ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸುದ್ದಿಗೋಷ್ಠಿ Archives » Dynamic Leader
October 20, 2024
Home Posts tagged ಸುದ್ದಿಗೋಷ್ಠಿ
ರಾಜಕೀಯ

ಹರಿಯಾಣ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಇದು ಒಳಸಂಚಿಗೆ ಸಂದ ಜಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ನವದೆಹಲಿ: ಹರಿಯಾಣದಲ್ಲಿ ಒಂದೇ ಹಂತದಲ್ಲಿ ಕಳೆದ 5 ರಂದು ನಡೆದ ಚುನಾವಣೆಯ ಮತಗಳನ್ನು ಇಂದು ಎಣಿಕೆ ಮಾಡಲಾಗುತ್ತಿದೆ. ಅಲ್ಲಿನ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ಗೆ ಸರ್ಕಾರ ರಚಿಸಲು ಹೆಚ್ಚಿನ ಅವಕಾಶವಿದೆ ಎಂದು ಹೇಳಿತ್ತು. ಆದರೆ, ಈಗ ಅಲ್ಲಿನ ದೃಶ್ಯಗಳು ಬದಲಾಗಿವೆ.

90 ಕ್ಷೇತ್ರಗಳನ್ನು ಹೊಂದಿರುವ ಹರಿಯಾಣದಲ್ಲಿ ಸರ್ಕಾರ ರಚಿಸಲು 46 ಕ್ಷೇತ್ರಗಳ ಅಗತ್ಯವಿದೆ. ಪ್ರಸ್ತುತ ಅಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬಹುತೇಕ ಬಿಜೆಪಿ ಹರಿಯಾಣದಲ್ಲಿ ಸರ್ಕಾರ ರಚನೆ ಖಚಿತ ಎಂದು ಆ ಪಕ್ಷದವರು ಹೇಳುತ್ತಿದ್ದಾರೆ.

ಈ ಬಾರಿ ಬಿಜೆಪಿ ಹರಿಯಾಣದಲ್ಲಿ ಸರ್ಕಾರ ರಚಿಸಿದರೆ ಅದು ಐತಿಹಾಸಿಕ ಸಾಧನೆಯಾಗಲಿದೆ. ಇದರ ಪ್ರಕಾರ ಬಿಜೆಪಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ, “ಹರಿಯಾಣ ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಇದು ಒಳಸಂಚಿಗೆ ಸಂದ ಜಯ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹರಿಯಾಣ ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದು ಒಳಸಂಚಿಗೆ ಸಂದ ಜಯ. ಇದು ಮೂಲಭೂತ ವಾಸ್ತವಕ್ಕೆ ವಿರುದ್ಧವಾಗಿದೆ. ಚುನಾವಣಾ ಫಲಿತಾಂಶ ರಾಜ್ಯದ ಜನತೆಯ ಇಚ್ಛೆಗೆ ವಿರುದ್ಧವಾಗಿದೆ. ಹರಿಯಾಣದ 3 ಜಿಲ್ಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ದೂರುಗಳು ಬಂದಿವೆ. ಇದು ಪಾರದರ್ಶಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ವೈಫಲ್ಯ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ದೇಶ ರಾಜಕೀಯ

ಪಾಟ್ನಾ: ಇನ್ನು ಕೆಲವು ಪಕ್ಷಗಳು “ಇಂಡಿಯಾ” ಮೈತ್ರಿಕೂಟಕ್ಕೆ ಸೇರಲಿವೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಂದಾಗುತ್ತಿವೆ. ಅದರಂತೆ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 26 ಪಕ್ಷಗಳು “ಇಂಡಿಯಾ” ಮೈತ್ರಿಕೂಟವನ್ನು ರಚಿಸಿವೆ. ಅದೇ ಸಮಯದಲ್ಲಿ, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) 38 ಪಕ್ಷಗಳನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಸನಾತನ ಧರ್ಮವು ಓದುವುದನ್ನು ತಡೆಮಾಡಿತು; ದ್ರಾವಿಡ ಮಾದರಿ ಸರ್ಕಾರ ಹಸಿವು ನೀಗಿಸಿ ಓದುವಂತೆ ಮಾಡಿದೆ!

ಇಂಡಿಯಾ ಮೈತ್ರಿಕೂಟದ ಮೊದಲ ಸಭೆ ಕಳೆದ ಜೂನ್‌ನಲ್ಲಿ ಪಾಟ್ನಾದಲ್ಲಿ ನಡೆದಿದ್ದು, ಎರಡನೇ ಸಭೆ ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದಿತ್ತು. ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಇಂಡಿಯಾ ಮೈತ್ರಿಕೂಟ ಕಠಿಣ ಪೈಪೋಟಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಇನ್ನೂ ಕೆಲವು ಪಕ್ಷಗಳು ಸೇರಲಿವೆ ಎಂದು ಹೇಳಿದ್ದಾರೆ.

ಇದರ ಬಗ್ಗೆ ಪಾಟ್ನಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, “ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಿದ್ದೇವೆ. ಅಲ್ಲದೆ ಕ್ಷೇತ್ರ ಹಂಚಿಕೆ ಸೇರಿದಂತೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಕೆಲವು ರಾಜಕೀಯ ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ನಾನು ಗರಿಷ್ಠ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ನನಗೆ ಆಸೆ ಇಲ್ಲ.” ಎಂದು ಹೇಳಿದರು.