ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Animal Fat Archives » Dynamic Leader
October 16, 2024
Home Posts tagged Animal Fat
ರಾಜಕೀಯ

ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಪವನ್ ಕಲ್ಯಾಣ್ ವಿರುದ್ಧ ದೂರು ದಾಖಲಾಗಿದೆ!

ಅಮರಾವತಿ,
‘ತಿರುಪತಿ ದೇವಸ್ಥಾನದ ಲಡ್ಡುಗಳಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದ್ದು, ಈ ಲಡ್ಡುಗಳನ್ನು ಅಯೋಧ್ಯೆಗೂ ಕಳುಹಿಸಿಕೊಡಲಾಗಿತ್ತು’ ಎಂದು ಆಂಧ್ರ ಉಪ ಮುಖ್ಯಮಂತ್ರಿ ಹಾಗೂ ತೆಲುಗು ನಟ ಪವನ್ ಕಲ್ಯಾಣ್ ಆರೋಪಿಸಿ ವಿವಾದ ಸೃಷ್ಟಿಸಿದ್ದರು.

ಇದರ ಬೆನ್ನಲ್ಲೇ, ಪ್ರಜಾ ಶಾಂತಿ ಪಕ್ಷದ ನಾಯಕ ಕೆ.ಎ.ಪಾಲ್ (K.A.Paul) ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಪವನ್ ಕಲ್ಯಾಣ್ ವಿರುದ್ಧ ದೂರು ದಾಖಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎ.ಪಾಲ್,

“ಪವನ್ ಕಲ್ಯಾಣ್ ಅವರ ಹೇಳಿಕೆ ಹುಚ್ಚುತನದಿಂದ ಕೂಡಿದೆ. ಪ್ರಾಣಿಗಳ ಕೊಬ್ಬನ್ನು ಬೆರೆಸಿದ ಒಂದು ಲಕ್ಷ ಲಡ್ಡನ್ನು ಅಯೋಧ್ಯೆಯ ರಾಮಮಂದಿರಕ್ಕೆ ಸಿದ್ಧಪಡಿಸಿ ಕಳುಹಿಸಿಕೊಡಲಾಗಿದೆ ಎಂದು ಆರೋಪಿಸಿದ್ದಾರೆ. ಅಯೋಧ್ಯೆ ರಾಮಮಂದಿರ ಕಾರ್ಯಕ್ರಮ ಜನವರಿಯಲ್ಲಿ ನಡೆದಿತ್ತು. ಆದರೆ ಜುಲೈನಲ್ಲೇ ಚಂದ್ರಬಾಬು ನಾಯ್ಡು ಲಡ್ಡುವಿನಲ್ಲಿ ಕಲಬೆರಕೆ ಮಾಡಿರುವ ವಿಷಯವನ್ನು ಬಹಿರಂಗಪಡಿಸಿದ್ದರು. ಹೀಗಿರುವಾಗ, ಜನವರಿಯಲ್ಲಿ ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ನಡೆದಿರುವುದು ಇವರಿಗೆ ಹೇಗೆ ಗೊತ್ತು? ಹಾಗಾಗಿ ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತಿರುವ ಪವನ್ ಕಲ್ಯಾಣ್ ವಿರುದ್ಧ ಕ್ರಮ ಕೈಗೊಂಡು ಬಂಧಿಸಬೇಕು. ಇದನ್ನು ಒತ್ತಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಮನವಿ ಪತ್ರ ಕಳುಹಿಸಿದ್ದೇನೆ” ಎಂದು ಹೇಳಿದ್ದಾರೆ.