ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಹಿಂದುಳಿದ ವರ್ಗ Archives » Dynamic Leader
October 23, 2024
Home Posts tagged ಹಿಂದುಳಿದ ವರ್ಗ
ದೇಶ

ಚೆನ್ನೈ: ಭಾರತದ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಗೌರವಾರ್ಥ ಚೆನ್ನೈನಲ್ಲಿ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕಳೆದ ಏಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ 110ನೇ ವಿಧಿಯ ಅಡಿಯಲ್ಲಿ ಘೋಷಿಸಿದರು. ಇದನ್ನು ಅನುಸರಿಸಿ ತಮಿಳುನಾಡು ಸರ್ಕಾರದ ವತಿಯಿಂದ ಚೆನ್ನೈನ ಕಾಮರಾಜ ರಸ್ತೆಯಲ್ಲಿರುವ ರಾಜ್ಯ ಕಾಲೇಜು ಕ್ಯಾಂಪಸ್ ನಲ್ಲಿ 52 ಲಕ್ಷ ರೂ.ವೆಚ್ಚದಲ್ಲಿ ನೂತನ ವಿ.ಪಿ.ಸಿಂಗ್ ಪ್ರತಿಮೆ ನಿರ್ಮಿಸಲಾಗಿದೆ.

ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಹಿಂದುಳಿದ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ರಚಿಸಲಾಗಿದ್ದ ಬಿ.ಪಿ.ಮಂಡಲ್ ನೇತೃತ್ವದ ಎರಡನೇ ಹಿಂದುಳಿದ ವರ್ಗಗಳ ಆಯೋಗ ಶಿಫಾರಸನ್ನು ಹಲವು ರಾಜಕೀಯ ವಿರೋಧಗಳ ನಡುವೆ ಜಾರಿಗೊಳಿಸಿದವರು ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರು. ಇದರಿಂದ ಹಿಂದುಳಿದ ವರ್ಗಗಳಿಗೆ ಶೇ.27 ರಷ್ಟು ಮೀಸಲಾತಿ ದೊರೆಯಿತು ಎಂಬುದು ಗಮನಾರ್ಹ.   

ಈ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಪ್ರತಿಮೆಯನ್ನು ಇಂದು ಚೆನ್ನೈನಲ್ಲಿ ಉದ್ಘಾಟಿಸಿದರು. ಸಮಾರಂಭದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಲ್ಲದೆ, ವಿ.ಪಿ.ಸಿಂಗ್ ಅವರ ಪತ್ನಿ ಸೀತಾ ಕುಮಾರಿ, ಮಕ್ಕಳಾದ ಅಜಯ್ ಸಿಂಗ್, ಅಭಯ್ ಸಿಂಗ್, ಸಚಿವರು, ಸಂಸದರು, ಶಾಸಕರು ಮತ್ತು ಸರ್ಕಾರಿ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.