ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
adani Archives » Dynamic Leader
October 23, 2024
Home Posts tagged adani
ರಾಜಕೀಯ

“ಭಾರತೀಯ ಪ್ರಧಾನಿ ಮೋದಿಯವರೊಂದಿಗಿನ ಅದಾನಿಯವರ ಸ್ನೇಹದಿಂದಾಗಿಯೇ ಕೀನ್ಯಾದಲ್ಲಿ ಅದಾನಿ ವಿರುದ್ಧದ ಆಂದೋಲನ ನಡೆಯುತ್ತಿದೆ” – ಕಾಂಗ್ರೆಸ್

ಕಳೆದ ಕೆಲವು ವರ್ಷಗಳಿಂದ ಕೊರೊನಾ ಪ್ರಭಾವ, ರಷ್ಯಾ-ಉಕ್ರೇನ್ ಯುದ್ಧ ಇತ್ಯಾದಿಗಳಿಂದ ಜಾಗತಿಕವಾಗಿ ಆರ್ಥಿಕತೆಯಲ್ಲಿ ದೊಡ್ಡ ಕುಸಿತ ಕಾಣುತ್ತಿದೆ. ಇದರಿಂದಾಗಿ ವಿಶ್ವಾದ್ಯಂತ ಬಡ್ಡಿ ದರಗಳು ಹೆಚ್ಚಾಗಿದ್ದು, ಜನಸಾಮಾನ್ಯರಷ್ಟೇ ಅಲ್ಲ ಜೆಫ್ ಬೆಜೋಸ್ (Jeff Bezos), ಎಲಾನ್ ಮಸ್ಕ್ (Elon Musk), ಮಾರ್ಕ್ ಜುಕರ್ ಬರ್ಗ್ (Mark Zuckerberg) ರಂತಹ ಶ್ರೀಮಂತರ ಸಂಪತ್ತು 60 ಬಿಲಿಯನ್ ಡಾಲರ್‌ಗಳಷ್ಟು ಕುಸಿತವನ್ನು ಕಂಡಿದೆ.

ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಈ ಆರ್ಥಿಕ ಪರಿಣಾಮ ಭಾರತದಲ್ಲೂ ಪ್ರತಿಧ್ವನಿಸಿದೆ. ಭಾರತೀಯ ರೂಪಾಯಿ ಮೌಲ್ಯ ದಾಖಲೆ ಮಟ್ಟಕ್ಕೆ ಕುಸಿದಿದೆ. ಆದರೆ ಈ ಹಾನಿಯು ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಅದಾನಿ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಮತ್ತು ಅವರ ಆಸ್ತಿ ಮೌಲ್ಯವೂ ತೀವ್ರವಾಗಿ ಏರಿಕೆಯಾಗಿದೆ.

ಇದಕ್ಕೆ ಮುಖ್ಯ ಕಾರಣ, ಪ್ರಧಾನಿ ಮೋದಿ ಜತೆಗಿನ ಅದಾನಿ ನಿಕಟ ಒಡನಾಟವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೋದಿಯವರ ವಿದೇಶ ಪ್ರವಾಸಗಳು ಅದಾನಿಯವರ ವ್ಯಾಪಾರ ಹಿತಾಸಕ್ತಿಗಾಗಿ ಎಂಬ ಟೀಕೆಯೂ ಇದೆ. ಈಗಾಗಲೇ ಶ್ರೀಲಂಕಾದ ವಿದ್ಯುತ್ ಯೋಜನೆಗಳನ್ನು ಅದಾನಿಗೆ ನೀಡುವಂತೆ ಭಾರತ ಸರ್ಕಾರ ಒತ್ತಡ ಹೇರಿತ್ತು ಎಂಬ ದೂರುಗಳಿವೆ.

ಈ ಹಿನ್ನೆಲೆಯಲ್ಲಿ, ಆಫ್ರಿಕಾದ ಕೀನ್ಯಾ ದೇಶದಲ್ಲೂ ಅದಾನಿ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಕೀನ್ಯಾದ ರಾಜಧಾನಿ ನೈರೋಬಿ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಇದಕ್ಕೆ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೇ ಅದಾನಿ ವಿರುದ್ಧ ಕೀನ್ಯಾದಲ್ಲಿ ಪ್ರತಿಭಟನೆ ಕೂಡ ಭುಗಿಲೆದ್ದಿದೆ. ಕೀನ್ಯಾ ಏರ್ಮೆನ್ ಅಸೋಸಿಯೇಷನ್ ಮುಷ್ಕರಕ್ಕೆ ಕರೆ ನೀಡಿದೆ. ಇದನ್ನು ಉಲ್ಲೇಖಿಸಿರುವ ಕಾಂಗ್ರೆಸ್ ಪಕ್ಷ, “ಭಾರತೀಯ ಪ್ರಧಾನಿ ಮೋದಿಯವರೊಂದಿಗಿನ ಅದಾನಿಯವರ ಸ್ನೇಹದಿಂದಾಗಿ ಕೀನ್ಯಾದಲ್ಲಿ ಅದಾನಿ ವಿರುದ್ಧದ ಆಂದೋಲನವು ಭಾರತ ಮತ್ತು ಭಾರತ ಸರ್ಕಾರದ ವಿರುದ್ಧದ ಕೋಪವಾಗಿ ಸುಲಭವಾಗಿ ಬದಲಾಗಬಹುದು”ಎಂದು ಎಚ್ಚರಿಸಿದೆ.

ದೇಶ

ಡಿ.ಸಿ.ಪ್ರಕಾಶ್

“ಭಾರತದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸಿದ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಬಹಿರಂಗಪಡಿಸುವವರನ್ನು ಮೌನಗೊಳಿಸಲು ಮತ್ತು ಬೆದರಿಸುವ ಪ್ರಯತ್ನವಾಗಿ ಸೆಬಿ ನಮಗೆ ಶೋಕಾಸ್ ನೋಟಿಸ್ ಕಳುಹಿಸಿದೆ!” – ಹಿಂಡೆನ್‌ಬರ್ಗ್

ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಗೆ ಸೆಬಿ (SEBI) ವಿವರಣೆ ಕೋರಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಏತನ್ಮಧ್ಯೆ, ಸೆಬಿಯ ನೋಟಿಸ್ ಪಡೆದ ನಂತರ, ಹಿಂಡೆನ್‌ಬರ್ಗ್ ರಿಸರ್ಚ್ ಮತ್ತೊಮ್ಮೆ ವಂಚನೆಯ ಆರೋಪವನ್ನು ಎತ್ತಿದೆ!

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್, ಅದಾನಿ ಸಮೂಹ ಹಲವಾರು ವರ್ಷಗಳಿಂದ ಹಣಕಾಸಿನ ಅಕ್ರಮಗಳಲ್ಲಿ ತೊಡಗಿವೆ ಎಂಬ ವರದಿಯನ್ನು ಕಳೆದ ವರ್ಷದ ಆರಂಭದಲ್ಲಿ ಪ್ರಕಟಿಸಿತು. ಈ ವರದಿಯಿಂದ ಷೇರು ಮೌಲ್ಯದಲ್ಲಿ ಕುಸಿತವನ್ನು ಕಂಡು, ಭಾರೀ ನಷ್ಟವನ್ನು ಎದುರಿಸಿದ ಅದಾನಿ ಸಮೂಹ ಶ್ರೀಮಂತರ ಪಟ್ಟಿಯಿಂದಲೂ ದೂರ ಸರಿಯಿತು.

ಅಲ್ಲದೆ, ಈ ವಿಚಾರ ಸಂಸತ್ತಿನವರೆಗೂ ಪ್ರತಿಧ್ವನಿಸಿತು. ಹಿಂಡೆನ್‌ಬರ್ಗ್ ವರದಿಯ ಸತ್ಯಾಸತ್ಯತೆಯನ್ನು ತನಿಖೆ ಮಾಡಲು ಕೋರಿ ಸಲ್ಲಿಸಲಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್ ಅದಾನಿ ಗ್ರೂಪ್ ವಿರುದ್ಧದ ಪ್ರಕರಣವನ್ನು ಸೆಬಿ ತನಿಖೆ ನಡೆಸಬೇಕು ಎಂದು ತೀರ್ಪು ನೀಡಿದೆ.

ತರುವಾಯ, ಸೆಬಿ ಕಳೆದ ಒಂದುವರೆ ವರ್ಷಗಳಿಂದ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದು, ಈಗ ಸೆಬಿ, ವಿವರಣೆಯನ್ನು ಕೋರಿ ಹಿಂಡೆನ್‌ಬರ್ಗ್ ರಿಸರ್ಚ್ ಕಂಪನಿಗೆ ಶೋಕಾಸ್ ನೋಟಿಸ್ ಕಳುಹಿಸಿದೆ. ಏತನ್ಮಧ್ಯೆ, ಸೆಬಿಯ ನೋಟಿಸ್ ಪಡೆದ ನಂತರ, ಹಿಂಡೆನ್‌ಬರ್ಗ್ ರಿಸರ್ಚ್ ಮತ್ತೊಮ್ಮೆ ವಂಚನೆಯ ಆರೋಪವನ್ನು ಎತ್ತಿದೆ.

ಈ ಬಗ್ಗೆ ಹಿಂಡೆನ್ಬರ್ಗ್, “ಭಾರತದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸಿದ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಬಹಿರಂಗಪಡಿಸುವವರನ್ನು ಮೌನಗೊಳಿಸಲು ಮತ್ತು ಬೆದರಿಸುವ ಪ್ರಯತ್ನವಾಗಿ ಸೆಬಿ ನಮಗೆ ಶೋಕಾಸ್ ನೋಟಿಸ್ ಕಳುಹಿಸಿದೆ. ಸೆಬಿಯಂತಹ ಸಂಸ್ಥೆಗಳು ವಂಚಕರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುತ್ತವೆ ಎಂದು ಹಲವರು ಭಾವಿಸಬಹುದು. ಆದರೆ ಇಲ್ಲಿ ಇದಕ್ಕೆ ವ್ಯತಿರಿಕ್ತವಾಗಿ, ಅಂತಹ ಮೋಸದ ಅಭ್ಯಾಸಗಳನ್ನು ಹೊರ ಜಗತ್ತಿಗೆ ತರುವವರ ಬಗ್ಗೆ ಸೆಬಿ ಹೆಚ್ಚು ಆಸಕ್ತಿ ತೋರುತ್ತಿದೆ” ಎಂದು ಅಪಾದಿಸುವ ಜೊತೆಗೆ ಈ ವಿಚಾರದಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್‌ನ ವಿರುದ್ಧವೂ ಆರೋಪ ಮಾಡಿದೆ. ಅಂದರೆ, ಅದಾನಿ ಷೇರುಗಳನ್ನು ಶಾರ್ಟ್ (Short) ಮಾಡಲು ಹಿಂಡೆನ್‌ಬರ್ಗ್ ಹೂಡಿಕೆದಾರ ಪಾಲುದಾರನನ್ನು (Investor Partner) ಬಳಸಿಕೊಂಡಿದೆ. ಈ ಪಾಲುದಾರರು ಅದಾನಿ ಷೇರುಗಳನ್ನು ಶಾರ್ಟ್ ಮಾಡಲು ನಿಧಿಯನ್ನು (Fund)  ಬಳಸಿದ್ದಾರೆ. ಕೋಟಕ್ ಮಹೀಂದ್ರಾ ಬ್ಯಾಂಕ್ ಈ ನಿಧಿಯನ್ನು ರಚಿಸಿ, ನಿರ್ವಹಿಸಿದೆ ಎಂಬ ಹೊಸ ಆರೋಪವನ್ನು ಎತ್ತಿದೆ.

ಅದಾನಿ ಷೇರುಗಳನ್ನು ಶಾರ್ಟ್ ಮಾಡುವ ಮೂಲಕ ಹಿಂಡೆನ್‌ಬರ್ಗ್ 4.1 ಮಿಲಿಯನ್ ಡಾಲರ್ ಗಳಿಸಿದೆ. ಇದಲ್ಲದೆ, ಅದಾನಿ ಗ್ರೂಪ್‌ನ ಡಾಲರ್ ಬಾಂಡ್‌ಗಳನ್ನು ಶಾರ್ಟ್ ಮಾಡಿದ್ದರಿಂದ ಕೇವಲ 31,000 ಡಾಲರ್ ಮಾತ್ರ ಸಿಕ್ಕಿದೆ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದೆ.

ಆದರೆ ಸೆಬಿಯ ನೋಟಿಸ್‌ನಲ್ಲಿ ಕೋಟಾಕ್ ಕಂಪನಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲದೆ ‘KMIL’ ಎಂಬ ಸಂಕ್ಷಿಪ್ತ ರೂಪವನ್ನು ಮಾತ್ರ ಬಳಸಲಾಗಿದೆ. ಇದರೊಂದಿಗೆ ಕೋಟಕ್ ಬ್ಯಾಂಕ್ ಮತ್ತು ಅದರ ಸಂಸ್ಥಾಪಕ ಉದಯ್ ಕೋಟಕ್ ಅವರನ್ನು ತನಿಖೆಯಿಂದ ಮರೆಮಾಡಲು ಸೆಬಿ ಪ್ರಯತ್ನಿಸುತ್ತಿದೆ ಎಂಬ ಅನುಮಾನವನ್ನೂ ಹಿಂಡೆನ್‌ಬರ್ಗ್ ಹುಟ್ಟುಹಾಕಿದೆ.

ದೇಶ ರಾಜಕೀಯ

ರಾಜಸ್ಥಾನ: ರಾಜಸ್ಥಾನದ ವಲ್ಲಭನಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಮಾತನಾಡಿದರು: “ನಾವು ಬಡವರಿಗೆ ಸಹಾಯ ಮಾಡಿದಾಗ, ಬಿಜೆಪಿ ಪ್ರತಿ ಯೋಜನೆಯಲ್ಲಿ ಕೋಟ್ಯಾಧಿಪತಿಗಳಿಗೆ ಸಹಾಯ ಮಾಡುತ್ತಿದೆ. ಅವರು ಒಂದು ತಂಡವಾಗಿದ್ದಾರೆ. ಅದಾನಿ ಪಿಕ್ ಪಾಕೆಟ್ ಹೊಡೆಯುವಾಗ ಜನರ ದಿಕ್ಕು ತಪ್ಪಿಸುವುದು ಮೋದಿಯ ಕೆಲಸ” ಎಂದು ಹೇಳಿದ್ದಾರೆ.

“ಜಾತಿವಾರು ಜನಗಣತಿಯು ದೇಶದ ಎಕ್ಸ್-ರೇ ( ಕ್ಷ-ಕಿರಣ) ಆಗಿದೆ. ಅದನ್ನು ಮಾಡಬೇಕಾದ ಅವಶ್ಯಕತೆ ಇದೆ. ಕಾಂಗ್ರೆಸ್ ಪಕ್ಷ ಆದಿವಾಸಿಗಳ ಹಕ್ಕುಗಳನ್ನು ರಕ್ಷಿಸುತ್ತದೆ. ಪ್ರಧಾನಿ ಅವರನ್ನು ಒಬಿಸಿ ಎಂದು ಕರೆದುಕೊಳ್ಳುತ್ತಾರೆ. ಆದರೆ ನಾನು ಜಾತಿವಾರು ಜನಗಣತಿಯ ಬಗ್ಗೆ ಮಾತನಾಡುವಾಗ, ಭಾರತದಲ್ಲಿ ಬಡವರು ಎಂಬ ಒಂದೇ ಜಾತಿ ಇದೆ ಎಂದು ಹೇಳುತ್ತಾರೆ. ಆದರೆ ಅದಾನಿ, ಅಂಬಾನಿಯಂತಹ ಕೋಟ್ಯಾಧಿಪತಿಗಳ ಮತ್ತೊಂದು ಜಾತಿ ಅವರಲ್ಲಿದ್ದಾರೆ” ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ನವಂಬರ್ 25 ರಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರಕ್ಕೆ ಇನ್ನು 3 ದಿನ ಮಾತ್ರ ಬಾಕಿ ಉಳಿದಿರುವ ಹಿನ್ನಲೆಯಲ್ಲಿ, ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಭರವಸೆಯನ್ನು ಇಂದು ಬಿಡುಗಡೆ ಮಾಡಿದೆ. ಅದರಲ್ಲಿ “ರೈತರಿಗೆ 2 ಲಕ್ಷ ರೂ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು. ಸ್ವಾಮಿನಾಥನ್ ವರದಿ ಪ್ರಕಾರ ಕನಿಷ್ಠ ಬೆಂಬಲ ಬೆಲೆ ನೀಡಲಾಗುವುದು. ಕಾಂಗ್ರೆಸ್ ಪಕ್ಷ 10 ಲಕ್ಷ ಉದ್ಯೋಗ ಸೃಷ್ಟಿಸಲಿದೆ. ಇದರಲ್ಲಿ 4 ಲಕ್ಷ ಉದ್ಯೋಗಗಳು ಸರ್ಕಾರಿ ವಲಯದಲ್ಲಿ ಸೃಷ್ಟಿಯಾಗಲಿವೆ.

ಪಂಚಾಯತಿ ಮಟ್ಟದ ನೇಮಕಾತಿ ಯೋಜನೆಯನ್ನು ಜಾರಿಗೆ ತರಲಾಗುವುದು. ಜಾತಿವಾರು ಜನಗಣತಿ ನಡೆಸಲಾಗುವುದು. ಈ ವರ್ಷದ ಅಂತ್ಯದ ವೇಳೆಗೆ ರಾಜಸ್ಥಾನದ ಆರ್ಥಿಕತೆ 15 ಸಾವಿರ ಕೋಟಿ ರೂ ಇರಲಿದೆ. ಇದನ್ನು 2030ರ ವೇಳೆಗೆ 30 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ” ಎಂದು ಹೇಳಿದರು.

ದೇಶ

ಅದಾನಿ ವಿಚಾರದಲ್ಲಿ ಸೆಬಿ ಸಂಸ್ಥೆ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಹೇಳಿದ ಸುಳ್ಳುಗಳು ಈಗ ಬಯಲಾಗಿದೆ.

ಕೆಲವು ತಿಂಗಳ ಹಿಂದೆ, ಹೆಸರಾಂತ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಸಂಸ್ಥೆ, ಅದಾನಿ ಸಮೂಹದ ಕಂಪನಿಗಳ ವಿರುದ್ಧ ವಂಚನೆ, ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಮಾಡಿತ್ತು. ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗುವ ಮೂಲಕ ತನ್ನ ಕಂಪನಿಯ ಷೇರು ಬೆಲೆಯನ್ನು ಹೆಚ್ಚಿಸಿಕೊಂಡಿತು ಎಂದು ತನ್ನ ವರದಿಯಲ್ಲಿ ಹಿಂಡೆನ್‌ಬರ್ಗ್ ಆರೋಪಿಸಿತು.

ಈ ವರದಿಯ ನಂತರ, ಅದಾನಿ ಕಂಪನಿಗಳ ಷೇರು ಮೌಲ್ಯಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದರಿಂದಾಗಿ ಅದಾನಿ ಕಂಪನಿಯ ಮೌಲ್ಯವು ಹಲವು ಕೋಟಿ ರೂಪಾಯಿಗಳ ಕುಸಿತವನ್ನು ಕಂಡಿತು. ಇದರಿಂದಾಗಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಅದಾನಿ 24ನೇ ಸ್ಥಾನಕ್ಕೆ ಕುಸಿದರು. ಅವರ ಆಸ್ತಿ ಮೌಲ್ಯವು ಲಕ್ಷ ಕೋಟಿಗಳಷ್ಟು ಕುಸಿದಿದೆ ಎಂದು ವರದಿಯಾಗಿದೆ.

ಅದಾನಿ ಷೇರುಗಳ ಈ ಕುಸಿತದಿಂದ ಅದಾನಿಯಲ್ಲಿ ಹೂಡಿಕೆ ಮಾಡಿದ್ದ ಎಲ್‌ಐಸಿ ಸೇರಿದಂತೆ ಸಾರ್ವಜನಿಕ ವಲಯದ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸಿದೆ. ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ರೂ.30,127 ಕೋಟಿ ಹೂಡಿಕೆ ಮಾಡಿತ್ತು. ಜನವರಿ 24 ರಂದು ಇದರ ಮೌಲ್ಯ ರೂ.72,193.87 ಕೋಟಿಗಳಾಗಿದ್ದರೆ, ಅದಾನಿ ಕಂಪನಿಗಳ ಷೇರು ಮೌಲ್ಯ ಕುಸಿತದಿಂದಾಗಿ ಅದರ ಮೌಲ್ಯ ಈಗ ರೂ.26,861.88 ಕೋಟಿಗೆ ಕುಸಿತವನ್ನು ಕಂಡಿದೆ.

ಏತನ್ಮಧ್ಯೆ, ಹಿಂಡೆನ್‌ಬರ್ಗ್ ಕಂಪನಿಯು ಅದಾನಿ ಸಮೂಹದ ದುಷ್ಕೃತ್ಯಗಳನ್ನು ಬಹಿರಂಗಪಡಿಸುವುದರ ಜೊತೆಯಲ್ಲೇ ಷೇರುಪೇಟೆಯ ಮೇಲೆ ನಿಗಾ ಇಡಲು ಸ್ಥಾಪಿತವಾದ ಸೆಬಿ ಸಂಸ್ಥೆಯು, ಅದಾನಿ ಸಮೂಹದ ಅಕ್ರಮಗಳನ್ನು ತಡೆಯದೆ ಮೌನ ವಹಿಸಿದ್ದನ್ನೂ ಪ್ರಶ್ನಿಸಿತು. ಈ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದಾಗ, ‘ಅದಾನಿ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಸೆಬಿ ಸಂಸ್ಥೆಯ ಪರವಾಗಿ ಉತ್ತರಿಸಲಾಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಇದೇ ಉತ್ತರವನ್ನು ನೀಡಿದ್ದರು.

ಆದರೆ, ಈ ಸಂಬಂಧ ಸುಪ್ರೀಂ ಕೋರ್ಟ್‌ನ ವಿಚಾರಣೆಯಲ್ಲಿ ‘ಅದಾನಿ ಕಂಪನಿಗಳ ಕುರಿತು ಸೆಬಿ ಇನ್ನೂ ವಿಚಾರಣೆ ನಡೆಸಿಲ್ಲ’ ಎಂದು ಹೇಳಿರುವುದು ಅಘಾತವನ್ನು ಉಂಟುಮಾಡಿದೆ. ಈ ಮೂಲಕ ಸಂಸತ್ತಿನಲ್ಲಿ ಸೆಬಿ ಸಂಸ್ಥೆ ಸುಳ್ಳು ಹೇಳಿರುವುದು ಬಯಲಾಗಿದೆ. ‘ಸಂಸತ್ತಿನಲ್ಲಿ ಅದಾನಿ ಕಂಪನಿ ಬಗ್ಗೆ ವಿಚಾರಣೆ ನಡೆಸಿದ್ದೇವೆ’ ಎಂದು ಹೇಳಿದ ಸೆಬಿ, ಸುಪ್ರೀಂ ಕೋರ್ಟ್‌ನಲ್ಲಿ ‘ತನಿಖೆ ನಡೆಸಿಲ್ಲ’ ಎಂದು ಹೇಳುತ್ತಿದೆ. ‘ಅದಾನಿಯನ್ನು ಉಳಿಸಲು ಸೆಬಿ ಪ್ರಯತ್ನಿಸುತ್ತಿದೆ’ ಎಂದು ವಕೀಲ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ರಾಜಕೀಯ

“ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ! ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ! ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ! ಇದೇ ಅಂತರಂಗ ಶುದ್ದಿ ಇದೇ ಬಹಿರಂಗ ಶುದ್ದಿ! – ನರೇಂದ್ರ ಮೋದಿ ಅವರೇ ನಿಮ್ಮ ಇಂದಿನ ಭಾಷಣ ಕೇಳಿ ಬಸವಣ್ಣನವರ ಈ ವಚನ ನೆನಪಾಯಿತು. ಇದು ನಿಮ್ಮ ನಡೆ-ನುಡಿಗೆ ಹೇಳಿ ಮಾಡಿಸಿದಂತಿದೆ”. ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್‌ಗಳನ್ನು ಹಾಕಿ ಪ್ರಧಾನಿ ನರೇಂದ್ರ ಮೋದಿಗೆ ಸರಿಯಾದ ಟಕ್ಕರ್ ನೀಡಿದ್ದಾರೆ.

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎನ್ನುವ ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ ನರೇಂದ್ರ ಮೋದಿ?

ಅದಾನಿ

ರಾಜ್ಯದ ಬಿಜೆಪಿ ಸಚಿವರ 40% ಕಮಿಷನ್ ಕಿರುಕಳದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ? ಕಳೆದ ಮೂರುವರೆ ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳನ್ನು ಲೂಟಿ ಹೊಡೆದಿರುವ ರಾಜ್ಯದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ ನಿಮ್ಮಂತಹ ಭ್ರಷ್ಟರ ಸರ್ಕಾರ ಪಡೆದ ರಾಜ್ಯದ ಜನತೆಗೆ ಇದು ವಿಷಕಾಲ ನರೆಂದ್ರ ಮೋದಿ ಅವರೇ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ? ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದಿರಿ, ಅವರನ್ನು ಎರಡೆರಡು ಬಾರಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದಿರಿ, ಅವರ ಮಗನಿಗೆ ಕನಿಷ್ಠ ಶಾಸಕನನ್ನಾಗಿ ಮಾಡಲಿಲ್ಲ, ಸಚಿವರನ್ನಾಗಿ ಮಾಡಲಿಲ್ಲ. ಈಗ ಐಟಿ, ಇಡಿ, ಸಿಬಿಐ ಮೂಲಕ ಬಾಯಿಮುಚ್ಚಿಸಿ ಕೂರಿಸಿರುವವರು ನೀವೇ ಅಲ್ಲವೇ ನರೇಂದ್ರ ಮೋದಿ ಅವರೇ?

ಬಿ.ಎಸ್.ಯಡಿಯೂರಪ್ಪ

ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ ನರೇಂದ್ರ ಮೋದಿ ಜೀ?

ಲಕ್ಷ್ಮಣ ಸವದಿ

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಲಿಂಗಾಯತರ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಯಾವ ಕಾರಣಕ್ಕೆ ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದಿರಿ? ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿತ್ತಾ? ಸಿಡಿ ಹಗರಣ ಇತ್ತೇ? ಅವರು ಒಳ್ಳೆಯ ಆಡಳಿತಗಾರರರಾಗಿರಲಿಲ್ಲವೇ? ಯಾಕೆ ಅವರನ್ನು ಮೂಲೆಗೆ ತಳ್ಳಿದ್ದೀರಿ? ಅವರ ಈ ಪ್ರಶ್ನೆಗಳು ರಾಜ್ಯದ ಲಿಂಗಾಯತರ ಪ್ರಶ್ನೆಯೂ ಹೌದು. ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ ನರೇಂದ್ರ ಮೋದಿ ಜೀ.

ಜಗದೀಶ್ ಶೆಟ್ಟರ್

ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ ನರೇಂದ್ರ ಮೋದಿ ಅವರೇ?

ಲಂಬಾಣಿ ತಾಂಡಾ

ನರೇಂದ್ರ ಮೋದಿಯವರೇ ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು. ನಮ್ಮ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ ನರೇಂದ್ರ ಮೋದಿ ಜೀ?

ಸೋನಿಯಾ ಗಾಂಧಿಯವರನ್ನು ಜರ್ಸಿ ಕೌ, ಬಾರ್ ಡಾನ್ಸರ್, ಕಾಂಗ್ರೆಸ್ ಕಿ ವಿಧವಾ ಇನ್ನೂ ಏನೇನೋ ಅಂದವರು ನೀವೇ ಅಲ್ಲವೇ? ನಿಮ್ಮದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ತಾನೆ ಸೋನಿಯಾಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿಲ್ಲವೇ? ನಿಮ್ಮ ರಕ್ತದ ಕಣಕಣದಲ್ಲಿಯೂ ದ್ವೇಷಾಸೂಯ ವಿಷ ಇಲ್ಲವೇ ನರೇಂದ್ರ ಮೋದಿ?

ಸೋನಿಯಾ ಗಾಂಧಿ

ರಾಜ್ಯದ ಬಿಜೆಪಿ ಸರ್ಕಾರ 9 ಲಕ್ಷ ಮನೆಗಳನ್ನು ಕಟ್ಟಿದೆ ಎಂಬ ಹಸಿ ಹಸಿ ಸುಳ್ಳು ಹೇಳಿದ್ದಿರಲ್ಲಾ, ನಾವು ಕಟ್ಟಿರುವ ಮನೆಗಳ ಲೆಕ್ಕವನ್ನು ನಿಮಗೆ ಕೊಟ್ಟು ನಿಮ್ಮಿಂದ ಸುಳ್ಳು ಹೇಳಿಸಿದ ವಸತಿ ಸಚಿವರನ್ನು ಒಮ್ಮೆ ಜನರ ಮಧ್ಯೆ ಬಹಿರಂಗ ಚರ್ಚೆಗೆ ಕರೆತನ್ನಿ. ಇದು ನನ್ನ ಸವಾಲು ನರೇಂದ್ರ ಮೋದಿ.

2013-18ರ ಅವಧಿಯಲ್ಲಿ ರೈತರಿಗೆ ಕೊಟ್ಟ ಮಾತಿನಂತೆ 50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ನೀರಾವರಿಗೆ ಖರ್ಚು ಮಾಡಿ ರೈತರ ಹೊಲಕ್ಕೆ ನೀರು ಹರಿಸಿದ ಹೆಮ್ಮೆ ನಮ್ಮದು. ಮೇಕೆದಾಟು, ಕಳಸ-ಬಂಡೂರಿ ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳೆರಡೂ ನಿರ್ಲಕ್ಷಿಸುತ್ತಾ ಬಂದಿದೆ ಎನ್ನುವುದನ್ನು ರಾಜ್ಯದ ರೈತರಿಗೆ ಗೊತ್ತಿದೆ ನರೇಂದ್ರ ಮೋದಿ.

ಕಳಸ-ಬಂಡೂರಿ

ಕಮಿಷನ್ ನುಂಗುವ ಕರ್ನಾಟಕ ಬಿಜೆಪಿ ಸರ್ಕಾರದ ಚಾಳಿ ಮಠ-ಮಂದಿರಗಳನ್ನೂ ಬಿಟ್ಟಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತರ ಕರ್ನಾಟಕದ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೆ ಅದು ತಲುಪುವಾಗ ಕಡ್ಡಿ ಮಾತ್ರ ಉಳಿಯುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳ ಆಕ್ರೋಶ ನಿಮಗೆ ಕೇಳಿಸಿಲ್ಲವೇ ನರೇಂದ್ರ ಮೋದಿ?

ವಿರೂಪಾಕ್ಷಪ್ಪ ಮಾಡಾಳ್

ನಿಮ್ಮದೇ ಪಕ್ಷದ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮತ್ತು ಅವರ ಮಗ ಈಗ ಜೈಲಲ್ಲಿರುವುದು ಯಾವ ದೇಶ ಸೇವೆ ಮಾಡಿದ್ದಕ್ಕಾಗಿ ಮೋದಿಯವರೇ? ಪ್ರತಿಷ್ಠಿತ ಕೆಎಸ್ ಡಿಸಿಎಎಲ್ ಕಚೇರಿಯಲ್ಲಿಯೇ ಈ ಶಾಸಕರ ಮಗ ಲಂಚ ತಿನ್ನುವಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದನ್ನಲ್ಲಾ? ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲಿ ಎಂಟುವರೆ ಕೋಟಿ ಹಣವನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದರಲ್ಲಾ ಅದೇನು ಅವರು ಬೆಳೆದ ಅಡಿಕೆ ಮಾರಾಟದ ದುಡ್ಡೇ ಮೋದಿ? ಎಂದು ಪ್ರಶ್ನೆಗಳನ್ನು ಕೇಳುವ ಮೂಲಕ ಬಿಜೆಪಿಯ ಭ್ರಷ್ಟಾಚಾರ, ಆಡಳಿತ ವೈಫಲ್ಯ, ದ್ವೇಷಾಸೂಯ ರಾಜಕಾರಣದ ಬಗ್ಗೆ ಕಿಡಿ ಕಾರಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಭಾರತದ ಉದ್ಯಮಿ ಅದಾನಿಯು ವಂಚನೆ ಮತ್ತು ಅವ್ಯವಹಾರದ ಆರೋಪಕ್ಕೆ ಒಳಗಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಏಕೆ ಭೇಟಿಯಾದರು?

‘ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಎರಡು ಬಾಂಬ್‌ಗಳು ಸ್ಫೋಟಗೊಳ್ಳಲಿದೆ’ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಉದ್ಯಮಿ ಅಧಾನಿ, ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಗೌತಮ್ ಅದಾನಿಯು ಮುಂಬೈನಲ್ಲಿರುವ ಶರದ್ ಪವಾರ್ ಅವರ ‘ಸಿಲ್ವರ್ ಓಕ್’ ನಿವಾಸಕ್ಕೆ ಏಪ್ರಿಲ್ 20 ರಂದು ಭೇಟಿ ನೀಡಿದರು. ಅಲ್ಲಿ ಶರದ್ ಪವಾರ್ ಮತ್ತು ಅದಾನಿ ಭೇಟಿ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು ಎಂದು ವರದಿಗಳು ಹೇಳುತ್ತವೆ.

ಸುಪ್ರಿಯಾ ಸುಳೆ

ಶರದ್ ಪವಾರ್ ಅವರ ಸಂಬಂಧಿ ಅಜಿತ್ ಪವಾರ್, ಬಿಜೆಪಿಯೊಂದಿಗೆ ಕೈಜೋಡಿಸುತ್ತಾರೆ ಎಂಬ ಊಹಾಪೋಹದ ಸುದ್ಧಿಗಳು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಈ ವೇಳೆಯಲ್ಲಿ, ಇಂತಹ ಭೇಟಿ ನಡೆದಿರುವುದು ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಅಲ್ಲದೆ, ಈ ಭೇಟಿ ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.

ಶರದ್ ಪವಾರ್ ಮತ್ತು ಅದಾನಿ

ಅದಾನಿ ಸಮೂಹವು ವಿವಿಧ ಅಕ್ರಮಗಳಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿಯು ಪುರಾವೆಗಳೊಂದಿಗೆ ಆರೋಪಿಸಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಅದಾನಿಯನ್ನು ಕಟುವಾಗಿ ಟೀಕಿಸಿದವು. ಉದ್ಯಮಿ ಅದಾನಿ ಮತ್ತು ಪ್ರಧಾನಿ ಮೋದಿ ನಡುವಿನ ಸಂಪರ್ಕದ ಬಗ್ಗೆ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದರು. ಮೋದಿ ಮತ್ತು ಅದಾನಿ ಒಟ್ಟಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಫೋಟೋವನ್ನೂ ರಾಹುಲ್ ಗಾಂಧಿ ಸಂಸತ್ತಿನಲ್ಲಿ ತೋರಿಸಿದರು. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಅದಾನಿಯನ್ನು ತೀವ್ರವಾಗಿ ವಿರೋಧಿಸುತ್ತಿದ್ದರೂ ಶರದ್ ಪವಾರ್ ಅದಾನಿಯನ್ನು ಬೆಂಬಲಿಸಿಕೊಂಡು ಬಂದರು.

ರಾಹುಲ್ ಗಾಂಧಿ

ಅದಾನಿ ವಿಚಾರದಲ್ಲಿ ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂಬುದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖ ಬೇಡಿಕೆಯಾಗಿತ್ತು. ಆದರೆ ‘ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿರುವುದರಿಂದ ಸಂಸದೀಯ ಜಂಟಿ ಸಮಿತಿಯ ತನಿಖೆ ಅಗತ್ಯವಿಲ್ಲ’ ಎಂದು ಶರದ್ ಪವಾರ್ ಹೇಳಿದರು. ಮಹಾರಾಷ್ಟ್ರದಲ್ಲಿ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್ ಹಾಗೂ ಗೌತಮ್ ಅದಾನಿ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮಹುವಾ ಮೊಯಿತ್ರಾ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಅದಾನಿ ವಿಚಾರವನ್ನು ತೀವ್ರವಾಗಿ ಟೀಕಿಸಿಕೊಂಡು ಬರುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ನೀಡಿದ ಮಾಹಿತಿಯೊಂದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತು. ಅದೇನೆಂದರೆ, ‘ಗೌತಮ್ ಅಧಾನಿ ನನ್ನನ್ನು ಮತ್ತು ಇತರ ಕೆಲವರನ್ನು ಸ್ನೇಹಿತರ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ’ ಎಂದು ಮಹುವಾ ಮೊಯಿತ್ರಾ ಹೇಳಿದರು.

ಆ ಕೆಲವರಲ್ಲಿ ಶರದ್ ಪವಾರ್ ಕೂಡ ಒಬ್ಬರು ಎಂಬುದು ಈ ಭೇಟಿಯ ಮೂಲಕ ಬಹಿರಂಗವಾಗಿದೆ. ಅವರ ಭೇಟಿಯ ನಂತರ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ, ‘ಯಾವುದೇ ರಾಜಕಾರಣಿ ಉದ್ಯಮಿ ಅದಾನಿಯನ್ನು ಭೇಟಿ ಮಾಡಬಾರದು’ ಎಂದು ಹೇಳಿದರು. ‘ಅದಾನಿ ಜತೆ ಮುಖಾಮುಖಿಯಾಗಿ ಚರ್ಚಿಸಲು ಏನೂ ಇಲ್ಲ. ಹಿಂಡೆನ್‌ಬರ್ಗ್ ವರದಿಯ ಆರೋಪಗಳ ಆಧಾರದ ಮೇಲೆ ಸರ್ಕಾರ ಕ್ರಮ ಕೈಗೊಳ್ಳೂವ ತನಕ ಯಾವುದೇ ರಾಜಕಾರಣಿ ಅದಾನಿಯನ್ನು ಭೇಟಿ ಮಾಡಬಾರದು’ ಎಂದು ಮಹುವಾ ಮೊಯಿತ್ರಾ ಹೇಳುತ್ತಾರೆ. ಮತ್ತು ಶರದ್ ಪವಾರ್ ಅವರು ಅದಾನಿಯನ್ನು ಭೇಟಿಯಾಗಿರುವುದನ್ನೂ ಟೀಕಿಸಿದ್ದಾರೆ.

ಉದ್ಧವ್ ಠಾಕ್ರೆ

ನವೆಂಬರ್ 2019ರಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದರು. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಸೇರಿದಂತೆ ಪಕ್ಷಗಳನ್ನು ಒಳಗೊಂಡ ಮಹಾ ವಿಕಾಸ್ ಅಗಾಡಿ ಸಮ್ಮಿಶ್ರ ಸರ್ಕಾರ ಅಲ್ಲಿ ನಡೆಯಿತು. ಇದ್ದಕ್ಕಿದ್ದಂತೆ ಶಿವಸೇನೆಯಿಂದ ಬೇರ್ಪಟ್ಟ ಏಕನಾಥ್ ಶಿಂಧೆ ರಾಜ್ಯದ ಮುಖ್ಯಮಂತ್ರಿಯಾದರು. ಆಡಳಿತ ಬದಲಾವಣೆಗೂ ಮುನ್ನ ಅದಾನಿ ಮತ್ತು ಶರದ್ ಪವಾರ್ ಭೇಟಿ ನಡೆಯಿತು ಎಂಬುದು ಗಮನಾರ್ಹ.

ಅಜಿತ್ ಪವಾರ್

ಪ್ರಸ್ತುತ ಉದ್ಧವ್ ಠಾಕ್ರೆ ಹೂಡಿರುವ ಪ್ರಕರಣದಲ್ಲಿ ಏಕನಾಥ್ ಶಿಂಧೆ ಬೆಂಬಲಿಗ ಶಾಸಕರು ಅನರ್ಹಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಂದೆ ಯಾರು ಸರ್ಕಾರ ರಚಿಸುತ್ತಾರೆ ಎಂಬ ಪ್ರಶ್ನೆ ಎದ್ದಿದೆ. ಈ ಹಿನ್ನಲೆಯಲ್ಲೇ ಅಜಿತ್ ಪವಾರ್ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಲು ಮುಂದಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಅದಾನಿ ಹಾಗೂ ಶರದ್ ಪವಾರ್ ಭೇಟಿ ನಾನಾ ಊಹಾಪೋಹಗಳಿಗೆ ಕಾರಣವಾಗಿದೆ.

ಏಕನಾಥ್ ಶಿಂಧೆ

ಶರದ್ ಪವಾರ್ ಮತ್ತು ಅದಾನಿ ಭೇಟಿಗೂ ಮಹಾರಾಷ್ಟ್ರ ರಾಜಕಾರಣದ ಮುಂದಿನ ನಡೆಗಳಿಗೂ ಸಂಬಂಧ ಇರುವ ಸಾಧ್ಯತೆಗಳು ಇದೆ ಎಂದೂ ಹೇಳಲಾಗುತ್ತಿದೆ. ಮತ್ತು ಈ ಸಭೆಯಲ್ಲಿ ಹಿಂಡೆನ್‌ಬರ್ಗ್ ವರದಿಯಿಂದ ಉಂಟಾದ ಬಿಕ್ಕಟ್ಟು ಮತ್ತು ವಿರೋಧ ಪಕ್ಷಗಳ ಹೋರಾಟದಿಂದ ಅದಾನಿ ಸಮೂಹಕ್ಕೆ ಉದ್ಭವಿಸಿರುವ ಒತ್ತಡದ ಬಗ್ಗೆಯೂ ಅವರು ಖಂಡಿತವಾಗಿ ಚರ್ಚಿಸಿರುತ್ತಾರೆ ಎಂದು ಹೇಳಲಾಗುತ್ತಿದೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ (BSE) ಅದಾನಿ ಸಮೂಹವು ತನ್ನ ಸಾಲವನ್ನು ಇನ್ನೂ ಪೂರ್ಣವಾಗಿ ಇತ್ಯರ್ಥಪಡಿಸಿಲ್ಲ ಎಂಬ ವರದಿಗಳ ಕುರಿತು ಅದಾನಿಯಿಂದ ವಿವರಣೆ ಕೇಳಿದೆ.

ಅದಾನಿ ಗ್ರೂಪ್ ಕಂಪನಿಗಳು ಲೆಕ್ಕಪತ್ರ ವಂಚನೆ, ತೆರಿಗೆ ವಂಚನೆ ಮತ್ತು ಅಕ್ರಮ ಹಣ ರವಾನೆಯಲ್ಲಿ ತೊಡಗಿವೆ ಎಂದು ಹೆಸರಾಂತ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಎಲ್‌ಎಲ್‌ಸಿ ಆರೋಪಿಸಿತ್ತು. ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗುವ ಮೂಲಕ ತನ್ನ ಕಂಪನಿಯ ಷೇರು ಬೆಲೆಯನ್ನು ಹೆಚ್ಚಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ಆರೋಪಿಸಿತ್ತು.

ಈ ವರದಿಯ ನಂತರ, ಅದಾನಿ ಕಂಪನಿಗಳ ಷೇರು ಮೌಲ್ಯಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದರಿಂದಾಗಿ ಅದಾನಿ ಕಂಪನಿಯ ಮೌಲ್ಯವು ಹಲವು ಕೋಟಿ ರೂಪಾಯಿಗಳ ಕುಸಿತವನ್ನು ಕಂಡಿತು. ಇದರಿಂದಾಗಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಅದಾನಿ 28ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ಆಸ್ತಿ ಮೌಲ್ಯ ಲಕ್ಷ ಕೋಟಿಗಳಷ್ಟು ಕುಸಿದಿದೆ ಎಂದು ವರದಿಯಾಗಿದೆ.

ಅದಾನಿ ಷೇರುಗಳ ಈ ಕುಸಿತದಿಂದ ಅದಾನಿಯಲ್ಲಿ ಹೂಡಿಕೆ ಮಾಡಿದ್ದ LIC ಸೇರಿದಂತೆ ಸಾರ್ವಜನಿಕ ವಲಯದ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸಿವೆ. ಎಲ್ಐಸಿ ಸಂಸ್ಥೆಯು ಅದಾನಿಯ ಕಂಪನಿಗಳಲ್ಲಿ ರೂ.30,127 ಕೋಟಿಯಷ್ಟು ಹಣವನ್ನು ಹೂಡಿಕೆ ಮಾಡಿತ್ತು. ಜನವರಿ 24 ರಂದು ಇದರ ಮೌಲ್ಯ 72,193.87 ಕೋಟಿ ರೂಪಾಯಿಯಾಗಿತ್ತು. ಆದರೆ ಈಗ ಅದಾನಿ ಕಂಪನಿಗಳ ಷೇರು ಮೌಲ್ಯವು ಕಡಿಮೆಯಾಗುತ್ತಿರುವುದರಿಂದ ಈಗ ಅದರ ಮೌಲ್ಯವು ರೂ.26,861.88 ಕೋಟಿಗೆ ಕುಸಿದಿದೆ ಎಂದು ವರದಿಯಾಗಿದೆ.

ಆ ನಂತರ ಭಾರತದಲ್ಲಿ ಉದ್ಯೋಗಿಗಳ PF ಹಣದ ಮೌಲ್ಯವೂ ಅದಾನಿಯಿಂದ ಕಡಿಮೆಯಾಗಿದೆ ಎಂಬ ಅಘಾತಕಾರಿ ಸುದ್ಧಿಯೂ ಈಗ ಹೊರಬರುತ್ತಿದೆ. ಅದಾನಿ ಕಂಪನಿಗಳಾದ ಅದಾನಿ ಎಂಟರ್‌ಪ್ರೈಸ್ ಮತ್ತು ಅದಾನಿ ಪೋರ್ಟ್‌ನ ಷೇರುಗಳಲ್ಲಿ EPFO ಗಣನೀಯ ಪ್ರಮಾಣದ PF ಹಣವನ್ನು ಹೂಡಿಕೆ ಮಾಡಿದೆ. ಇದೀಗ ಅದಾನಿ ಕಂಪನಿಗಳಲ್ಲಿನ ನಷ್ಟದಿಂದಾಗಿ ಈ ಪಿಎಫ್ ಹಣವೂ ಮೌಲ್ಯ ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಅದಾನಿ ಕಂಪನಿಗಳಲ್ಲಿ ಹೂಡಿರುವ ಪಿಎಫ್ ಹಣವನ್ನು ವಾಪಸ್ ನೀಡುವಂತೆ ವ್ಯಾಪಕ ಬೇಡಿಕೆ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಮುಂಬೈ ಷೇರುಪೇಟೆ (BSE) ಅದಾನಿ ಸಮೂಹವು ತನ್ನ ಸಾಲವನ್ನು ಸಂಪೂರ್ಣವಾಗಿ ಇತ್ಯರ್ಥಗೊಳಿಸಿಲ್ಲ ಎಂಬ ಮಾಹಿತಿಗೆ ಸಂಬಂಧಿಸಿದಂತೆ ಅದಾನಿಯಿಂದ ವಿವರಣೆ ಕೇಳಿದೆ. ಅದಾನಿ ಷೇರುಗಳು ಕುಸಿದಿರುವ ಹಿನ್ನಲೆಯಲ್ಲಿಯೇ ಕಂಪನಿಯು ಅವರ ಸಾಲವನ್ನು ತೀರಿಸಲು ಮುಂದಾಯಿತು.

ಆ ನಂತರ ಅದಾನಿ ಕಂಪನಿ ಸಾಲ ಮರುಪಾವತಿಯಾಗಿದೆ ಎಂದು ಹೇಳಿಕೊಂಡಿದ್ದರೂ ಅದಾನಿ ಸಂಪೂರ್ಣವಾಗಿ ಸಾಲ ಮರುಪಾವತಿ ಮಾಡಿಲ್ಲ ಎಂದು ‘ದಿ ಕೆನ್’ (The Ken) ಕಂಪನಿ ತಿಳಿಸಿದೆ. ಅದಾನಿ ಗ್ರೂಪ್ ಇದುವರೆಗೆ ತನ್ನ ಅರ್ಧದಷ್ಟು ಸಾಲವನ್ನು ಮಾತ್ರ ಮರುಪಾವತಿ ಮಾಡಿದೆ. ಆದ್ದರಿಂದಲೇ ಆ ಕಂಪನಿಯ ಷೇರುಗಳನ್ನು ಇನ್ನೂ ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿಲ್ಲ ಎಂದು ‘ದಿ ಕೆನ್’ ನಡೆಸಿದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲೇ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಮುಂಬೈ ಷೇರುಪೇಟೆ (BSE) ಅದಾನಿ ಅವರಿಂದ ವಿವರಣೆ ಕೇಳಿವೆ. ಅದಾನಿ ಗ್ರೂಪ್ ತನ್ನ ಷೇರುಗಳನ್ನು ಅಡಮಾನವಿಟ್ಟು ಪಡೆದ 21.5 ಬಿಲ್ಲಿಯನ್ ಡಾಲರ್ ಸಾಲವನ್ನು ಪಾವತಿಸಿದೆ ಎಂದು ಈಗಾಗಲೇ ಹೇಳಿಕೊಂಡಿದ್ದ ಹಿನ್ನಲೆಯಲ್ಲಿ, ಈಗ ಈ ವರದಿ ಹೊರಬಂದು ಕಂಪನಿಯ ನಿಜವಾದ ಸ್ಥಿತಿಯನ್ನು ಬಹಿರಂಗಪಡಿಸಿದೆ.  

ರಾಜಕೀಯ

ನವದೆಹಲಿ: ಭ್ರಷ್ಟಾಚಾರ ವಿರೋಧಿ ಎಂದು ಬಿಂಬಿಸಿಕೊಳ್ಳುವುದನ್ನು ಮೊದಲು ನಿಲ್ಲಿಸಿ ಎಂದು ಪ್ರಧಾನಿ ಮೋದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದರ ಬಗ್ಗೆ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ‘ಪ್ರಧಾನಿ ನರೇಂದ್ರ ಮೋದಿ ಅವರೇ ಅದಾನಿಯವರ 20,000 ಕೋಟಿ ರೂಪಾಯಿ ಮೌಲ್ಯದ ಶೆಲ್ ಕಂಪನಿಗಳ ಮಾಲೀಕರು ಯಾರು? ಲಲಿತ್ ಮೋದಿ? ನೀರವ್ ಮೋದಿ? ಮೆಹುಲ್ ಚೋಕ್ಸಿ? ವಿಜಯ್ ಮಲ್ಯ? ಜಟಿನ್ ಮೆಹತಾ? ಅಥವಾ “ಭ್ರಷ್ಟಾಚಾರ್ ಭಾಗೋ ಅಭಿಯಾನ” ಸದಸ್ಯರುಗಳೇ? ನೀವು ಆ ಒಕ್ಕೂಟದ ನಾಯಕರೇ? ನಿಮ್ಮನ್ನು ನೀವು ‘ಭ್ರಷ್ಟಾಚಾರ ವಿರೋಧಿ’ ಎಂದು ಬಿಂಬಿಸಿಕೊಳ್ಳುವುದನ್ನು ಮೊದಲು ನಿಲ್ಲಿಸಿ. ಮೊದಲು ನಿಮ್ಮ ಆತ್ಮಸಾಕ್ಷಿಯನ್ನು ಕೇಳಿಕೊಳ್ಳಿ.

ಕರ್ನಾಟಕದಲ್ಲಿ ನಿಮ್ಮ ಸರ್ಕಾರವನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಆರೋಪ ಮಾಡುವುದು ಯಾಕೆ? ಮೇಘಾಲಯದ ನಂಬರ್ ಒನ್ ಭ್ರಷ್ಟ ಸರ್ಕಾರದಲ್ಲಿ ನೀವೇಕೆ ಭಾಗವಾಗಿದ್ದೀರಿ? ರಾಜಸ್ಥಾನದಲ್ಲಿ ಸಂಜೀವನಿ ಸಹಕಾರಿ ಹಗರಣ, ಮಧ್ಯಪ್ರದೇಶದಲ್ಲಿ ಮೆಡಿಷನ್ ಹಗರಣ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ನಾಯಕರು ಎನ್‌ಎಎನ್ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲವೇ? 95ರಷ್ಟು ವಿರೋಧ ಪಕ್ಷದ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆದರೆ ಬಿಜೆಪಿಯಲ್ಲಿರುವ ನಾಯಕರೆಲ್ಲ ವಾಷಿಂಗ್ ಮೆಷಿನ್ ನಿಂದ ಕ್ಲೀನ್ ಆಗಿದ್ದಾರೆಯೇ? Kharge said the Enforcement Directorate is put after 95 percent of opposition leaders while those joining the BJP are cleaned up in a “washing machine”.

ನಿಮಗೆ (ಪ್ರಧಾನಿ) ದೈರ್ಯ ಇದ್ದರೆ, ಪಾರ್ಲಿಮೆಂಟ್ ನಲ್ಲಿ ಜಂಟಿ ಸದನ ಸಮಿತಿಯನ್ನು ಸ್ಥಾಪಿಸಿ, 9 ವರ್ಷಗಳಲ್ಲಿ ಮೊದಲ ಬಾರಿಗೆ ಬಹಿರಂಗ ಪತ್ರಿಕಾಗೋಷ್ಠಿ ಒಂದನ್ನು ನಡೆಸಿ ನೋಡೋಣ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. Stop image makeover by calling yourself anti-corruption crusader: Kharge attacks PM Modi Congress chief Mallikarjun Kharge accused PM Modi of styling himself as an “anti-corruption crusader” while heading an alliance of corrupt individuals like Gautam Adani and Nirav Modi.

ರಾಜಕೀಯ

ನವದೆಹಲಿ: ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ವಿರುದ್ಧ ನಾನು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ. ನಾನು ಯಾವ ಬೆದರಿಕೆಗೂ ಅಂಜುವುದಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಅನರ್ಹಗೊಂಡ ಸಂಸದ ರಾಹುಲ್ ಗಾಂಧಿ ಇಂದು ಪತ್ರಿಕಾ ಘೋಷ್ಟಿಯಲ್ಲಿ ಹೇಳಿದರು.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿದೆ. ಅದಾನಿಗಾಗಿ ವಿವಿಧ ಕಾನೂನುಗಳನ್ನು ಬಗ್ಗಿಸಲಾಗಿದೆ. ನಾನು ಸಂಸತ್ ನಲ್ಲಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆ ಎತ್ತಿದ್ದೆ. ಅವರು ನನ್ನನ್ನು ಮಾತನಾಡದಂತೆ ತಡೆದರು. ರೂ.20 ಸಾವಿರ ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಅದಾನಿಗೆ ಹಣ ಎಲ್ಲಿಂದ ಬಂತು? ಅದು ಯಾರ ಹಣ? ಹಲವು ನಕಲಿ ಕಂಪನಿಗಳ ಮೂಲಕ ಗುಂಪು ಅಕ್ರಮ ನಡೆದಿದೆ. ಚೀನಾ ವ್ಯಕ್ತಿಗೂ ಇದರಲ್ಲಿ ಸಂಬಂಧವಿದೆ. ಅದಾನಿ ಬಗ್ಗೆ ಮಾತನಾಡಿದಾಗಿನಿಂದ ಸಮಸ್ಯೆ ಶುರುವಾಯಿತು.

ನಾನು ಅದಾನಿ ಬಗ್ಗೆ ಮಾತನಾಡುವುದನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ನನ್ನ ಸಂಸದ ಸ್ಥಾನವನ್ನು ಕಿತ್ತುಕೊಳ್ಳಲಾಗಿದೆ. ನಾನು ಭಾರತದ ವಿರುದ್ಧ ಏನನ್ನೂ ಮಾತನಾಡಿಲ್ಲ. ದೇಶ ವಿರೋಧಿ ಶಕ್ತಿಗಳನ್ನು ಹೋರಾಡಿ ಸೋಲಿಸುತ್ತೇನೆ. ಭಾರತವನ್ನು ಅವಮಾನಿಸಿಲ್ಲ. ಅದಾನಿ ಬಗ್ಗೆ ಮಾತನಾಡುವಾಗ ಪ್ರಧಾನಿಯವರ ಕಣ್ಣಲ್ಲಿ ಭಯವನ್ನು ಕಂಡಿದ್ದೆ. ಮುಂದೆ ಏನು ಹೇಳಲು ಹೊರಟಿದ್ದೇನೋ ಎಂಬ ಭಯ ಅವರಿಗಿದೆ.

ನಾನು ಸ್ಪೀಕರ್‌ಗೆ ಬರೆದ ಪತ್ರಕ್ಕೆ ಇನ್ನೂ ಉತ್ತರ ಬಂದಿಲ್ಲ. ನನ್ನ ಕ್ಷೇತ್ರ ವಯನಾಡಿನ ಜನತೆಗೆ ಪತ್ರ ಬರೆಯುಲಿದ್ದೇನೆ. ಈ ದೇಶದ ಜನರು ನನ್ನನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಅವರಲ್ಲಿಯೇ ನ್ಯಾಯ ಕೇಳುತ್ತೇನೆ. ಪ್ರಧಾನಿ ಮೋದಿಯನ್ನು ನೋಡಿ ಹೆದರುವುದಿಲ್ಲ. ನಾನು ಜೈಲಿಗೆ ಹೋಗಲೂ ಹೆದರುವುದಿಲ್ಲ. ನನ್ನ ಸಂಸದ ಸ್ಥಾನವನ್ನು ಕಸಿದುಕೊಂಡರೆ, ನಾನು ಸುಮ್ಮನಿರಲು ಸಾದ್ಯವಿಲ್ಲ. ವಿರೋಧ ಪಕ್ಷಗಳು ನನಗೆ ನೀಡುತ್ತಿರುವ ಬೆಂಬಲಕ್ಕಾಗಿ ಧನ್ಯವಾದಗಳು. ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡದಿದ್ದರೂ ಕೆಲಸ ಮುಂದುವರಿಸುತ್ತೇನೆ. ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ.

ಸಂಸತ್ ನಲ್ಲಿ ಸಚಿವರು ಸುಳ್ಳುಗಳನ್ನು ಹೇಳುತ್ತಿದ್ದಾರೆ. ನಾನು ಪ್ರಶ್ನೆಗಳನ್ನು ಕೇಳುವುದನ್ನು ತಡೆಯಲು ಸಾಧ್ಯವಿಲ್ಲ. ನಾನು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ’ ಎಂದು ರಾಹುಲ್ ಹೇಳಿದರು.

NEW DELHI: Breaking silence over his disqualification from the Lok Sabha, Congress leader Rahul Gandhi hit out at the Narendra Modi-led BJP government reiterating that 

 

ದೇಶ

ಅಮೆರಿಕ ಮೂಲದ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆ ಕಳೆದ ಜನವರಿಯಲ್ಲಿ ವರದಿಯೊಂದನ್ನು ಪ್ರಕಟಿಸಿ, ‘ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹಕ್ಕೆ ಸೇರಿದ 7 ಕಂಪನಿಗಳು ತಮ್ಮ ಆರ್ಥಿಕ ಸ್ಥಿತಿಯನ್ನು ಅವಾಸ್ತವಿಕವಾಗಿ ತೋರಿಸಿ ಷೇರು ಮಾರುಕಟ್ಟೆಯನ್ನು ವಂಚಿಸಿ ಲಾಭ ಮಾಡಿಕೊಳ್ಳುತ್ತಿವೆ’ ಎಂಬ ವರದಿಯನ್ನು ಬಿಡುಗಡೆಗೊಳಿಸಿ ದೇಶಾದ್ಯಂತ ಬಾರಿ ಸಂಚಲನವನ್ನು ಉಂಟು ಮಾಡಿತು. ವಿದೇಶಗಳಲ್ಲಿ ನಕಲಿ ಕಂಪನಿಗಳನ್ನು ಸೃಷ್ಟಿಸಿ ಅಕ್ರಮ ಹಣದ ವಹಿವಾಟು ನಡೆಸುತ್ತಿದ್ದಾರೆ ಎಂದೂ ತನಿಖಾ ವರದಿಯಲ್ಲಿ ಆರೋಪ ಮಾಡಿತ್ತು. ಹಿಂಡೆನ್‌ಬರ್ಗ್ ವರದಿಯಿಂದ ಅದಾನಿ ಗ್ರೂಪ್‌ನ ಷೇರುಗಳನ್ನು ಕುಸಿಯುವಂತೆ ಮಾಡಿತು. ಅದಾನಿ ಗ್ರೂಪ್‌ನಲ್ಲಿನ ಹೂಡಿಕೆಯಿಂದ ಸಾರ್ವಜನಿಕ ವಲಯದ ಉದ್ಯಮಗಳು ಭಾರೀ ನಷ್ಟವನ್ನು ಅನುಭವಿಸಿದವು.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಿ ಸಂಸತ್ತನ್ನು ಸ್ತಬ್ಧಗೊಳಿಸುತ್ತಿವೆ. ಅದಾನಿ ಸಮೂಹದ ಹಗರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ಆದೇಶಿಸಬೇಕು ಎಂದು ಒತ್ತಾಯಿಸುತ್ತಲೇ ಇದೆ. ಸುಪ್ರೀಂ ಕೋರ್ಟ್‌ನಲ್ಲೂ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಶೀಘ್ರದಲ್ಲೇ ಮತ್ತೊಂದು ಬಾಂಬ್ ಸಿಡಿಸುವುದಾಗಿ (ವರದಿಯನ್ನು ಪ್ರಕಟಿಸುವುದಾಗಿ) ಇಂದು ಘೋಷಿಸಿದೆ. ಈ ಘೋಷಣೆಯಿಂದ ಮತ್ತೆ ಸಂಚಲನ ಮೂಡಿಸಿದೆ. ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯ ವರದಿ ಭಾರತೀಯ ಕಂಪನಿಗಳ ಬಗ್ಗೆಯೇ ಅಥವಾ ಅಮೆರಿಕ ಬ್ಯಾಂಕುಗಳ ಬಗ್ಗೆಯೇ? ಎಂದು ಕುತೂಹಲ ಮೂಡಿಸಿದೆ. ಕಾದು ನೋಡೋಣ!

Hindenburg Research Promises Another Bombshell Report:
On March 23, Hindenburg Research, an investment research firm, announced that it will soon be releasing a new report. This announcement comes two months after the firm published a report claiming that India’s Adani Group had engaged in a stock manipulation and accounting fraud scheme over several decades.