ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸ್ವಾತಂತ್ರ್ಯ ದಿನಾಚರಣೆ Archives » Dynamic Leader
October 23, 2024
Home Posts tagged ಸ್ವಾತಂತ್ರ್ಯ ದಿನಾಚರಣೆ
ದೇಶ

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ‘ಇದು ಎಷ್ಟನೇ ಸ್ವಾತಂತ್ರ್ಯ ದಿನಾಚರಣೆ?’ ಎಂಬ ಗೊಂದಲ ಎಲ್ಲರಲ್ಲಿಯೂ ಇದೆ. ಈ ಗೊಂದಲಕ್ಕೆ ಕಾರಣ ಮತ್ತು ಉತ್ತರವನ್ನು ವಿವರವಾಗಿ ನೋಡೋಣ!

1947ರ ಆಗಸ್ಟ್ 15 ರಂದು ನಮಗೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿತು. ಇದಕ್ಕಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಮತ್ತು ಸ್ವಾತಂತ್ರ್ಯದ ಸಾಧನೆಯನ್ನು ಆಚರಿಸಲು ನಾವು ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವಾಗಿ ಆಚರಿಸುತ್ತೇವೆ. ಆ ದಿನದಲ್ಲಿ ನಾವು ನಮ್ಮ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರಗೀತೆಯನ್ನು ಹಾಡುತ್ತೇವೆ.

ಆದರೆ ಈಗ ಪ್ರಶ್ನೆ ಅದಲ್ಲ. ಪ್ರತಿ ವರ್ಷ ಈ ದಿನ ಬಂದರೆ ‘ಇದು ಎಷ್ಟನೇ ಸ್ವಾತಂತ್ರ್ಯ ದಿನಾಚರಣೆ? ಎಂಬ ಗೊಂದಲ ಹೆಚ್ಚಿನ ಜನರಿಗೆ ಏಳುವುದು ಸಾಮಾನ್ಯ. ಅಂದರೆ 1947ಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾಗಿರುವುದರಿಂದ ನಾಳೆಯ ದಿನವನ್ನು 77ನೇ ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಬಹುದೇ ಎಂದು ಉಲ್ಲೇಖಿಸುವವರಿಗೆ ಇಲ್ಲಿದೆ ಸರಿಯಾದ ಉತ್ತರ.

1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕಾಗ ಆಗಸ್ಟ್ 15ನ್ನು ಮೊದಲ ಸ್ವಾತಂತ್ರ್ಯ ದಿನವೆಂದು ದಾಖಲಿಸಲಾಗಿತ್ತು. ಆದ್ದರಿಂದ, ಮುಂದಿನ ವರ್ಷ (1948ರಲ್ಲಿ) ನಾವು 2ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದೇವೆ. ಆ ದೃಷ್ಟಿಯಿಂದ, ನಾಳೆಯ ದಿನವನ್ನು 78ನೇ ಸ್ವಾತಂತ್ರ್ಯ ದಿನಾಚರಣೆ ಎಂದು ಲೆಕ್ಕಿಸಲಾಗಿದೆ. ಈ ವರ್ಷ ಸರ್ಕಾರ ಹೊರಡಿಸಿರುವ ಎಲ್ಲ ಪ್ರಕಟಣೆಗಳಲ್ಲಿಯೂ 78ನೇ ಸ್ವಾತಂತ್ರ್ಯ ದಿನಾಚರಣೆ ಎಂದೇ ನಮೂದಿಸಲಾಗಿದೆ.

ದೇಶ

ಚೆನ್ನೈ: ಸಾಮಾಜಿಕ ಮಾಧ್ಯಮಗಳು ಜನರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳುವ ಸಾಧನವಾಗಿರುವುದರಿಂದ ಅದನ್ನು ನಿಷ್ಕ್ರಿಯಗೊಳಿಸಬಾರದು ಎಂದು ಚೆನ್ನೈ ಹೈಕೋರ್ಟ್ ಹೇಳಿದೆ.

ಗೂಂಡಾ ಕಾಯ್ದೆಯನ್ನು ಪ್ರಶ್ನಿಸಿ ಯೂಟ್ಯೂಬರ್ ‘ಸವುಕ್ಕು’ ಶಂಕರ್ ಅವರ ತಾಯಿ ಸಲ್ಲಿಸಿದ್ದ ಮೊಕದ್ದಮೆಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಸಾಮಾಜಿಕ ಮಾಧ್ಯಮಗಳಿಗೆ ನಿಯಂತ್ರಣದ ನಿಯಮಗಳನ್ನು ತರುವುದು ಅವಶ್ಯಕ. ಅದನ್ನು ನಿಷ್ಕ್ರಿಯಗೊಳಿಸಲು ಯೋಚಿಸುವುದು ಸರಿಯಲ್ಲ.

ಅದು ಬಂದ ನಂತರ, ಸರ್ಕಾರದ ಕಾರ್ಯನಿರ್ವಹಣೆಯ ಬಗ್ಗೆ ಚರ್ಚೆಗಳು ಹೆಚ್ಚುತ್ತಿವೆ; ಆರೋಗ್ಯಕರವಾಗಿದೆ. ಸಾಮಾಜಿಕ ಮಾಧ್ಯಮಗಳು ಜನರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳುವ ಸಾಧನವಾಗಿರುವುದರಿಂದ ಅದನ್ನು ನಿಷ್ಕ್ರಿಯಗೊಳಿಸಬಾರದು. 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿರುವ ಈ ಸಂದರ್ಭದಲ್ಲಿ ಮತ್ತೆ ಜನರ ದನಿ ದಮನ ಮಾಡಬೇಕೆ? ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಬೆಂಗಳೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

“ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ರವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.

“ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ” ಎಂದು ಹೇಳಿದರು.

“ಯಾವುದೇ ಜಾತಿ, ಧರ್ಮ, ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ” ಎಂದು ಹೇಳಿದರು.

ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.