ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Adipurush Archives » Dynamic Leader
October 23, 2024
Home Posts tagged Adipurush
ಸಿನಿಮಾ

ಆದಿ ಪುರುಷ ಚಿತ್ರದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಕೇಂದ್ರ ಸೆನ್ಸಾರ್ ಮಂಡಳಿ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ.

ರಾಮಾಯಣವನ್ನು ಆಧರಿಸಿದ ‘ಆದಿ ಪುರುಷ’ ಚಿತ್ರ ಜೂನ್ 16 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ. ಓಂರಾವತ್ ನಿರ್ದೇಶನದಲ್ಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿ ಸನೋನ್, ಸೈಪ್ ಅಲಿ ಖಾನ್, ಸನ್ನಿ ಸಿಂಗ್ ಮತ್ತು ಇತರರು ನಟಿಸಿದ್ದಾರೆ. ಬಿಡುಗಡೆಗೂ ಮುನ್ನ ಚಿತ್ರ ಸಾಕಷ್ಟು ಟೀಕೆ ಮತ್ತು ವಿವಾದಗಳನ್ನು ಎದುರಿಸಿತ್ತು. ಅದರಲ್ಲೂ ಚಿತ್ರದ ಗ್ರಾಫಿಕ್ಸ್ ತುಂಬಾ ಕಳಪೆಯಾಗಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಆದರೂ ಚಿತ್ರ ಬಿಡುಗಡೆಯಾದ ನಂತರ ಬಾಕ್ಸ್ ಆಫೀಸ್ ಹಿಟ್ ಆಗಿತ್ತು.

ಈ ಹಿನ್ನಲೆಯಲ್ಲಿ ‘ಆದಿ ಪುರುಷ’ ಚಿತ್ರದಲ್ಲಿನ ಸಂಭಾಷಣೆ ಮತ್ತು ದೃಶ್ಯಗಳ ವಿರುದ್ಧ ಅಲಹಾಬಾದ್ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳು ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾಣ್ ಮತ್ತು ಶ್ರೀಪ್ರಕಾಶ್ ಸಿಂಗ್ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬಂದವು. ಆಗ ಚಿತ್ರದ ದೃಶ್ಯಗಳ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಕೇಂದ್ರ ಸೆನ್ಸಾರ್ ಮಂಡಳಿ ವಿವರಣೆ ನೀಡಬೇಕು ಎಂದು ನ್ಯಾಯಮೂರ್ತಿಗಳು ಆದೇಶಿಸಿದರು. ಮುಂದುವರೆದು, ಚಿತ್ರದ ನಿರ್ಮಾಪಕರ ಮನಸ್ಥಿತಿಯನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, “ಅವರು ಕುರಾನ್, ಬೈಬಲ್ ಇತ್ಯಾದಿಗಳ ವಾಕ್ಯಗಳನ್ನು ಮುಟ್ಟಬಾರದು ಎಂಬ ಗಾಬರಿಯಲ್ಲಿ ಇರುತ್ತಾರೆ” ಎಂದರು.

ಅಲಹಾಬಾದ್ ಹೈಕೋರ್ಟ್‌

“ಇತ್ತೀಚೆಗೆ ಬಿಡುಗಡೆಯಾಗುವ ಕೆಲವು ಚಲನಚಿತ್ರಗಳಲ್ಲಿ ಹಿಂದೂ ದೇವರುಗಳು ಮತ್ತು ಸ್ವಾಮೀಜಿಗಳನ್ನು ಅಪಹಾಸ್ಯ ಮಾಡುವುದು ಸಾಮಾನ್ಯವಾಗಿದೆ. ಆದಿ ಪುರುಷ ಚಿತ್ರಕ್ಕೆ ಕೇಂದ್ರ ಸೆನ್ಸಾರ್ ಮಂಡಳಿ ಅನುಮತಿ ನೀಡಿದ್ದು ದೊಡ್ಡ ತಪ್ಪು; ಚಿತ್ರದಲ್ಲಿ ರಾಮಾಯಣದ ಧಾರ್ಮಿಕ ಪಾತ್ರಗಳನ್ನು ಚಿತ್ರಿಸಿರುವ ರೀತಿ ಹಲವರ ಭಾವನೆಗಳಿಗೆ ಧಕ್ಕೆ ತಂದಿದೆ. ಹಲವು ವಿವಾದಗಳಿರುವ ಚಿತ್ರದಲ್ಲಿ ‘ನಾವು ಹಕ್ಕು ನಿರಾಕರಣೆ ಪೋಸ್ಟ್ ಮಾಡಿದ್ದೇವೆ’ ಎಂದು ಚಿತ್ರತಂಡ ವಾದಿಸುತ್ತಿರುವುದು ವಿಚಿತ್ರವಾಗಿದೆ.

ಕುರಾನ್, ಬೈಬಲ್ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಿಸಿ ನೋಡಿ; ಏನಾಗುತ್ತೆ ಎಂದು ನಂತರ ತಿಳಿಯುತ್ತೆ” ಎಂದು ತಿಳಿಸಿದ ನ್ಯಾಯಾಧೀಶರು, ವಿಚಾರಣೆ ವೇಳೆ ಗೈರಾಗಿದ್ದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ನೋಟಿಸ್‌ ಕಳುಹಿಸುವಂತೆ ಆದೇಶಿಸಿ ಮುಂದಿನ ವಿಚಾರಣೆಯನ್ನು ಮುಂದಿನ ಬುಧವಾರಕ್ಕೆ ಮುಂದೂಡಿದರು.

ಸಿನಿಮಾ

ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾ ರಾಮಾಯಣ ಕಥೆಯನ್ನಾಧರಿಸಿ ತೆರೆಕಂಡಿದೆ. ಇದರಲ್ಲಿ ರಾಮನಾಗಿ ಪ್ರಭಾಸ್, ರಾವಣನಾಗಿ ಸೈಫ್ ಅಲಿ ಖಾನ್ ಮತ್ತು ಸೀತೆಯಾಗಿ ಕೀರ್ತಿ ಸನನ್ ನಟಿಸಿದ್ದಾರೆ. ಅದ್ಧೂರಿ ಚಿತ್ರವನ್ನು ಡಿ ಸಿರೀಸ್ ಮತ್ತು ರೆಟ್ರೋ ಪೈಲ್ಸ್ ಜಂಟಿಯಾಗಿ ನಿರ್ಮಿಸಿವೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇತರ ಭಾಷೆಗಳಲ್ಲಿ 3ಡಿ ತಂತ್ರಜ್ಞಾನದಲ್ಲಿ ಆದಿಪುರುಷ ಚಿತ್ರ ನಿನ್ನೆ (ಜೂನ್ 16) ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ.

ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಆದಿಪುರುಷ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಭಾಸ್ ಅಭಿಮಾನಿಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಚಿತ್ರವಾಗಿ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂಬ ನೆಗೆಟಿವ್ ವಿಮರ್ಶೆಗಳೂ ಬಂದಿವೆ.

ಸುಮಾರು ರೂ.500 ಕೋಟಿ ಬಜೆಟ್ ನಲ್ಲಿ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದೊಂದಿಗೆ ತಯಾರಾಗಿರುವ ಚಿತ್ರದ ಅನಿಮೇಷನ್ ದೃಶ್ಯಗಳನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ. VFX ದೃಶ್ಯಗಳು ಇನ್ನೂ ಚೆನ್ನಾಗಿರಬಹುದಿತ್ತು ಎಂಬುದು ಹೆಚ್ಚಿನ ಅಭಿಮಾನಿಗಳ ಸಾಮಾನ್ಯ ಅಭಿಪ್ರಾಯವಾಗಿದೆ.

ಈ ಹಿನ್ನಲೆಯಲ್ಲಿ ಹಿಂದೂಸೇನಾ ಸಂಘಟನೆಯು ಆದಿಪುರುಷ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ರಾಮಾಯಣ ಕಥೆಯಾಧಾರಿತ ಆದಿಪುರುಷ ಸಿನಿಮಾದಲ್ಲಿ ವಿವಾದಾತ್ಮಕ ದೃಶ್ಯಗಳಿದ್ದು, ಅದನ್ನು ತೆಗೆಯಬೇಕು ಎಂದು ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಮ, ರಾಮಾಯಣ, ಹಿಂದೂ ಸಂಸ್ಕೃತಿಯನ್ನು ಗೇಲಿ ಮಾಡಲಿಕ್ಕಾಗಿ ಆದಿಪುರುಷ ಸಿನಿಮಾ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿಂದೆ, ಆದಿಪುರುಷ ಚಿತ್ರದಲ್ಲಿ, ಸೀತೆಯನ್ನು ಭಾರತದ ಮಗಳು ಎಂದು ಉಲ್ಲೇಖಿಸಿದ್ದಕ್ಕಾಗಿ ನೇಪಾಳದಲ್ಲಿ ತೀವ್ರ ಪ್ರತಿಭಟನೆಯನ್ನು ಹುಟ್ಟುಹಾಕಿತ್ತು. ರಾಮಾಯಣದ ಪ್ರಕಾರ ಸೀತೆ ನೇಪಾಳದಲ್ಲಿ ಜನಿಸಿದವಳು. ರಾಮ ಬಂದು ಸೀತೆಯನ್ನು ಮದುವೆಯಾಗುತ್ತಾರೆ.

ಇದಾದ ನಂತರ ನೇಪಾಳದ ಕಠ್ಮಂಡುವಿನ ಮೇಯರ್ ಬಲೇನ್ ಶಾ ಟ್ವೀಟ್ ಮಾಡಿ, “ಸೀತೆ ಭಾರತದ ಮಗಳು ಎಂಬ ವಿವಾದಾತ್ಮಕ ದೃಶ್ಯವನ್ನು ತೆಗೆದುಹಾಕದಿದ್ದರೆ ನೇಪಾಳದಲ್ಲಿ ಆದಿಪುರುಷ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ. ಆ ನಂತರ ಆದಿಪುರುಷ ಚಿತ್ರತಂಡ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಆ ಸಂಭಾಷಣೆಯನ್ನು ತೆಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.