ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Ambedkar Statue Archives » Dynamic Leader
October 23, 2024
Home Posts tagged Ambedkar Statue
ರಾಜ್ಯ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಕಲಬುರಗಿ ಕೋಟನೂರ್ ಪ್ರದೇಶದಲ್ಲಿ ಅವಮಾನ ಮಾಡಿದ ಕೃತ್ಯ ಖಂಡನಾರ್ಹ. ಅವಮಾನಿಸಿ ಪಟಾಕಿ ಸಿಡಿಸಿ ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕದ ಅಧ್ಯಕ್ಷರಾದ ಅಡ್ವಕೇಟ್ ತಾಹೇರ್ ಹುಸೇನ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಸಂವಿಧಾನಕ್ಕೆ ಅಪಚಾರಗೈದಂತೆ. ಇತ್ತೀಚೆಗೆ ಇಂತಹಾ ಕಿಡಿಗೇಡಿ ಕೃತ್ಯಗಳು ವ್ಯಾಪಕವಾಗುತ್ತಿದೆ. ಆಡಳಿತದ ಬಗ್ಗೆ ಮತ್ತೆ ಕಾನೂನಿನ ಬಗ್ಗೆ ಭಯವಿಲ್ಲದಿರುವುದೇ ಇಂತಹ ದುಷ್ಕೃತ್ಯ ಮರುಕಳಿಸಲು ಕಾರಣವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಮುಂದುವರಿಯಬೇಕು.

ದಲಿತರ ಪರ ಹಕ್ಕುಗಳಿಗಾಗಿ ಹೋರಾಡಿ, ದೇಶಕ್ಕೆ ಸಂವಿಧಾನವನ್ನು ರಚಿಸಿದ ಓರ್ವ ಮಹಾನ್ ವ್ಯಕ್ತಿಯನ್ನು ಅವಮಾನಿಸಿ ಅದೇನು ಸಾಧಿಸಿತ್ತಾರೆ?  ಜನರ ಭಾವನೆ ಕೆರಳಿಸಿ ಸಮಾಜದ ಶಾಂತಿ, ನೆಮ್ಮದಿ ಕೆಡಿಸುವುದೇ ಇಂತಹವರ ಗುರಿಯಾಗಿದೆ. ಅಪರಾಧಿಗಳನ್ನು ಬಂಧಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಲು ಸರಕಾರ ಹಿಂಜರಿಯಬಾರದು.

ಇಂತಹ ಸಮಾಜಘಾತುಕ ಶಕ್ತಿಗಳನ್ನು ಕೂಡಲೇ ಜಿಲ್ಲೆಯಿಂದ ಗಡಿಪಾರು ಮಾಡಬೇಕಾಗಿದೆ. ಇಂತಹ ಕುಕೃತ್ಯಗಳು ಕಡಿಮೆಯಾಗಳು ಸರ್ಕಾರ ಎಲ್ಲಾ ಆಯಮಗಳಲ್ಲೂ ಚಿಂತಿಸಬೇಕು ಎಂದು ತಾಹೇರ್ ಹುಸೇನ್ ಆಗ್ರಹಿಸಿದ್ದಾರೆ.

ದೇಶ

ನವದೆಹಲಿ: ಭಾರತೀಯ ಪ್ರಜಾಪ್ರಭುತ್ವಕ್ಕೆ ಮಾರ್ಗದರ್ಶನ ನೀಡುವ ಸಂವಿಧಾನವನ್ನು, ಭಾರತೀಯ ಸಂವಿಧಾನ ಸಭೆಯಿಂದ ರಚಿಸಿ 1949, ನವೆಂಬರ್ 26 ರಂದು ಭಾರತದ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಈ ನಿಟ್ಟಿನಲ್ಲಿ 2015 ರಿಂದ ಪ್ರತಿ ವರ್ಷ ನವೆಂಬರ್ 26 ಅನ್ನು ದೇಶದಾದ್ಯಂತ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ.

ಇಂದು ದೇಶಾದ್ಯಂತ, ಸಂವಿಧಾನವನ್ನು ರಚಿಸಿದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಉನ್ನತ ವಿಚಾರಧಾರೆ ಮತ್ತು ತತ್ವಗಳನ್ನು ಸ್ಮರಿಸುವ ಹಲವು ಕಾರ್ಯಕ್ರಮಗಳು ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ, ಇಂದು ಭಾರತೀಯ ನ್ಯಾಯಾಂಗದ ಪ್ರಧಾನ ಕಛೇರಿಯಾಗಿರುವ ಸುಪ್ರೀಂ ಕೋರ್ಟ್ ಸಂಕೀರ್ಣದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 7 ಅಡಿ ಎತ್ತರದ ಪ್ರತಿಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು.

ರಾಷ್ಟ್ರಪತಿಯವರೊಂದಿಗೆ ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಬೇಡ್ಕರ್ ಅವರು ವಕೀಲರ ಉಡುಪು ಧರಿಸಿ ಕೈಯಲ್ಲಿ ಭಾರತದ ಸಂವಿಧಾನವನ್ನು ಹಿಡಿದಿರುವಂತೆ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಹಲವು ವಕೀಲರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ನ್ಯಾಯಾಲಯದ ಆವರಣದಲ್ಲಿ ಸ್ಥಾಪಿಸುವಂತೆ ಮನವಿ ಸಲ್ಲಿಸಿದ್ದರು ಎಂಬುದು ಗಮನಾರ್ಹ.

ದೇಶ

ಅಕ್ಟೋಬರ್ 14, 1956 ರಂದು, ಡಾ.ಬಿ.ಆರ್.ಅಂಬೇಡ್ಕರ್ ರವರು ದೀಕ್ಷಾ ಭೂಮಿಯಲ್ಲಿ ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಅವರು ಮತಾಂತಗೊಂಡ ದಿನವನ್ನು “ಧಮ್ಮ ಚಕ್ರ ಪ್ರವರ್ತನ ದಿನ” ಎಂದು ಆಚರಿಸಲಾಗುತ್ತದೆ.

ಈ ಹಿನ್ನಲೆಯಲ್ಲಿ ಅಮೆರಿಕಾದಲ್ಲಿ, ಅಕ್ಟೋಬರ್ 14 ರಂದು ಮೇರಿಲ್ಯಾಂಡ್ ಅಕ್ಕೋಕೀಕ್ (Accokeek) ಪ್ರದೇಶದ 13 ಎಕರೆ ಜಾಗದಲ್ಲಿ ನಿರ್ಮಿಸುತ್ತಿರುವ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ (AIC) “ಸಮಾನತೆಯ ಪ್ರತಿಮೆ” (Statue of Equality) ಎಂದು ಹೆಸರಿಸಲಾದ 19 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲಿದ್ದಾರೆ.

ಈ ಪ್ರತಿಮೆಯನ್ನು ಭಾರತದ ಗುಜರಾತ್ ರಾಜ್ಯದಲ್ಲಿ “ಏಕತೆಯ ಪ್ರತಿಮೆ” (Statue of Unity) ಎಂಬ ಹೆಸರಿನಲ್ಲಿ ಭಾರತೀಯ ಸ್ವಾತಂತ್ರ್ಯ ಹೋರಾಟದ ನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ (Ram Sutar) ಈ ವಿಗ್ರಹವನ್ನೂ ರಚಿಸಿದ್ದಾರೆ.

ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಸಮಾರಂಭಕ್ಕೆ ವಿಶ್ವದಾದ್ಯಂತ ಹಲವು ಗಣ್ಯರು ಆಗಮಿಸುವ ನಿರೀಕ್ಷೆ ಇದೆ.