ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸೆಬಿ Archives » Dynamic Leader
October 21, 2024
Home Posts tagged ಸೆಬಿ
ದೇಶ ರಾಜಕೀಯ

ನವದೆಹಲಿ: ಕನ್ಸಲ್ಟೆನ್ಸಿ ಹೆಸರಿನಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ (Madhabi Puri Buch) ಅವರು ಮಹೀಂದ್ರಾ ಸೇರಿದಂತೆ ಕಂಪನಿಗಳಿಂದ 2.95 ಕೋಟಿ ರೂ.ಗಳನ್ನು ಪಡೆದಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಮಾಧವಿ ಬುಚ್ ಅವರು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾದ (SEBI) ಅಧ್ಯಕ್ಷರಾಗಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಹಲವಾರು ಆರೋಪಗಳನ್ನು ಮಾಡುತ್ತಿದೆ.

ಇಂದು ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರ, “ಸೆಬಿ ಮುಖ್ಯಸ್ಥೆ ಮಾಧವಿ ಅವರು 2016 ರಿಂದ 2024ರ ಅವಧಿಯಲ್ಲಿ ಮಹೀಂದ್ರಾದಿಂದ 2.95 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಅವರ ಸಲಹಾ ಸಂಸ್ಥೆ ಅಗೋರಾ ಅಡ್ವೈಸರಿ (Agora Advisory) ಮೂಲಕ ಮೊತ್ತವನ್ನು ಸ್ವೀಕರಿಸಲಾಗಿದೆ.

ಮಾಧವಿ ಈ ಕಂಪನಿ ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅದು ತಪ್ಪು. ಆ ಕಂಪನಿ ಕಾರ್ಯನಿರ್ವಹಿಸುತ್ತಿದೆ. ಹಣಕಾಸು ಕೂಡ ಪಡೆದಿದೆ. ಅದರಲ್ಲಿ ಮಾಧವಿ ಶೇ.99ರಷ್ಟು ಪಾಲು ಹೊಂದಿದ್ದಾರೆ. ಮಹೀಂದ್ರಾ ಅಲ್ಲದೆ ಡಾ.ರೆಡ್ಡೀಸ್, ಬಿಡ್ಲೈಟ್, ಐಸಿಐಸಿಐ, ಸೆಂಬ್ಕಾರ್ಪ್, ವಿಸು ಲೀಸಿಂಗ್ ಮುಂತಾದ ಕಂಪನಿಗಳು ಮಾಧವಿಯವರ ಅಗೋರಾ ಕಂಪನಿ ಸೇವೆಯನ್ನು ಪಡೆದುಕೊಂಡಿವೆ.

ಕಳೆದ ತಿಂಗಳು, ಐಸಿಐಸಿಐ ಬ್ಯಾಂಕ್‌ನಲ್ಲಿ ಉಭಯ ಸ್ಥಾನಗಳನ್ನು ನಿರ್ವಹಿಸುವ ಮೂಲಕ 16.80 ಕೋಟಿ ರೂಪಾಯಿ ಲಾಭ ಗಳಿಸಿದ್ದರು ಎಂದು ಕಾಂಗ್ರೆಸ್ ಆರೋಪಿಸಿತ್ತು. ಬ್ಯಾಂಕಿನವರೇ ಅದನ್ನು ನಿರಾಕರಿಸಿದ್ದು, ಇಂದು ಮತ್ತೊಂದು ಹೊಸ ಆರೋಪವನ್ನು ಕಾಂಗ್ರೆಸ್ ಮಾಡಿದೆ.

ದೇಶ

ಡಿ.ಸಿ.ಪ್ರಕಾಶ್

“ಭಾರತದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸಿದ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಬಹಿರಂಗಪಡಿಸುವವರನ್ನು ಮೌನಗೊಳಿಸಲು ಮತ್ತು ಬೆದರಿಸುವ ಪ್ರಯತ್ನವಾಗಿ ಸೆಬಿ ನಮಗೆ ಶೋಕಾಸ್ ನೋಟಿಸ್ ಕಳುಹಿಸಿದೆ!” – ಹಿಂಡೆನ್‌ಬರ್ಗ್

ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಗೆ ಸೆಬಿ (SEBI) ವಿವರಣೆ ಕೋರಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಏತನ್ಮಧ್ಯೆ, ಸೆಬಿಯ ನೋಟಿಸ್ ಪಡೆದ ನಂತರ, ಹಿಂಡೆನ್‌ಬರ್ಗ್ ರಿಸರ್ಚ್ ಮತ್ತೊಮ್ಮೆ ವಂಚನೆಯ ಆರೋಪವನ್ನು ಎತ್ತಿದೆ!

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್, ಅದಾನಿ ಸಮೂಹ ಹಲವಾರು ವರ್ಷಗಳಿಂದ ಹಣಕಾಸಿನ ಅಕ್ರಮಗಳಲ್ಲಿ ತೊಡಗಿವೆ ಎಂಬ ವರದಿಯನ್ನು ಕಳೆದ ವರ್ಷದ ಆರಂಭದಲ್ಲಿ ಪ್ರಕಟಿಸಿತು. ಈ ವರದಿಯಿಂದ ಷೇರು ಮೌಲ್ಯದಲ್ಲಿ ಕುಸಿತವನ್ನು ಕಂಡು, ಭಾರೀ ನಷ್ಟವನ್ನು ಎದುರಿಸಿದ ಅದಾನಿ ಸಮೂಹ ಶ್ರೀಮಂತರ ಪಟ್ಟಿಯಿಂದಲೂ ದೂರ ಸರಿಯಿತು.

ಅಲ್ಲದೆ, ಈ ವಿಚಾರ ಸಂಸತ್ತಿನವರೆಗೂ ಪ್ರತಿಧ್ವನಿಸಿತು. ಹಿಂಡೆನ್‌ಬರ್ಗ್ ವರದಿಯ ಸತ್ಯಾಸತ್ಯತೆಯನ್ನು ತನಿಖೆ ಮಾಡಲು ಕೋರಿ ಸಲ್ಲಿಸಲಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್ ಅದಾನಿ ಗ್ರೂಪ್ ವಿರುದ್ಧದ ಪ್ರಕರಣವನ್ನು ಸೆಬಿ ತನಿಖೆ ನಡೆಸಬೇಕು ಎಂದು ತೀರ್ಪು ನೀಡಿದೆ.

ತರುವಾಯ, ಸೆಬಿ ಕಳೆದ ಒಂದುವರೆ ವರ್ಷಗಳಿಂದ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದು, ಈಗ ಸೆಬಿ, ವಿವರಣೆಯನ್ನು ಕೋರಿ ಹಿಂಡೆನ್‌ಬರ್ಗ್ ರಿಸರ್ಚ್ ಕಂಪನಿಗೆ ಶೋಕಾಸ್ ನೋಟಿಸ್ ಕಳುಹಿಸಿದೆ. ಏತನ್ಮಧ್ಯೆ, ಸೆಬಿಯ ನೋಟಿಸ್ ಪಡೆದ ನಂತರ, ಹಿಂಡೆನ್‌ಬರ್ಗ್ ರಿಸರ್ಚ್ ಮತ್ತೊಮ್ಮೆ ವಂಚನೆಯ ಆರೋಪವನ್ನು ಎತ್ತಿದೆ.

ಈ ಬಗ್ಗೆ ಹಿಂಡೆನ್ಬರ್ಗ್, “ಭಾರತದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸಿದ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಬಹಿರಂಗಪಡಿಸುವವರನ್ನು ಮೌನಗೊಳಿಸಲು ಮತ್ತು ಬೆದರಿಸುವ ಪ್ರಯತ್ನವಾಗಿ ಸೆಬಿ ನಮಗೆ ಶೋಕಾಸ್ ನೋಟಿಸ್ ಕಳುಹಿಸಿದೆ. ಸೆಬಿಯಂತಹ ಸಂಸ್ಥೆಗಳು ವಂಚಕರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುತ್ತವೆ ಎಂದು ಹಲವರು ಭಾವಿಸಬಹುದು. ಆದರೆ ಇಲ್ಲಿ ಇದಕ್ಕೆ ವ್ಯತಿರಿಕ್ತವಾಗಿ, ಅಂತಹ ಮೋಸದ ಅಭ್ಯಾಸಗಳನ್ನು ಹೊರ ಜಗತ್ತಿಗೆ ತರುವವರ ಬಗ್ಗೆ ಸೆಬಿ ಹೆಚ್ಚು ಆಸಕ್ತಿ ತೋರುತ್ತಿದೆ” ಎಂದು ಅಪಾದಿಸುವ ಜೊತೆಗೆ ಈ ವಿಚಾರದಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್‌ನ ವಿರುದ್ಧವೂ ಆರೋಪ ಮಾಡಿದೆ. ಅಂದರೆ, ಅದಾನಿ ಷೇರುಗಳನ್ನು ಶಾರ್ಟ್ (Short) ಮಾಡಲು ಹಿಂಡೆನ್‌ಬರ್ಗ್ ಹೂಡಿಕೆದಾರ ಪಾಲುದಾರನನ್ನು (Investor Partner) ಬಳಸಿಕೊಂಡಿದೆ. ಈ ಪಾಲುದಾರರು ಅದಾನಿ ಷೇರುಗಳನ್ನು ಶಾರ್ಟ್ ಮಾಡಲು ನಿಧಿಯನ್ನು (Fund)  ಬಳಸಿದ್ದಾರೆ. ಕೋಟಕ್ ಮಹೀಂದ್ರಾ ಬ್ಯಾಂಕ್ ಈ ನಿಧಿಯನ್ನು ರಚಿಸಿ, ನಿರ್ವಹಿಸಿದೆ ಎಂಬ ಹೊಸ ಆರೋಪವನ್ನು ಎತ್ತಿದೆ.

ಅದಾನಿ ಷೇರುಗಳನ್ನು ಶಾರ್ಟ್ ಮಾಡುವ ಮೂಲಕ ಹಿಂಡೆನ್‌ಬರ್ಗ್ 4.1 ಮಿಲಿಯನ್ ಡಾಲರ್ ಗಳಿಸಿದೆ. ಇದಲ್ಲದೆ, ಅದಾನಿ ಗ್ರೂಪ್‌ನ ಡಾಲರ್ ಬಾಂಡ್‌ಗಳನ್ನು ಶಾರ್ಟ್ ಮಾಡಿದ್ದರಿಂದ ಕೇವಲ 31,000 ಡಾಲರ್ ಮಾತ್ರ ಸಿಕ್ಕಿದೆ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದೆ.

ಆದರೆ ಸೆಬಿಯ ನೋಟಿಸ್‌ನಲ್ಲಿ ಕೋಟಾಕ್ ಕಂಪನಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲದೆ ‘KMIL’ ಎಂಬ ಸಂಕ್ಷಿಪ್ತ ರೂಪವನ್ನು ಮಾತ್ರ ಬಳಸಲಾಗಿದೆ. ಇದರೊಂದಿಗೆ ಕೋಟಕ್ ಬ್ಯಾಂಕ್ ಮತ್ತು ಅದರ ಸಂಸ್ಥಾಪಕ ಉದಯ್ ಕೋಟಕ್ ಅವರನ್ನು ತನಿಖೆಯಿಂದ ಮರೆಮಾಡಲು ಸೆಬಿ ಪ್ರಯತ್ನಿಸುತ್ತಿದೆ ಎಂಬ ಅನುಮಾನವನ್ನೂ ಹಿಂಡೆನ್‌ಬರ್ಗ್ ಹುಟ್ಟುಹಾಕಿದೆ.

ದೇಶ

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಿಂದ ಜನ ಸಾಮಾನ್ಯರಿಗೆ 38 ಲಕ್ಷ ಕೋಟಿ ರೂ.ನಷ್ಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, “ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳನ್ನು ವ್ಯವಸ್ಥಿತವಾಗಿ ತಿರುಚಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಲಾಭ ಗಳಿಸಲು ಸಮೀಕ್ಷೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಜೂನ್ 4ರೊಳಗೆ ಷೇರುಗಳನ್ನು ಖರೀದಿಸುವಂತೆ ಮೇ 14ರಂದು ಅಮಿತ್ ಶಾ ಹೇಳಿದ್ದಾರೆ.

38 ಲಕ್ಷ ಕೋಟಿ ನಷ್ಟ:
ನಿರ್ದಿಷ್ಟ 5 ಕೋಟಿ ಕುಟುಂಬಗಳು ಷೇರು ಮಾರುಕಟ್ಟೆಯಲ್ಲಿ ನಿರ್ದಿಷ್ಟ ಸಮಯದಲ್ಲಿ ಹೂಡಿಕೆ ಮಾಡುವಂತೆ ಅಮಿತ್ ಶಾ ಕೇಳಿದ್ದು ಏಕೆ? ಷೇರು ಮಾರುಕಟ್ಟೆ ಅಕ್ರಮಗಳ ಬಗ್ಗೆ ಸೆಬಿ ತನಿಖೆ ನಡೆಸಬೇಕು. ಷೇರು ಮಾರುಕಟ್ಟೆಯಲ್ಲಿ 38 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಇದರಿಂದ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಕೆಲವರು ಹಣ ಸಂಪಾದಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಾಯ ಮಾಡಿದ್ದಾರೆ. ಬಿಜೆಪಿಯ ಸಮೀಕ್ಷೆಯಿಂದ ಷೇರುಗಳು ಗಣನೀಯವಾಗಿ ಏರಿಕೆ ಕಂಡಿತ್ತು.

ನಕಲಿ ಸಮೀಕ್ಷೆಗಳು:
ದುಬಾರಿ ಬೆಲೆಯ ಲಾಭ ಪಡೆದು ಬಿಜೆಪಿ ಹಣ ಗಳಿಸಿದೆ. ನಕಲಿ ಸಮೀಕ್ಷೆ ನಡೆಸಿದವರ ವಿರುದ್ಧ ತನಿಖೆ ನಡೆಸಬೇಕು. ಚುನಾವಣಾ ಮತದಾನಕ್ಕೂ ಮುನ್ನ ಮೇ 30 ಮತ್ತು 31 ರಂದು ಷೇರುಪೇಟೆಯಲ್ಲಿ ಹೂಡಿಕೆಯ ಸಂಗ್ರಹವು ಹೆಚ್ಚಾಗಿತ್ತು. ಚುನಾವಣೆ ನಂತರ ಷೇರುಪೇಟೆ ಕುಸಿತದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದಿಷ್ಟ ಕೆಲವೇ ಕುಟುಂಬಗಳು ಹಣ ಗಳಿಸಲು ಸಂಚು ನಡೆದಿದೆ.

ಸಂಸದೀಯ ಜಂಟಿ ಸಮಿತಿ:
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು. ಸೆಬಿ ತನಿಖೆಯನ್ನು ಎದುರಿಸುತ್ತಿರುವ ಮಾಧ್ಯಮ ಕಂಪನಿಯೊಂದಕ್ಕೆ ಷೇರು ಮಾರುಕಟ್ಟೆ ಕುರಿತು ಅಮಿತ್ ಶಾ ಸಂದರ್ಶನ ನೀಡಿದ್ದು ಏಕೆ? ಪ್ರಧಾನಿ ಮೋದಿ ಕೂಡ ಷೇರು ಮಾರುಕಟ್ಟೆಯ ಬಗ್ಗೆ ಮಾತನಾಡಿದ್ದಾರೆ. ಷೇರು ಮಾರುಕಟ್ಟೆ ಏರಿಕೆಯ ಬಗ್ಗೆ ಮೋದಿ ಏಕೆ ಬಹಿರಂಗವಾಗಿ ಮಾತನಾಡಬೇಕು? ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆ ಇರುತ್ತದೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸಲಹೆ ನೀಡಿದ್ದು ಕಾನೂನು ಬಾಹಿರ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶ

ಅದಾನಿ ವಿಚಾರದಲ್ಲಿ ಸೆಬಿ ಸಂಸ್ಥೆ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಹೇಳಿದ ಸುಳ್ಳುಗಳು ಈಗ ಬಯಲಾಗಿದೆ.

ಕೆಲವು ತಿಂಗಳ ಹಿಂದೆ, ಹೆಸರಾಂತ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಸಂಸ್ಥೆ, ಅದಾನಿ ಸಮೂಹದ ಕಂಪನಿಗಳ ವಿರುದ್ಧ ವಂಚನೆ, ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಮಾಡಿತ್ತು. ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗುವ ಮೂಲಕ ತನ್ನ ಕಂಪನಿಯ ಷೇರು ಬೆಲೆಯನ್ನು ಹೆಚ್ಚಿಸಿಕೊಂಡಿತು ಎಂದು ತನ್ನ ವರದಿಯಲ್ಲಿ ಹಿಂಡೆನ್‌ಬರ್ಗ್ ಆರೋಪಿಸಿತು.

ಈ ವರದಿಯ ನಂತರ, ಅದಾನಿ ಕಂಪನಿಗಳ ಷೇರು ಮೌಲ್ಯಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದರಿಂದಾಗಿ ಅದಾನಿ ಕಂಪನಿಯ ಮೌಲ್ಯವು ಹಲವು ಕೋಟಿ ರೂಪಾಯಿಗಳ ಕುಸಿತವನ್ನು ಕಂಡಿತು. ಇದರಿಂದಾಗಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಅದಾನಿ 24ನೇ ಸ್ಥಾನಕ್ಕೆ ಕುಸಿದರು. ಅವರ ಆಸ್ತಿ ಮೌಲ್ಯವು ಲಕ್ಷ ಕೋಟಿಗಳಷ್ಟು ಕುಸಿದಿದೆ ಎಂದು ವರದಿಯಾಗಿದೆ.

ಅದಾನಿ ಷೇರುಗಳ ಈ ಕುಸಿತದಿಂದ ಅದಾನಿಯಲ್ಲಿ ಹೂಡಿಕೆ ಮಾಡಿದ್ದ ಎಲ್‌ಐಸಿ ಸೇರಿದಂತೆ ಸಾರ್ವಜನಿಕ ವಲಯದ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸಿದೆ. ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ರೂ.30,127 ಕೋಟಿ ಹೂಡಿಕೆ ಮಾಡಿತ್ತು. ಜನವರಿ 24 ರಂದು ಇದರ ಮೌಲ್ಯ ರೂ.72,193.87 ಕೋಟಿಗಳಾಗಿದ್ದರೆ, ಅದಾನಿ ಕಂಪನಿಗಳ ಷೇರು ಮೌಲ್ಯ ಕುಸಿತದಿಂದಾಗಿ ಅದರ ಮೌಲ್ಯ ಈಗ ರೂ.26,861.88 ಕೋಟಿಗೆ ಕುಸಿತವನ್ನು ಕಂಡಿದೆ.

ಏತನ್ಮಧ್ಯೆ, ಹಿಂಡೆನ್‌ಬರ್ಗ್ ಕಂಪನಿಯು ಅದಾನಿ ಸಮೂಹದ ದುಷ್ಕೃತ್ಯಗಳನ್ನು ಬಹಿರಂಗಪಡಿಸುವುದರ ಜೊತೆಯಲ್ಲೇ ಷೇರುಪೇಟೆಯ ಮೇಲೆ ನಿಗಾ ಇಡಲು ಸ್ಥಾಪಿತವಾದ ಸೆಬಿ ಸಂಸ್ಥೆಯು, ಅದಾನಿ ಸಮೂಹದ ಅಕ್ರಮಗಳನ್ನು ತಡೆಯದೆ ಮೌನ ವಹಿಸಿದ್ದನ್ನೂ ಪ್ರಶ್ನಿಸಿತು. ಈ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದಾಗ, ‘ಅದಾನಿ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಸೆಬಿ ಸಂಸ್ಥೆಯ ಪರವಾಗಿ ಉತ್ತರಿಸಲಾಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಇದೇ ಉತ್ತರವನ್ನು ನೀಡಿದ್ದರು.

ಆದರೆ, ಈ ಸಂಬಂಧ ಸುಪ್ರೀಂ ಕೋರ್ಟ್‌ನ ವಿಚಾರಣೆಯಲ್ಲಿ ‘ಅದಾನಿ ಕಂಪನಿಗಳ ಕುರಿತು ಸೆಬಿ ಇನ್ನೂ ವಿಚಾರಣೆ ನಡೆಸಿಲ್ಲ’ ಎಂದು ಹೇಳಿರುವುದು ಅಘಾತವನ್ನು ಉಂಟುಮಾಡಿದೆ. ಈ ಮೂಲಕ ಸಂಸತ್ತಿನಲ್ಲಿ ಸೆಬಿ ಸಂಸ್ಥೆ ಸುಳ್ಳು ಹೇಳಿರುವುದು ಬಯಲಾಗಿದೆ. ‘ಸಂಸತ್ತಿನಲ್ಲಿ ಅದಾನಿ ಕಂಪನಿ ಬಗ್ಗೆ ವಿಚಾರಣೆ ನಡೆಸಿದ್ದೇವೆ’ ಎಂದು ಹೇಳಿದ ಸೆಬಿ, ಸುಪ್ರೀಂ ಕೋರ್ಟ್‌ನಲ್ಲಿ ‘ತನಿಖೆ ನಡೆಸಿಲ್ಲ’ ಎಂದು ಹೇಳುತ್ತಿದೆ. ‘ಅದಾನಿಯನ್ನು ಉಳಿಸಲು ಸೆಬಿ ಪ್ರಯತ್ನಿಸುತ್ತಿದೆ’ ಎಂದು ವಕೀಲ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್, ಸಂಪಾದಕರು

ಭಾರತದ ಆರ್ಥಿಕ ಬೆಳವಣಿಗೆ ಕುಸಿತದ ಹಾದಿಯಲ್ಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ. ಅವರು ಪಿಟಿಐಗೆ ನೀಡಿರುವ ಇಮೇಲ್ ಸಂದರ್ಶನದಲ್ಲಿ, ‘ದೇಶದಲ್ಲಿ ಖಾಸಗಿ ಹೂಡಿಕೆಯ ಕೊರತೆ; ಹೆಚ್ಚುತ್ತಿರುವ ಬಡ್ಡಿದರಗಳು; ಅಂತಾರಾಷ್ಟ್ರೀಯ ಆರ್ಥಿಕ ಹಿಂಜರಿತದಿಂದಾಗಿ, ಭಾರತವು 1950 ರಿಂದ 1980ರ ಅವಧಿಯಲ್ಲಿದ್ದ ಅತ್ಯಂತ ಕಡಿಮೆ (ಶೇ.4 ಕ್ಕಿಂತ ಕಡಿಮೆ) ಆರ್ಥಿಕ ಬೆಳವಣಿಗೆ ದರಕ್ಕೆ ತಳ್ಳಲ್ಪಡುವ ಅಪಾಯದಲ್ಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.4.4ಕ್ಕೆ ಇಳಿಕೆಯಾಗಿದೆ. ಕಳೆದ ಕೆಲವು ತ್ರೈಮಾಸಿಕಗಳಲ್ಲಿ, ಆರ್ಥಿಕ ಅಂಕಿಅಂಶಗಳು ಕೇವಲ ಕುಸಿತವನ್ನೇ ತೋರಿಸುತ್ತಿದೆ. ಖಾಸಗಿ ವಲಯವು ಹೊಸ ಹೂಡಿಕೆಯಲ್ಲಿ ಆಸಕ್ತಿ ತೋರಿಸುತ್ತಿಲ್ಲ.

ಇದರ ಮಧ್ಯೆ ಆರ್‌ಬಿಐ ಕೂಡ ನಿರಂತರವಾಗಿ ಬಡ್ಡಿ ದರವನ್ನು ಏರಿಸುತ್ತಿದೆ. ಈ ವರ್ಷದ ಅಂತ್ಯದ ವೇಳೆಗೆ ಜಾಗತಿಕ ಆರ್ಥಿಕತೆಯು ಆರ್ಥಿಕ ಹಿಂಜರಿತವನ್ನು ಪ್ರವೇಶಿಸುವ ನಿರೀಕ್ಷೆಯಿದೆ. ಇದರ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಚೇತರಿಕೆ ಕಾಣುವುದು ಅಸಾಧ್ಯವೆಂಬುದು ನನ್ನ ಅಭಿಪ್ರಾಯವಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಎಷ್ಟಿರುತ್ತದೆ ಎಂಬುದು ಈಗಿರುವ ದೊಡ್ಡ ಪ್ರಶ್ನೆಯಾಗಿದೆ. ಕೇಂದ್ರ ಸರ್ಕಾರವು ಉದ್ಯೋಗಗಳನ್ನು ಸೃಷ್ಟಿಸಲು ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮದಲ್ಲಿ ಸಾಕಷ್ಟು ಹಣವನ್ನು ಹೂಡಿಕೆ ಮಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿಸಲು ಎಷ್ಟು ಹಣಕಾಸಿನ ಹೂಡಿಕೆ ಬೇಕು ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಹೂಡಿಕೆಗೆ ಸೂಕ್ತವಾದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯಲ್ಲಿ ಕಡಿಮೆಯಿದೆ. ಆದ್ದರಿಂದ, ಇದು ನಿರೀಕ್ಷಿತ ಫಲಿತಾಂಶವನ್ನು ನೀಡುವುದಿಲ್ಲ.

ಸರ್ಕಾರದ ವಕ್ತಾರರು ಭಾರತದಿಂದ ಮೊಬೈಲ್ ಫೋನ್ ರಫ್ತು ಹೆಚ್ಚಳವನ್ನು ಯೋಜನೆಯ ಯಶಸ್ಸಿನ ಉದಾಹರಣೆಯಾಗಿ ಉಲ್ಲೇಖಿಸಬಹುದು. ಆದರೆ ಪ್ರತಿ ಹ್ಯಾಂಡ್‌ಸೆಟ್‌ಗೂ ಭಾರತವು ತಯಾರಕರಿಗೆ ವಿಭಿನ್ನ ರೀತಿಯಲ್ಲಿ ಸಬ್ಸಿಡಿ ನೀಡುತ್ತಿದೆ ಎಂಬುದನ್ನು ನೆನಪಿಸಿಕೊಳ್ಳಬೇಕು. ಪ್ರಪಂಚದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ದೇಶಗಳೆಲ್ಲ ಈಗ ಸೇವಾ ವಲಯವನ್ನು ಅವಲಂಬಿಸಿವೆ. ಇದರಲ್ಲಿ ಸಾರಿಗೆ, ಪ್ರವಾಸೋದ್ಯಮ, ಚಿಲ್ಲರೆ ವ್ಯಾಪಾರ, ವಸತಿ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಮಧ್ಯಂತರ ಕೌಶಲ್ಯ ಹೊಂದಿರುವವರಿಗೆ ಹೆಚ್ಚಿನ ಉದ್ಯೋಗಗಳು ಲಭ್ಯವಿರುತ್ತವೆ. ಅದಾನಿ-ಹಿಂಡೆನ್‌ಬರ್ಗ್ ನಂತಹ ಪ್ರಕರಣಗಳು ಸರ್ಕಾರ ಮತ್ತು ಉದ್ಯಮದ ನಡುವಿನ ಪರೋಕ್ಷ ಸಂಬಂಧವನ್ನು ಕೊನೆಗೊಳಿಸಲು ಸಹಾಯ ಮಾಡಬಹುದು. ಆದರೆ ಈ ವಿಚಾರದಲ್ಲಿ ವಿದೇಶದಿಂದ ನಕಲಿ ಕಂಪನಿಗಳ ಮೂಲಕ ಹೂಡಿಕೆ ಮಾಡಿರುವ ಆರೋಪದ ಬಗ್ಗೆ ಸೆಬಿ ತನಿಖೆ ನಡೆಸದಿರುವುದು ಅಚ್ಚರಿಯನ್ನು ಮೂಡಿಸಿದೆ’. ಎಂದು ಹೇಳಿದ್ದಾರೆ.

Amid the Adani row, former Reserve Bank of India (RBI) Governor Raghuram Rajan asked why markets regulator SEBI did not get to the bottom of the issues that were raised by US-based short-seller Hindenburg research. He also questioned why SEBI didn’t get in touch with the agency if it needed help from probing agencies.

“Why has SEBI not yet got to the bottom of the ownership of those Mauritius funds which have been holding and trading Adani stock? Does it need help from the investigative agencies?” news agency PTI quoted Rajan as asking.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು.

ಅದಾನಿ ಸಮೂಹದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯು ಇತ್ತೀಚಗೆ ವರದಿಯೊಂದನ್ನು ಪ್ರಕಟಿಸಿತು. ಆ ವರದಿಯಲ್ಲಿ, ‘ಭಾರತೀಯ ಸಂಸ್ಥೆಯಾದ ಅದಾನಿ ಸಮೂಹವು ಕಳಪೆಯಾಗಿ ಷೇರು ನಿರ್ವಹಣೆ ಮಾಡಿರುವುದಕ್ಕೆ ಹಾಗೂ ಖಾತೆಯಲ್ಲಿ ವಂಚನೆ ಮಾಡಿರುವುದಕ್ಕೆ ಅಗತ್ಯವಾದ ಆದಾರಗಳನ್ನು ಸಂಗ್ರಹಿಸಿ, ನಮ್ಮ ಎರಡು ವರ್ಷಗಳ ತನಿಖೆಯ ಫಲಿತಾಂಶಗಳನ್ನು ನಾವು ಪ್ರಸ್ತುತಪಡಿಸುತ್ತಿದ್ದೇವೆ. ಅದಾನಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷ ಗೌತಮ್ ಅದಾನಿ ಕಳೆದ ಮೂರು ವರ್ಷಗಳಲ್ಲಿ 100 ಬಿಲಿಯನ್ ನಿವ್ವಳ ಮೌಲ್ಯವನ್ನು ಸಂಗ್ರಹಿಸಿದ್ದಾರೆ.

ಅದಾನಿ ಸಮೂಹದ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಡಜನ್‌ಗಟ್ಟಲೆ ಜನರೊಂದಿಗೆ ಮಾತನಾಡುವ ಮೂಲಕ ಸಾವಿರಾರು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಮತ್ತು ಸುಮಾರು ಅರ್ಧ ಡಜನ್ ದೇಶಗಳಿಗೆ ನೇರವಾಗಿ ಭೇಟಿ ನೀಡಿ, ಇದರ ಬಗ್ಗೆ ಸುಧೀರ್ಘವಾಗಿ ಅಧ್ಯಯನ ನಡಸಲಾಗಿದೆ’ ಎಂದು ಹೇಳಿತು.

ಅದಾನಿ ಸಮೂಹವು ಇದ್ನನ್ನು ನಿರಾಕರಿಸಿತು. ಮತ್ತೊಂದೆಡೆ, ಈ ವಿಚಾರದಲ್ಲಿ ಸೂಕ್ತ ತನಿಖೆ ನಡೆಯಬೇಕೆಂದು ಒತ್ತಾಯ ಮಾಡುತ್ತಿರುವ ವಿರೋಧ ಪಕ್ಷಗಳು, ಇದರಲ್ಲಿ ಬಿಜೆಪಿ ಹಾಗೂ ಪ್ರಧಾನಿ ಮೋದಿಗೆ ಸಂಬಂಧವಿದೆ ಎಂದೂ ಆರೋಪಿಸಿತು. ಇದರಿಂದಾಗಿ ಸಂಸತ್ತಿನ ಕಲಾಪಗಳು ನಡೆಯದೆ ಹಲವಾರು ಬಾರಿ ಮುಂದೂಡಲ್ಪಟ್ಟಿತು.

ಈ ನಡುವೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಈ ಕುರಿತು ನೀಡಿರುವ ಹೇಳಿಕೆಯಲ್ಲಿ, ‘ಪ್ರಧಾನಿ ನರೇಂದ್ರ ಮೋದಿಯವರು ಅದಾನಿ ಸಮೂಹದ ಎಲ್ಲಾ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು. ಆ ನಂತರ ಆ ಆಸ್ತಿಗಳನ್ನು ಹರಾಜು ಮಾಡಿ, ಆ ಹಣದಿಂದ ಅದಾನಿ ಸಮೂಹದಲ್ಲಿ ಹಣ ಕಳೆದುಕೊಂಡವರಿಗೆ ಸಹಾಯ ಮಾಡಬೇಕು. ಕಾಂಗ್ರೆಸ್ ಪಕ್ಷಕ್ಕೂ ಅದಾನಿಗೂ ಸಂಬಂಧವೇ ಇಲ್ಲ ಎಂಬಂತೆ ಕೆಲವರು ಮಾತನಾಡುತ್ತಿದ್ದಾರೆ. ಆದರೆ ಅನೇಕ ಕಾಂಗ್ರೆಸ್ಸಿಗರು ಅದಾನಿ ಸಂಪರ್ಕದಲ್ಲಿದ್ದಾರೆ ಎಂಬುದು ನನಗೆ ಗೊತ್ತು. ನನಗೆ ಕಾಂಗ್ರೆಸ್ ಬಗ್ಗೆ ಕಾಳಜಿ ಇಲ್ಲ. ಬಿಜೆಪಿಯ ಪ್ರಾಮಾಣಿಕತೆ ನೆಲೆಯೂರಬೇಕೆಂದು ನಾನು ಬಯಸುತ್ತೇನೆ’ ಎಂದು ತಿಳಿಸಿಳಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ಅವರಿಗೆ ಸಂಸದ ಸ್ಥಾನ ನೀಡದ ಬಿಜೆಪಿ ಹಾಗೂ ಪ್ರಧಾನಿ ಮೋದಿಯ ವಿರುದ್ಧ ಅಸಮಾಧಾನವಿದೆ. ಆದ್ದರಿಂದ ಅದಾನಿ ವಿಚಾರವನ್ನು ಮೋದಿಯ ತಲೆಗೆ ಕಟ್ಟುತ್ತಿದ್ದಾರೆ. ಎಂದು ಕೆಲವು ಹಿರಿಯ ನಾಯಕರು ಹೇಳುತ್ತಿದ್ದಾರೆ. ಇವರಿಗೆ ನಿಜವಾಗಿಯೂ ಅದಾನಿ ಸಮೂಹದ ಎಲ್ಲಾ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ಆ ಆಸ್ತಿಗಳನ್ನು ಹರಾಜು ಹಾಕಿ, ಆ ಹಣದಿಂದ ಅದಾನಿ ಸಮೂಹದಲ್ಲಿ ಹಣ ಕಳೆದುಕೊಂಡವರಿಗೆ ಸಹಾಯ ಮಾಡಬೇಕು ಎಂಬ ಮನಸ್ಸಿದ್ದರೆ, ತಾಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧ ಪ್ರಕರಣ ದಾಖಲುಮಾಡಿದಂತೆ ಅದಾನಿಯ ವಿರುದ್ಧವೂ ಪ್ರಕರಣ ದಾಖಲು ಮಾಡಬೇಕು. ಆಗ ನಿಜವಾದ ಅಪರಾಧಿ ಯಾರೆಂದು ಜಗತ್ತಿಗೆ ಗೊತ್ತಾಗುತ್ತದೆ. ಮತ್ತು ಸುಬ್ರಮಣಿಯನ್ ಸ್ವಾಮಿಯ ಉದ್ದೇಶವೂ ಈಡೇರುತ್ತದೆ. ಅದನ್ನು ಬಿಟ್ಟು ‘ಪ್ರಧಾನಿ ನರೇಂದ್ರ ಮೋದಿಯವರು ಅದಾನಿ ಸಮೂಹದ ಎಲ್ಲಾ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಹೇಳುವ ಸುಬ್ರಮಣಿಯನ್ ಸ್ವಾಮಿಯ ನಡೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ಈ ಪ್ರಕರಣದಿಂದ ರಕ್ಷಣೆ ಮಾಡಲಿಕ್ಕಾಗಿಯೆ? ಅಥವಾ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವುದಕ್ಕಾಗಿಯೆ? ಎಂದು ಅನುಮಾನ ಮೂಡುತ್ತದೆ.

ಹಿಂಡೆನ್‌ಬರ್ಗ್ ವರದಿಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಇದೀಗ ಪ್ರಕಟಿಸಿದೆ. ಸೆಬಿ ಕೂಡ ತನಿಖೆಗೆ ಕರೆ ನೀಡಿದೆ. ಆದ್ದರಿಂದ ಈ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು ಎಂಬುದೇ ನಮ್ಮ ಅಭಿಪ್ರಾಯವಾಗಿದೆ.