ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
2024 Parliament Election Archives » Dynamic Leader
October 23, 2024
Home Posts tagged 2024 Parliament Election
ರಾಜಕೀಯ

“ಮುಸ್ಲಿಮರ ನಂಬಿಕೆಗೆ-ವಿಶ್ವಾಸಕ್ಕೆ ಘಾಸಿಯುಂಟು ಮಾಡಿ, ಸಮಾಜ ಒಡೆದು ಗಲಭೆಯೆಬ್ಬಿಸಿ ಅಧಿಕಾರಕ್ಕೇರುವ ಷಡ್ಯಂತ್ರ ಇದಾಗಿದೆ. ಈ ಸಂವಿಧಾನ ವಿರೋಧಿ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು” ವೆಲ್‌ಫೇರ್ ಪಾರ್ಟಿ.

ಮುಸ್ಲಿಮರ ವಿರುದ್ದ ಕೊಳಕು ನಾಲಗೆ ಹರಿಬಿಟ್ಟು ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರ ವಿರುದ್ದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಸರ್ಕಾರವನ್ನು ಆಗ್ರಹಿಸಿದ್ದಾರೆ .

‌ರಾಜಕೀಯದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಈಶ್ವರಪ್ಪ, ಮುಸ್ಲಿಮರ ವಿರುದ್ದ ಕೊಳಕು ನಾಲಿಗೆ ಹೊರಚಾಚಿ ಹರಿಯಬಿಟ್ಟು ತಮ್ಮ ಹಳೆಯ ಚಾಳಿ ಮುಂದುವರಿಸಿದ್ದಾರೆ. ಲಂಗುಲಗಾಮಿಲ್ಲದೆ ಮಾತನಾಡುತ್ತಿರುವ ಈಶ್ವರಪ್ಪರ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಸರ್ಕಾರ ಮುಂದಾಗಬೇಕು ಎಂದು ಹೇಳಿದ್ದಾರೆ.

ಮಸೀದಿ ಒಡೆದು ಪುಡಿ ಮಾಡುತ್ತೇವೆ ಎಂದು ಬಹಿರಂಗವಾಗಿ ಸರ್ಕಾರಕ್ಕೆ ಅವಾಝ್ ನೀಡಿ, ಮುಸಲ್ಮಾನ ಸಮುದಾಯವನ್ನು ಕೆಣಕುವ ಹುನ್ನಾರ ಮಾಡಿದ್ದಾರೆ. ಲೋಕಸಭಾ ಚುನಾವಣಾ ಸಿದ್ದತೆಯಲ್ಲಿರುವ ಬಿಜೆಪಿ, ಇಂತಹ ಕೋಮು ಪ್ರಚೋದಕ ಮಾತುಗಳನ್ನೇ ಅಸ್ತ್ರ ಮಾಡಿಕೊಳ್ಳುವ ಸೂಚನೆ ದಟ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ಕಲ್ಲಡಕ ಪ್ರಭಾಕರ್ ಭಟ್ ಮೂಲಕ ಅದಕ್ಕೆ ಚಾಲನೆ ನೀಡಿ, ಅದನ್ನು ಈಶ್ವರಪ್ಪ ಮುಂದುವರಿಸುತ್ತಿದ್ದಾರೆ. ಮುಸ್ಲಿಮರ ನಂಬಿಕೆಗೆ- ವಿಶ್ವಾಸಕ್ಕೆ ಘಾಸಿಯುಂಟು ಮಾಡಿ, ಸಮಾಜ ಒಡೆದು ಗಲಭೆಯೆಬ್ಬಿಸಿ ಅಧಿಕಾರಕ್ಕೇರುವ ಷಡ್ಯಂತ್ರ ಇದಾಗಿದೆ. ಈ ಸಂವಿಧಾನ ವಿರೋಧಿ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಈ ಸರಣಿ ಮುಂದುವರಿಯಲಿದೆ ಎಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಬಾಯಲ್ಲಿ ಶ್ರೀರಾಮನ ಹೆಸರು ಹೇಳಿಕೊಂಡು, ರಾಕ್ಷಸೀಯ ಮುಖ ಪ್ರದರ್ಶಿಸುವ ಮೂಲಕ ಈಶ್ವರಪ್ಪ ವರಿಷ್ಟರ ಕೃಪೆ ಗಿಟ್ಟಿಸಲು ಹವಣಿಸುತ್ತಿದ್ದಾರೆ. ಈಗಾಗಲೇ ಮೂಲೆಗುಂಪಾಗಿರುವ ಈಶ್ವರಪ್ಪರ ಬಳಿ ಕೊಳಕು ನಾಲಿಗೆ ಮಾತ್ರ ಅಸ್ತ್ರವಾಗಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅದನ್ನು ಪ್ರಯೋಗಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇವರನ್ನು ಬಂಧಿಸಿ ಈ ರಾಜ್ಯದ ಜನರ ಹಿತ ಹಾಗೂ ನೆಮ್ಮದಿಯನ್ನು ಕಾಪಾಡಲು ಸರ್ಕಾರ ಬದ್ದವಾಗಿರಬೇಕು. ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸದೇ ಇರವುದರಿಂದ ಇಂಥ ಸಮಾಜ ಘಾತಕ ಶಕ್ತಿಗಳಿಗೆ ಧ್ಯರ್ಯ ಸಿಗುತಿದ್ದೆ. ರಾಜಕೀಯ ಲೆಕ್ಕಚಾರ ಬಿಟ್ಟು ಸರ್ಕಾರ ಸಮಾಜದ ಹಿತದೃಷ್ಟಿಯಿಂದ ಕಠಿಣ ಕ್ರಮ ಜರುಗಿಸಬೇಕೆಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೇಶ

ತಿರುವನಂತಪುರಂ,
2024ರ ಲೋಕಸಭೆ ಚುನಾವಣೆ ಎದುರಿಸಲು ರಾಜಕೀಯ ಪಕ್ಷಗಳು ಸಕ್ರಿಯವಾಗಿ ತಯಾರಿ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ, ಮುಂದಿನ ತಿಂಗಳು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸ್ಥಾಪಿಸಲಾದ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ‘ಎಕ್ಸ್’ ಸೈಟ್‌ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ,

“ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಮತ್ತು ಫೆಬ್ರವರಿ 14 ರಂದು ಅಬುಧಾಬಿಯಲ್ಲಿ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಅದರ ನಂತರ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ನಾನು ನಿರೀಕ್ಷಿಸುತ್ತೇನೆ.

ಆದ್ದರಿಂದ ವಿಷಯ ಸ್ಪಷ್ಟವಾಗಿದೆ. 2009ರಲ್ಲಿ ಭಾರತೀಯ ಮತದಾರರಿಗೆ ಮೋದಿ ಆರ್ಥಿಕ ಅಭಿವೃದ್ಧಿಯ ಅವತಾರವಾಗಿ, ಗುಜರಾತ್‌ನ ಮುಖ್ಯ ಆಡಳಿತಾಧಿಕಾರಿಯಾಗಿ ಪ್ರದರ್ಶಿಸಲಾಯಿತು. ಅವರು ಎಲ್ಲಾ ಭಾರತೀಯರಿಗೆ ಅಭಿವೃದ್ಧಿಯನ್ನು ತರುತ್ತಾರೆ ಎಂದು ಬಿಂಬಿಸಲಾಯಿತು.

ಆದರೆ, 2019ರಲ್ಲಿ, ನೋಟು ಅಮಾನ್ಯೀಕರಣದ ವಿನಾಶಕಾರಿ ಕ್ರಮದ ನಂತರ ಆ ಕಥೆ ಕುಸಿಯುತ್ತಿದ್ದಂತೆ, ಪುಲ್ವಾಮಾ ಭಯೋತ್ಪಾದಕ ದಾಳಿಯು ಮೋದಿಯವರಿಗೆ ಸಾರ್ವತ್ರಿಕ ಚುನಾವಣೆಯನ್ನು ರಾಷ್ಟ್ರೀಯ ಭದ್ರತಾ ಚುನಾವಣೆಯನ್ನಾಗಿ ಪರಿವರ್ತಿಸುವ ಅವಕಾಶವನ್ನು ನೀಡಿತು.

ಮುಂದಿನ 2024ರ ಚುನಾವಣೆಯಲ್ಲಿ ಬಿ.ಜೆ.ಪಿ ನರೇಂದ್ರ ಮೋದಿ ಅವರನ್ನು ಹಿಂದೂ ಹೃದಯಗಳ ಸಾಮ್ರಾಟ ಎಂದು ಬಡ್ತಿ ನೀಡುವುದು ಸ್ಪಷ್ಟವಾಗಿ ಕಾಣುತ್ತಿದೆ.

ಈ ಹಂತದಲ್ಲಿ ಕೆಲವು ಪ್ರಶ್ನೆಗಳು ಉದ್ಭವಿಸುತ್ತವೆ: ‘ಅಚ್ಚೇ ದಿನ್’ ಏನಾಯಿತು? ವರ್ಷಕ್ಕೆ 2 ಕೋಟಿ ಉದ್ಯೋಗಗಳು ಏನಾಯಿತು? ಸಾಮಾಜಿಕ-ಆರ್ಥಿಕ ಏಣಿಯ ಕೆಳ ಹಂತಗಳಿಗೆ ಪ್ರಯೋಜನಕಾರಿ ಆರ್ಥಿಕ ಬೆಳವಣಿಗೆ ಏನಾಯಿತು? ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗಳಿಗೆ ಪಾವತಿಸುವುದಾಗಿ ಹೇಳಿದ್ದ ಹಣ ಏನಾಯಿತು?

ಹಿಂದೂತ್ವ ಅಜೆಂಡಾಗಳಿಗೆ ಮತ್ತು ಜನ ಕಲ್ಯಾಣಕ್ಕೆ ನಡುವೆ ನಡೆಯಲಿರುವ ಮುಂಬರುವ ಚುನಾವಣೆಯಲ್ಲಿ ಈ ಪ್ರಶ್ನೆಗಳು ಚರ್ಚೆಯಾಗಬೇಕು” ಎಂದು ಶಶಿ ತರೂರ್ ಹೇಳಿದ್ದಾರೆ. 

ರಾಜ್ಯ

ಖಾಸಿಂ ಸಾಬ್ ಎ.

ಸಾವಿರಾರು ವರ್ಷಗಳ ಕಾಲದಿಂದ ವರ್ಣ ಜಾತಿಯ ಕಾರಣಕ್ಕಾಗಿ ಸಾಮಾಜಿಕ ನ್ಯಾಯ ಹಾಗೂ ಅಧಿಕಾರದ ಎಲ್ಲಾ ಅವಕಾಶಗಳಿಂದ ವಂಚಿತರಾಗಿರುವ ದಲಿತರು, ನಾಗರಿಕ ಹಕ್ಕುಗಳು ಮತ್ತು ಹಳ್ಳಿಯಿಂದ ದಿಲ್ಲಿಯವರೆಗಿನ ಎಲ್ಲಾ ರಾಜಕೀಯ ಅವಕಾಶಗಳಿಂದ ಇಂದಿಗೂ ವಂಚಿತರಾಗಿದ್ದಾರೆ.

ಡಾ.ಬಾಬಾಸಾಹೇಬ್ ಅಂಬೇಡ್ಕರರ ಸಂಸದೀಯ ಪ್ರಜಾಪ್ರಭುತ್ವದ ಸಂವಿಧಾನದ ಮೂಲಕವೇ ದಲಿತ, ಶೋಷಿತರ ಸಾಮಾಜಿಕ ನ್ಯಾಯ ಸಾಧ್ಯ. ಈ ಮೂಲಕವೇ ರಾಜಕೀಯ ಪಾಲುದಾರಿಕೆ, ಹಂಚಿಕೆ ಸಾಧ್ಯ ಎಂಬ ಕಲ್ಪನೆಗೆ ಭಾರತಕ್ಕೆ ದಲಿತ ಪ್ರಧಾನಿ ಎಂಬ ಕೂಗು ಹಿಂಬು ನೀಡುತ್ತಿದೆ. ಸ್ವಾತಂತ್ರ್ಯ ಸಂಗ್ರಾಮದ ಫಲವಾಗಿ ಬ್ರಿಟಿಷರಿಂದ ರಾಜಕೀಯ ಸ್ವಾತಂತ್ರ್ಯವನ್ನು ಪಡೆದರೂ, ಅದು ರಾಜಕೀಯ ಹಸ್ತಾಂತರವಾಗಿಯೇ ಉಳಿದಿದೆಯೆ ಹೊರತು ದೇಶದ ದಲಿತರ, ಮಹಿಳೆಯರ, ಧಾರ್ಮಿಕ ಅಲ್ಪಸಂಖ್ಯಾತ ಮುಸ್ಲಿಮರ, ಶೋಷಿತ ಸಮುದಾಯಗಳ ಪಾಲಿಗೆ ಈ ಸ್ವತಂತ್ರ ಇನ್ನು ಸಾಧ್ಯವಾಗಿಲ್ಲ. ಅಸಮಾನತೆಯ ಸಿದ್ಧಾಂತಗಳಲ್ಲಿಯೇ ಇಂದಿಗೂ ಜೀವಿಸುತ್ತಿರುವ ದೇಶದ ಜಾತಿಗ್ರಸ್ಥ, ಧರ್ಮಗ್ರಸ್ಥ ಹಾಗೂ ಪಾಳೆಗಾರಿಕೆಯ ವ್ಯವಸ್ಥೆಯಿಂದ  ಭಾರತೀಯ ರಾಜಕಾರಣ ಸ್ವಾತಂತ್ರ್ಯ ಪಡೆಯಲು ಸಾಧ್ಯವಾಗಲಿಲ್ಲ.

ಭಾರತ ಸ್ವಾತಂತ್ರ್ಯದ ಎಂಟುವರೆ ದಶಕಗಳ ನಂತರದ ರಾಷ್ಟ್ರ ರಾಜಕಾರಣದ ಪ್ರಬಲ ಕೂಗು, ದೇಶಕ್ಕೆ ಒಬ್ಬ ದಲಿತ ಪ್ರಧಾನ ಮಂತ್ರಿ ಏಕೆ ಆಗಬಾರದು? ಅಥವಾ ಆಗಬೇಕು ಎಂಬುದಾಗಿದೆ. ಈ ಧ್ವನಿಯ ಹಿಂದೆಯೇ ಇದುವರೆಗೂ ಭಾರತ ಒಬ್ಬ ದಲಿತ ಅಸ್ಪೃಶ್ಯ ವ್ಯಕ್ತಿ ಅಥವಾ ಪ್ರತಿನಿಧಿ ದೇಶದ ಪ್ರಧಾನಿಯ ಹುದ್ದೆಗೇರಲಿಲ್ಲ ಅಥವಾ ಈ ಸ್ಥಾನಪಡೆಯಲು ಬಿಟ್ಟಿಲ್ಲ ಅಥವಾ ಈ ಹುದ್ದೆ ಅಲಂಕರಿಸಲು ಭಾರತೀಯ ಜಾತಿ ಕೇಂದ್ರೀತ ರಾಜಕಾರಣ ಒಪ್ಪಿಲ್ಲ ಎಂಬ ಕಟು ಸತ್ಯವೂ ಅಡಗಿದೆ. ಈ ನಗ್ನ ಸತ್ಯ ಕಾಂಗ್ರೆಸ್ ಪಕ್ಷವೂ ಸೇರಿ ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗೂ ಅನ್ವಯವಾದ ರಾಜಕೀಯ ನೀತಿಯೆ ಆಗಿದೆ.

ಭಾರತೀಯ ಸಾಮಾಜವು ಮೂಲತಃ ವರ್ಣ, ವರ್ಗ, ಜಾತಿಯಾದಾರಿತ ಮನಸ್ಥಿತಿಯುಳ್ಳದ್ದೆ ಆಗಿದ್ದು ಇಂತಹ ಸಾಮಾಜಿಕ ಸಂರಚನೆಯಿಂದ ಹುಟ್ಟಿದ ಎಲ್ಲಾ ರಾಷ್ಟೀಯ ಪ್ರಾದೇಶಿಕ ಪಕ್ಷಗಳೂ ಸಹ ದಲಿತ ಪ್ರಧಾನಿಯ ಕಲ್ಪನೆಯನ್ನು ಅಷ್ಟು ಸಹಜವಾಗಿ ಇದುವರೆಗೂ ಸ್ವೀಕರಿಸಲು, ಬೆಂಬಲಿಸಲು ಸಾಧ್ಯವಾಗಲಿಲ್ಲ. ಭಾರತದ ವರ್ತಮಾನದ ಅಸ್ಪೃಶ್ಯರ ರಾಜಕೀಯ ನಿರಾಳವೆಂಬಂತೆ ಇಂದು ದಲಿತ ಪ್ರಧಾನಿ ಎಂಬ ಮಾತು ಮುನ್ನೆಲೆಗೆ ಬಂದಿದೆ. ಅದೂ ವಿಶೇಷವಾಗಿ ಕಾಂಗ್ರೆಸ್ ಪಕ್ಷದ ಒಕ್ಕೂಟವಾದ “ಇಂಡಿಯಾ” ಮೈತ್ರಿಕೂಟದಲ್ಲಿ ಪ್ರಸ್ತಾಪವಾಗಿದೆ.

ಖರ್ಗೆ ಹೆಸರಿನ ಮೂಲಕ ಇತಿಹಾಸದ ರಾಷ್ಟ ರಾಜಕಾರಣದಲ್ಲಿ ಇಂದು ಎರಡನೇಯ ಬಾರಿ ಒಬ್ಬ ದಲಿತ ರಾಜಕಾರಣಿಯ ಹೆಸರು ಪ್ರಧಾನಿ ಹುದ್ದೆಗಾಗಿ ಮುನ್ನಲೆಗೆ ಬಂದಿದೆ. ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಲ್ಲಿ 8 ಬಾರಿ ಚುಣಾವಣೆಯಲ್ಲಿ ಗೆದ್ದಿದ್ದ ಪ್ರಭಾವಿ ರಾಜಕೀಯ ಮುತ್ಸದ್ದಿ ಬಾಬು ಜಗಜೀವನ್ ರಾಮ್ ಅವರ ಹೆಸರು ಕೇಳಿ ಬಂದಿತ್ತು. 1977 ಮತ್ತು 1979ರಲ್ಲಿ ಎರಡು ಬಾರಿಯೂ ಇವರು ಪ್ರಧಾನಿಯಾಗುವ ಅವಕಾಶಗಳಿದ್ದರೂ ಕಾಂಗ್ರೆಸ್ ಪಕ್ಷದಲ್ಲಿದ್ದ ಜಾತಿಗ್ರಸ್ಥ ಮೇಲ್ಜಾತಿ ಮುಖಂಡರೇ ಅಡ್ಡಗಾಲಾದ ಪರಿಣಾಮ ಮೊದಲ ದಲಿತ ಪ್ರಧಾನಿಯಾಗುವ ಅವಕಾಶ ತಪ್ಪಿತ್ತು. ಇದರಿಂದ ಬೇಸತ್ತ ಜಗಜೀವನ್ ರಾಮ್ ಕೊನೆಗೆ ಪಕ್ಷದಿಂದ ಹೊರಬಂದು Congress for Democracy (CFD) ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿ ಆನಂತರ ಇವರ ಪಕ್ಷವನ್ನು ಜನತಾ ಸರ್ಕಾರದೊಂದಿಗೆ ವಿಲೀನಗೊಳಿಸಿ ಕೊನೆಗೆ ಉಪ ಪ್ರಧಾನಿಯಾದರು.

ಜಗತ್ತಿನ ರಾಜಕೀಯ ಇತಿಹಾಸ ಕಂಡಾಗ, ವರ್ಣ ಶ್ರೇಷ್ಠತೆಯ ಗೀಳಿನಲ್ಲಿಯೇ ನೂರಾರು ವರ್ಷಗಳು ಅಧಿಕಾರನಡೆಸಿದ ಜೊತೆಗೆ ನೂರು ವರ್ಷಗಳು ಜಗತ್ತಿನ ದೊಡ್ಡಣ್ಣನಾಗಿ ಆಳಿದ ಅಮೇರಿಕಾದಂತ ದೇಶವೂ ಸಹ ಬರಾಕ್ ಒಬಾಮರಂತ ಕರಿಯರನ್ನು ತನ್ನ ದೇಶದ ಅತ್ಯುನ್ನತ ಸ್ಥಾನವಾದ ಅಧ್ಯಕ್ಷ ಸ್ಥಾನವನ್ನು ನೀಡಿ, ಕಪ್ಪು ಜಜಾಂಗದ ಒಬ್ಬರಿಗೆ ಆಳುವ ಅವಕಾಶವನ್ನು ನೀಡಿತು. ಹಾಗೆಯೇ ಸೂರ್ಯ ಮುಳುಗದ ಸಾಮ್ರಾಜ್ಯವಾಗಿ, ಒಂದು ಕಾಲದಲ್ಲಿ ಭಾರತವನ್ನು ತನ್ನ ವಸಾಹತು ದೇಶವಾಗಿಸಿಕೊಂಡು ತನ್ನ ಆಡಳಿತಾವಧಿಯಲ್ಲಿ ತಮ್ಮ ಹೋಟಲ್ ಮತ್ತು ಕ್ಲಬ್ ಗಳಲ್ಲಿ ಭಾರತೀಯರು ಮತ್ತು ನಾಯಿಗಳಿಗೆ ಪ್ರವೇಶವಿಲ್ಲ ಎಂದು ನಾಮಫಲಕಗಳನ್ನು ಹಾಕಿ ತಮ್ಮ ವರ್ಣ ಶ್ರೇಷ್ಠತೆಯನ್ನು ಪ್ರದರ್ಶಿಸಿದ ಬ್ರಿಟಿಷರ ಬ್ರಿಟನ್ ದೇಶ ಕೂಡ ಇಂದು ಭಾರತೀಯನಾದ ರಿಷಿ ಸುನಕ್ ಅವರನ್ನು ತಮ್ಮ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಿಕೊಂಡಿದೆ. ಆದರೆ ಭಾರತದಲ್ಲಿ ಮಾತ್ರ ಸ್ವಾತಂತ್ರ್ಯನಂತರವೂ ಕೂಡ ಬಹುಪಕ್ಷಿಯ ಸಂಸದಿಯ ಪ್ರಜಾಪ್ರಭುತ್ವದಲ್ಲಿ ಇಂದಿಗೂ ದಲಿತ ಪ್ರಧಾನಿಯನ್ನು ನೋಡಲು ಸಾಧ್ಯವಾಗಲಿಲ್ಲ. ಅಲ್ಲದೆ, ಸಮಾಜವಾದ, ಮಾರ್ಕ್ಸ್ ವಾದ, ಅಂಬೇಡ್ಕರ್ ವಾದ, ಪೆರಿಯಾರ್ ವಾದ, ಸಮ ಸಮಾಜವಾದ ಬಯಸುವ ಅನೇಕ ಪಕ್ಷಗಳು ಹಲವಾರು ರಾಜ್ಯಗಳಲ್ಲಿ ಅಧಿಕಾರ ಸ್ಥಾಪಿಸಿ ಆಡಳಿತ ನಡೆಸಲು ಸಾಧ್ಯವಾಗಿದ್ದರೂ ಇಂದಿನವರೆಗೂ ಯಾವುದೇ ಪಕ್ಷವು ತನ್ನದೆ ದೇಶದ ದಲಿತ, ಮುಸ್ಲಿಂ, ಮಹಿಳೆಯರಿಗೆ ದೇಶದ ಪ್ರಧಾನಿಯಾಗಲು ಬಿಟ್ಟಿಲ್ಲ.

ಇತ್ತೀಚೆಗೆ ನಡೆದ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನ ಮಮತಾ ಬ್ಯಾನರ್ಜಿ ಹಾಗೂ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ರವರು ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಧಾನಿ ಹುದ್ದೆಗೆ ಸೂಚಿಸುವ ಮೂಲಕ  ದಲಿತ ಪ್ರಧಾನಿ ಎಂಬ ಐತಿಹಾಸಿಕ ಕಲ್ಪನೆಗೆ ಮರು ಹುಟ್ಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಸಹ ಸದಸ್ಯ ಪಕ್ಷಗಳೇ  ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡುವ ಮಾತುಗಳನ್ನು ಆ ಒಕ್ಕೂಟದ ವೇದಿಕೆಯ ನಾಯಕರಿಂದಲೇ ವ್ಯಕ್ತವಾಗಿವೆ. ದೇಶದ ರಾಜಕೀಯದ ಮಟ್ಟಿಗೆ ಇದು ಪ್ರಮುಖ ಹಾಗೂ ಮಹತ್ವದ ಬೆಳವಣಿಯಾಗಿದೆ. ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಗೊಂಡದ್ದು ಕಾಂಗ್ರೆಸೇತರ ಹಾಗೂ ಬಹುಜನ ಸಮಾಜ ಪಾರ್ಟಿ, ಲೋಕ ಜನಶಕ್ತಿ ಪಾರ್ಟಿ, ರೀ ಪಬ್ಲಿಕನ್ ಪಾರ್ಟಿ, ದಲಿತ್ ಪ್ಯಾಂಥರ್ಸ್ ನಂತಹ ದಲಿತ ಮುಂದಾಳತ್ವದ ಪಕ್ಷಗಳಿಂದಲ್ಲ. ದಲಿತೇತರ ಪಕ್ಷ ಹಾಗೂ ನಾಯಕರಿಂದ ಎಂಬುದು ಗಮನರ್ಹ.

ಅನಿರೀಕ್ಷಿತವಾದರೂ, ಇದು ಒಂದು ರೀತಿಯಲ್ಲಿ ಬಿಜೆಪಿ ವಿರೋಧಿ ಒಕ್ಕೂಟಕ್ಕೆ ಅನಿವಾರ್ಯವೂ ಕೂಡ. ‘ಇಂಡಿಯಾ’ ಒಕ್ಕೂಟದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿದೆ. ಬಿಜೆಪಿಯ ಮಟ್ಟಿಗೆ ಪ್ರಮುಖ ಪ್ರತಿಪಕ್ಷವೂ ಆಗಿದೆ. ದೇಶದಲ್ಲಿ ಈಗಾಗಲೇ ಸುಮಾರು 150 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಕಾಂಗ್ರೆಸ್‌ ನೇರಾ ನೇರ ಪ್ರತಿರೋಧ ಒಡ್ಡುತ್ತಿದೆ. ಯಾವುದೇ ಒಕ್ಕೂಟದಲ್ಲಿ ದೊಡ್ಡ ಪಕ್ಷದವರೇ ಪ್ರಧಾನಿ ಅಭ್ಯರ್ಥಿಯಾಗುವುದು ಸ್ವಾಭಾವಿಕ. ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೂಡ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪುವ ಎಲ್ಲಾ ಸಾಧ್ಯತೆ-ಕಾರಣಗಳು ದಟ್ಟವಾಗಿವೆ. ಇನ್ನು ಕಾಂಗ್ರೆಸ್ ಒಳಗಿನ ಮೇಲ್ಜಾತಿ ಬಲಿಷ್ಠ ನಾಯಕರ ಒಪ್ಪಿಗೆ ಅಷ್ಟು ಸುಲಭವಲ್ಲದಿದ್ದರೂ ರಾಹುಲ್ ಗಾಂಧಿಯ ಶೃಜನಶೀಲ, ಪ್ರಗತಿಪರ ನಿಲುವುಗಳೇ ಮುಂದಿನ ಕಾಂಗ್ರೆಸ್ ಪಕ್ಷದ ಭವಿಷ್ಯವಾಗುತ್ತಿರುವುದರಿಂದ ಪಕ್ಷದ ಖರ್ಗೆ ವಿರೋಧಿ ಒಳಗುದಿ ತಾತ್ಕಾಲಿಕವಾಗಿ ತಣ್ಣಗಾಗಬಹುದು. ಖರ್ಗೆ ಅವರಂತಹ ಹಿರಿಯ ರಾಜಕೀಯ ಮುತ್ಸದ್ದಿ, ಪ್ರಖರ ವಾಗ್ಮಿಯನ್ನು ಸಹಜವಾಗಿಯೇ ಲೋಹಿಯ ಸಮಾಜವಾದದ ಸಿದ್ಧಾಂತಗಳನ್ನು ನಂಬಿರುವ ನಿತೀಶ್ ಕುಮಾರ್, ಅಖಿಲೇಶ್ ಯಾದವ್, ಲಾಲು ಪ್ರಸಾದ್ ಯಾದವ್ ರವರು ಒಪ್ಪಿಕೊಳ್ಳಬೇಕಿದೆ.

ದಕ್ಷಿಣದ  ಎಡಪಂತಿಯರ ಅಧಿಕಾರವುಳ್ಳ ಕೇರಳ, ಪೆರಿಯಾರ್ ವಿಚಾರ ಪ್ರೇರಿತ ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಅಧಿಕಾರಸ್ಥ ಪಕ್ಷಗಳು ಈಗಲೇ ‘ಇಂಡಿಯಾ’ ಮೈತ್ರಿಕೂಟದ ಸಹಭಾಗಿ ಪಕ್ಷಗಳಾಗಿವೆ. ಮುಖ್ಯವಾಗಿ ಈ ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿದ್ದು ಸುಮಾರು 200 ಲೋಕಸಭಾ ಕ್ಷೇತ್ರಗಳನ್ನು ಹೊಂದಿವೆ. ದಕ್ಷಿಣ ಭಾರತದ ಕರ್ನಾಟಕದ ಖರ್ಗೆ ಪ್ರಧಾನಿ ಎಂದು ಬಿಂಬಿಸುವ ಮೂಲಕ, ದಲಿತ ಪ್ರಧಾನಿ ಎಂಬ ಪ್ರಚಾರದಿಂದ ರಾಷ್ಟ್ರಾದ್ಯಂತ ದಲಿತ ಮತಗಳ ಕ್ರೋಢೀಕರಣ ಜೊತೆಗೆ ಸೆಕ್ಯುಲರ್ ಅಜಂಡಾದೊಂದಿಗೆ ಮುಸ್ಲಿಮರ ಮತಗಳನ್ನು ಪಡೆಯುವ ಮೂಲಕ ಬಿಜೆಪಿಯನ್ನು ಸೋಲಿಸುವ ರಾಜಕೀಯ ಲೆಕ್ಕಾಚಾರವನ್ನು ‘ಇಂಡಿಯಾ’ ಮೈತ್ರಿಕೂಟವು ಒಳಗೊಂಡಿದೆ. ಅಲ್ಲದೆ, ಇಪ್ಪತ್ತೆಂಟಕ್ಕೂ ಹೆಚ್ಚು ಪಕ್ಷಗಳ ವೇದಿಕೆಯಾದ ಈ ಮೈತ್ರಿಕೂಟವನ್ನು ಸಮಾಧಾನಿಸಿ, ಸಮನ್ವಯಗೊಳಿಸುವುದು ಅಷ್ಟು ಸುಲಭದ ಕಾರ್ಯವಲ್ಲ. ಇದರ ಜೊತೆಗೆ ಸಂಘಪರಿವಾರದ ಹಿಂದುತ್ವದ ಸಾಂಸ್ಕೃತಿಕ ರಾಜಕಾರಣ ಹಾಗೂ ಮುಸ್ಲಿಂ ವಿರೋಧಿ ಅಜಂಡಾವನ್ನೇ ವೋಟ್ ಬ್ಯಾಂಕ್ ಆಗಿಸಿಕೊಂಡು ಎರಡು ಬಾರಿ ಗೆದ್ದು, ಅಧಿಕಾರ ಹಿಡಿದಿರುವ ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಸೋಲಿಸುವಂತಹ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುವ ಹಿರಿತನ ಮತ್ತು ಅರ್ಹ ವ್ಯಕ್ತಿತ್ವ ಖರ್ಗೆಯವರಿಗಿದೆ ಎಂಬ ಕಾರಣಕ್ಕಾಗಿಯೆ ಕಾಂಗ್ರೆಸಲ್ಲದ ಹಾಗೂ ದಲಿತೇತರ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿಯವರು ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆಯವರ ಹೆಸರನ್ನು ಸೂಚಿಸಿದ್ದಾರೆ.

‘ಇಂಡಿಯಾ’ ಮೈತ್ರಿಕೂಟ ಪಕ್ಷಗಳ ದಲಿತ ಪ್ರಧಾನಿ ಎಂಬ ರಾಜಕಾರಣದ ಹಿಂದೆ ಏನೇ ರಾಜಕೀಯವಿದ್ದರೂ, ವಿದ್ಯಾರ್ಥಿ ದೇಸೆಯಲ್ಲಿಯೇ ರಾಜಕಾರಣದ ಆಸಕ್ತಿಯುಳ್ಳ ಖರ್ಗೆಯವರು ಕಾನೂನು ಪದವೀಧರರು. 1969ರಲ್ಲಿ ಪಕ್ಷ ಸೇರಿ ಕಲಬುರಗಿ ನಗರ ಕಾಂಗ್ರೆಸ್‌ನ ಅಧ್ಯಕ್ಷರಾದರು. 1972ರಲ್ಲಿ ಗುರುಮಿಠಕಲ್‌ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು. ಅಂದಿನಿಂದ ಸತತ ಎಂಟು ಬಾರಿ ವಿಧಾನಸಭೆಗೆ ಆಯ್ಕೆಯಾದ ಖರ್ಗೆ, 2008ರ ಕ್ಷೇತ್ರ ಪುನರ್‌ವಿಂಗಡಣೆಯ ನಂತರ ಚಿತ್ತಾಪುರಕ್ಕೆ ಬಂದು, ಅಲ್ಲಿಂದ ಸ್ಪರ್ಧಿಸಿ ಸತತ ಒಂಬತ್ತನೇ ಬಾರಿಗೆ ಶಾಸಕರಾದರು.

ಖರ್ಗೆಯವರು ಕರ್ನಾಟಕ ಸರ್ಕಾರದ ಹಲವು ಮುಖ್ಯಮಂತ್ರಿಗಳ ಸಂಪುಟದಲ್ಲಿ ಪ್ರಮುಖ ಖಾತೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 1976ರಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ, 1978ರ ದೇವರಾಜ ಅರಸುರವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ ರಾಜ್ ರಾಜ್ಯ ಸಚಿವ, 1980ರಲ್ಲಿ ಗುಂಡೂರಾವ್ ರವರ ಸಂಪುಟದಲ್ಲಿ ಕಂದಾಯ ಸಚಿವ,  1990ರಲ್ಲಿ ಬಂಗಾರಪ್ಪ ಸಂಪುಟದಲ್ಲಿ ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ,  1992ರ ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಹಕಾರ ಮತ್ತು ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ, 1999ರಲ್ಲಿ ಎಸ್.ಎಂ.ಕೃಷ್ಣ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಮಲ್ಲಿಕಾರ್ಜುನ ಖರ್ಗೆ ಜವಾಬ್ದಾರಿ ನಿರ್ವಹಿಸಿದ್ದಾರೆ. ಅಲ್ಲದೆ, 2004ರ ಧರ್ಮಸಿಂಗ್ ಸಂಪುಟದಲ್ಲಿ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವರೂಸಹ ಆಗಿದ್ದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಲವಾರು ಬಾರಿ ಮುಖ್ಯಮಂತ್ರಿ ಗಾದಿಯ ಸನಿಹ ಬಂದಿದ್ದ ಖರ್ಗೆಯವರು ಕೊನೆ ಗಳಿಗೆಯಲ್ಲಿ ಜಾತಿ ರಾಜಕೀಯ ಲೆಕ್ಕಾಚಾರಗಳಿಂದ ವಂಚಿತರಾಗಿದ್ದರು.

1994 ಹಾಗೂ 2008ರಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕರಾಗಿದ್ದ ಖರ್ಗೆ 2005ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಆ ನಂತರ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿ, ಮನಮೋಹನ್‌ ಸಿಂಗ್ ಸಂಪುಟದಲ್ಲಿ ರೈಲ್ವೆ ಸಚಿವ, ಕಾರ್ಮಿಕ ಮತ್ತು ಉದ್ಯೋಗ ಸಚಿವ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದರು. 2014-19ರವರೆಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದರು. ಜೊತೆಗೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರೂ ಆಗಿದ್ದರು. ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಸೋತರು. ಅದು ಅವರ ಐದು ದಶಕಗಳ ಚುನಾವಣಾ ರಾಜಕಾರಣದಲ್ಲಿನ ಮೊದಲ ಸೋಲು.

ಖರ್ಗೆ ಕೂಡ ದೇವೇಗೌಡರಂತೆಯೇ ಪ್ರಬುದ್ಧ ರಾಜಕಾರಣಿ. ಸಾಧ್ಯವಾದರೆ ಎರಡನೇ ಕನ್ನಡಿಗ ಪ್ರಧಾನಿ. ಶೂದ್ರ ಹಾಗೂ ದಲಿತ ಪ್ರಧಾನಿಗಳನ್ನು ದೇಶಕ್ಕೆ ಕೊಡುಗೆ ಕೊಟ್ಟ ರಾಜ್ಯ ಕರ್ನಾಟಕವಾಗಬಹುದು. ಇವರು ಅಧ್ಯಕ್ಷರಾದಾಗಿನಿಂದ ಕಾಂಗ್ರೆಸ್ ಪಕ್ಷ ಜನರಿಗೆ ಹಾಗೂ ಕಾರ್ಯಕರ್ತರಿಗೆ ಹೆಚ್ಚು ಹತ್ತಿರವಾಗುತ್ತಿದೆ. ಒಂದಷ್ಟು ಪಕ್ಷದ ನಾಯಕರು ಜಾತ್ಯತೀತ ತತ್ವಗಳಪರ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿ ತಾವು ಕೂಡ ಜನಪದ, ಪ್ರಗತಿಪರ ಎಂದು ಸಾಬೀತು ಪಡಿಸಲು ಪ್ರಯತ್ನಿಸುತ್ತಿದ್ದಾರೆ; ಎನ್ನುವುದು ಕೂಡ ಸತ್ಯ. ಕರ್ನಾಟಕದ ರಾಜಕಾರಣದಲ್ಲಿ ದಲಿತ ಮುಖ್ಯಮಂತ್ರಿಯ ಕೂಗು ಸಹ ದಶಕಗಳ ಹಿಂದಿನ ಒತ್ತಾಯವಾಗಿದೆ. ಇದರ ಮೊದಲ ಸಾಲಿನಲ್ಲಿ ಇದ್ದ ಹೆಸರು ಖರ್ಗೆಯವರದ್ದೇ ಆಗಿದೆ. ದಲಿತರೊಳಗಿನ ಎಡ-ಬಲ ಒಳಮೀಸಲಾತಿಗಳ ನಡುವೆಯೂ ಖರ್ಗೆ ಹೆಸರೇ ರಾಜ್ಯದ ಬಹುತೇಕ ಎಸ್ಸಿ-ಎಸ್ಟಿ ಸಮುದಾಯಗಳ ಆಯ್ಕೆ ಆಗಿತ್ತು.

ಅಂಬೇಡ್ಕರರ ನೈಜ ಅನುಯಾಯಿ, ಸಮಾಜವಾದಿ, ಸಮ ಸಮಾಜದ ಕನಸುಳ್ಳ ಒಬ್ಬ ದಲಿತ ಪ್ರತಿನಿದಿಯಾಗಿ ಒಂದು ವೇಳೆ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿಯಾದರೇ ದೇಶದ ಮೊದಲ ದಲಿತ ಪ್ರಧಾನಮಂತ್ರಿ ಎನ್ನಿಸಿಕೊಳ್ಳಲಿದ್ದಾರೆ. ಅಲ್ಲದೆ, ಇಂದು ದೇಶದಲ್ಲಿ ತಾಂಡವವಾಡುತ್ತಿರುವ ಧರ್ಮದ್ವೇಷದ, ಜಾತಿ ಕೇಂದ್ರೀತ ರಾಜಕಾರಣದ ಬದಲಾಗಿ ಸೋಷಿತರ ಸಾಮಾಜಿಕ ನ್ಯಾಯದ ರಾಜಕಾರಣಕ್ಕೆ ಅವರು ಸಾಕ್ಷಿಯೂ ಆಗಬಹುದು.

ರಾಜಕೀಯ

ಡಿ.ಸಿ.ಪ್ರಕಾಶ್

2014ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅಡುಗೆ ಸಿಲಿಂಡರ್ ಬೆಲೆ ರೂ.417 ಆಗಿತ್ತು. ಆದರೆ ಕ್ರಮೇಣ 1118 ರೂಪಾಯಿಗೆ ಏರಿಕೆಯಾಗಿದೆ. ಗಗನಕ್ಕೇರಿರುವ ಸಿಲಿಂಡರ್ ಬೆಲೆಯಿಂದಾಗಿ ಕುಟುಂಬದ ಮುಖ್ಯಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕಡಿದಾದ ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಕಾಂಗ್ರೆಸ್, ಡಿಎಂಕೆ, ಸಿಪಿಎಂ ಮತ್ತು ಇತರ ಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಾ ಬಂದವು. ಆಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿದ್ದೆ ಸಿಲಿಂಡರ್ ಬೆಲೆ ಏರಿಕೆಗೆ ಕಾರಣ ಎಂದು ಮೋದಿ ಸರ್ಕಾರ ಹೇಳಿಕೊಂಡಿತ್ತು. ನಂತರ ಕಚ್ಚಾ ತೈಲ ಬೆಲೆ ಕುಸಿದರೂ ಮೋದಿ ಸರ್ಕಾರ ಸಿಲಿಂಡರ್ ಬೆಲೆ ಇಳಿಸಲಿಲ್ಲ.

ಈ ಹಿನ್ನಲೆಯಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿರುವ ಕಾರಣ ಅಡುಗೆ ಸಿಲಿಂಡರ್ ಬೆಲೆಯನ್ನು 200 ರೂಪಾಯಿ ಕಡಿಮೆ ಮಾಡಿದೆ; ಕೇಂದ್ರ ಬಿಜೆಪಿ ಸರ್ಕಾರ. ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ.200 ಸಬ್ಸಿಡಿ ನೀಡುವುದಾಗಿಯೂ ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರದ ಘೋಷಣೆ ಚುನಾವಣಾ ನಾಟಕ ಎಂದು ವಿರೋಧ ಪಕ್ಷದ ನಾಯಕರು ಟೀಕಿಸಿದ್ದಾರೆ.

ಈ ಹಿನ್ನಲೆಯಲ್ಲಿ “ಸಂಕಷ್ಟದಲ್ಲಿರುವ ನಾಡಿನ ಜನರ ಕೋಪವನ್ನು ರೂ.200 ಸಬ್ಸಿಡಿಯಿಂದ ಕಡಿಮೆ ಮಾಡಲು ಸಾಧ್ಯವಿಲ್ಲ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಜಾಲತಾಣದಲ್ಲಿ ಹೇಳಿಕೆಯನ್ನು ಪ್ರಕಟಿಸಿರುವ ಅವರು, “ಯಾವಾಗ ಮತಗಳು ಕಡಿಮೆಯಾಗಲು ಪ್ರಾರಂಭಿಸುತ್ತದೆಯೋ, ಆಗ ಚುನಾವಣೆ ಉಡುಗೊರೆಗಳ ವಿತರಣೆ ಪ್ರಾರಂಭವಾಗುತ್ತದೆ!

ಜನರ ದುಡಿಮೆಯ ಹಣವನ್ನು ಲೂಟಿ ಮಾಡಿದ ನಿರ್ದಯಿ ಮೋದಿ ಸರ್ಕಾರ, ಪ್ರಸ್ತುತ ತಾಯಿ ಮತ್ತು ಸಹೋದರಿಯರ ಬಗ್ಗೆ ಸುಳ್ಳು ಅಭಿಮಾನ ತೋರಿಸುತ್ತಿದೆ. ಒಂಬತ್ತೂವರೆ ವರ್ಷಗಳ ಕಾಲ ಜನ ಸಾಮಾನ್ಯರ ಜೀವನವನ್ನು ಹಾಳುಮಾಡಿದ್ದಾರೆ. ಆಗ “ಪ್ರೀತಿಯ ಉಡುಗೊರೆ” ಏಕೆ ನೆನಪಿಗೆ ಬಂದಿಲ್ಲ?

ಒಂಬತ್ತೂವರೆ ವರ್ಷಗಳ ಕಾಲ 140 ಕೋಟಿ ಭಾರತೀಯರನ್ನು ಹಿಂಸಿಸಿದ ಬಿಜೆಪಿ ಸರ್ಕಾರ “ಚುನಾವಣಾ ಲಾಲಿಪಾಪ್‌ಗಳನ್ನು” ಹಂಚುವುದರಿಂದ ಏನೂ ಪ್ರಯೋಜವಾಗುವುದಿಲ್ಲ ಎಂದು ತಿಳಿದುಕೊಳ್ಳಬೇಕು. ನಿಮ್ಮ ಹತ್ತು ವರ್ಷಗಳ ಪಾಪಗಳು ತೊಳೆಯಲಾಗದು.

ಬಿಜೆಪಿಯಿಂದ ಜಾರಿಗೊಂಡ ಹಣದುಬ್ಬರವನ್ನು ಎದುರಿಸಲು ಹಲವು ರಾಜ್ಯಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಬಡವರಿಗೆ 500 ರೂಪಾಯಿ ಸಿಲಿಂಡರ್ ನೀಡಲು ಹೊರಟಿದೆ. ರಾಜಸ್ಥಾನದಂತಹ ಹಲವು ರಾಜ್ಯಗಳು ಇದನ್ನು ಈಗಾಗಲೇ ಜಾರಿಗೆ ತಂದಿವೆ.

ಸಂಕಷ್ಟದಲ್ಲಿರುವ ಜನರ ಸಿಟ್ಟು 200 ರೂಪಾಯಿಗಳ ಸಬ್ಸಿಡಿಯಿಂದ ಕಡಿಮೆಯಾಗುವುದಿಲ್ಲ ಎಂಬುದನ್ನು ಮೋದಿ ಸರ್ಕಾರ ಅರಿಯಬೇಕು. ಇಂಡಿಯಾದ ಭಯ ಒಳ್ಳೆಯದು, ಮೋದಿ ಅವರೇ! ಜನ ಸಾಮಾನ್ಯರು ನಿರ್ಧರಿಸಿದ್ದಾರೆ. ಹಣದುಬ್ಬರವನ್ನು ಸೋಲಿಸುವ ಏಕೈಕ ಮಾರ್ಗವೆಂದರೆ ಬಿಜೆಪಿಗೆ ನಿರ್ಗಮನದ ಬಾಗಿಲನ್ನು ತೋರಿಸುವುದೇ ಆಗಿದೆ” ಎಂದರು.

ರಾಜಕೀಯ

ಹೊಸದಿಲ್ಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬೆಲೆ ರೂ.200 ಇಳಿಕೆ ಮಾಡುವುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡುವುದಾಗಿಯೂ ಘೋಷಿಸಲಾಗಿದೆ.

ಇಂದು (ಆ.29) ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಕೇಂದ್ರ ಸರ್ಕಾರ ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡುವುದಾಗಿ ಘೋಷಿಸಿದೆ. ಅದೇ ರೀತಿ ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡುವುದಾಗಿಯೂ ಘೋಷಿಸಲಾಗಿದೆ.

ಇದನ್ನೂ ಓದಿ: ಸ್ವಾಭಿಮಾನದ ಮದುವೆಗಳನ್ನು ವಕೀಲರೇ ನಡೆಸಬಹುದು; ನ್ಯಾಯಾಲಯದ ಪ್ರತಿನಿಧಿಯಾಗಿ ಅಲ್ಲ! – ಸುಪ್ರೀಂ ಕೋರ್ಟ್

ಇದರ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, “ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಎಲ್ಲಾ ಬಳಕೆದಾರರಿಗೆ ರೂ.200 ಇಳಿಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ರಕ್ಷಾ ಬಂಧನ್ ಆಚರಿಸುವ ಸಲುವಾಗಿ ದೇಶದ ಮಹಿಳೆಯರಿಗೆ ಇದು ಪ್ರಧಾನಿ ನರೇಂದ್ರ ಮೋದಿಯವರ ಉಡುಗೊರೆಯಾಗಿದೆ.

ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡಲಾಗುವುದು. ಇದರಿಂದ 10.35 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ರೂ.7,500 ಕೋಟಿ ವೆಚ್ಚ ಮಾಡಲಿದೆ. ಹಾಗಾಗಿ ಈಗ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಖರೀದಿದಾರರು ರೂ.700ಕ್ಕೆ ಮತ್ತು ಇತರರು ರೂ.900ಕ್ಕೆ ಸಿಲಿಂಡರ್ ಖರೀದಿಸಬಹುದು.” ಎಂದು ಹೇಳಿದ್ದಾರೆ.

ದೇಶ ರಾಜಕೀಯ

ಪಾಟ್ನಾ: ಇನ್ನು ಕೆಲವು ಪಕ್ಷಗಳು “ಇಂಡಿಯಾ” ಮೈತ್ರಿಕೂಟಕ್ಕೆ ಸೇರಲಿವೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಂದಾಗುತ್ತಿವೆ. ಅದರಂತೆ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 26 ಪಕ್ಷಗಳು “ಇಂಡಿಯಾ” ಮೈತ್ರಿಕೂಟವನ್ನು ರಚಿಸಿವೆ. ಅದೇ ಸಮಯದಲ್ಲಿ, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) 38 ಪಕ್ಷಗಳನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಸನಾತನ ಧರ್ಮವು ಓದುವುದನ್ನು ತಡೆಮಾಡಿತು; ದ್ರಾವಿಡ ಮಾದರಿ ಸರ್ಕಾರ ಹಸಿವು ನೀಗಿಸಿ ಓದುವಂತೆ ಮಾಡಿದೆ!

ಇಂಡಿಯಾ ಮೈತ್ರಿಕೂಟದ ಮೊದಲ ಸಭೆ ಕಳೆದ ಜೂನ್‌ನಲ್ಲಿ ಪಾಟ್ನಾದಲ್ಲಿ ನಡೆದಿದ್ದು, ಎರಡನೇ ಸಭೆ ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದಿತ್ತು. ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಇಂಡಿಯಾ ಮೈತ್ರಿಕೂಟ ಕಠಿಣ ಪೈಪೋಟಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಇನ್ನೂ ಕೆಲವು ಪಕ್ಷಗಳು ಸೇರಲಿವೆ ಎಂದು ಹೇಳಿದ್ದಾರೆ.

ಇದರ ಬಗ್ಗೆ ಪಾಟ್ನಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, “ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಿದ್ದೇವೆ. ಅಲ್ಲದೆ ಕ್ಷೇತ್ರ ಹಂಚಿಕೆ ಸೇರಿದಂತೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಕೆಲವು ರಾಜಕೀಯ ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ನಾನು ಗರಿಷ್ಠ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ನನಗೆ ಆಸೆ ಇಲ್ಲ.” ಎಂದು ಹೇಳಿದರು.

ರಾಜಕೀಯ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಸಲಹೆ ನೀಡುತ್ತಿದ್ದ, ಚುನಾವಣಾ ತಂತ್ರಗಾರ್ತಿ ಸ್ಟೆಫನಿ ಕಟ್ಟರ್, ರಾಹುಲ್ ಗಾಂಧಿ ಅವರಿಗೆ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಯಾವ ರೀತಿಯ ತಂತ್ರಗಳನ್ನು ಅನುಸರಿಸಬೇಕು? ಎಂಬುದರ ಕುರಿತು, ರಾಹುಲ್‌ಗೆ ಸಲಹೆ ನೀಡಲು, ಅಮೆರಿಕ ಮೂಲದ ಚುನಾವಣಾ ತಂತ್ರಗಾರ್ತಿ ಸ್ಟೆಫನಿ ಕಟ್ಟರ್ ಅವರನ್ನು ನೇಮಕ ಮಾಡಲಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಒಬಾಮಾ ಅವರ ಚುನಾವಣಾ ತಂತ್ರಗಾರರಾಗಿ ಹಾಗೂ ಉಪ ಪ್ರಚಾರ ವ್ಯವಸ್ಥಾಪಕರಾಗಿಯೂ ಸ್ಟೆಫನಿ ಕಟ್ಟರ್ ಸೇವೆ ಸಲ್ಲಿಸಿದ್ದಾರೆ.

ಅವರು ಅಮೆರಿಕಾದ ಕೆಲವು ರಿಪಬ್ಲಿಕನ್ ಪಕ್ಷದ ನಾಯಕರಿಗೂ ರಾಜಕೀಯ ಸಲಹೆಗಾರರಾಗಿದ್ದರು. ಪ್ರಸ್ತುತ, ಅವರು ರಾಹುಲ್‌ಗೆ ರಾಜಕೀಯ ಸಲಹೆಗಾರರಾಗಿ ಮತ್ತು ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ತಂತ್ರಗಾರರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಎಂದು ಹೇಳಲಾಗುತ್ತಿದೆ.    

ದೇಶ

ನವದೆಹಲಿ: ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ ಮೋದಿ ಅಲ್ಲಿನ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇದರಲ್ಲಿ ಮತ್ತೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ವರಿಷ್ಠರು ರಣತಂತ್ರ ರೂಪಿಸುತ್ತಿದ್ದಾರೆ.

ಇದನ್ನೂ ಓದಿ: 10 ವರ್ಷಗಳಿಂದ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೊಗೆಯದೆ ಏನು ಮಾಡಿತ್ತಿದ್ದೀರಿ?: ಪ್ರಧಾನಿಗೆ ಕಪಿಲ್ ಸಿಬಲ್ ಪ್ರಶ್ನೆ

ಈ ಹಿನ್ನಲೆಯಲ್ಲಿ ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಪ್ರಧಾನಿ ಮೋದಿ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಬರಮಾಡಿಕೊಂಡರು. ನಂತರ ರಾಷ್ಟ್ರೀಯ ಅಧ್ಯಕ್ಷ ನಡ್ದಾ ಹಾಗೂ ಕೇಂದ್ರ ಸಚಿವರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯಲು ಬಿಜೆಪಿ ನಿರ್ಧಾರ!

ದೇಶ ರಾಜಕೀಯ

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯುವಂತೆ ಬಿಜೆಪಿ ರಾಜ್ಯ ನಾಯಕರುಗಳಿಗೆ ಪಕ್ಷದ ನಾಯಕತ್ವ ಸೂಚನೆ ನೀಡಿದೆ ಎಂದು ವರದಿಯಾಗಿದೆ. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳಲ್ಲಿ ಹಾಗೂ ಪಕ್ಷದ ಆಂತರಿಕ ಗೊಂದಲದಿಂದ ಕರ್ನಾಟಕದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸ್ಥಾನಗಳು ಕಡಿಮೆಯಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಇದನ್ನೂ ಓದಿ: ಉಪನಿಷತ್ತುಗಳು, ವೇದಗಳು ಮತ್ತು ಸಂಸ್ಕೃತ ಇಡೀ ಜಗತ್ತಿಗೆ ವಿಶ್ವಕೋಶಗಳಾಗಿವೆ; ಯಾವುದೇ ಆಕ್ಷೇಪವಿಲ್ಲದೆ ಅಧಿಕೃತ ಭಾಷೆಯನ್ನಾಗಿ ಹಿಂದಿಯನ್ನು ಒಪ್ಪಿಕೊಳ್ಳುವ ಅಗತ್ಯವನ್ನು ರೂಪಿಸಿಕೊಲ್ಲಿ! – ಅಮಿತ್ ಶಾ

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರು, ಸಮುದಾಯ ಸಂಘಟನೆಗಳು, ಖ್ಯಾತ ಕ್ರೀಡಾ ಪಟುಗಳು, ಕೈಗಾರಿಕೋದ್ಯಮಿಗಳು, ಚಿತ್ರರಂಗದ ಗಣ್ಯರು ಮುಂತಾದವರ ಬೆಂಬಲ ಪಡೆಯಬೇಕು. ಇವರು ಬಹಿರಂಗವಾಗಿ ಬಿಜೆಪಿಗೆ ಬೆಂಬಲ ನೀಡದಿದ್ದರೂ ಬಿಜೆಪಿ ವಿರುದ್ಧ ಹೋಗದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: ಭಾರತ ಮಾತೆ ಕೇವಲ ಭೂಮಿ ಅಲ್ಲ; ನಿರ್ದಿಷ್ಟ ಸಂಸ್ಕೃತಿ, ಇತಿಹಾಸ, ಧರ್ಮಕ್ಕೆ ಸಂಬಂಧಿಸಿಲ್ಲ ಭಾರತ ಪ್ರತಿಯೊಬ್ಬ ಭಾರತೀಯನ ಧ್ವನಿಯಾಗಿದೆ! – ರಾಹುಲ್ ಗಾಂಧಿ

ಇದರಿಂದ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ವಾತಾವರಣ ನಿರ್ಮಾಣವಾಗುವುದನ್ನು ತಪ್ಪಿಸಬಹುದು ಎಂದು ರಾಜ್ಯ ಅಧ್ಯಕ್ಷರುಗಳು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಕಾಂಗ್ರೆಸ್ ಪಕ್ಷವು ರಾಜ್ಯ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಭಾರತೀಯ ಜನತಾ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಸೋಲಿಸಲು ಸಾಧ್ಯ ಎಂದು ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಶರದ್ ಪವಾರ್ ಮುಂತಾದ ನಾಯಕರು ಒತ್ತಾಯಿಸಿದ್ದಾರೆ. ಆದರೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವಲ್ಲಿ ವಿವಿಧ ಸಮಸ್ಯೆಗಳು ಕಂಡುಬರುತ್ತವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಕಾಂಗ್ರೆಸ್ ನೇತೃತ್ವದಲ್ಲಿ ಒಟ್ಟುಗೂಡಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಇದುವರೆಗೆ ಮಮತಾ ಬ್ಯಾನರ್ಜಿ, ಶರದ್ ಪವಾರ್, ಚಂದ್ರಶೇಖರ್ ರಾವ್, ಅಖಿಲೇಶ್ ಯಾದವ್, ಕೇಜ್ರಿವಾಲ್ ಸೇರಿದಂತೆ ರಾಜ್ಯದ ವಿವಿಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನೂ ಭೇಟಿಯಾಗಿದ್ದರು. ಇದಾದ ಬಳಿಕ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ಅಂತಿಮ ರೂಪ ಪಡೆಯುತ್ತಿದೆ. ಈ ವೇಳೆ ರಾಜಕೀಯ ತಜ್ಞರು ಕುತೂಹಲದಿಂದ ಕಾಯುತ್ತಿದ್ದ ಎಲ್ಲ ವಿರೋಧ ಪಕ್ಷಗಳು ಒಂದೆಡೆ ಸೇರುವ ಕಾರ್ಯಕ್ರಮ ಜೂನ್ 12 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಸಭೆಗೆ ಹಾಜರಾಗುವಂತೆ ನಿತೀಶ್ ಕುಮಾರ್ ವಿಪಕ್ಷ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಖರ್ಗೆ ಮತ್ತು ರಾಹುಲ್ ಭಾಗವಹಿಸುವುದು ಖಚಿತವಾಗಿದೆ. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ಮತ್ತು ಶರದ್ ಪವಾರ್ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಈ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಭಾಗವಹಿಸುವ ನಿರೀಕ್ಷೆಯಿದೆ. ಕಮ್ಯುನಿಸ್ಟರೂ ಭಾಗವಹಿಸಲಿದ್ದಾರೆ.

ಆದರೆ, ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಭಾರತ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಚಂದ್ರಶೇಖರ್ ರಾವ್, ತೆಲುಗು ದೇಶಂ ಅಧ್ಯಕ್ಷ ಚಂದ್ರಬಾಬು ನಾಯ್ಡು, ವೈ.ಎಸ್.ಆರ್. ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಸಮನ್ವಯಗೊಳಿಸಲು ನಿತೀಶ್ ಕುಮಾರ್ ಅವರಿಗೆ ಇನ್ನೂ ಸಾಧ್ಯವಾಗಿಲ್ಲ.

ಆದರೂ ನಿತೀಶ್ ಕುಮಾರ್ ಅವರು ಒಮ್ಮತದಿಂದ ಎಲ್ಲರನ್ನೂ ಒಟ್ಟುಗೂಡಿಸಿ ಕಾರ್ಯನಿರ್ವಹಿಸಲು ನಿರ್ಧರಿಸಿದ್ದಾರೆ. ಕಳೆದ 2019ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಶೇ.38ರಷ್ಟು ಮತಗಳನ್ನು ಪಡೆದಿತ್ತು. ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಬಿಕ್ಕಟ್ಟು ಸೃಷ್ಟಿಸಬಹುದು ಎಂದು ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲೂ ನಿರ್ದಿಷ್ಟವಾಗಿ ಒಟ್ಟು 543 ಎಂಪಿ ಕ್ಷೇತ್ರದಲ್ಲಿ ಕನಿಷ್ಠ 450 ಕ್ಷೇತ್ರಗಳಲ್ಲಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

450 ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಖಂಡಿತವಾಗಿಯೂ ಭಾರತೀಯ ಜನತಾ ಪಕ್ಷಕ್ಕೆ ಬಹುಮತ ಬರದಂತೆ ತಡೆಯಬಹುದು ಎಂದು ನಿತೀಶ್ ಕುಮಾರ್ ರಾಜ್ಯ ಪಕ್ಷದ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ. ಆದರೆ ರಾಜ್ಯ ಪಕ್ಷದ ನಾಯಕರು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವುದರಿಂದ ಕಾಂಗ್ರೆಸ್ ತನ್ನ ನಿಲುವು ಬದಲಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕು.