ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
2024ರ ಸಂಸತ್ ಚುನಾವಣೆ Archives » Dynamic Leader
October 16, 2024
Home Posts tagged 2024ರ ಸಂಸತ್ ಚುನಾವಣೆ
ರಾಜಕೀಯ

“ಮುಸ್ಲಿಮರ ನಂಬಿಕೆಗೆ-ವಿಶ್ವಾಸಕ್ಕೆ ಘಾಸಿಯುಂಟು ಮಾಡಿ, ಸಮಾಜ ಒಡೆದು ಗಲಭೆಯೆಬ್ಬಿಸಿ ಅಧಿಕಾರಕ್ಕೇರುವ ಷಡ್ಯಂತ್ರ ಇದಾಗಿದೆ. ಈ ಸಂವಿಧಾನ ವಿರೋಧಿ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು” ವೆಲ್‌ಫೇರ್ ಪಾರ್ಟಿ.

ಮುಸ್ಲಿಮರ ವಿರುದ್ದ ಕೊಳಕು ನಾಲಗೆ ಹರಿಬಿಟ್ಟು ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರ ವಿರುದ್ದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಸರ್ಕಾರವನ್ನು ಆಗ್ರಹಿಸಿದ್ದಾರೆ .

‌ರಾಜಕೀಯದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಈಶ್ವರಪ್ಪ, ಮುಸ್ಲಿಮರ ವಿರುದ್ದ ಕೊಳಕು ನಾಲಿಗೆ ಹೊರಚಾಚಿ ಹರಿಯಬಿಟ್ಟು ತಮ್ಮ ಹಳೆಯ ಚಾಳಿ ಮುಂದುವರಿಸಿದ್ದಾರೆ. ಲಂಗುಲಗಾಮಿಲ್ಲದೆ ಮಾತನಾಡುತ್ತಿರುವ ಈಶ್ವರಪ್ಪರ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಸರ್ಕಾರ ಮುಂದಾಗಬೇಕು ಎಂದು ಹೇಳಿದ್ದಾರೆ.

ಮಸೀದಿ ಒಡೆದು ಪುಡಿ ಮಾಡುತ್ತೇವೆ ಎಂದು ಬಹಿರಂಗವಾಗಿ ಸರ್ಕಾರಕ್ಕೆ ಅವಾಝ್ ನೀಡಿ, ಮುಸಲ್ಮಾನ ಸಮುದಾಯವನ್ನು ಕೆಣಕುವ ಹುನ್ನಾರ ಮಾಡಿದ್ದಾರೆ. ಲೋಕಸಭಾ ಚುನಾವಣಾ ಸಿದ್ದತೆಯಲ್ಲಿರುವ ಬಿಜೆಪಿ, ಇಂತಹ ಕೋಮು ಪ್ರಚೋದಕ ಮಾತುಗಳನ್ನೇ ಅಸ್ತ್ರ ಮಾಡಿಕೊಳ್ಳುವ ಸೂಚನೆ ದಟ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ಕಲ್ಲಡಕ ಪ್ರಭಾಕರ್ ಭಟ್ ಮೂಲಕ ಅದಕ್ಕೆ ಚಾಲನೆ ನೀಡಿ, ಅದನ್ನು ಈಶ್ವರಪ್ಪ ಮುಂದುವರಿಸುತ್ತಿದ್ದಾರೆ. ಮುಸ್ಲಿಮರ ನಂಬಿಕೆಗೆ- ವಿಶ್ವಾಸಕ್ಕೆ ಘಾಸಿಯುಂಟು ಮಾಡಿ, ಸಮಾಜ ಒಡೆದು ಗಲಭೆಯೆಬ್ಬಿಸಿ ಅಧಿಕಾರಕ್ಕೇರುವ ಷಡ್ಯಂತ್ರ ಇದಾಗಿದೆ. ಈ ಸಂವಿಧಾನ ವಿರೋಧಿ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಈ ಸರಣಿ ಮುಂದುವರಿಯಲಿದೆ ಎಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಬಾಯಲ್ಲಿ ಶ್ರೀರಾಮನ ಹೆಸರು ಹೇಳಿಕೊಂಡು, ರಾಕ್ಷಸೀಯ ಮುಖ ಪ್ರದರ್ಶಿಸುವ ಮೂಲಕ ಈಶ್ವರಪ್ಪ ವರಿಷ್ಟರ ಕೃಪೆ ಗಿಟ್ಟಿಸಲು ಹವಣಿಸುತ್ತಿದ್ದಾರೆ. ಈಗಾಗಲೇ ಮೂಲೆಗುಂಪಾಗಿರುವ ಈಶ್ವರಪ್ಪರ ಬಳಿ ಕೊಳಕು ನಾಲಿಗೆ ಮಾತ್ರ ಅಸ್ತ್ರವಾಗಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅದನ್ನು ಪ್ರಯೋಗಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇವರನ್ನು ಬಂಧಿಸಿ ಈ ರಾಜ್ಯದ ಜನರ ಹಿತ ಹಾಗೂ ನೆಮ್ಮದಿಯನ್ನು ಕಾಪಾಡಲು ಸರ್ಕಾರ ಬದ್ದವಾಗಿರಬೇಕು. ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸದೇ ಇರವುದರಿಂದ ಇಂಥ ಸಮಾಜ ಘಾತಕ ಶಕ್ತಿಗಳಿಗೆ ಧ್ಯರ್ಯ ಸಿಗುತಿದ್ದೆ. ರಾಜಕೀಯ ಲೆಕ್ಕಚಾರ ಬಿಟ್ಟು ಸರ್ಕಾರ ಸಮಾಜದ ಹಿತದೃಷ್ಟಿಯಿಂದ ಕಠಿಣ ಕ್ರಮ ಜರುಗಿಸಬೇಕೆಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೇಶ

ತಿರುವನಂತಪುರಂ,
2024ರ ಲೋಕಸಭೆ ಚುನಾವಣೆ ಎದುರಿಸಲು ರಾಜಕೀಯ ಪಕ್ಷಗಳು ಸಕ್ರಿಯವಾಗಿ ತಯಾರಿ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ, ಮುಂದಿನ ತಿಂಗಳು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸ್ಥಾಪಿಸಲಾದ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ‘ಎಕ್ಸ್’ ಸೈಟ್‌ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ,

“ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಮತ್ತು ಫೆಬ್ರವರಿ 14 ರಂದು ಅಬುಧಾಬಿಯಲ್ಲಿ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಅದರ ನಂತರ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ನಾನು ನಿರೀಕ್ಷಿಸುತ್ತೇನೆ.

ಆದ್ದರಿಂದ ವಿಷಯ ಸ್ಪಷ್ಟವಾಗಿದೆ. 2009ರಲ್ಲಿ ಭಾರತೀಯ ಮತದಾರರಿಗೆ ಮೋದಿ ಆರ್ಥಿಕ ಅಭಿವೃದ್ಧಿಯ ಅವತಾರವಾಗಿ, ಗುಜರಾತ್‌ನ ಮುಖ್ಯ ಆಡಳಿತಾಧಿಕಾರಿಯಾಗಿ ಪ್ರದರ್ಶಿಸಲಾಯಿತು. ಅವರು ಎಲ್ಲಾ ಭಾರತೀಯರಿಗೆ ಅಭಿವೃದ್ಧಿಯನ್ನು ತರುತ್ತಾರೆ ಎಂದು ಬಿಂಬಿಸಲಾಯಿತು.

ಆದರೆ, 2019ರಲ್ಲಿ, ನೋಟು ಅಮಾನ್ಯೀಕರಣದ ವಿನಾಶಕಾರಿ ಕ್ರಮದ ನಂತರ ಆ ಕಥೆ ಕುಸಿಯುತ್ತಿದ್ದಂತೆ, ಪುಲ್ವಾಮಾ ಭಯೋತ್ಪಾದಕ ದಾಳಿಯು ಮೋದಿಯವರಿಗೆ ಸಾರ್ವತ್ರಿಕ ಚುನಾವಣೆಯನ್ನು ರಾಷ್ಟ್ರೀಯ ಭದ್ರತಾ ಚುನಾವಣೆಯನ್ನಾಗಿ ಪರಿವರ್ತಿಸುವ ಅವಕಾಶವನ್ನು ನೀಡಿತು.

ಮುಂದಿನ 2024ರ ಚುನಾವಣೆಯಲ್ಲಿ ಬಿ.ಜೆ.ಪಿ ನರೇಂದ್ರ ಮೋದಿ ಅವರನ್ನು ಹಿಂದೂ ಹೃದಯಗಳ ಸಾಮ್ರಾಟ ಎಂದು ಬಡ್ತಿ ನೀಡುವುದು ಸ್ಪಷ್ಟವಾಗಿ ಕಾಣುತ್ತಿದೆ.

ಈ ಹಂತದಲ್ಲಿ ಕೆಲವು ಪ್ರಶ್ನೆಗಳು ಉದ್ಭವಿಸುತ್ತವೆ: ‘ಅಚ್ಚೇ ದಿನ್’ ಏನಾಯಿತು? ವರ್ಷಕ್ಕೆ 2 ಕೋಟಿ ಉದ್ಯೋಗಗಳು ಏನಾಯಿತು? ಸಾಮಾಜಿಕ-ಆರ್ಥಿಕ ಏಣಿಯ ಕೆಳ ಹಂತಗಳಿಗೆ ಪ್ರಯೋಜನಕಾರಿ ಆರ್ಥಿಕ ಬೆಳವಣಿಗೆ ಏನಾಯಿತು? ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗಳಿಗೆ ಪಾವತಿಸುವುದಾಗಿ ಹೇಳಿದ್ದ ಹಣ ಏನಾಯಿತು?

ಹಿಂದೂತ್ವ ಅಜೆಂಡಾಗಳಿಗೆ ಮತ್ತು ಜನ ಕಲ್ಯಾಣಕ್ಕೆ ನಡುವೆ ನಡೆಯಲಿರುವ ಮುಂಬರುವ ಚುನಾವಣೆಯಲ್ಲಿ ಈ ಪ್ರಶ್ನೆಗಳು ಚರ್ಚೆಯಾಗಬೇಕು” ಎಂದು ಶಶಿ ತರೂರ್ ಹೇಳಿದ್ದಾರೆ. 

ರಾಜಕೀಯ

ಡಿ.ಸಿ.ಪ್ರಕಾಶ್

2014ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅಡುಗೆ ಸಿಲಿಂಡರ್ ಬೆಲೆ ರೂ.417 ಆಗಿತ್ತು. ಆದರೆ ಕ್ರಮೇಣ 1118 ರೂಪಾಯಿಗೆ ಏರಿಕೆಯಾಗಿದೆ. ಗಗನಕ್ಕೇರಿರುವ ಸಿಲಿಂಡರ್ ಬೆಲೆಯಿಂದಾಗಿ ಕುಟುಂಬದ ಮುಖ್ಯಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕಡಿದಾದ ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಕಾಂಗ್ರೆಸ್, ಡಿಎಂಕೆ, ಸಿಪಿಎಂ ಮತ್ತು ಇತರ ಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಾ ಬಂದವು. ಆಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿದ್ದೆ ಸಿಲಿಂಡರ್ ಬೆಲೆ ಏರಿಕೆಗೆ ಕಾರಣ ಎಂದು ಮೋದಿ ಸರ್ಕಾರ ಹೇಳಿಕೊಂಡಿತ್ತು. ನಂತರ ಕಚ್ಚಾ ತೈಲ ಬೆಲೆ ಕುಸಿದರೂ ಮೋದಿ ಸರ್ಕಾರ ಸಿಲಿಂಡರ್ ಬೆಲೆ ಇಳಿಸಲಿಲ್ಲ.

ಈ ಹಿನ್ನಲೆಯಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿರುವ ಕಾರಣ ಅಡುಗೆ ಸಿಲಿಂಡರ್ ಬೆಲೆಯನ್ನು 200 ರೂಪಾಯಿ ಕಡಿಮೆ ಮಾಡಿದೆ; ಕೇಂದ್ರ ಬಿಜೆಪಿ ಸರ್ಕಾರ. ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ.200 ಸಬ್ಸಿಡಿ ನೀಡುವುದಾಗಿಯೂ ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರದ ಘೋಷಣೆ ಚುನಾವಣಾ ನಾಟಕ ಎಂದು ವಿರೋಧ ಪಕ್ಷದ ನಾಯಕರು ಟೀಕಿಸಿದ್ದಾರೆ.

ಈ ಹಿನ್ನಲೆಯಲ್ಲಿ “ಸಂಕಷ್ಟದಲ್ಲಿರುವ ನಾಡಿನ ಜನರ ಕೋಪವನ್ನು ರೂ.200 ಸಬ್ಸಿಡಿಯಿಂದ ಕಡಿಮೆ ಮಾಡಲು ಸಾಧ್ಯವಿಲ್ಲ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಜಾಲತಾಣದಲ್ಲಿ ಹೇಳಿಕೆಯನ್ನು ಪ್ರಕಟಿಸಿರುವ ಅವರು, “ಯಾವಾಗ ಮತಗಳು ಕಡಿಮೆಯಾಗಲು ಪ್ರಾರಂಭಿಸುತ್ತದೆಯೋ, ಆಗ ಚುನಾವಣೆ ಉಡುಗೊರೆಗಳ ವಿತರಣೆ ಪ್ರಾರಂಭವಾಗುತ್ತದೆ!

ಜನರ ದುಡಿಮೆಯ ಹಣವನ್ನು ಲೂಟಿ ಮಾಡಿದ ನಿರ್ದಯಿ ಮೋದಿ ಸರ್ಕಾರ, ಪ್ರಸ್ತುತ ತಾಯಿ ಮತ್ತು ಸಹೋದರಿಯರ ಬಗ್ಗೆ ಸುಳ್ಳು ಅಭಿಮಾನ ತೋರಿಸುತ್ತಿದೆ. ಒಂಬತ್ತೂವರೆ ವರ್ಷಗಳ ಕಾಲ ಜನ ಸಾಮಾನ್ಯರ ಜೀವನವನ್ನು ಹಾಳುಮಾಡಿದ್ದಾರೆ. ಆಗ “ಪ್ರೀತಿಯ ಉಡುಗೊರೆ” ಏಕೆ ನೆನಪಿಗೆ ಬಂದಿಲ್ಲ?

ಒಂಬತ್ತೂವರೆ ವರ್ಷಗಳ ಕಾಲ 140 ಕೋಟಿ ಭಾರತೀಯರನ್ನು ಹಿಂಸಿಸಿದ ಬಿಜೆಪಿ ಸರ್ಕಾರ “ಚುನಾವಣಾ ಲಾಲಿಪಾಪ್‌ಗಳನ್ನು” ಹಂಚುವುದರಿಂದ ಏನೂ ಪ್ರಯೋಜವಾಗುವುದಿಲ್ಲ ಎಂದು ತಿಳಿದುಕೊಳ್ಳಬೇಕು. ನಿಮ್ಮ ಹತ್ತು ವರ್ಷಗಳ ಪಾಪಗಳು ತೊಳೆಯಲಾಗದು.

ಬಿಜೆಪಿಯಿಂದ ಜಾರಿಗೊಂಡ ಹಣದುಬ್ಬರವನ್ನು ಎದುರಿಸಲು ಹಲವು ರಾಜ್ಯಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಬಡವರಿಗೆ 500 ರೂಪಾಯಿ ಸಿಲಿಂಡರ್ ನೀಡಲು ಹೊರಟಿದೆ. ರಾಜಸ್ಥಾನದಂತಹ ಹಲವು ರಾಜ್ಯಗಳು ಇದನ್ನು ಈಗಾಗಲೇ ಜಾರಿಗೆ ತಂದಿವೆ.

ಸಂಕಷ್ಟದಲ್ಲಿರುವ ಜನರ ಸಿಟ್ಟು 200 ರೂಪಾಯಿಗಳ ಸಬ್ಸಿಡಿಯಿಂದ ಕಡಿಮೆಯಾಗುವುದಿಲ್ಲ ಎಂಬುದನ್ನು ಮೋದಿ ಸರ್ಕಾರ ಅರಿಯಬೇಕು. ಇಂಡಿಯಾದ ಭಯ ಒಳ್ಳೆಯದು, ಮೋದಿ ಅವರೇ! ಜನ ಸಾಮಾನ್ಯರು ನಿರ್ಧರಿಸಿದ್ದಾರೆ. ಹಣದುಬ್ಬರವನ್ನು ಸೋಲಿಸುವ ಏಕೈಕ ಮಾರ್ಗವೆಂದರೆ ಬಿಜೆಪಿಗೆ ನಿರ್ಗಮನದ ಬಾಗಿಲನ್ನು ತೋರಿಸುವುದೇ ಆಗಿದೆ” ಎಂದರು.

ರಾಜಕೀಯ

ಹೊಸದಿಲ್ಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬೆಲೆ ರೂ.200 ಇಳಿಕೆ ಮಾಡುವುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡುವುದಾಗಿಯೂ ಘೋಷಿಸಲಾಗಿದೆ.

ಇಂದು (ಆ.29) ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಕೇಂದ್ರ ಸರ್ಕಾರ ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡುವುದಾಗಿ ಘೋಷಿಸಿದೆ. ಅದೇ ರೀತಿ ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡುವುದಾಗಿಯೂ ಘೋಷಿಸಲಾಗಿದೆ.

ಇದನ್ನೂ ಓದಿ: ಸ್ವಾಭಿಮಾನದ ಮದುವೆಗಳನ್ನು ವಕೀಲರೇ ನಡೆಸಬಹುದು; ನ್ಯಾಯಾಲಯದ ಪ್ರತಿನಿಧಿಯಾಗಿ ಅಲ್ಲ! – ಸುಪ್ರೀಂ ಕೋರ್ಟ್

ಇದರ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, “ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಎಲ್ಲಾ ಬಳಕೆದಾರರಿಗೆ ರೂ.200 ಇಳಿಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ರಕ್ಷಾ ಬಂಧನ್ ಆಚರಿಸುವ ಸಲುವಾಗಿ ದೇಶದ ಮಹಿಳೆಯರಿಗೆ ಇದು ಪ್ರಧಾನಿ ನರೇಂದ್ರ ಮೋದಿಯವರ ಉಡುಗೊರೆಯಾಗಿದೆ.

ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡಲಾಗುವುದು. ಇದರಿಂದ 10.35 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ರೂ.7,500 ಕೋಟಿ ವೆಚ್ಚ ಮಾಡಲಿದೆ. ಹಾಗಾಗಿ ಈಗ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಖರೀದಿದಾರರು ರೂ.700ಕ್ಕೆ ಮತ್ತು ಇತರರು ರೂ.900ಕ್ಕೆ ಸಿಲಿಂಡರ್ ಖರೀದಿಸಬಹುದು.” ಎಂದು ಹೇಳಿದ್ದಾರೆ.

ದೇಶ ರಾಜಕೀಯ

ಪಾಟ್ನಾ: ಇನ್ನು ಕೆಲವು ಪಕ್ಷಗಳು “ಇಂಡಿಯಾ” ಮೈತ್ರಿಕೂಟಕ್ಕೆ ಸೇರಲಿವೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಂದಾಗುತ್ತಿವೆ. ಅದರಂತೆ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 26 ಪಕ್ಷಗಳು “ಇಂಡಿಯಾ” ಮೈತ್ರಿಕೂಟವನ್ನು ರಚಿಸಿವೆ. ಅದೇ ಸಮಯದಲ್ಲಿ, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) 38 ಪಕ್ಷಗಳನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಸನಾತನ ಧರ್ಮವು ಓದುವುದನ್ನು ತಡೆಮಾಡಿತು; ದ್ರಾವಿಡ ಮಾದರಿ ಸರ್ಕಾರ ಹಸಿವು ನೀಗಿಸಿ ಓದುವಂತೆ ಮಾಡಿದೆ!

ಇಂಡಿಯಾ ಮೈತ್ರಿಕೂಟದ ಮೊದಲ ಸಭೆ ಕಳೆದ ಜೂನ್‌ನಲ್ಲಿ ಪಾಟ್ನಾದಲ್ಲಿ ನಡೆದಿದ್ದು, ಎರಡನೇ ಸಭೆ ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದಿತ್ತು. ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಇಂಡಿಯಾ ಮೈತ್ರಿಕೂಟ ಕಠಿಣ ಪೈಪೋಟಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಇನ್ನೂ ಕೆಲವು ಪಕ್ಷಗಳು ಸೇರಲಿವೆ ಎಂದು ಹೇಳಿದ್ದಾರೆ.

ಇದರ ಬಗ್ಗೆ ಪಾಟ್ನಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, “ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಿದ್ದೇವೆ. ಅಲ್ಲದೆ ಕ್ಷೇತ್ರ ಹಂಚಿಕೆ ಸೇರಿದಂತೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಕೆಲವು ರಾಜಕೀಯ ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ನಾನು ಗರಿಷ್ಠ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ನನಗೆ ಆಸೆ ಇಲ್ಲ.” ಎಂದು ಹೇಳಿದರು.

ರಾಜಕೀಯ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಸಲಹೆ ನೀಡುತ್ತಿದ್ದ, ಚುನಾವಣಾ ತಂತ್ರಗಾರ್ತಿ ಸ್ಟೆಫನಿ ಕಟ್ಟರ್, ರಾಹುಲ್ ಗಾಂಧಿ ಅವರಿಗೆ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಯಾವ ರೀತಿಯ ತಂತ್ರಗಳನ್ನು ಅನುಸರಿಸಬೇಕು? ಎಂಬುದರ ಕುರಿತು, ರಾಹುಲ್‌ಗೆ ಸಲಹೆ ನೀಡಲು, ಅಮೆರಿಕ ಮೂಲದ ಚುನಾವಣಾ ತಂತ್ರಗಾರ್ತಿ ಸ್ಟೆಫನಿ ಕಟ್ಟರ್ ಅವರನ್ನು ನೇಮಕ ಮಾಡಲಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಒಬಾಮಾ ಅವರ ಚುನಾವಣಾ ತಂತ್ರಗಾರರಾಗಿ ಹಾಗೂ ಉಪ ಪ್ರಚಾರ ವ್ಯವಸ್ಥಾಪಕರಾಗಿಯೂ ಸ್ಟೆಫನಿ ಕಟ್ಟರ್ ಸೇವೆ ಸಲ್ಲಿಸಿದ್ದಾರೆ.

ಅವರು ಅಮೆರಿಕಾದ ಕೆಲವು ರಿಪಬ್ಲಿಕನ್ ಪಕ್ಷದ ನಾಯಕರಿಗೂ ರಾಜಕೀಯ ಸಲಹೆಗಾರರಾಗಿದ್ದರು. ಪ್ರಸ್ತುತ, ಅವರು ರಾಹುಲ್‌ಗೆ ರಾಜಕೀಯ ಸಲಹೆಗಾರರಾಗಿ ಮತ್ತು ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ತಂತ್ರಗಾರರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಎಂದು ಹೇಳಲಾಗುತ್ತಿದೆ.    

ದೇಶ ರಾಜಕೀಯ

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯುವಂತೆ ಬಿಜೆಪಿ ರಾಜ್ಯ ನಾಯಕರುಗಳಿಗೆ ಪಕ್ಷದ ನಾಯಕತ್ವ ಸೂಚನೆ ನೀಡಿದೆ ಎಂದು ವರದಿಯಾಗಿದೆ. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳಲ್ಲಿ ಹಾಗೂ ಪಕ್ಷದ ಆಂತರಿಕ ಗೊಂದಲದಿಂದ ಕರ್ನಾಟಕದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸ್ಥಾನಗಳು ಕಡಿಮೆಯಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಇದನ್ನೂ ಓದಿ: ಉಪನಿಷತ್ತುಗಳು, ವೇದಗಳು ಮತ್ತು ಸಂಸ್ಕೃತ ಇಡೀ ಜಗತ್ತಿಗೆ ವಿಶ್ವಕೋಶಗಳಾಗಿವೆ; ಯಾವುದೇ ಆಕ್ಷೇಪವಿಲ್ಲದೆ ಅಧಿಕೃತ ಭಾಷೆಯನ್ನಾಗಿ ಹಿಂದಿಯನ್ನು ಒಪ್ಪಿಕೊಳ್ಳುವ ಅಗತ್ಯವನ್ನು ರೂಪಿಸಿಕೊಲ್ಲಿ! – ಅಮಿತ್ ಶಾ

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರು, ಸಮುದಾಯ ಸಂಘಟನೆಗಳು, ಖ್ಯಾತ ಕ್ರೀಡಾ ಪಟುಗಳು, ಕೈಗಾರಿಕೋದ್ಯಮಿಗಳು, ಚಿತ್ರರಂಗದ ಗಣ್ಯರು ಮುಂತಾದವರ ಬೆಂಬಲ ಪಡೆಯಬೇಕು. ಇವರು ಬಹಿರಂಗವಾಗಿ ಬಿಜೆಪಿಗೆ ಬೆಂಬಲ ನೀಡದಿದ್ದರೂ ಬಿಜೆಪಿ ವಿರುದ್ಧ ಹೋಗದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: ಭಾರತ ಮಾತೆ ಕೇವಲ ಭೂಮಿ ಅಲ್ಲ; ನಿರ್ದಿಷ್ಟ ಸಂಸ್ಕೃತಿ, ಇತಿಹಾಸ, ಧರ್ಮಕ್ಕೆ ಸಂಬಂಧಿಸಿಲ್ಲ ಭಾರತ ಪ್ರತಿಯೊಬ್ಬ ಭಾರತೀಯನ ಧ್ವನಿಯಾಗಿದೆ! – ರಾಹುಲ್ ಗಾಂಧಿ

ಇದರಿಂದ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ವಾತಾವರಣ ನಿರ್ಮಾಣವಾಗುವುದನ್ನು ತಪ್ಪಿಸಬಹುದು ಎಂದು ರಾಜ್ಯ ಅಧ್ಯಕ್ಷರುಗಳು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೇಶ ರಾಜಕೀಯ

ಮುಂದಿನ ವರ್ಷ ನಡೆಯಲಿರುವ ಸಂಸತ್ ಚುನಾವಣೆ ಎದುರಿಸಲು ಬಿಜೆಪಿ ಸಜ್ಜಾಗಿದೆ. ಕಳೆದ ಸೋಮವಾರ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಪಕ್ಷಗಳೊಂದಿಗೆ ಮೈತ್ರಿ ರಚನೆ ಕುರಿತು ಚರ್ಚಿಸಿದರು. ಅದನ್ನು ಆಧರಿಸಿ ಸರ್ಕಾರ ಹಾಗೂ ಪಕ್ಷದಲ್ಲಿ ಒಂದಷ್ಟು ಬದಲಾವಣೆ ತರಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮುಂದಿನ ವಾರ ಗುರುವಾರದೊಳಗೆ ಈ ಬಗ್ಗೆ ಕೆಲವು ಘೋಷಣೆಗಳನ್ನು ಮಾಡಲು ಅವರು ನಿರ್ಧರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಬಿ.ಜೆ.ಪಿ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಅವರೊಂದಿಗೆ ಸಂಸತ್ ಚುನಾವಣೆ ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಮೋದಿ ವಿಸ್ತೃತ ಸಮಾಲೋಚನೆ ನಡೆಸಲಿದ್ದಾರೆ.

ಸಮಾಲೋಚನೆ ಸಭೆ ನಾಳೆಯ ಮರುದಿನ (ಭಾನುವಾರ) ಆರಂಭವಾಗಲಿದೆ. ಪ್ರತಿ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲು ಯೋಜಿಸಲಾಗಿದೆ. ಹಾಗಾಗಿ ಮೇ 12, ಸೋಮವಾರದವರೆಗೆ ಬಿ.ಜೆ.ಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಿಜೆಪಿ ರಹಸ್ಯ ಸಮಾಲೋಚನಾ ಸಭೆ: ಅರ್‌ಎಸ್‌ಎಸ್ ಪ್ರಮುಖರು ಬಾಗಿ!

5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಸಂಸತ್ ಚುನಾವಣೆಗೆ ಹೊಸ ತಂತ್ರಗಾರಿಕೆಯ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಬಿ.ಜೆ.ಪಿ. ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ .

ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ, 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳು ಕೈಗೊಳ್ಳಬಹುದಾದ ಕ್ರಮಗಳಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಕಾಂಗ್ರೆಸ್ ಪಕ್ಷವು ರಾಜ್ಯ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಭಾರತೀಯ ಜನತಾ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಸೋಲಿಸಲು ಸಾಧ್ಯ ಎಂದು ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಶರದ್ ಪವಾರ್ ಮುಂತಾದ ನಾಯಕರು ಒತ್ತಾಯಿಸಿದ್ದಾರೆ. ಆದರೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವಲ್ಲಿ ವಿವಿಧ ಸಮಸ್ಯೆಗಳು ಕಂಡುಬರುತ್ತವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಕಾಂಗ್ರೆಸ್ ನೇತೃತ್ವದಲ್ಲಿ ಒಟ್ಟುಗೂಡಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಇದುವರೆಗೆ ಮಮತಾ ಬ್ಯಾನರ್ಜಿ, ಶರದ್ ಪವಾರ್, ಚಂದ್ರಶೇಖರ್ ರಾವ್, ಅಖಿಲೇಶ್ ಯಾದವ್, ಕೇಜ್ರಿವಾಲ್ ಸೇರಿದಂತೆ ರಾಜ್ಯದ ವಿವಿಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನೂ ಭೇಟಿಯಾಗಿದ್ದರು. ಇದಾದ ಬಳಿಕ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ಅಂತಿಮ ರೂಪ ಪಡೆಯುತ್ತಿದೆ. ಈ ವೇಳೆ ರಾಜಕೀಯ ತಜ್ಞರು ಕುತೂಹಲದಿಂದ ಕಾಯುತ್ತಿದ್ದ ಎಲ್ಲ ವಿರೋಧ ಪಕ್ಷಗಳು ಒಂದೆಡೆ ಸೇರುವ ಕಾರ್ಯಕ್ರಮ ಜೂನ್ 12 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಸಭೆಗೆ ಹಾಜರಾಗುವಂತೆ ನಿತೀಶ್ ಕುಮಾರ್ ವಿಪಕ್ಷ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಖರ್ಗೆ ಮತ್ತು ರಾಹುಲ್ ಭಾಗವಹಿಸುವುದು ಖಚಿತವಾಗಿದೆ. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ಮತ್ತು ಶರದ್ ಪವಾರ್ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಈ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಭಾಗವಹಿಸುವ ನಿರೀಕ್ಷೆಯಿದೆ. ಕಮ್ಯುನಿಸ್ಟರೂ ಭಾಗವಹಿಸಲಿದ್ದಾರೆ.

ಆದರೆ, ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಭಾರತ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಚಂದ್ರಶೇಖರ್ ರಾವ್, ತೆಲುಗು ದೇಶಂ ಅಧ್ಯಕ್ಷ ಚಂದ್ರಬಾಬು ನಾಯ್ಡು, ವೈ.ಎಸ್.ಆರ್. ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಸಮನ್ವಯಗೊಳಿಸಲು ನಿತೀಶ್ ಕುಮಾರ್ ಅವರಿಗೆ ಇನ್ನೂ ಸಾಧ್ಯವಾಗಿಲ್ಲ.

ಆದರೂ ನಿತೀಶ್ ಕುಮಾರ್ ಅವರು ಒಮ್ಮತದಿಂದ ಎಲ್ಲರನ್ನೂ ಒಟ್ಟುಗೂಡಿಸಿ ಕಾರ್ಯನಿರ್ವಹಿಸಲು ನಿರ್ಧರಿಸಿದ್ದಾರೆ. ಕಳೆದ 2019ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಶೇ.38ರಷ್ಟು ಮತಗಳನ್ನು ಪಡೆದಿತ್ತು. ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಬಿಕ್ಕಟ್ಟು ಸೃಷ್ಟಿಸಬಹುದು ಎಂದು ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲೂ ನಿರ್ದಿಷ್ಟವಾಗಿ ಒಟ್ಟು 543 ಎಂಪಿ ಕ್ಷೇತ್ರದಲ್ಲಿ ಕನಿಷ್ಠ 450 ಕ್ಷೇತ್ರಗಳಲ್ಲಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

450 ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಖಂಡಿತವಾಗಿಯೂ ಭಾರತೀಯ ಜನತಾ ಪಕ್ಷಕ್ಕೆ ಬಹುಮತ ಬರದಂತೆ ತಡೆಯಬಹುದು ಎಂದು ನಿತೀಶ್ ಕುಮಾರ್ ರಾಜ್ಯ ಪಕ್ಷದ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ. ಆದರೆ ರಾಜ್ಯ ಪಕ್ಷದ ನಾಯಕರು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿರುವುದರಿಂದ ಕಾಂಗ್ರೆಸ್ ತನ್ನ ನಿಲುವು ಬದಲಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕು.