ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಿಬಿಐ Archives » Dynamic Leader
October 23, 2024
Home Posts tagged ಸಿಬಿಐ
ದೇಶ

ನವದೆಹಲಿ: ನೀಟ್ ಪ್ರವೇಶ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಗ್ಯಾಂಗ್ ಶಾಮೀಲಾಗಿರುವುದು ಹೇಗೆ ಎಂಬ ಹೊಸ ಮಾಹಿತಿಯನ್ನು ಸಿಬಿಐ ಬಿಡುಗಡೆ ಮಾಡಿದೆ.

ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಈ ಬಾರಿಯ ನೀಟ್ (NEET) ಪ್ರವೇಶ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಹಗರಣಗಳ ಆರೋಪ ಕೇಳಿಬಂದಿತ್ತು. ಈ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಈ ಹಗರಣ ನಡೆದಿರುವುದು ದೃಢಪಟ್ಟಿದೆ.

ಈ ಕುರಿತು ಸಿಬಿಐ ನಿನ್ನೆ ಪ್ರಕಟಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ, ‘ಪರೀಕ್ಷೆ ನಡೆದ ಓಯಸಿಸ್ ಶಾಲೆಯ ಮುಖ್ಯೋಪಾಧ್ಯಾಯ ಇಶಾನುಲ್ ಹಕ್ ನಗರದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಸಂಯೋಜಕರಾಗಿದ್ದರು. ಇವರನ್ನು ಮತ್ತು ಶಾಲೆಯ ಉಪ ಮುಖ್ಯೋಪಾಧ್ಯಾಯ ಇಮ್ತಿಯಾಜ್ ಆಲಂ ಅವರನ್ನು ಹಗರಣದ ಮಾಸ್ಟರ್ ಮೈಂಡ್ ಪಂಕಜ್ ಕುಮಾರ್ ಸಂಪರ್ಕಿಸಿದ್ದಾರೆ. ಈ ಮೂವರೂ ಸೇರಿ, ಪರೀಕ್ಷೆ ನಡೆಯುವ ಮೇ 5 ರಂದು ಬೆಳಗ್ಗೆ ಸೆಕ್ಯೂರಿಟಿ ಬಾಕ್ಸ್‌ನಿಂದ ಪ್ರಶ್ನೆಪತ್ರಿಕೆ ತೆಗೆದು ಫೋಟೋ ತೆಗೆದಿದ್ದಾರೆ.

ಏತನ್ಮಧ್ಯೆ, ಬಿಹಾರದ ಕೆಲವು ಪ್ರಸಿದ್ಧ ವೈದ್ಯಕೀಯ ಕಾಲೇಜಿನ ಕೆಲವು ವಿದ್ಯಾರ್ಥಿಗಳನ್ನು ಕರೆತಂದು ಹಜಾರಿಬಾಗ್‌ನಲ್ಲಿ ವಸತಿ ಕಲ್ಪಿಸಿಕೊಡಲಾಗಿತ್ತು. ಹಣ ಪಾವಿತಿಸಿದ್ದ ಆ ವಿದ್ಯಾರ್ಥಿಗಳನ್ನು ಸಂಪರ್ಕಿಸಿದ ಕೆಲವು ವ್ಯಕ್ತಿಗಳು ಅವುಗಳನ್ನುಅವರಿಗೆ ವಿತರಿಸಿದ್ದಾರೆ. ವಿದ್ಯಾರ್ಥಿಗಳು ಆ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ನೀಡಿದ್ದಾರೆ.

ಈ ಹಗರಣದಲ್ಲಿ ಭಾಗಿಯಾಗಿರುವ ಪಂಕಜ್ ಕುಮಾರ್, ಪರೀಕ್ಷೆ ನಡೆದ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪ್ರಶ್ನೆಗಳಿಗೆ ಉತ್ತರ ಬರೆದ ವಿದ್ಯಾರ್ಥಿಗಳು, ಖರೀದಿಸಿದ ವಿದ್ಯಾರ್ಥಿಗಳು ಸೇರಿ 35ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜಕೀಯ

ನವದೆಹಲಿ: ಖಾಸಗಿ ಕಂಪನಿಗಳ ಮೇಲೆ ದಾಳಿ ಮಾಡಿ, ಅವುಗಳ ಮೂಲಕ ಬಿಜೆಪಿಗೆ ದೇಣಿಗೆ ಸಂಗ್ರಹಿಸಲಿಕ್ಕಾಗಿ ಕೇಂದ್ರ ಗುಪ್ತಚರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಮ್ ರಮೇಶ್, ‘ಕಳೆದ ಹಣಕಾಸು ವರ್ಷಗಳ 2018-19 ಮತ್ತು 2022-23ರ ನಡುವೆ ಬಿಜೆಪಿಗೆ ಒಟ್ಟು 335 ಕೋಟಿ ರೂ ದೇಣಿಗೆ ನೀಡಿರುವ ಸುಮಾರು 30 ಕಂಪನಿಗಳು, ಅದೇ ಅವಧಿಯಲ್ಲಿ ಕೇಂದ್ರ ಗುಪ್ತಚರ ಸಂಸ್ಥೆಯಿಂದ ತನಿಖೆಗಳನ್ನು ಎದುರಿಸಿರುತ್ತದೆ.

ಈ ಸಮಸ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು. ಬಿಜೆಪಿ ಅವರ ಹಣಕಾಸಿನ ಮೂಲಗಳ ಬಗ್ಗೆ ಸ್ವೇತ ಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಈ ಅನುಮಾನಾಸ್ಪದ ದೇಣಿಗೆಗಳನ್ನು ತನಿಖೆ ಮಾಡಲು ಒಪ್ಪಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ, ‘ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಸಿಬಿಐ ಮುಂತಾದ ಕೇಂದ್ರೀಯ ಗುಪ್ತಚರ ಸಂಸ್ಥೆಗಳ ತನಿಖೆಯನ್ನು ಎದುರಿಸಿದ ನಂತರ, ಹಲವು ಖಾಸಗಿ ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿವೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ಇದು ಕೇಂದ್ರ ಗುಪ್ತಚರ ಸಂಸ್ಥೆಯ ಸ್ವಾತಂತ್ರ್ಯ, ಸ್ವಾಯತ್ತತೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ. ಈ 3 ತನಿಖಾ ಸಂಸ್ಥೆಗಳ ಪೈಕಿ 2 ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಒಳಪಡುತ್ತವೆ.

ಗುಪ್ತಚರ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ಹೇಗೆ ನಿಯಂತ್ರಿಸುತ್ತದೆ ಎಂಬುದು ಇಡೀ ದೇಶಕ್ಕೆ ತಿಳಿದಿದೆ. ರಾಜಕಾರಣಿಗಳ ಮೇಲಿನ ಜಾರಿ ನಿರ್ದೇಶನಾಲಯದ ಪ್ರಕರಣಗಳು 2014 ರಿಂದ ನಾಲ್ಕು ಪಟ್ಟು ಹೆಚ್ಚಾಗಿದೆ. ಇದರಲ್ಲಿ ಶೇಕಡಾ ಶೇ.95ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರ ವಿರುದ್ಧವೇ ಆಗಿವೆ.

ಬಿಜೆಪಿಗೆ ಒಟ್ಟು 187.58 ಕೋಟಿ ರೂ.ನೀಡಿದ 30 ಕಂಪನಿಗಳ ಪೈಕಿ, 23 ಕಂಪನಿಗಳು, 2014 ರಿಂದ ದಾಳಿ ನಡೆದ ವರ್ಷದವರೆಗೆ ಬಿಜೆಪಿಗೆ ಯಾವುದೇ ದೇಣಿಗೆ ನೀಡಿರುವುದಿಲ್ಲ. ಆದರೆ ಅದರ ನಂತರ ದೇಣಿಗೆಯನ್ನು ನೀಡಿದೆ. ಈಗಾಗಲೇ ದೇಣಿಗೆ ನೀಡುತ್ತಿದ್ದ ಸಂಸ್ಥೆಗಳು ದಾಳಿಯ ನಂತರ ಹೆಚ್ಚಿನ ದೇಣಿಗೆಗಳನ್ನು ನೀಡಿವೆ.

ತನಿಖಾ ಸಂಸ್ಥೆಗಳು ದಾಖಲಿಸಿರುವ ಪ್ರಕರಣಗಳು ಅಕ್ರಮ ಎಂದು ನಾವು ಹೇಳುತ್ತಿಲ್ಲ. ಆದರೆ ಈ ಕಂಪನಿಗಳು ತನಿಖೆ ಎದುರಿಸಿದ ನಂತರ ಬಿಜೆಪಿಗೆ ಏಕೆ ದೇಣಿಗೆ ನೀಡುತ್ತಿವೆ ಎಂಬುದು ತನಿಖೆಯಾಗಬೇಕಾದ ವಿಚಾರವಾಗಿದೆ’ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದ ಕ್ರಮದ ನಂತರ ಅವರು ಬಿಜೆಪಿಗೆ ದೇಣಿಗೆ ನೀಡುತ್ತಿರುವುದು ಕೇವಲ ಕಾಕತಾಳೀಯವೇ? ನಾವು ಈ ವಿಷಯವನ್ನು ನ್ಯಾಯಾಂಗ ಮತ್ತು ಜನರ ಬಳಿಗೆ ಕೊಂಡೊಯ್ಯುತ್ತೇವೆ. ಎರಡೂ ಕಡೆಯೂ ನಿಮ್ಮನ್ನು ಸೋಲಿಸುತ್ತೇವೆ’ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ದೇಶ

ಮಣಿಪುರ ಹಿಂಸಾಚಾರದ ತನಿಖೆಗಾಗಿ ಸಿಬಿಐ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಸದಸ್ಯರ ಹೊಸ ತಂಡವನ್ನು ರಚಿಸಿದೆ.

ಈಶಾನ್ಯ ರಾಜ್ಯ ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಇಲ್ಲಿನ ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವಿನ ಸಂಘರ್ಷ ಗಲಭೆಯಾಗಿ ಭುಗಿಲೆದ್ದಿತು. ಕುಕಿ ಪಂಗಡಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಗುಂಪೊಂದು ಮೆರವಣಿಗೆಯಲ್ಲಿ ಕರೆದೊಯ್ದಿತು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತು.

ಎರಡು ಬಣಗಳ ನಡುವಿನ ಘರ್ಷಣೆಯಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು; ಹಲವು ಮನೆಗಳಿಗೆ ಹಾನಿಯಾಗಿದೆ. ಈ ಹಿನ್ನಲೆಯಲ್ಲಿ, ಮಣಿಪುರ ಗಲಭೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ರಾಜ್ಯ ಪೊಲೀಸರು ತನಿಖೆ ನಡೆಸುತ್ತಿದ್ದರು. ಈ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಮಣಿಪುರ ಹಿಂಸಾಚಾರದ ತನಿಖೆಗಾಗಿ ಸಿಬಿಐ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಸದಸ್ಯರ ಹೊಸ ತಂಡವನ್ನು ರಚಿಸಿದೆ.

ಇದನ್ನೂ ಓದಿ: ಖಾಸಗಿ ಬ್ಯಾಂಕ್‌ಗಳಲ್ಲಿ ಸುಸ್ತಿದಾರ ರೈತರು/ಬೆಳೆಗಾರರು ಸಾಲ ಮರುಪಾವತಿಸಲು OTS ಅವಕಾಶವಿದೆ‌! – ದಿನೇಶ್ ಗುಂಡೂರಾವ್

ಇವುಗಳ ತನಿಖೆ ನಡೆಸಲಿರುವ ಸಿಬಿಐ ತಂಡದಲ್ಲಿ ಮೂವರು ಡಿಐಜಿ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಇಬ್ಬರು ಮಹಿಳಾ ಅಧಿಕಾರಿಗಳು ತಂಡವನ್ನು ಮುನ್ನಡೆಸಲಿದ್ದಾರೆ. ಅವರು ಎಲ್ಲಾ ಪ್ರಕರಣಗಳ ಕುರಿತು ಸಿಬಿಐನ ಜಂಟಿ ನಿರ್ದೇಶಕರಿಗೆ ವರದಿಯನ್ನು ಸಲ್ಲಿಸಬೇಕು.