ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Adoor Gopalakrishnan Archives » Dynamic Leader
October 23, 2024
Home Posts tagged Adoor Gopalakrishnan
ಸಿನಿಮಾ
  • ಪ್ರತಿಬನ್ ಪ್ರಕಾಶ್

ಒಟಿಟಿಯಿಂದ ಚಿತ್ರರಂಗ ನಾಶವಾಗುತ್ತದೆ ಎಂದು ಕೇರಳದ ಖ್ಯಾತ ನಿರ್ದೇಶಕ ಅಡೂರು ಗೋಪಾಲಕೃಷ್ಣನ್ ಎಚ್ಚರಿಸಿದ್ದಾರೆ.

‘ಸ್ವಯಂವರಂ’, ‘ಎಲಿ ಪತ್ತಾಯಂ’, ‘ನಾಲು ಪೆನ್ನುಗಳ್’ ಮುಂತಾದ 12ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ದೇಶಿಸಿ, 16 ರಾಷ್ಟ್ರೀಯ ಪ್ರಶಸ್ತಿ, 18 ಕೇರಳ ರಾಜ್ಯ ಪ್ರಶಸ್ತಿ, 2004ರಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡವರು ಅಡೂರು ಗೋಪಾಲಕೃಷ್ಣನ್ (80)

ಕೆಲವು ದಿನಗಳ ಹಿಂದೆ ಅವರು ನೀಡಿದ ಸಂದರ್ಶನವೊಂದರಲ್ಲಿ ‘ಚಿತ್ರ ಮಂದಿರಗಳಲ್ಲಿ ಸಿನಿಮಾ ನೋಡುವುದೆಂಬುದು ಒಂದು ಸಾಮಾಜಿಕ ಅನುಭವ. ಅದನ್ನು ಕಿರು ತೆರೆಯಲ್ಲಿ ನೋಡುವುದು ಹೇಗೆ? ಕೊರೊನಾ ಕಾರಣದಿಂದ ಮನೆಯಲ್ಲೇ ಉಳಿದುಕೊಂಡ ನಾವು, ಒಟಿಟಿಗೆ ಒಗ್ಗಿಕೊಂಡೆವು. ಆದರೇ ಸಿನಿಮಾ ಜೀವಂತವಾಗಿರಬೇಕಾದರೆ, ಅದು ಕಿರುತೆರೆಯನ್ನು ನಂಬಿರಬಾರದು. ನಿರ್ದಿಷ್ಟವಾಗಿ ಹೇಳಬೇಕಾದರೆ, ಒಟಿಟಿಗಾಗಿ ತಯಾರಿಸಲ್ಪಡುವ ಸಿನಿಮಾಗಳು, ಸಿನಿಮಾ ಸಂಸ್ಕೃತಿಯನ್ನೇ ನಾಶಮಾಡಿಬಿಡುತ್ತದೆ’ ಎಂದು ಎಚ್ಚರಿಸಿದ್ದಾರೆ.