ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Arrest Archives » Dynamic Leader
October 23, 2024
Home Posts tagged Arrest
ಕ್ರೈಂ ರಿಪೋರ್ಟ್ಸ್ ದೇಶ

ಕೋಲ್ಕತ್ತಾ: ಕೋಲ್ಕತ್ತಾ ಸರ್ಕಾರಿ ಆಸ್ಪತ್ರೆಯಲ್ಲಿ 26 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಅದನ್ನು ಚಿತ್ರೀಕರಿಸಿದ ಆಸ್ಪತ್ರೆ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್‌.ಜಿ.ಕರ್ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯದಲ್ಲಿ ಯುವ ಟ್ರೈನಿ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಗೆ ನ್ಯಾಯ ಕೇಳಿ ವೈದ್ಯರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಲೈಂಗಿಕ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮಹಿಳಾ ವೈದ್ಯೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಕೋಲಾಹಲ, ಉದ್ವೇಗ ಕಡಿಮೆಯಾಗುವ ಮುನ್ನ, ಇದೇ ಕೋಲ್ಕತ್ತಾದಲ್ಲಿ ಸರ್ಕಾರಿ ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಆಸ್ಪತ್ರೆಯ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು ಭಾರೀ ಆಘಾತವನ್ನುಂಟು ಮಾಡಿದೆ.

ಆ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ 26 ವರ್ಷದ ಮಹಿಳೆಯೊಬ್ಬರು ತಮ್ಮ ಮಗುವನ್ನು ಚಿಕಿತ್ಸೆಗಾಗಿ ದಾಖಲಿಸಿದ್ದರು. ರಾತ್ರಿ ಮಗುವಿನ ಪಕ್ಕದಲ್ಲಿ ಮಲಗಿದ್ದ ಅವರಿಗೆ, ಅಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿರುವ ತನಯ್ ಪಾಲ್ (26) ಎಂಬುವನು ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ, ಅದನ್ನು ತನ್ನ ಮೊಬೈಲ್‌ನಲ್ಲೂ ಚಿತ್ರೀಕರಿಸಿಕೊಂಡಿದ್ದಾನೆ.

ಇದರಿಂದ ಆಘಾತಕ್ಕೊಳಗಾದ ಮಹಿಳೆ ದೌರ್ಜನ್ಯದ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾರ್ಡ್ ಬಾಯ್ ತನಯ್ ಪಾಲ್ ನನ್ನು ಬಂಧಿಸಿ ಆತನ ಸೆಲ್ ಫೋನ್ ಜಪ್ತಿ ಮಾಡಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಅಂತೆಯೇ, ಕಳೆದ ತಿಂಗಳು, ಬಿರ್ಬಮ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಲೈಂಗಿಕ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಬಲವಾಗುತ್ತಿದೆ.

ದೇಶ

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರನ್ ಅವರನ್ನು ನಿನ್ನೆ ರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಏಳು ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈ ಹಿನ್ನಲೆಯಲ್ಲಿ, ಜಾರಿ ಇಲಾಖೆಯ ಕ್ರಮದ ವಿರುದ್ಧ ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ರಾತ್ರಿ ಬಂಧನವಾದ ನಂತರ, ಅವರು ತಮ್ಮ ‘ಎಕ್ಸ್’ ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಸಂದೇಶದಲ್ಲಿ, “ಇದೊಂದು ವಿರಾಮ. ಜೀವನವು ಒಂದು ದೊಡ್ಡ ಯುದ್ಧವಾಗಿದೆ. ನಾನು ಪ್ರತಿ ಕ್ಷಣವೂ ಹೋರಾಡಿದೆ; ಪ್ರತಿ ಕ್ಷಣವೂ ಹೋರಾಡುತ್ತೇನೆ. ಆದರೆ, ನಾನು ರಾಜಿ ಮಾಡಿಕೊಳ್ಳಲು ಮಂಡಿಯೂರುವುದಿಲ್ಲ” ಎಂದು ಹೇಳಿದ್ದಾರೆ.

“ಸೋಲು ಅಥವಾ ಗೆಲವು ನಾನು ಯಾವುದಕ್ಕೂ ಹೆದರುವುದಿಲ್ಲ; ನಾನು ಸೋಲನ್ನು ಒಪ್ಪಿಕೊಳ್ಳುವುದಿಲ್ಲ” ಎಂದು ಹೇಮಂತ್ ಸೋರೆನ್ ಹೇಳಿದ್ದಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಕಳೆದ ಅಕ್ಟೋಬರ್ 17 ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಹಲಸೂರು ಪೊಲೀಸರು ಇಬ್ಬರ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಅವರುಗಳು ನೀಡಿದ ಮಾಹಿತಿಯ ಮೇರೆಗೆ 5 ಲಕ್ಷ 50 ಸಾವಿರ ರೂಪಯಿಗಳ ಮೌಲ್ಯದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಂದು ಸ್ಮಾರ್ಟ್ ವಾಚನ್ನು ವಶಪಡಿಸಿಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಹಲಸೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು.

ದಸ್ತಗಿರಿ ಮಾಡಿದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಈ ಹಿಂದೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ, ಪುಲಿಕೇಶಿನಗರ, ಭಾರತಿನಗರ, ಹೆಬ್ಬಾಳ, ಕೆ.ಆರ್.ಪುರಂ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾಬರಿ ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿದ್ದು ಕಂಡುಬಂದಿರುತ್ತದೆ.

ಈ ಕಾರ್ಯಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ.ದೇವರಾಜ್ ರವರ ಮಾರ್ಗದರ್ಶನದಲ್ಲಿ ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಿ.ರಾಮಚಂದ್ರ ರವರ ನೇತೃತ್ವದಲ್ಲಿ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಸಂತೋಷ್ ಹಾಗೂ ಸಿಬ್ಬಂಧಿ ವರ್ಗದವರು ಈ ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.  

ದೇಶ ರಾಜಕೀಯ

ತೆಲುಗು ದೇಶಂ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಯುವ ಕೌಶಲ್ಯಾಭಿವೃದ್ಧಿ ತರಬೇತಿಯಲ್ಲಿ ಭ್ರಷ್ಟಾಚಾರ:
2015ರಲ್ಲಿ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅಧಿಕಾರದಲ್ಲಿದ್ದಾಗ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 3,350 ಕೋಟಿ ರೂ.ಗಳ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು. ಈ ಯೋಜನೆಯಲ್ಲಿ ರಾಜ್ಯ ಸರ್ಕಾರ ಶೇ.10 ರಷ್ಟು ಪಾಲು ಪಾವತಿಸಬೇಕು. ಆದರೆ, ರಾಜ್ಯ ಸರ್ಕಾರದ ಪಾಲಿನ 240 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ನಕಲಿ ಬಿಲ್‌ಗಳು ಮತ್ತು ಇನ್‌ವಾಯ್ಸ್‌ಗಳ ಮೂಲಕ ಜಿಎಸ್‌ಟಿಯನ್ನು ವಂಚಿಸಿದ ಆರೋಪವೂ ಇದೆ.

ಚಂದ್ರಬಾಬು ನಾಯ್ಡು ಬಂಧನ:
ತಂತ್ರಜ್ಞಾನ ಕಂಪನಿಗಳು ಮತ್ತು ಸರ್ಕಾರದ ನಡುವಿನ ಯೋಜನೆಯ ವೆಚ್ಚದ ಹಂಚಿಕೆಯಲ್ಲಿ ಅಕ್ರಮಗಳು ನಡೆದಿದೆ (371 ಕೋಟಿ ರೂ.ಗಳಲ್ಲಿ 241 ಕೋಟಿ ರೂ.ಗಳು ಭ್ರಷ್ಟಾಚಾರ ನಡೆದಿರುವುದಾಗಿ) ಎಂದು ಸಿಐಡಿ 2017-18ರ ರಿಮಾಂಡ್ ವರದಿಯಲ್ಲಿ ಆರೋಪಿಸಿದೆ. ಅಲ್ಲದೆ, ಈ ಹಿಂದೆ ಸಿಐಡಿ ಪ್ರಕರಣ ದಾಖಲಿಸಿದ್ದ 26 ಮಂದಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಗಿತ್ತು. ಸದ್ಯ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಆಂಧ್ರ ಹೈಕೋರ್ಟ್!
ಚಂದ್ರಬಾಬು ನಾಯ್ಡು ಅವರ ಬಂಧನ ಖಂಡಿಸಿ ರಾಜ್ಯಾದ್ಯಂತ ಸಂಪೂರ್ಣ ಬಂದ್‌ ನಡೆಸಲಾಗಿತ್ತು. ಅವರ ಬಂಧನವನ್ನು ಹಲವರು ಖಂಡಿಸಿದ್ದು, ಕೆಲವರು ಜೈಲಿನಲ್ಲಿದ್ದ ಚಂದ್ರಬಾಬು ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ಹಿನ್ನಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ಅಮರಾವತಿ ಇನ್ನರ್ ರಿಂಗ್ ರೋಡ್ ವಂಚನೆ ಪ್ರಕರಣ ಮತ್ತು ಅಂಗಲ್ಲು ಗಲಭೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಂಧ್ರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದರಲ್ಲಿ ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಆಂಧ್ರ ಹೈಕೋರ್ಟ್, ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಇದೇ 16 ರವರೆಗೆ ಬಂಧಿಸಬಾರದು ಎಂದು ಮಧ್ಯಂತರ ಜಾಮೀನು ನೀಡಿದೆ.

ದೇಶ

‘ನ್ಯೂಸ್ ಕ್ಲಿಕ್’ ಸಂಸ್ಥೆ ಚೀನಾದಿಂದ ಹಣ ಪಡೆದಿದೆ ಎಂದು ಅಮೆರಿಕದ ಮಾಧ್ಯಮ ಸಂಸ್ಥೆ ‘ನ್ಯೂಯಾರ್ಕ್ ಟೈಮ್ಸ್’ ಸುಮಾರು 2 ತಿಂಗಳ ಹಿಂದೆ ಆಧಾರರಹಿತ ವರದಿ ಪ್ರಕಟಿಸಿತ್ತು. ಅದರ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ (ಇಡಿ) ಸೆಪ್ಟೆಂಬರ್ 2021 ರಲ್ಲಿ ‘ನ್ಯೂಸ್ ಕ್ಲಿಕ್’ ಮಾಧ್ಯಮ ಕಚೇರಿ ಮೇಲೆ ದಾಳಿ ನಡೆಸಿತು. ಮನಿ ಲಾಂಡರಿಂಗ್ ತಡೆ ಕಾಯಿದೆ ಅಡಿಯಲ್ಲಿ, ‘ನ್ಯೂಸ್ ಕ್ಲಿಕ್’ ಕಂಪನಿಯ ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರ ಮಾಲೀಕತ್ವದಲ್ಲಿನ ರೂ.4.5 ಕೋಟಿ ಮೌಲ್ಯದ ಮನೆ ಮತ್ತು ರೂ. 41 ಲಕ್ಷ ಸ್ಥಿರ ಠೇವಣಿಗಳನ್ನೂ ಸ್ಥಗಿತಗೊಳಿಸಿತು.

ಈ ಹಿನ್ನಲೆಯಲ್ಲಿ, ಅಕ್ಟೋಬರ್ 3 ರಂದು ‘ನ್ಯೂಸ್ ಕ್ಲಿಕ್’ ಮಾಧ್ಯಮ ಮತ್ತು ಅದರ ಸಂಬಂಧಿತ ಪತ್ರಕರ್ತರಿಗೆ ಸೇರಿದ 100 ಸ್ಥಳಗಳಲ್ಲಿ 12 ಗಂಟೆಗಳ ಕಾಲ ದಾಳಿ ನಡೆಸಿದ ದೆಹಲಿ ಪೊಲೀಸರು, ಸೆಲ್ ಫೋನ್, ಲ್ಯಾಪ್ ಟಾಪ್, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಇತ್ಯಾದಿಗಳನ್ನು ಜಪ್ತಿ ಮಾಡಿದ್ದಾರೆ. ‘ನ್ಯೂಸ್ ಕ್ಲಿಕ್’ ನೌಕರರು ಮತ್ತು 9 ಪತ್ರಕರ್ತರಿಗೆ 25 ಪ್ರಶ್ನೆಗಳ ಪಟ್ಟಿಯನ್ನು ನೀಡಿ  ತನಿಖೆ ನಡೆಸಲಾಯಿತು.

ಇದನ್ನೂ ಓದಿ: ಜನರ ಮನಸ್ಥಿತಿ ಬದಲಾಗಿದೆ; ಮುಂದಿನ ದಿನಗಳಲ್ಲಿ ಕುಟುಂಬ ಪ್ರಾಬಲ್ಯವಿರುವ ರಾಜ್ಯ ಪಕ್ಷಗಳು ನೆಲಕಚ್ಚುವುದು ಖಚಿತ!

ಇದಕ್ಕೂ ಮುನ್ನ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿಕೊಂಡ ದೆಹಲಿ ಪೊಲೀಸರು, 12 ಗಂಟೆಗಳ ದಾಳಿ ಮತ್ತು ವಿಚಾರಣೆಯ ನಂತರ, ‘ನ್ಯೂಸ್ ಕ್ಲಿಕ್’ ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ರಾತ್ರಿ ಬಂಧಿಸಲಾಗಿದೆ.

‘ನ್ಯೂಸ್ ಕ್ಲಿಕ್’ ಮೇಲಿನ ದಾಳಿಯು ದೇಶಾದ್ಯಂತ ಆಘಾತವನ್ನು ಉಂಟುಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ವಿರೋಧ ಪಕ್ಷಗಳು ಮತ್ತು ಭಾರತೀಯ ಪತ್ರಕರ್ತರ ಸಂಘ, ಪತ್ರಕರ್ತರ ರಾಷ್ಟ್ರೀಯ ಒಕ್ಕೂಟ, ದೆಹಲಿ ಪತ್ರಕರ್ತರ ಒಕ್ಕೂಟ ಮತ್ತು ಕೇರಳ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಮುಂತಾದ ಸಂಘಟನೆಗಳು ‘ಇದು ಮೋದಿ ಸರ್ಕಾರದ ದಬ್ಬಾಳಿಕೆ ವಿಧಾನ’ ಎಂದು ಖಂಡಿಸಿವೆ.

ಇದನ್ನೂ ಓದಿ: ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ: ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರು, “ಚೀನಾದ ಕಂಪನಿಗಳಿಂದ ಭಾರಿ ಹಣ ಪಡೆದಿರುವ ‘ಪಿಎಂ ಕೇರ್ಸ್’ (PM CARES) ನ ವ್ಯವಸ್ಥಾಪಕರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ” ಎಂದು ಪ್ರಶ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ, “ಮೋದಿ ಸರಕಾರವೇ ಚೀನಾಕ್ಕೆ ಬೆಂಬಲವಾಗಿ ವರ್ತಿಸುತ್ತಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಈ ಬಗ್ಗೆ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ‘ಎಕ್ಸ್’ ಪೇಜ್ ನಲ್ಲಿ, “ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು 20 ಬಾರಿ ಭೇಟಿಯಾಗಿದ್ದಾರೆ. ಜೂನ್ 19, 2020 ರಂದು ಚೀನಾ ಸೇನೆಯು ಗಡಿಯಲ್ಲಿ ಅತಿಕ್ರಮಣ ಮಾಡಿದಾಗ ಅದರ ಬಗ್ಗೆ ಅವರು ಯಾವುದೇ ಪ್ರಶ್ನೆಗಳನ್ನು ಎತ್ತಲಿಲ್ಲ. ಪಿಎಂ ಕೇರ್ಸ್‌ಗಾಗಿ ಚೀನಾ ಕಂಪನಿಗಳಿಗೆ ಕೋಟಿಗಟ್ಟಲೆ ಹಣ ನೀಡಲು ಮೋದಿ ಅವಕಾಶ ನೀಡಿದ್ದರು. ಹಾಗಾದರೆ ವಿದೇಶಿ ಶಕ್ತಿಗಳು ಯಾರನ್ನು ನಿಯಂತ್ರಿಸುತ್ತಿವೆ?” ಎಂದು ಪ್ರಶ್ನಿಸಿ ಆರೋಪಿಸಿದ್ದಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಕಸ್ಟಮರ್‌ಗಳಿಗೆ ನೀಡುವ ವೋಚರ್‌ಗಳನ್ನು ತನ್ನ ವಶಕ್ಕೆ ಪಡೆದುಕೊಂಡು ಕಸ್ಟಮರ್‌ಗಳು ವೋಚರನ್ನು ಬಳಕೆ ಮಾಡುವ ಮೊದಲೇ ಬಳಕೆ ಮಾಡಿ, ಇ-ಕಾಮರ್ಸ್ ಕಂಪನಿಗಳ ಮೂಲಕ ಕೋಟ್ಯಾಂತರ ರೂ ಬೆಲೆ ಬಾಳುವ ಚಿನ್ನ, ಬೆಳ್ಳಿ, ದ್ವಿಚಕ್ರ ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ನಗದು ಹಣವನ್ನು ಆನ್‌ಲೈನ್ ಮುಖಾಂತರ ಖರೀದಿಸಿ ಚಂಚನೆ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿ.ಎ.ಎನ್ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಆರೋಪಿಯಿಂದ 5.269 ಕೆಜಿ ಚಿನ್ನ, 27.250 ಕೆಜಿ ಬೆಳ್ಳಿ, ರೂ.11 ಲಕ್ಷ 13 ಸಾವಿರ ನಗದು, ವಿವಿಧ ಕಂಪನಿಯ 07 ದ್ವಿಚಕ್ರ ವಾಹನಗಳು, ಪ್ಲಿಪ್ ಕಾರ್ಟ್ ವಾಲೇಟ್ ಪ್ರೀಜ್ ಆದ ರೂ.3 ಲಕ್ಷ 50 ಸಾವಿರ ಹಣ, 2 ಲ್ಯಾಪ್ ಟಾಪ್, 03 ಮೊಬೈಲ್‌ಗಳು ಒಟ್ಟು ಅಂದಾಜು ಮೊತ್ತ 4,16,63,000/- ರೂ ಮೌಲ್ಯದ ವಸ್ತುಗಳನ್ನು ಅಮಾನತ್ತು ಮಾಡಲಾಗಿದೆ