯಾದ್ಯಂತ 835 ಕಿಲೋಮೀಟರ್ ವರೆಗೆ ಒಂದು ಕಠಿಣವಾದ ತಂಡವನ್ನು ರಚಿಸಿಕೊಂಡು ಕಾಂಗ್ರೆಸ್ ಮುಖಂಡ ಭೂಪೇನ್ ಕುಮಾರ್ ಭೋರ ಕೆಲವು ದಿನಗಳ ಹಿಂದೆ ಯಾತ್ರೆಯನ್ನು ಮುಗಿಸಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ರಣದೀಪಸಿಂಗ್‌ ಸುರ್ಜೆವಾಲಾ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲ ನಾಯಕರು ಒಂದೇ ಬಸ್‌ ಹತ್ತಲಿದ್ದು, ಯಾತ್ರೆಯುದ್ದಕ್ಕೂ ಆಯೋಜಿಸಲಾಗುತ್ತಿರುವ ಸಮಾವೇಶಗಳಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸುವ ಯೋಜನೆ ಹಾಕಿಕೊಂಡಿದ್ದಾರೆ.

ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್‌ ಪಕ್ಷ, ಜನವರಿ 11 ರಿಂದ ‘ಪ್ರಜಾ ಧ್ವನಿ’ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಇದಕ್ಕಾಗಿ ಭರದಿಂದ ಸಿದ್ಧತೆಗಳನ್ನು ಕೈಗೊಂಡಿದೆ.

‘ಪ್ರಜಾ ಧ್ವನಿ’ ಯಾತ್ರೆಗಾಗಿಯೇ ಸಕಲ ಸೌಲಭ್ಯ ಹೊಂದಿರುವ ಎರಡು ಬಸ್‌ಗಳನ್ನು ವಿಶೇಷವಾಗಿ ನಿರ್ಮಿಸಲಾಗಿದ್ದು, ತಲಾ 40 ಜನ ನಾಯಕರನ್ನು ಒಳಗೊಂಡ ಎರಡು ಬಸ್‌ಗಳು ಜನವರಿ 11ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಲಿವೆ. ಈ ಸಂದರ್ಭದಲ್ಲಿ ಪ್ರತಿ ಜಿಲ್ಲೆಯಲ್ಲೂ ಬೃಹತ್‌ ಸಮಾವೇಶ ನಡೆಯಲಿದ್ದು, ಸಾರ್ವಜನಿಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಈಗಾಗಲೇ ಪಕ್ಷ ಸೂಚನೆಯನ್ನು ನೀಡಿದೆ.

ಭಾರತದಲ್ಲಿ ರಾಹುಲ್ ಗಾಂಧಿ ಮಾತ್ರ (ಭಾರತ್ ಜೋಡೋ) ಯಾತ್ರೆ ನಡೆಸುತ್ತಿಲ್ಲ. ಬಿಜೆಪಿಯ ಜನವಿರೋಧಿ, ಆಡಳಿತ ವಿರೋಧಿ ನೀತಿಯನ್ನು ಖಂಡಿಸಿ, ಜಿಲ್ಲೆ ಜಿಲ್ಲೆಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಕಾಂಗ್ರೆಸ್ ಪಕ್ಷವು ಜನಸಾಮಾನ್ಯರೊಂದಿಗೆ ಸೇರಿ ಯಾತ್ರೆಗಳನ್ನು ನಡೆಸುತ್ತಿರುವುದು ವಿಶೇಷ.