ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
aam aadmi party Archives » Dynamic Leader
October 16, 2024
Home Posts tagged aam aadmi party
ರಾಜಕೀಯ

ನವದೆಹಲಿ,
ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ಮುಖ್ಯಮಂತ್ರಿ ಅತಿಶಿ ಅವರ ಅಧಿಕೃತ ನಿವಾಸ 6, ಫ್ಲಾಗ್‌ಸ್ಟಾಫ್ ರಸ್ತೆಯಿಂದ ಲಗೇಜ್ ಮತ್ತು ಇತರ ವಸ್ತುಗಳನ್ನು ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು, “ಈ ಕ್ರಮವು ಮುಖ್ಯಮಂತ್ರಿಯವರ ಅಧಿಕೃತ ನಿವಾಸವನ್ನು ವಶಪಡಿಸಿಕೊಳ್ಳುವ ಬಿಜೆಪಿಯ ಯೋಜನೆಯ ಒಂದು ಭಾಗವಾಗಿದೆ” ಎಂದು ಹೇಳಿಕೊಂಡಿದೆ.

ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಕೇಸರಿ ಪಕ್ಷದ ನಾಯಕನಿಗೆ ಹಂಚಲು ಬಯಸಿದ್ದರಿಂದ ದೆಹಲಿಯ ಸಿವಿಲ್ ಲೈನ್ಸ್ 6, ಫ್ಲಾಗ್‌ಸ್ಟಾಫ್ ರಸ್ತೆಯಲ್ಲಿರುವ ದೆಹಲಿ ಮುಖ್ಯಮಂತ್ರಿ ನಿವಾಸವನ್ನು ಬಿಜೆಪಿಯ ಆಜ್ಞೆಯ ಮೇರೆಗೆ ಬಲವಂತವಾಗಿ ಖಾಲಿ ಮಾಡಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿಯ ಕಛೇರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

“ಬಿಜೆಪಿ ದೆಹಲಿಯಲ್ಲಿ 27 ವರ್ಷಗಳಿಂದ ಅಧಿಕಾರದಿಂದ ಹೊರಗುಳಿದಿದೆ. ಸಾರ್ವಜನಿಕರಿಂದ ಚುನಾವಣಾ ಬೆಂಬಲವನ್ನು ಪಡೆಯಲು ಸಾಧ್ಯವಾಗದ ಕಾರಣ ಅವರು ಸಿಎಂ ನಿವಾಸದ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಎಎಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

ಕೆಲವು ಪ್ರಮುಖ ಬಿಜೆಪಿ ನಾಯಕರಿಗೆ ಬಂಗಲೆ ಮಂಜೂರು ಮಾಡುವ ಯೋಜನೆ ಇತ್ತು ಎಂದು ಎಎಪಿ ಹೇಳಿಕೊಂಡಿದೆ. ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸದರಿ ಮನೆಯನ್ನು ಖಾಲಿ ಮಾಡಿದ ಕೆಲವು ದಿನಗಳ ನಂತರ ಆ ಮನೆಗೆ ಮುಖ್ಯಮಂತ್ರಿ ಅತಿಶಿ ಸ್ಥಳಾಂತರಗೊಂಡಿದ್ದರು ಎಂಬುದು ಗಮನಾರ್ಹ.

ರಾಜಕೀಯ

ನವದೆಹಲಿ: “ಬಿಜೆಪಿಯ ಕ್ಷಣಗಣನೆ ಆರಂಭವಾಗಿದೆ. ಎಲ್ಲ ರಾಜ್ಯಗಳ ಚುನಾವಣೆಯಲ್ಲೂ ಸೋಲು ಕಾಣಲಿದೆ” ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕವನ್ನು ಮರು ನಿಗದಿಪಡಿಸಿದೆ. ಅದರಂತೆ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 5 ರಂದು ಅಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಆಮ್ ಆದ್ಮಿ ಪಕ್ಷವು ಹರಿಯಾಣದ ಎಲ್ಲಾ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ, ಪಕ್ಷದ ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿದ್ದಾರೆ. “ಬಿಜೆಪಿಯ ಕ್ಷಣಗಣನೆ ಶುರುವಾಗಿದೆ. ಘೋಷಿಸಿದ ಎಲ್ಲಾ ಚುನಾವಣೆಗಳಲ್ಲೂ ಸೋಲುತ್ತದೆ. ಜನರು ತಮ್ಮನ್ನು ತಿರಸ್ಕರಿಸುತ್ತಿದ್ದಾರೆ ಎಂಬುದನ್ನು ಲೋಕಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಗೊತ್ತಾಗಿದೆ.

ಮುಂದಿನ ದಿನಗಳಲ್ಲಿ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ನವದೆಹಲಿ ಚುನಾವಣೆಗಳಲ್ಲಿ ಬಿಜೆಪಿ ಸೋಲುವುದು ಖಚಿತ. ಚುನಾವಣಾ ದಿನಾಂಕಗಳನ್ನು ಬದಲಾಯಿಸುವ ಮೂಲಕ ಗೆಲ್ಲಲು ಸಾಧ್ಯವಿಲ್ಲ. ದೇಶದಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹರಿಯಾಣದಲ್ಲಿ ಪ್ರಚಾರ ನಡೆಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇಶ

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಒಂದೂವರೆ ವರ್ಷದ ಬಳಿಕ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ದೆಹಲಿ ಆಮ್ ಆದ್ಮಿ ಸರ್ಕಾರದ ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಆಮ್ ಆದ್ಮಿ ಪಕ್ಷದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 2023ರಲ್ಲಿ ಜಾರಿ ಇಲಾಖೆ ಬಂಧಿಸಿ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

ಅವರ ವಿರುದ್ಧ ದೆಹಲಿ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಅಲ್ಲಿ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ನಂತರ, ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಮೇಲ್ಮನವಿಯನ್ನು ಕೂಡ ಮೇ 21 ರಂದು ವಜಾಗೊಳಿಸಲಾಯಿತು. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಧೀಶರಾದ ಗವಾಯಿ ಮತ್ತು ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯ ಪೀಠವು ದಿನಾಂಕವನ್ನು ಸೂಚಿಸದೆ ಕಳೆದ 6 ರಂದು ಮುಂದೂಡಿದ್ದರು.

ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ ಇಂದು (ಆಗಸ್ಟ್ 09) ಜಾಮೀನು ಮಂಜೂರಾಗಿದೆ. ರೂ.10 ಲಕ್ಷ ಪಾವತಿಸುವುದರೊಂದಿಗೆ, ಪಾಸ್‌ಪೋರ್ಟ್ ಒಪ್ಪಿಸುವಂತೆಯೂ ಆದೇಶಿಸಲಾಗಿದೆ.

ದೇಶ

ನವದೆಹಲಿ: “ಆಮ್ ಆದ್ಮಿ ಪಕ್ಷ ನಮಗೆ ಮುಖ್ಯವಲ್ಲ; ರಾಷ್ಟ್ರ ಮುಖ್ಯ” ಎಂದು ತಿಹಾರ್ ಜೈಲಿನಲ್ಲಿ ಶರಣಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಇದನ್ನು ಹೇಳಿದರು. ಇದಾದ ಬಳಿಕ ತಿಹಾರ್ ಜೈಲಿಗೆ ಹೋಗಿ ಶರಣಾದರು.

ದೆಹಲಿ ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಮುಖ್ಯಮಂತ್ರಿ ಅರವಿಂದ್  ಕೇಜ್ರಿವಾಲ್ ಅವರಿಗೆ ನೀಡಲಾಗಿದ್ದ 21 ದಿನಗಳ ಮಧ್ಯಂತರ ಜಾಮೀನು ಇಂದು (ಜೂನ್ 02) ಮುಕ್ತಾಯಗೊಂಡಿದೆ. ಪರಿಣಾಮವಾಗಿ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಶರಣಾಗಲು ಹೊರಟರು. ಗಾಂಧಿ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿದ ಬಳಿಕ ಪತ್ನಿ ಸಮೇತ ಕನ್ನಾಟ್ ಹನುಮಾನ್ ದೇವಸ್ಥಾನದಲ್ಲಿ ಸ್ವಾಮಿ ದರ್ಶನ ಪಡೆದರು. ನಂತರ ಅವರು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳನ್ನು ಭೇಟಿಯಾದರು.

ತ್ಯಾಗ
ಆಗ ಮಾತನಾಡಿದ ಕೇಜ್ರಿವಾಲ್,  “ನನ್ನ ವಿರುದ್ಧ ಯಾವುದೇ ಅಪರಾಧದ ಸಾಕ್ಷ್ಯಗಳಿಲ್ಲ. ಚುನಾವಣಾ ಪ್ರಚಾರಕ್ಕೆ ಅನುಕೂಲವಾಗುವಂತೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ಗೆ ನಾನು ಕೃತಜ್ಞನಾಗಿದ್ದೇನೆ. ಆಮ್ ಆದ್ಮಿ ಪಕ್ಷ ನಮಗೆ ಮುಖ್ಯವಲ್ಲ. ರಾಷ್ಟ್ರ ಮುಖ್ಯ. 21 ದಿನಗಳಲ್ಲಿ ಒಂದು ನಿಮಿಷವನ್ನೂ ವ್ಯರ್ಥಮಾಡಲಿಲ್ಲ. ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಮತ್ತೆ ಜೈಲಿಗೆ ಹೋಗುತ್ತಿದ್ದೇನೆ. ಸರ್ವಾಧಿಕಾರದ ವಿರುದ್ಧ ಹೋರಾಡುತ್ತೇನೆ. ನನ್ನ ಪ್ರತಿ ಹನಿ ರಕ್ತವನ್ನೂ ದೇಶಕ್ಕಾಗಿ ತ್ಯಾಗ ಮಾಡುತ್ತೇನೆ. ಪ್ರಧಾನಿ ಮೋದಿ ನನ್ನನ್ನು (ಕೇಜ್ರಿವಾಲ್) ನುರಿತ ಕಳ್ಳ ಎಂದು ಕರೆಯುತ್ತಾರೆ.

ಸಮೀಕ್ಷೆಗಳು
ಎಲ್ಲಾ ಸಮೀಕ್ಷೆಗಳನ್ನು ಸುಳ್ಳಾಗಿಸಿ ಇಂಡಿಯಾ ಮೈತ್ರಿ ಪಕ್ಷಗಳು ಗೆಲ್ಲುತ್ತವೆ. ಎಲ್ಲಾ ಸಮೀಕ್ಷೆಗಳು ತಪ್ಪಾಗಿವೆ. ನನ್ನ ವಿರುದ್ಧದ ಆರೋಪಗಳಿಗೆ ಜಾರಿ ಇಲಾಖೆ ಕನಿಷ್ಠ ಒಂದೇ ಒಂದು ಸಾಕ್ಷ್ಯವನ್ನಾದರೂ ನೀಡಲು ಸಾದ್ಯವೇ? ನನ್ನ ಮನೆಯಲ್ಲಿ ಶೋಧ ನಡೆಸಿದಾಗ ಜಾರಿ ಇಲಾಖೆ ಏನನ್ನೂ ವಶಪಡಿಸಿಕೊಂಡಿಲ್ಲ. ದಬ್ಬಾಳಿಕೆಯ ಸರ್ಕಾರದ ವಿರುದ್ಧ ನೀವು ಧ್ವನಿ ಎತ್ತಬೇಕು. ಮತ ಎಣಿಕೆ ಸಂದರ್ಭದಲ್ಲಿ ಕೊನೆಯವರೆಗೂ ಇದ್ದು ನಿಗಾ ಇಡಬೇಕು.” ಎಂದು ಹೇಳಿದರು.

ಇದಾದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 4.50ರ ಹೊತ್ತಿಗೆ ತಿಹಾರ್ ಜೈಲಿಗೆ ಹೋಗಿ ಶರಣಾದರು.

ರಾಜಕೀಯ

ಮೋದಿ 3ನೇ ಬಾರಿ ಪ್ರಧಾನಿಯಾಗುವುದಿಲ್ಲ, ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ ಎಂದು ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯನ್ನು ದೇಶಾದ್ಯಂತ 7 ಹಂತಗಳಲ್ಲಿ ನಡೆಸಲಾಗಿದೆ. 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಲೋಕಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲ್ಲುತ್ತದೆ ಎಂದು ಚುನಾವಣೋತ್ತರ ಬಿಡುಗಡೆಯಾದ ಸಮೀಕ್ಷೆಯ ಫಲಿತಾಂಶಗಳು ಸೂಚಿಸುತ್ತದೆ.

ಎನ್ ಡಿಎ ಮೈತ್ರಿಕೂಟ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳುವಂತೆ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಜೂನ್ 4ರ ಮತ ಎಣಿಕೆ ನಂತರ ತಪ್ಪು ಎಂದು ಸಾಬೀತಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಭಾವುಕರಾಗಿ ಹೇಳಿದ್ದಾರೆ. ಸೋಮನಾಥ್ ಭಾರ್ತಿ ಅವರು ನವದೆಹಲಿ ಲೋಕಸಭಾ ಕ್ಷೇತ್ರಕ್ಕೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ವಿರುದ್ಧ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸ್ಪರ್ಧಿಸಿದ್ದಾರೆ. ಬಾನ್ಸುರಿಗೆ ಇದು ಮೊದಲ ಚುನಾವಣೆ.

2019ರಲ್ಲಿ ಬಿಜೆಪಿ ಎಲ್ಲಾ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಈ ಬಾರೀ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳುತ್ತಿವೆ. ಆದರೆ, ಸೋಮನಾಥ್ ಭಾರ್ತಿ ಅವರು ಪ್ರಕಟಿಸಿರುವ ಎಕ್ಸ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ಆಮ್ ಆದ್ಮಿ ಪಕ್ಷವು 4 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ಪಕ್ಷವು 3 ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮೋದಿ 3ನೇ ಅವಧಿಗೆ ಪ್ರಧಾನಿಯಾಗುವುದಿಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಯು 45 ಸಂಶಯಾಸ್ಪದ ಕಂಪನಿಗಳಿಂದ 1,068 ಕೋಟಿ ರೂಪಾಯಿ ದೇಣಿಗೆಯನ್ನು ಪಡೆದಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ನಿನ್ನೆ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಮಾಡಿದ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಜಾಸ್ಮಿನ್ ಶಾ ಅವರು, “ಬಿಜೆಪಿಗೆ 45 ಸಂಶಯಾಸ್ಪದ ಕಂಪನಿಗಳು ರೂ.1,068 ಕೋಟಿಯವರೆಗೆ ದೇಣಿಗೆ ನೀಡಿದೆ. ಅವು ನಷ್ಟದ ಕಂಪನಿಗಳಾಗಿವೆ. ಅಥವಾ ಅವರು ತೆರಿಗೆಗಳನ್ನು ಪಾವತಿಸದವರು ಅಥವಾ ಲಾಭಕ್ಕಿಂತ ಹೆಚ್ಚಾಗಿ ದೇಣಿಗೆ ನೀಡಿದವರಾಗಿದ್ದಾರೆ.

ಏಳು ವರ್ಷಗಳಲ್ಲಿ 33 ಕಂಪನಿಗಳು ಒಟ್ಟು ಒಂದು ಲಕ್ಷ ಕೋಟಿ ರೂಪಾಯಿಯವರೆಗೆ ನಷ್ಟ ಅನುಭವಿಸಿದ ಕಂಪನಿಗಳಾಗಿರುತ್ತವೆ. ಈ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ 450 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿರುತ್ತವೆ. ಈ ಪೈಕಿ 17 ಕಂಪನಿಗಳು ಶೂನ್ಯ ತೆರಿಗೆ ಅಥವಾ ಋಣಾತ್ಮಕ ತೆರಿಗೆ ಪಾವತಿಸಿದ ಕಂಪನಿಗಳಾಗಿವೆ.

ಇದಲ್ಲದೆ, ಈ ಕಂಪನಿಗಳು ತೆರಿಗೆ ವಿನಾಯಿತಿಗಳನ್ನು ಸಹ ಪಡೆದಿರುತ್ತವೆ. ಅಲ್ಲದೆ, ಆರು ಕಂಪನಿಗಳು ಬಿಜೆಪಿಗೆ 600 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿವೆ. ಆ ಮೊತ್ತವು ಆ ಕಂಪನಿಗಳ ಲಾಭಕ್ಕಿಂತ ಹೆಚ್ಚಿನ ಮೊತ್ತವಾಗಿರುತ್ತದೆ. ಇನ್ನೊಂದು ಕಂಪನಿ ಅವರ ಲಾಭಕ್ಕಿಂತ 93 ಪಟ್ಟು ಹೆಚ್ಚು ನೀಡಿದೆ. ಮೂರು ಕಂಪನಿಗಳು 28 ಕೋಟಿ ದೇಣಿಗೆ ನೀಡಿ ಶೂನ್ಯ ತೆರಿಗೆ ಪಾವತಿಸಿವೆ. ಉದಾಹರಣೆಗೆ, ನಷ್ಟದ ನಡುವೆಯೂ ಅನೇಕ ಕಂಪನಿಗಳು ಉದಾರವಾಗಿ ಬಿಜೆಪಿಗೆ ದೇಣಿಗೆ ನೀಡಿದವು. ಅದರಲ್ಲಿ ಪ್ರಮುಖವಾದದ್ದು ಭಾರ್ತಿ ಏರ್‌ಟೆಲ್ ಕಂಪೆನಿ.

77,000 ಕೋಟಿ ನಷ್ಟ ಅನುಭವಿಸಿದರೂ ಕಂಪನಿ 200 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಇದಕ್ಕೆ ಪ್ರತಿಯಾಗಿ ರೂ.8,200 ಕೋಟಿ ತೆರಿಗೆ ರಿಯಾಯಿತಿ ಪಡೆದುಕೊಂಡಿದೆ. ಇನ್ನೊಂದು ಕಂಪನಿ DLF. 7 ವರ್ಷಗಳಲ್ಲಿ 130 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಆದರೂ 25 ಕೋಟಿ ರೂಪಾಯಿ ದೇಣಿಗೆ ನೀಡಿ, 20 ಕೋಟಿ ರೂಪಾಯಿ ತೆರಿಗೆ ಲಾಭವನ್ನು ಪಡೆದುಕೊಂಡಿದೆ. ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ 115 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿ, ಬಿಜೆಪಿಗೆ ಸುಮಾರು 24.96 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದೆ. ಈ ಕಂಪನಿಯ ನಷ್ಟ ರೂ.299 ಕೋಟಿಯಾಗಿದೆ. ಹೀಗಾಗಿ ಅವರು ಶೂನ್ಯ ತೆರಿಗೆ ಪಾವತಿಸಿದ್ದಾರೆ.

ಅದೇ ರೀತಿ ಪಿಆರ್‌ಎಲ್ ಡೆವಲಪರ್ಸ್ 20 ಕೋಟಿ ರೂಪಾಯಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, 10 ಕೋಟಿ ರೂಪಾಯಿ ದೇಣಿಗೆ ನೀಡಿ 4.7 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ. ಈ ಕಂಪನಿ 1550 ಕೋಟಿ ನಷ್ಟವನ್ನು ಅನುಭವಿಸಿದ ಕಂಪನಿಯಾಗಿದೆ. ಯುಜಿಯಾ ಫಾರ್ಮಾ ಲಿಮಿಟೆಡ್ ಶರತ್ ಚಂದ್ರ ರೆಡ್ಡಿ ಅವರ ಕಂಪನಿಯಾಗಿದೆ. 7 ವರ್ಷದಲ್ಲಿ 28 ಕೋಟಿ ನಷ್ಟ ಅನುಭವಿಸಿದ್ದರೂ ಚುನಾವಣಾ ಬಾಂಡ್ ನಿಧಿಯಾಗಿ 15 ಕೋಟಿ ನೀಡಿ, ರೂ.7.20 ಕೋಟಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ.

7 ವರ್ಷದಲ್ಲಿ ರೂ.86 ಕೋಟಿ ನಷ್ಟವನ್ನು ಉಂಟುಮಾಡಿಕೊಂಡಿದ್ದ ಮೈತ್ರಾ ಎನರ್ಜಿ ಪ್ರೈವೇಟ್ ಲಿಮಿಟೆಡ್ ಕಂಪನಿ, 19 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಖರೀದಿಸಿ, 9.99 ಕೋಟಿ ಪಾವತಿಸುವ ಮೂಲಕ ರೂ.126 ಕೋಟಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ.

ಪಿರಮಲ್ ಕ್ಯಾಪಿಟಲ್ ಮತ್ತು ಹೌಸಿಂಗ್ ಫೈನಾನ್ಸ್ ಲಿಮಿಟೆಡ್ 10 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸುವ ಮೂಲಕ 16,376 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದರೂ 10 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. ಇದಕ್ಕೆ ರೂ.5178.50 ಕೋಟಿ ರೂ. ತೆರಿಗೆ ವಿನಾಯಿತಿ ಸಿಕ್ಕಿದೆ.

ಓರಿಯಂಟಲ್ ಸೌತ್ ದೆಹಲಿ ಹೊಟೇಲ್ ಪ್ರೈವೇಟ್ ಲಿಮಿಟೆಡ್ 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದು, 5 ಕೋಟಿ ದೇಣಿಗೆಯನ್ನೂ ನೀಡಿದೆ. ಕಂಪನಿ 49 ಕೋಟಿ ನಷ್ಟವನ್ನು ಅನುಭವಿಸಿದ್ದು, ಶೂನ್ಯ ತೆರಿಗೆ ಪಾವತಿಸಿದೆ. ವಿಲೇಜ್ ಡಿ ನಂದಿ ಪ್ರೈವೇಟ್ ಲಿಮಿಟೆಡ್ ಚುನಾವಣಾ ಬಾಂಡ್‌ಗಳನ್ನು ರೂ.5 ಕೋಟಿಗೆ ಖರೀದಿಸಿದೆ. ಮತ್ತು ರೂ.48 ಕೋಟಿ ನಷ್ಟದ ಹೊರತಾಗಿಯೂ, ಸಂಪೂರ್ಣ ಮೊತ್ತವನ್ನು ದೇಣಿಗೆಯಾಗಿ ನೀಡಿದೆ.

ರೂ.167 ಕೋಟಿ ನಷ್ಟವನ್ನು ಅನುಭವಿಸಿದ ಟಕಿಡೋ ಲೀಸಿಂಗ್ ಆಪರೇಟರ್ಸ್ ಪ್ರೈವೇಟ್ ಲಿಮಿಟೆಡ್ 4 ಕೋಟಿ ಮೌಲ್ಯದ ಬಾಂಡ್ ಖರೀದಿಸಿ ಸಂಪೂರ್ಣ ಹಣವನ್ನು ನೀಡಿದೆ. ಇದಲ್ಲದೇ ಇನ್ನೂ ಹಲವು ಕಂಪನಿಗಳು ತಮ್ಮ ಲಾಭದ ಆರು ಪಟ್ಟು ಹಣವನ್ನು ಉದಾರವಾಗಿ ನೀಡಿದೆ. ಇದೆಲ್ಲವೂ ಅತ್ಯಂತ ಅನುಮಾನಾಸ್ಪದವಾಗಿದೆ. ಈ ಕಂಪನಿಗಳು ಮತ್ತು ಸಂಬಂಧಪಟ್ಟ ಬಿಜೆಪಿ ಮುಖಂಡರ ವಿರುದ್ಧ ಕೂಡಲೇ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ದೇಶ

ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ!

‘ಜೈಲಿನಲ್ಲಿದ್ದರೂ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ. ಆದರೆ, ಕಾನೂನು ಏನು ಹೇಳುತ್ತದೆ? ಪ್ರಜಾಪ್ರತಿನಿಧಿ ಕಾಯಿದೆ, 1951ರ ಪ್ರಕಾರ, ಜನರಿಂದ ಆಯ್ಕೆಯಾದ ನಾಯಕನನ್ನು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಿದರೆ, ಅವರು ತಪ್ಪಿತಸ್ಥರೆಂದು ಸಾಬೀತಾಗುವವರೆಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳುತ್ತದೆ.ಇದು ನೈತಿಕವಾಗಿ ಸರಿ ಎಂದರೆ, ಹೆಚ್ಚಿನ ತಜ್ಞರ ಉತ್ತರವು ಇಲ್ಲ ಎಂಬುದಾಗಿದೆ.

ಕೇಜ್ರಿವಾಲ್ ಅವರು ಅಧಿಕಾರದಲ್ಲಿ ಮುಂದುವರಿಯಲು ಬಯಸಿದರೂ ದೆಹಲಿ ಲೆಫ್ಟಿನೆಂಟ್ ಗವರ್ನರ್, ಸಾಂವಿಧಾನಿಕ ಯಂತ್ರೋಪಕರಣಗಳು ಸ್ಥಗಿತಗೊಂಡಿದೆ ಎಂದು ಹೇಳಿ, ಆರ್ಟಿಕಲ್ 239 ಎಬಿ ಮೂಲಕ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಆರ್ಟಿಕಲ್ 239 ಎಎ ಮೂಲಕ ಸರ್ಕಾರವನ್ನು ವಿಸರ್ಜಿಸಲು ಸಹ ಆದೇಶಿಸಬಹುದು.

ತಿಹಾರ್ ಜೈಲಿನ ಮಾಜಿ ಕಾನೂನು ಅಧಿಕಾರಿ ಸುನಿಲ್ ಗುಪ್ತಾ, ‘‘ಜೈಲಿನಿಂದ ಸರಕಾರ ನಡೆಸುವುದು ತುಂಬಾ ಕಷ್ಟದ ಕೆಲಸ. ಕುಟುಂಬದವರು, ಸಂಬಂಧಿಕರು ಅಥವಾ ಪಕ್ಷದ ಸದಸ್ಯರು ಯಾರೇ ಆಗಿರಲಿ, ವಾರಕ್ಕೆ ಎರಡು ಬಾರಿ ಮಾತ್ರ ಅವರನ್ನು ಭೇಟಿ ಮಾಡಬಹುದು ಎಂಬುದು ಜೈಲಿನ ನಿಯಮ. ಈ ನಿರ್ಬಂಧಗಳೊಂದಿಗೆ ಆಡಳಿತ ನಡೆಸುವುದು ಸುಲಭವಲ್ಲ,” ಎಂದು ಹೇಳಿದ್ದಾರೆ.

ಈ ಸಮಸ್ಯೆಯು ಎಎಪಿ-ಕಾಂಗ್ರೆಸ್ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದರೂ ಮದ್ಯದ ನೀತಿ ಹಗರಣವನ್ನು ಮೊದಲು ಬಯಲಿಗೆಳೆದದ್ದು ಕಾಂಗ್ರೆಸ್ ಎಂಬುದರಿಂದ ಈ ಸಂಬಂಧ ಹಳಸಲು ಕಾರಣವಾಗಬಹುದು. ಪ್ರಧಾನಿ ಮೋದಿಯವರನ್ನು ತೀವ್ರವಾಗಿ ಟೀಕಿಸಿದ ನಾಯಕರಲ್ಲಿ ಕೇಜ್ರಿವಾಲ್ ಕೂಡಾ ಒಬ್ಬರಾಗಿದ್ದರು.

ಅವರ ರಾಜಕೀಯ ದಳಪತಿ ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರನ್, ಕೇಜ್ರಿವಾಲ್ ಬಂಧನದಿಂದ ‘ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಮೋದಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂಬ ಮಾತು ಲೋಕಸಭೆ ಚುನಾವಣೆ ವೇಳೆ ವ್ಯಾಪಕವಾಗಿ ಕೇಳಿಬರುವ ಸಾದ್ಯತೆಗಳಿವೆ.  

Uncategorized

ದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ಇಲಾಖೆ ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಕರಣ ದಾಖಲಿಸಿದೆ. ಪ್ರಕರಣದಲ್ಲಿ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದರೂ ಕೇಜ್ರಿವಾಲ್ ಹಾಜರಾಗಲಿಲ್ಲ.

ಈ ಹಿನ್ನಲೆಯಲ್ಲಿ, ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ಮನೆ ಮೇಲೆ ಜಾರಿ ಇಲಾಖೆ ಇಂದು ದಾಳಿ ನಡೆಸುತ್ತಿದೆ. ಅದೇ ರೀತಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರ ಮನೆ ಮೇಲೂ ದಾಳಿ ನಡೆಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್

ಇದಕ್ಕೂ ಮುನ್ನ ಇಂದು ಬೆಳಗ್ಗೆ 10 ಗಂಟೆಗೆ ಜಾರಿ ಇಲಾಖೆಯನ್ನು ಬಹಿರಂಗಪಡಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿ ಮರ್ಲೆನಾ ಹೇಳಿದ್ದ ಹಿನ್ನಲೆಯಲ್ಲಿ, ಇಂದು ಪಕ್ಷದ ಪದಾಧಿಕಾರಿಗಳ ಮನೆ ಮೇಲೆ ಜಾರಿ ಇಲಾಖೆ ದಾಳಿ ನಡೆಸಿರುವ ಘಟನೆ ಸಂಚಲನ ಮೂಡಿಸಿದೆ.

ಆಪರೇಷನ್ ಕಮಲ ನಡೆಸುವ ಹೊಣೆಯನ್ನು ಬಿಜೆಪಿ ತನಿಖಾ ಸಂಸ್ಥೆಗಳಿಗೆ ವಹಿಸಿದೆ ಎಂದು ತಟಸ್ಥವಾದ ಮಾಧ್ಯಮಗಳು ವಿಮರ್ಶಿಸುತ್ತಿದೆ. ಮತ್ತು ಕೆಲಸ ಮಾಡದ ಮಾಧ್ಯಮಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ದೇಶ

ನವದೆಹಲಿ: ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಬಗ್ಗೆ ಕೇಜ್ರಿವಾಲ್ ಅವರು ತಮ್ಮ ‘ಎಕ್ಸ್’ ಸೈಟ್ ನಲ್ಲಿ ನೀಡಿರುವ ಹೇಳಿಕೆಯಲ್ಲಿ, “ಕಳೆದ 9 ವರ್ಷಗಳಿಂದ ಆಮ್ ಆದ್ಮಿ ಸರ್ಕಾರವನ್ನು ಉರುಳಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಬಿಜೆಪಿಯ ಪ್ರಯತ್ನ ಯಶಸ್ವಿಯಾಗಲಿಲ್ಲ. ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 7 ಶಾಸಕರಿಗೆ ಬಿಜೆಪಿ 25 ಕೋಟಿ ರೂ.ವರೆಗೆ ಮಾತುಕತೆ ನಡೆಸಿದೆ. 21 ಶಾಸಕರ ಜತೆ ಮಾತುಕತೆ ನಡೆಸಲಾಗಿದೆ.

ದೇವರು ಮತ್ತು ಜನರ ಬೆಂಬಲ ಯಾವಾಗಲೂ ನಮ್ಮ ಮೇಲಿದೆ. ನಮ್ಮ ಎಲ್ಲಾ ಶಾಸಕರು ಒಟ್ಟಿಗೆ ಇದ್ದಾರೆ. ಆಮ್ ಆದ್ಮಿ ಸರ್ಕಾರ ಎಷ್ಟು ಒಳ್ಳೆಯ ಕೆಲಸ ಮಾಡಿದೆ ಎಂಬುದು ದೆಹಲಿಯ ಜನರಿಗೆ ಗೊತ್ತಿದೆ. ದೆಹಲಿಯ ಜನರು ಆಮ್ ಆದ್ಮಿ ಪಕ್ಷವನ್ನು ತುಂಬಾ ಪ್ರೀತಿಸುತ್ತಾರೆ.

ಹಾಗಾಗಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸುವ ಬಿಜೆಪಿಯ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಬಿಜೆಪಿಯವರು ನನ್ನನ್ನು ಬಂಧಿಸಿ ಸುಳ್ಳು ಮೊಕದ್ದಮೆ ಹೂಡಿ ಸರ್ಕಾರವನ್ನು ಉರುಳಿಸಲು ಬಯಸುತ್ತಿದ್ದಾರೆ” ಎಂದು ಕೇಜ್ರಿವಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೇಶ ರಾಜಕೀಯ

ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಈ ಹಿನ್ನಲೆಯಲ್ಲಿ, ‘ಕೇಜ್ರಿವಾಲ್ ಅವರನ್ನು ಬಂಧಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಅವರನ್ನು ಬಂಧಿಸಿದರೆ ದೆಹಲಿ ಸರಕಾರ ಜೈಲಿನಿಂದಲೇ ಕಾರ್ಯನಿರ್ವಹಿಸಲಿದೆ’ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ನಡೆಸುತ್ತಿದೆ. ಕಳೆದ 2021-2022ರ ಹಣಕಾಸು ವರ್ಷದಲ್ಲಿ, ಮದ್ಯ ಮಾರಾಟದ ನೀತಿಯನ್ನು ತಿದ್ದುಪಡಿ ಮಾಡಲಾಯಿತು. ಇದು ಖಾಸಗಿ ಕಂಪನಿಗಳು ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ಈ ಮೂಲಕ ಹಲವು ಕೋಟಿ ರೂ.ಗಳ ವಂಚನೆ ನಡೆದಿದೆ ಎಂಬ ದೂರುಗಳು ಕೇಳಿಬಂದವು.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದರು. ಇದರಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತು. ಈ ಪ್ರಕರಣದಲ್ಲಿ, ಅಬಕಾರಿ ಇಲಾಖೆ ಉಸ್ತುವಾರಿ ವಹಿಸಿಕೊಂಡಿದ್ದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು. ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.

ಇತ್ತೀಚೆಗಷ್ಟೇ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ‘ಈ ವಿಷಯದಲ್ಲಿ ವಂಚನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ಆದೇಶ ಹೊರಡಿಸಿತು. ಈ ಹಿನ್ನಲೆಯಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶ್ನಾಲಯ ಸಮನ್ಸ್ ಜಾರಿಮಾಡಿದೆ.

ಇದರ ಪ್ರಕಾರ ಅರವಿಂದ್ ಕೇಜ್ರಿವಾಲ್ ಇಂದು ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ.

ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ತನಿಖೆಯ ನಂತರ ಅವರನ್ನು ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಸರ್ಕಾರವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದರ ಬಗ್ಗೆ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಸೌರಭ್ ಭಾರದ್ವಾಜ್ ನಿನ್ನೆ ಹೇಳಿಕೆ ನೀಡಿದ್ದಾರೆ:

‘ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದರೆ, ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ಒಟ್ಟಾಗಿ ನಿರ್ಧರಿಸುತ್ತಾರೆ. ಪಕ್ಷದ ಎಲ್ಲಾ ನಾಯಕರು ಜೈಲಿನಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಹಾಗೆ ಎಲ್ಲರನ್ನೂ ಜೈಲಿಗೆ ಹಾಕಿದರೆ ಜೈಲಿನಿಂದಲೇ ಆಡಳಿತ ನಡೆಸುತ್ತೇವೆ.

ಈ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ನಿಲ್ಲಿಸಬೇಕೆಂದು ಬಿಜೆಪಿ ಬಯಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ; ಜೈಲಿನಲ್ಲಿದ್ದರೂ ಜನರ ಸೇವೆ ಮಾಡುತ್ತೇವೆ’ ಎಂದು ಅವರು ಹೇಳಿದರು. ಪಕ್ಷದ ಸಂಸದ ರಾಘವ್ ಚಂದಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ತನಿಖೆಯ ನಂತರ ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.